Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
suddi

ಡಿ. 07 ರಂದು ಕೊಂಕಣಿ ಮಕ್ಕಳ ಸಾಹಿತ್ಯ ಸಮ್ಮೇಳನ

UllalaVaniBy UllalaVaniNovember 20, 2025No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಮಂಗಳೂರು: ಕೊಂಕಣಿಯ ಪ್ರಮುಖ ಸಾಂಸ್ಕೃತಿಕ ಸಂಘಟನೆಯಾದ ಮಾಂಡ್ ಸೊಭಾಣ್ ತನ್ನ ಸಾಹಿತ್ಯದ ಸಹ ಸಂಸ್ಥೆ ಅಕಾಡೆಮಿ ಮಿಟಾಕಣ್ ಮೂಲಕ ಸಾಹಿತ್ಯದ ಬಗ್ಗೆ ಒಲವು ಮೂಡಿಸಲು ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಒಂದು ದಿನದ ಸಾಹಿತ್ಯ ಸಮ್ಮೇಳನವನ್ನು ಆಯೋಜಿಸಿದೆ. 2025 ಡಿಸೆಂಬರ್ 07 ರಂದು ಭಾನುವಾರ ಮುಂಜಾನೆ 8.45 ರಿಂದ ಸಂಜೆ 4.00 ಗಂಟೆ ತನಕ ಮಂಗಳೂರಿನ ಶಕ್ತಿನಗರದಲ್ಲಿರುವ ಕಲಾಂಗಣ ಮೈದಾನದಲ್ಲಿ ಈ ಸಮ್ಮೇಳನ ನಡೆಯಲಿದೆ.

ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಜೊಕಿಂ ಸ್ಟ್ಯಾನಿ ಆಲ್ವಾರಿಸ್ ಸಮ್ಮೇಳನದ ಮೆರವಣಿಗೆಯನ್ನು ಉದ್ಘಾಟಿಸುವರು. ಸಮ್ಮೇಳನದ ಅಧ್ಯಕ್ಷತೆಯನ್ನು ಶಿಕ್ಷಣ ತಜ್ಞ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪಡೆದ ಸಾಹಿತಿ ವಂ. ಪ್ರಶಾಂತ್ ಮಾಡ್ತಾ ವಹಿಸಲಿರುವರು. 9 ನೇ ತರಗತಿಯ ವಿದ್ಯಾರ್ಥಿನಿ ಸಂಜನಾ ರಿವಾ ಮತಾಯಸ್ ಆಶಯ ಭಾಷಣವನ್ನು ಮಾಡಲಿರುವರು. ʻಮಕ್ಕಳ ಸಾಹಿತ್ಯದ ಭವಿಷ್ಯʼ ಎಂಬ ವಿಷಯದ ಮೇಲೆ ವಿಚಾರ ಗೋಷ್ಟಿ ನಡೆಯಲಿದೆ. ಸಾಹಿತ್ಯದಲ್ಲಿ ಪ್ರಸಿದ್ಧಿ ಪಡೆದ ಶಿಕ್ಷಕತ್ರಯರಾದ ಆಲ್ವಿನ್ ದಾಂತಿ, ಪೆರ್ನಾಲ್, (ಅಧ್ಯಕ್ಷತೆ), ಫೆಲ್ಸಿ ಲೋಬೊ ದೇರೆಬೈಲ್ (ಅಜ್ಜಿಕತೆಗಳು ಹಾಗೂ ಆಧುನಿಕ ಮಕ್ಕಳು: ಸಂಬಂಧ ರೂಪಿಸುವ ಬಗೆ) ಮತ್ತು ವೆಂಕಟೇಶ್ ನಾಯಕ್ (ಭವಿಷ್ಯದಲ್ಲಿ ಮಕ್ಕಳ ಸಾಹಿತ್ಯದ ಆಯಾಮಗಳು) ಪ್ರಬಂಧ ಮಂಡಿಸುವರು. ಕವಿ ಆಂಡ್ರ್ಯೂ ಎಲ್ ಡಿಕುನ್ಹಾ ರಿಂದ ʻಕವಿತೆ: ರಚನೆ ಮತ್ತು ಪ್ರಸ್ತುತಿʼ ಎಂಬ ವಿಷಯದ ಬಗ್ಗೆ ಉಪನ್ಯಾಸ ನಡೆಯಲಿದೆ.

