Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
UllalavaniUllalavani
suddi

ಕುರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ರಸ್ತೆಗಳ ಶಿಲಾನ್ಯಾಸ ನೆರವೇರಿಸಿದ ಸ್ಪೀಕರ್ ಯು.ಟಿ ಖಾದರ್..!

UllalaVaniBy UllalaVaniNovember 13, 2025No Comments3 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಮುಡಿಪು;ಕುರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಅಗ್ರಸಾಲೆ ಕೊರಗಲೋಟ್ಟು ರಸ್ತೆ, ಸೀಗೆದಡಿ ಮಧ್ಯನಡ್ಕ ರಸ್ತೆ, ಮಾಲೆಮಾರ್ ಹೂವಿನಕೊಪ್ಪಲ ಕುರ್ನಾಡು ಮುಖ್ಯರಸ್ತೆಗೆ ಶಿಲನ್ಯಾಸವನ್ನು ಸ್ಪೀಕರ್ ಯು.ಟಿ.ಖಾದರ್ ನೆರವೇರಿಸಿದ್ರು.

ಕುರ್ನಾಡು ದತ್ತಾತ್ರೇಯ ಅನುದಾನಿತ ಪ್ರಾಥಮಿಕ ಶಾಲೆಯಲ್ಲಿ ಸಭಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಸ್ಪೀಕರ್ ಯು.ಟಿ.ಖಾದರ್ ಮಾತನಾಡಿ, ಕುರ್ನಾಡು ಗ್ರಾಮಾಭಿವೃದ್ಧಿಗಾಗಿ 1.90 ಕೋಟಿ ಅನುದಾನ ಮಂಜೂರಾಗಿದೆ. ಶಾಸಕರಾಗಿ ಮಾತ್ರವಲ್ಲ, ಸಭಾಧ್ಯಕ್ಷನಾಗಿ ನನ್ನ ಶಕ್ತಿಮೀರಿದ ಪ್ರಯತ್ನದ ಫಲವಾಗಿ ಈ ಎಲ್ಲ ಕೆಲಸಗಳು ಶಾಶ್ವತವಾಗಿ ನಡೆಯುತ್ತಿವೆ. ಎಲ್ಲ ವರ್ಗದವರನ್ನೂ ಒಳಗೊಂಡ ಅಭಿವೃದ್ದಿಯೇ ನಮ್ಮ ಉದ್ದೇಶ. ಪ್ರತಿಯೊಂದು ಪ್ರದೇಶವನ್ನೂ ಗುರುತಿಸಿ ಅಭಿವೃದ್ಧಿಪಡಿಸುವ ಕಾರ್ಯ ನಡೆಯುತ್ತಿದೆ. ಮಿತ್ತಕೋಡಿಯಿಂದ ಬೋಳಿಯಾರ್‌ವರೆಗೆ ಸಂಪರ್ಕ ರಸ್ತೆಯು ಮೊದಲು ಕಷ್ಟಕರವಾಗಿತ್ತು, ಕ್ರಶರ್ ಜಲ್ಲಿ ಇರುವುದರಿಂದ ಸಂಚಾರ ಅಸಾಧ್ಯವಾಗಿತ್ತು. ಆದರೆ ಈಗ ಆರ್ಕಾನ-ಮಿತ್ತಕೋಡಿಬೋಳಿಯಾರ್ ಮಾರ್ಗಕ್ಕೆ 6 ಕೋಟಿ ಅನುದಾನ ಬಿಡುಗಡೆಗೊಂಡಿದ್ದು, ಟೆಂಡರ್ ಹಂತದಲ್ಲಿದೆ.