ಮಕ್ಕಳ ಕವಿಗೋಷ್ಟಿ, ಕಾರ್ಯಕ್ರಮ ನಿರೂಪಣೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳ ಉಸ್ತುವಾರಿಯನ್ನು ಮಕ್ಕಳೇ ನಡೆಸುವರು. ಅವರಿಗಾಗಿ ರಸ ಪ್ರಶ್ನೆ ಕೂಡಾ ಆಯೋಜಿಸಲಾಗಿದೆ. ರಂಗು ರಂಗಿನ ಮೆರವಣಿಗೆ, ರುಚಿಕರ ಮತ್ತು ಆಕರ್ಷಕ ಊಟೋಪಚಾರದ ವ್ಯವಸ್ಥೆ ಮಾಡಲಾಗಿದೆ. ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಸಮಾರೋಪದಲ್ಲಿ ಪ್ರಮಾಣ ಪತ್ರ ವಿತರಿಸಲಾಗುವುದು.

ಈ ಸಂದರ್ಭದಲ್ಲಿ ಮಿಟಾಕಣ್ ಮೂಲಕ ನಡೆದ ಅನುವಾದ ಕಾರ್ಯಾಗಾರದಲ್ಲಿ ವಿದ್ಯಾರ್ಥಿಗಳು ಹಾಗೂ ಹಿರಿಯರು ವಿವಿಧ ಭಾಷೆಗಳಿಂದ ಕೊಂಕಣಿಗೆ ಅನುವಾದಿಸಿದ ಮಕ್ಕಳ ಕಥಾ ಸಂಗ್ರಹ ʻಮ್ಹೊಂವಾ-ಪೊಳಿʼ (ಜೇನು ಗೂಡು), ಎರಿಕ್ ಒಝೇರಿಯೊ ಅಮೃತೋತ್ಸವ ಸಂಶೋಧನಾ ಅನುದಾನದಲ್ಲಿ ಪ್ರಿಥುಮಾ ಮೊಂತೇರೊ ರಚಿಸಿದ ಸಂಶೋಧನಾ ಕೃತಿ ʻKonkani Christian Folk Cultureʼ (ಕೊಂಕಣಿ ಕ್ರೈಸ್ತರ ಜನಪದ ಸಂಸ್ಕೃತಿ) ಇವೆರಡು ಪುಸ್ತಕಗಳು ಮುದ್ರಣ ಮತ್ತು ಇ-ಬುಕ್ ರೂಪದಲ್ಲಿ ಹಾಗೂ ಕೇರನ್ ಮಾಡ್ತಾ ಸಂಪಾದಕತ್ವದಲ್ಲಿ ʻವ್ಹಡ್ಲಿಮಾಂಯ್ಚ್ಯೊ ಕಾಣಿಯೊʼ (ಅಜ್ಜಿ ಕತೆಗಳು – ಸಿಲ್ವೆಸ್ಟರ್ ಡಿಸೋಜ, ಮೈಸೂರು) ಇ-ಬುಕ್ ರೂಪದಲ್ಲಿ ಲೋಕಾರ್ಪಣೆ ಗೊಳ್ಳಲಿವೆ.

ಭಾಗವಹಿಸುವ ಮಕ್ಕಳು ವೈಯಕ್ತಿಕವಾಗಿ ಅಥವಾ ಶಾಲೆಗಳ ಮೂಲಕ ನವೆಂಬರ್ 29 ರೊಳಗೆ ಹೆಸರು ನೋಂದಾಯಿಸಬೇಕು. ಹೆಚ್ಚಿನ ಮಾಹಿತಿಗಾಗಿ ಮತ್ತು ಮಕ್ಕಳ ಹೆಸರು ನೋಂದಾಯಿಸಲು ಸಂಪರ್ಕಿಸಿ; 8105 22 6626.

ಇನ್ನು ಈ ಸುದ್ದಿಗೋಷ್ಠಿಯಲ್ಲಿ ವಿಯೊನಾ ಜಾನಿಸ್ ಪಿಂಟೊ (ವಿದ್ಯಾರ್ಥಿನಿ), ಲುವಿಸ್ ಜೆ ಪಿಂಟೊ (ಅಧ್ಯಕ್ಷರು, ಮಾಂಡ್ ಸೊಭಾಣ್), ರೊನಿ ಕ್ರಾಸ್ತಾ (ಸಂಚಾಲಕರು, ಮಿಟಾಕಣ್), ನವೀನ್ ಲೋಬೊ (ಉಪಾಧ್ಯಕ್ಷರು, ಮಾಂಡ್ ಸೊಭಾಣ್), ಅರುಣ್ ರಾಜ್ ರೊಡ್ರಿಗಸ್ (ಸದಸ್ಯರು, ಮಿಟಾಕಣ್) ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Email WhatsApp
    UllalaVani

    Kannada News From Coastal Karnataka

    Related Posts

    ಬಂಟ್ಸ್ ಹಾಸ್ಟೆಲ್ ಶ್ರೀ ಸಿದ್ದಿವಿನಾಯಕ ಪ್ರತಿಷ್ಠಾನ: ಗಣೇಶೋತ್ಸವ ಸಮಿತಿಯ ಸಂಚಾಲಕರಾಗಿ ಜಯಶೀಲ ಅಡ್ಯಾಂತಾಯ ಅಡ್ಯಾರ್ ಗುತ್ತು ಆಯ್ಕೆ

    June 29, 2026

    ಹಿರಿಯ ಪತ್ರಕರ್ತ ಗುರುವಪ್ಪ ಎನ್.ಟಿ. ಬಾಳೇಪುಣಿಯವರ ಸ್ಮರಣಾರ್ಥ ವಿದ್ಯಾರ್ಥಿಗಳಿಗೆ ಬಾಳೇಪುಣಿ ದತ್ತಿನಿಧಿ ಪ್ರತಿಭಾ ಪುರಸ್ಕಾರ

    June 27, 2026

    ಕರ್ನಾಟಕ ವಿಧಾನ ಪರಿಷತ್ ನೂತನ ಶಾಸಕರಿಗೆ ಯುವ ಕಾಂಗ್ರೆಸ್ ವತಿಯಿಂದ ಸನ್ಮಾನ

    June 27, 2026

    Comments are closed.

    Advertise
    ಸಂಪರ್ಕಿಸಿ

    ಕರ್ನಾಟಕದಾದ್ಯಂತ ಆರೋಗ್ಯ ಇಲಾಖೆಯಲ್ಲಿ ಮೆಗಾ ನೇಮಕಾತಿ: ಸಾರ್ವಜನಿಕ ಆರೋಗ್ಯ ಸೇವೆ ಬಲಪಡಿಸಲು ಮಹತ್ವದ ಹೆಜ್ಜೆ

    June 11, 2026

    ರಾಜ್ಯದಲ್ಲಿ ಖಾಸಗಿ ಅಸ್ಪತ್ರೆಯಲ್ಲಿ ಆಯುಷ್ಮಾನ್ ಯೋಜನೆ ಸಮರ್ಪಕ ಜಾರಿಗೆ ಜ್ಯಾರಿ ಆಗದಿದ್ದರೆ ಜಿಲ್ಲೆಯ ಅರೋಗ್ಯಧಾರಿಗಳ ಮೇಲೆ ಕ್ರಮ :- ಅರೋಗ್ಯ ಸಚಿವ ಯು.ಟಿ ಖಾದರ್

    June 9, 2026

    ಫೀಲ್ಡ್ ಗೆ ಇಳಿದ ಯು.ಟಿ. ಖಾದರ್ – ಸರ್ಕಾರಿ ಆಸ್ಪತ್ರೆ ವೈದ್ಯರಿಗೆ ಕ್ಲಾಸ್…!

    June 5, 2026

    ವೆನ್ಲಾಕ್ ಆಸ್ಪತ್ರೆಯಲ್ಲಿ ಮನೋವೈದ್ಯರು ಮತ್ತು ಕ್ಲಿನಿಕಲ್ ಸೈಕಾಲಜಿಸ್ಟ್‌ಗಳ ತೀವ್ರ ಕೊರತೆ – ಬಡ ರೋಗಿಗಳ ನಿರ್ಲಕ್ಷ್ಯ ಯಾಕೆ ಎಂದು ಸಾರ್ವಜನಿಕರ ಪ್ರಶ್ನೆ

    May 26, 2026
    All News

    ನೂರುಲ್ ಇಸ್ಲಾಂ ಹೈಯರ್ ಸೆಕೆಂಡರಿ ಮದ್ರಸದಲ್ಲಿ ಸಮವಸ್ತ್ರ ಹಾಗೂ ಗುರುತಿನ ಚೀಟಿ ವಿತರಣಾ ಕಾರ್ಯಕ್ರಮ