ಕೆದುಂಬಾಡಿ–ಮೂರುಗೋಳಿ–ತೌಡುಗೋಳಿ ರಸ್ತೆ ನಿರ್ಮಾಣಕ್ಕೂ ₹30 ಲಕ್ಷ ಬಿಡುಗಡೆಗೊಂಡಿದೆ. ಅತ್ಯುತ್ತಮ ಮಾದರಿ ಗ್ರಾಮದ ರೂಪದಲ್ಲಿ ಕುರ್ನಾಡು ಅಭಿವೃದ್ಧಿಯಾಗುತ್ತಿದೆ. ಕುಡಿಯುವ ನೀರಿಗಾಗಿ ಜೆಜೆಎಂ (Jal Jeevan Mission) ಅಡಿ ಟ್ಯಾಂಕ್‌ಗಳು ನಿರ್ಮಾಣಗೊಂಡಿವೆ. ಮುಂದಿನ ಫೆಬ್ರವರಿಯೊಳಗೆ ಉಚಿತವಾಗಿ ಪೈಪ್‌, ಟ್ಯಾಪ್‌, ಮೀಟರ್‌ಗಳನ್ನು ಅಳವಡಿಸಲಾಗುತ್ತದೆ. ಯಾರು ಎಷ್ಟು ನೀರು ಬಳಸುತ್ತಾರೋ ಅಷ್ಟೇ ವ್ಯಯವಾಗುವ ವ್ಯವಸ್ಥೆ ಜಾರಿಯಾಗಲಿದೆ. ಇದು ದೊಡ್ಡ ಮಟ್ಟದ ಅಭಿವೃದ್ಧಿಯ ಹಾದಿಯಾಗಿದೆ. ಮುಡಿಪು ಜಂಕ್ಷನ್‌ನಿಂದ ಹೊರಟರೆ ಮಂಗಳೂರಿಗೆ ಕೇವಲ 20 ನಿಮಿಷದಲ್ಲಿ ತಲುಪುವಂತಾಗಲಿದೆ . ಇದು ಅಭಿವೃದ್ಧಿಯ ನವ ಯುಗ.
ಮಂಗಳೂರಿನಲ್ಲಿ ಮನೆ ಮಾರಾಟ ಮಾಡಿ ಈ ಭಾಗದಲ್ಲಿ ನೆಲೆಸುವವರ ಸಂಖ್ಯೆಯೂ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ದೇರಾಜೆಯಿಂದ ಹಿಡಿದು ಕಾಯರಗೋಳಿ ವರೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ, ಮಂಜೂರಾತಿ ಶೀಘ್ರದಲ್ಲೇ ನಿರೀಕ್ಷೆಯಲ್ಲಿದೆ. ದೇರಾಜೆವರೆಗೆ, ಮುಡಿಪು ಜಂಕ್ಷನ್‌ನಿಂದ ಮುದುಂಗಾರುಕಟ್ಟೆ ಸೇತುವೆ ವರೆಗೆ ₹3 ಕೋಟಿ ಅನುದಾನ ಬಿಡುಗಡೆಯಾಗಿದ್ದು, ಮುಂದಿನ ವಾರದಿಂದ ಕೆಲಸಗಳು ಆರಂಭವಾಗಲಿವೆ. ಟೆಕ್ನಿಕಲ್ ಅಪ್ರೂವಲ್‌ಗೂ ಹೋಗಿದೆ. ಸಜೀಪದಿಂದ ತುಂಬೆಯವರೆಗೆ ನೇರ ಸಂಪರ್ಕ ರಸ್ತೆ ಕೂಡಾ ಪ್ರಸ್ತಾವನೆಯಲ್ಲಿದೆ. ಮೂಲಭೂತ ಸೌಕರ್ಯಗಳು ಬಂದಾಗ ಹೊರಗಿನ ಹೂಡಿಕೆದಾರರು ಇಲ್ಲಿ ಬಂಡವಾಳ ಹೂಡುತ್ತಾರೆ. ಇದು ಸೌಹಾರ್ದತೆ ಮತ್ತು ಪ್ರೀತಿಯ ದೊಡ್ಡಮಟ್ಟದ ಪ್ರದೇಶ. ಯುವಕರು ಒಗ್ಗಟ್ಟಿನಿಂದ ಮುಂದಿನ ಪೀಳಿಗೆಯ ಅಭಿವೃದ್ಧಿಗೆ ಕೈಜೋಡಿಸಬೇಕು. ಮುಡಿಪು ಪ್ರದೇಶದಲ್ಲಿ ಸುಮಾರು 20 ಎಕರೆ ಜಾಗವನ್ನು ಶಿಕ್ಷಣ ಸಂಸ್ಥೆಗಳು ಕೈಗೊಳ್ಳಲು ಮುಂದಾಗಿವೆ. ಎಲ್ಲರೂ ಒಗ್ಗಟ್ಟಿನಲ್ಲಿ ಇದ್ದರೆ ಪಕ್ಕದವರ ಜಾಗದ ಮೌಲ್ಯ ಮೂರರಷ್ಟು ಏರಲಿದೆ. ಎಂದು ರಸ್ತೆಗಳ ಕಾಮಗಾರಿ ಬಗ್ಗೆ ವಿವರಿಸಿದ್ರು.