    By UllalaVaniJune 29, 20260

    ಉಳ್ಳಾಲ: ಉಳ್ಳಾಲ ತಾಲೂಕಿನ ಇರಾ ಗ್ರಾಮದ ಬಾಳೆಪುಣಿ ನೂರುಲ್ ಇಸ್ಲಾಂ ಹೈಯರ್ ಸೆಕೆಂಡರಿ ಮದ್ರಸದಲ್ಲಿ ವಿದ್ಯಾರ್ಥಿಗಳಿಗೆ ಸಮವಸ್ತ್ರ ಹಾಗೂ ಗುರುತಿನ…

    ಬೀರಿ ಸಾರ್ವಜನಿಕ ಶ್ರೀ ಗಣೇಶ ಸೇವಾ ಸಮಿತಿ ಅಧ್ಯಕ್ಷರಾಗಿ ರಾಜೀವಿ ಕೆಂಪುಮಣ್ಣು ಆಯ್ಕೆ

    June 29, 2026

    ಕುಂಪಲದ ಕೇಸರಿ ಸಭಾಂಗಣದಲ್ಲಿ ಪೋಲಿಯೊ ಲಸಿಕಾ ಕಾರ್ಯಕ್ರಮ

    June 29, 2026

    ಮುಹಮ್ಮದ್ ಕೊಣಾಜೆ ನಿಧನ

    June 29, 2026
    1 2 3 … 1,989 Next
    Automatic YouTube Gallery

    ದಿ.ಅಮೃತ ಸೋಮೇಶ್ವರ ಸಂಸ್ಮರಣಾ ಕಾರ್ಯಕ್ರಮ

    ಪರಿಜ್ಞಾನ ಪದವಿಪೂರ್ವ ಕಾಲೇಜು, ಸೋಮೇಶ್ವರ ಸಹಯೋಗದೊಂದಿಗೆ
    ಉಳ್ಳಾಲ ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿ(ರಿ.) ವತಿಯಿಂದ
    ದಿ.ಅಮೃತ ಸೋಮೇಶ್ವರ ಸಂಸ್ಮರಣಾ ಕಾರ್ಯಕ್ರಮ
    ಭಾಷಣ ಸ್ಪರ್ಧೆ, ಬಹುಭಾಷಾ ಕವಿಗೋಷ್ಠಿ, ಕಾವ್ಯಗಾಯನ

    📍 Ullal | Dakshina Kannada | Coastal Karnataka News Update
    ಉಳ್ಳಾಲ, ...
    ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

    Stay connected with Ullalavaani for trusted and fast local news from Ullal, Mangalore, and Dakshina Kannada district.

    We focus on:
    ✔ Local news
    ✔ Political updates
    ✔ Social issues
    ✔ Public grievances
    ✔ Event coverage
    ✔ Exclusive ground reports

    Ullalavaani – The Voice of Ullal.

    If you like our work, support independent local journalism:
    👍 Like
    💬 Comment
    🔔 Subscribe
    📢 Share

    Follow us for daily updates.

    #Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
    #Ullalavaani #UllalVaani #UllalNews #VoiceOfUllal #UllalMedia #UllalUpdates
    Show More
    ದಿ.ಅಮೃತ ಸೋಮೇಶ್ವರ ಸಂಸ್ಮರಣಾ ಕಾರ್ಯಕ್ರಮ
    Now Playing
    ದಿ.ಅಮೃತ ಸೋಮೇಶ್ವರ ಸಂಸ್ಮರಣಾ ಕಾರ್ಯಕ್ರಮ
    ಪರಿಜ್ಞಾನ ಪದವಿಪೂರ್ವ ಕಾಲೇಜು, ಸೋಮೇಶ್ವರ ಸಹಯೋಗದೊಂದಿಗೆ ಉಳ್ಳಾಲ ವೀರರಾಣಿ ...
    ಪರಿಜ್ಞಾನ ಪದವಿಪೂರ್ವ ಕಾಲೇಜು, ಸೋಮೇಶ್ವರ ಸಹಯೋಗದೊಂದಿಗೆ
    ಉಳ್ಳಾಲ ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿ(ರಿ.) ವತಿಯಿಂದ
    ದಿ.ಅಮೃತ ಸೋಮೇಶ್ವರ ಸಂಸ್ಮರಣಾ ಕಾರ್ಯಕ್ರಮ
    ಭಾಷಣ ಸ್ಪರ್ಧೆ, ಬಹುಭಾಷಾ ಕವಿಗೋಷ್ಠಿ, ಕಾವ್ಯಗಾಯನ

    📍 Ullal | Dakshina Kannada | Coastal Karnataka News Update
    ಉಳ್ಳಾಲ, ...
    ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

    Stay connected with Ullalavaani for trusted and fast local news from Ullal, Mangalore, and Dakshina Kannada district.

    We focus on:
    ✔ Local news
    ✔ Political updates
    ✔ Social issues
    ✔ Public grievances
    ✔ Event coverage
    ✔ Exclusive ground reports

    Ullalavaani – The Voice of Ullal.

    If you like our work, support independent local journalism:
    👍 Like
    💬 Comment
    🔔 Subscribe
    📢 Share

    Follow us for daily updates.

    #Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
    #Ullalavaani #UllalVaani #UllalNews #VoiceOfUllal #UllalMedia #UllalUpdates
    Show More
    ಕೋಟೆಕಾರು ರಾಮಾಶ್ರಯ ರಸ್ತೆ ಉದ್ಘಾಟಿಸಿದ ಹರ್ಷರಾಜ್‌ ಮುದ್ಯ
    Now Playing
    ಕೋಟೆಕಾರು ರಾಮಾಶ್ರಯ ರಸ್ತೆ ಉದ್ಘಾಟಿಸಿದ ಹರ್ಷರಾಜ್‌ ಮುದ್ಯ
    ಒಂದೇ ರಸ್ತೆ ಎರಡು ಬಾರಿ ಉದ್ಘಾಟನೆ ಬಿಜೆಪಿ , ಕೋಟೆಕಾರು ಪ.ಪಂ ಅಧ್ಯಕ್ಷರ ವಿರುದ್ಧ ...
    ಒಂದೇ ರಸ್ತೆ ಎರಡು ಬಾರಿ ಉದ್ಘಾಟನೆ

    ಬಿಜೆಪಿ , ಕೋಟೆಕಾರು ಪ.ಪಂ ಅಧ್ಯಕ್ಷರ ವಿರುದ್ಧ ಪ್ರತ್ಯಾರೋಪ

    📍 Ullal | Dakshina Kannada | Coastal Karnataka News Update
    ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ...
    ಅನ್ನು Subscribe ಮಾಡಿ.

    Stay connected with Ullalavaani for trusted and fast local news from Ullal, Mangalore, and Dakshina Kannada district.

    We focus on:
    ✔ Local news
    ✔ Political updates
    ✔ Social issues
    ✔ Public grievances
    ✔ Event coverage
    ✔ Exclusive ground reports

    Ullalavaani – The Voice of Ullal.

    If you like our work, support independent local journalism:
    👍 Like
    💬 Comment
    🔔 Subscribe
    📢 Share

    Follow us for daily updates.

    #Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
    #Ullalavaani #UllalVaani #UllalNews #VoiceOfUllal #UllalMedia #UllalUpdates
    Show More
    Follow us on Facebook
    Recent Editions
    Ullal Vaani February 5 to 25

    Ullal Vaani February 5 to 25

    Mangalore

    Feb 9, 2026

    JAN 19-FEB 6

    JAN 19-FEB 6

    Mangalore

    Jan 20, 2026

    JAN 1-15

    JAN 1-15

    Mangalore

    Jan 8, 2026

    Latest E-Papers
    Loading editions...
    Office Address:

    ಉಳ್ಳಾಲವಾಣಿ
    ಕನ್ನಡ ವಾರಪತ್ರಿಕೆ
    RNI No. KARKAN28322
    ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
    ಸೋಮೇಶ್ವರ ಗ್ರಾಮ,
    ಉಳ್ಳಾಲ ತಾಲೂಕು ದ.ಕ- 575017

    Ullalavani 
    Kannada Weekly
    RNI No. KARKAN28322
    Appachi Complex, Kuttaru
    munnuuru, Someshwara Village,
    Ullala Tq., D.K. – 575017
    +91 98454 78858
    +91 99725 28110

     

    ಸಂಪರ್ಕಿಸಿ
    Facebook X (Twitter) Instagram Pinterest
    © 2026 ullalavani.com. Designed by wpwebsmartz.com.

    Type above and press Enter to search. Press Esc to cancel.

    Go to mobile version