ಕಾರ್ಯಕ್ರಮದಲ್ಲಿ ಸ್ಪೀಕರ್ ದೇವದಾಸ್‌ ಭಂಡಾರಿ ಮಾತನಾಡಿ, ಕುರ್ನಾಡು ಸೀಗೆದಾಡಿ ಮಧ್ಯನಡ್ಕ ಪ್ರದೇಶದಲ್ಲಿ ₹15 ಲಕ್ಷ, ₹10 ಲಕ್ಷ, ಗಣೇಶಮಂದಿರಕ್ಕೆ ₹5 ಲಕ್ಷ, ಮಲೆಮಾರ್‌ ಹೂವಿನಕೊಪ್ಪಲ ರಸ್ತೆಗೆ ಹಾಗೂ ತಡೆಗೋಡೆ ನಿರ್ಮಾಣಕ್ಕೆ ₹10 ಲಕ್ಷ ಮಂಜೂರಾಗಿದೆ. ರಸ್ತೆ ಬದಿ ಚಾರಂಡಿಯನ್ನು ಒಳಗೊಂಡಿದೆ. ಹಾಗೂ ದೊಡ್ಡದಾದ ₹1 ಕೋಟಿ ಮೊತ್ತದ ಪ್ರಾಜೆಕ್ಟ್ ಮುಡಿಪು ಪಂಚಾಯತ್ ಕಟ್ಟಡ ನಿರ್ಮಾಣದ ಮೂಲಕ ಹೊಸ ಅಧ್ಯಾಯ ಆರಂಭವಾಗಿದೆ. ಸುಬ್ಬಗುಳಿ ರಸ್ತೆ, ಮಿತ್ತಕೋಡಿ ಅಂಗನವಾಡಿ, ಕುರ್ನಾಡು–ಬೋಳಿಯಾರ್‌ ರಸ್ತೆ ಅಭಿವೃದ್ಧಿ, ಪ್ರದೇಶದ ಅಭಿವೃದ್ಧಿ ಕಾರ್ಯಗಳು ವೇಗವಾಗಿ ನಡೆಯುತ್ತಿವೆ. ನೀರಿನ ಅಭಾವ ನಿವಾರಣೆಗೆ ಅತೀವ ಪರಿಶ್ರಮ ಮತ್ತು ಸಮರ್ಪಣಾಭಾವದ ಸೇವೆಯನ್ನು ಶಾಸಕರಾದ ಯು.ಟಿ.ಖಾದರ್‌ ಅವರು ತಮ್ಮ ಅಧಿಕಾರಾವಧಿಯಲ್ಲಿ ನೀಡಿದ್ದಾರೆ. ಮೌಲ್ಯಾಧಾರಿತ ಸೇವೆಯೇ ಇವರ ಕಾರ್ಯದ ಮೂಲಮಂತ್ರವಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಸಮಗ್ರ ಅಭಿವೃದ್ಧಿ ಕಾರ್ಯಾಚರಣೆಯಲ್ಲಿ ಅವರ ವ್ಯಕ್ತಿತ್ವದ ಮೂಲಕ ಯೋಜನೆಗಳು ಯಶಸ್ವಿಯಾಗಿ ಜಾರಿಯಾಗಿವೆ.


ಇದೇ ಸಂದರ್ಭದ ಪ್ರಶಾಂತ್ ಕಾಜವ ಮಾತನಾಡಿ, “ತಾಳ್ಮೆಗೆ ಹುಟ್ಟಿದವನಿಲ್ಲ, ಕಷ್ಟಸುಖ ಎಲ್ಲವನ್ನೂ ನಿಭಾಯಿಸುವವರು ಯಥಾರ್ಥ ನಾಯಕರು.ಯು.ಟಿ. ಖಾದರ್ ಅವರಲ್ಲಿ ತಾಳ್ಮೆ, ಗೌರವ ಮತ್ತು ಸೌಜನ್ಯದ ಗುಣಗಳು ತುಂಬಿಕೊAಡಿವೆ. ಸ್ಪೀಕರ್ ಆಗಿ ಅವರು ತಂದಿರುವ ಬದಲಾವಣೆ ವಿಶಿಷ್ಟವಾದ ವ್ಯವಸ್ಥೆಯಾಗಿದೆ. ಬೆಳಗಾವಿ ಅಧಿವೇಶನವೂ ಊರಿಗೆ ಜಾತ್ರೆಯಂತಾಗಿದೆ ಊರಿಗೆ ಒಂದು ಬೆಳಕು ಹಚ್ಚಿದಂತಾಗಿದೆ. ಕುರ್ನಾಡು ಗ್ರಾಮದ ರಸ್ತೆಗಳ ಅಭಿವೃದ್ಧಿಗೆ 80 ಲಕ್ಷ ಅನುದಾನ ದೊರೆತಿದ್ದು, ಕುರ್ನಾಡು ಪಂಚಾಯತಿಗೆ ಕಾಂಗ್ರೆಸ್ ಪಕ್ಷದ ಕೊಡುಗೆ ಸ್ಪಷ್ಟವಾಗಿ ಕಾಣಿಸುತ್ತಿದೆ. ಅಭಿವೃದ್ಧಿ ಮಾಡಿದವರ ಕುರಿತು ಮಾತನಾಡುವುದು ಧರ್ಮ. ಕಂಬಳಪದವು ಕುರ್ನಾಡು ರಸ್ತೆ ಅಭಿವೃದ್ಧಿಗೆ ಡಿಪಿಆರ್ ತಯಾರಾಗಿದ್ದು, ಹೆಚ್ಚಿನ ಅನುದಾನ ದೊರೆಯುವ ನಿರೀಕ್ಷೆ ಇದೆ. ಮಾಗಣೆಯ ದೈವಸ್ಥಾನಕ್ಕೆ ಕೋರುವಿಕೆಯ ಅನುದಾನವನ್ನು ಒದಗಿಸಿಕೊಟ್ಟವರು ಯು.ಟಿ.ಖಾದರ್. ಸೋಮಾರಿತನದ ಶಾಸಕರಿಗೆ ಬುದ್ಧಿ ಕಲಿಸಬೇಕು, ಪ್ರಾಮಾಣಿಕ ಶಾಸಕರಿಗೆ ನೀಡುವ ಮತವೇ ಗೌರವ ಹಾಗೂ ಕೃತಜ್ಞತೆಯಾಗಿದೆ ಅಂತ ಹೇಳಿದ್ದಾರೆ.

ಇನ್ನು ಈ ಸಂದರ್ಭದಲ್ಲಿ ಮುಡಿಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕಾಜವ, ಕುರ್ನಾಡು ಗ್ರಾಮ ಪಂಚಾಯತ್ ಅಧ್ಯಕ್ಷೆ ಪ್ರೇಮ ಗಟ್ಟಿ, ಮಾಜಿ ಅಧ್ಯಕ್ಷ ದೇವದಾಸ್ ಭಂಡಾರಿ, ಸದಸ್ಯರುಗಳಾದ ಖಾಸಿಂ, ಗಣೇಶ್ ನಾಯಕ್, ಗುತ್ತಿಗೆದಾರರಾದ ಜಲೀಲ್ ಮೋಂಟುಗೋಳಿ, ಅರುಣ್ ಡಿ’ಸೋಜ, ಸ್ಥಳೀಯರಾದ ಲೋಲಾಕ್ಷ ಶೆಟ್ಟಿ, ಹಿರಿಯ ರಾಧಾಕೃಷ್ಣ ಭಟ್, ತ್ವಾಹ ಜುಮಾ ಮಸೀದಿ ಅಧ್ಯಕ್ಷ ಅಬೂಬಕರ್ ಹಾಜಿ, ಸೂಫಿ ಕುಂಞ, ದೇವ್‌ದಾಸದ ಭಂಡಾರಿ, ಉಪಾಧ್ಯಕ್ಷರಾದ ಅಶ್ರಫ್ ಸೇರಿದಂತೆ ಹಲವರು ಉಪಸ್ಥಿತರಿದ್ರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಕೆನರಾ ಬ್ಯಾಂಕ್ ದೇರಳಕಟ್ಟೆ ಶಾಖೆಯ ಶಿವರಾಮ ಕಾಸರಗೋಡು ಅವರಿಗೆ ಬೀಳ್ಕೊಡುಗೆ

February 4, 2026

ಫೆ, 8.ಹಿದಾಯತ್ ನಗರ ಹುಸೈನಿಯಾ ದರ್ಸ್ ವಾರ್ಷಿಕ ಮಹ್ಳರತುಲ್ ಬದ್ರಿಯಾ

February 4, 2026

ಪಟ್ಲ ಫೌಂಡೇಶನ್ ಟ್ರಸ್ಟ್: ಕೇಂದ್ರೀಯ ಮಹಿಳಾ ಘಟಕದ ವಾರ್ಷಿಕೋತ್ಸವ

February 4, 2026

Comments are closed.

Advertise
ಸಂಪರ್ಕಿಸಿ

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025

ಕ್ಯಾನ್ಸರ್ ಹಾಗೂ ಸ್ತ್ರೀ ರೋಗ ಜಾಗ್ರತಿ ಅರಿವು

November 11, 2025
suddi

ಕೆನರಾ ಬ್ಯಾಂಕ್ ದೇರಳಕಟ್ಟೆ ಶಾಖೆಯ ಶಿವರಾಮ ಕಾಸರಗೋಡು ಅವರಿಗೆ ಬೀಳ್ಕೊಡುಗೆ

By UllalaVaniFebruary 4, 20260

ದೇರಳಕಟ್ಟೆ : ಧನಾತ್ಮಕ ಚಿಂತನೆಯೊAದಿಗೆ ಕೆನರಾ ಬ್ಯಾಂಕ್‌ನಲ್ಲಿ ಸೇವೆ ಸಲ್ಲಿಸುವ ಅವಕಾಶ ದೊರೆತಿರುವುದು ನನಗೆ ಅಪಾರ ಸಂತೋಷ ಮತ್ತು ಗೌರವದ…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

ಫೆ, 8.ಹಿದಾಯತ್ ನಗರ ಹುಸೈನಿಯಾ ದರ್ಸ್ ವಾರ್ಷಿಕ ಮಹ್ಳರತುಲ್ ಬದ್ರಿಯಾ

February 4, 2026

ಪಟ್ಲ ಫೌಂಡೇಶನ್ ಟ್ರಸ್ಟ್: ಕೇಂದ್ರೀಯ ಮಹಿಳಾ ಘಟಕದ ವಾರ್ಷಿಕೋತ್ಸವ

February 4, 2026

ನ್ಯಾಯಾಲಯದಿಂದ ತಪ್ಪಿಸಿಕೊಂಡಿದ್ದ ಮುಕ್ಕಚ್ಚೇರಿ ನಿವಾಸಿ 14 ವರ್ಷಗಳ ಬಳಿಕ  ಸೆರೆ

February 4, 2026
1 2 3 … 1,792 Next
Automatic YouTube Gallery

ಉಮಾಮಹೇಶ್ವರಿ ಕ್ಷೇತ್ರದಲ್ಲಿ ನಡೆದ ಸಭಾ ಕಾರ್ಯಕ್ರಮ

ಕಾಪಿಕಾಡ್ ಉಮಾಮಹೇಶ್ವರಿ ಕ್ಷೇತ್ರದಲ್ಲಿ ಬ್ರಹ್ಮಲಕಶೋತ್ಸವ;ಮೂರನೇ ದಿನದ ಸಭಾ ಕಾರ್ಯಕ್ರಮಕ್ಕೆ ಚಾಲನೆ

ಕಟೀಲು ಕ್ಷೇತ್ರದ ಅರ್ಚಕರಾದ ಹರಿನಾರಾಯಣದಾಸ ಅಸ್ರಣ್ಣರಿಂದ ಆಶೀವರ್ಚನ
ಉಮಾಮಹೇಶ್ವರಿ ಕ್ಷೇತ್ರದಲ್ಲಿ ನಡೆದ ಸಭಾ ಕಾರ್ಯಕ್ರಮ
Now Playing
ಉಮಾಮಹೇಶ್ವರಿ ಕ್ಷೇತ್ರದಲ್ಲಿ ನಡೆದ ಸಭಾ ಕಾರ್ಯಕ್ರಮ
ಕಾಪಿಕಾಡ್ ಉಮಾಮಹೇಶ್ವರಿ ಕ್ಷೇತ್ರದಲ್ಲಿ ಬ್ರಹ್ಮಲಕಶೋತ್ಸವ;ಮೂರನೇ ದಿನದ ಸಭಾ ...
ಕಾಪಿಕಾಡ್ ಉಮಾಮಹೇಶ್ವರಿ ಕ್ಷೇತ್ರದಲ್ಲಿ ಬ್ರಹ್ಮಲಕಶೋತ್ಸವ;ಮೂರನೇ ದಿನದ ಸಭಾ ಕಾರ್ಯಕ್ರಮಕ್ಕೆ ಚಾಲನೆ

ಕಟೀಲು ಕ್ಷೇತ್ರದ ಅರ್ಚಕರಾದ ಹರಿನಾರಾಯಣದಾಸ ಅಸ್ರಣ್ಣರಿಂದ ಆಶೀವರ್ಚನ
ಮಹಿಷಾಸುರನ್ ಕೆರ್ನಗ ದೇವಿಗ್ ಬೇಜಾರ್..??
Now Playing
ಮಹಿಷಾಸುರನ್ ಕೆರ್ನಗ ದೇವಿಗ್ ಬೇಜಾರ್..??
ಮಹಿಷಾಸುರನ ಜೊತೆ ತಾಯಿ 9 ದಿನ ಯುದ್ಧ ಮಾಡಿದ ಕಾರಣವೇ ರೋಚಕ.. ಸ್ವರ್ಗದತ್ತ ಮಹಿಷಾ ...
ಮಹಿಷಾಸುರನ ಜೊತೆ ತಾಯಿ 9 ದಿನ ಯುದ್ಧ ಮಾಡಿದ ಕಾರಣವೇ ರೋಚಕ..

ಸ್ವರ್ಗದತ್ತ ಮಹಿಷಾ ಹೋಗಲು ಇದೇ ಕಾರಣ; ಕಟೀಲು ಅಸ್ರಣ್ಣರಿಂದ ಅದ್ಭುತ ವಿವರಣೆ
Follow us on Facebook
Recent Editions
JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version
%d