Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
UllalavaniUllalavani
suddi

ಎಂ.ಸಿ.ಸಿ. ಬ್ಯಾಂಕಿನ ನವೀಕೃತ ಕಂಕನಾಡಿ ಶಾಖೆಯ ಉದ್ಘಾಟನೆ

UllalaVaniBy UllalaVaniDecember 6, 2025No Comments4 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಮಂಗಳೂರು: ಎಂಸಿಸಿ ಬ್ಯಾಂಕ್, ಮಂಗಳೂರು ಇದರ ನವೀಕೃತ ಕಂಕನಾಡಿ ಶಾಖೆಯನ್ನು ಪಂಪ್‌ವೆಲ್ ರಸ್ತೆಯಲ್ಲಿರುವ ಎಂಪೋರಿಯo ವಾಣಿಜ್ಯ ಸಂಕೀರ್ಣದಲ್ಲಿ ಉದ್ಘಾಟಿಸಲಾಯಿತು.

ನವೀಕರಿಸಿದ ಶಾಖೆಯನ್ನು ಹೆಸರಾಂತ ಅನಿವಾಸಿ ಭಾರತೀಯ ಉದ್ಯಮಿ, ಉದಾರ ದಾನಿ ಮತ್ತು ವಿಷನ್ ಕೊಂಕಣಿಯ ಪ್ರವರ್ತಕ ಮೈಕಲ್ ಡಿಸೋಜಾ ಉದ್ಘಾಟಿಸಿ, ಕಂಕನಾಡಿ ಫಾದರ್ ಮುಲ್ಲರ್ಸ್ ಚಾರಿಟೇಬಲ್ ಸಂಸ್ಥೆಗಳ ನಿರ್ದೇಶಕ ವಂದನೀಯ ಫಾದರ್ ಫೌಸ್ಟಿನ್ ಲೋಬೊ ಆಶೀರ್ವದಿಸಿದರು.

ಎಂಸಿಸಿ ಬ್ಯಾಂಕ್‌ನ ಅಧ್ಯಕ್ಷ ಸಹಕಾರ ರತ್ನ ಅನಿಲ್ ಲೋಬೊ ಅಧ್ಯಕ್ಷತೆ ವಹಿಸಿದ್ದರು. ಜೆಪ್ಪುವಿನ ಸೇಂಟ್ ಆ್ಯಂಟನಿ ಆಶ್ರಮದ ನಿರ್ದೇಶಕ ವಂದನೀಯ ಫಾದರ್ ಜೆ.ಬಿ.ಕ್ರಾಸ್ತಾ, ಬೆಂದೂರಿನ ಸೇವಾನಿಲಯ ಕಾನ್ವೆಂಟ್‌ನ ಸುಪೀರಿಯರ್‌ನ ಸಿಸ್ಟರ್ ಸಿಂತಿಯಾ ಡಿ’ಸೋಜಾ, ಮತ್ತು ಕೊಂಕಣಿ ಸಾಂಸ್ಕೃತಿಕ ಸಂಸ್ಥೆ (ಕೆಸಿಒ) ಅಧ್ಯಕ್ಷ ಲಿಯೋ ರೋಡ್ರಿಗಸ್, ಮುಖ್ಯ ಅತಿಥಿಗಳಾಗಿದ್ದರು.

ಅಧ್ಯಕ್ಷರಾದ ಅನಿಲ್ ಲೋಬೊ ಅವರು ತಮ್ಮ ಸ್ವಾಗತ ಭಾಷಣದಲ್ಲಿ ಕಂಕನಾಡಿ ಶಾಖೆಯ ನವೀಕರಣದ ಹಿಂದಿನ ಉದ್ದೇಶ ಮತ್ತು ದೃಷ್ಟಿಕೋನವನ್ನು ವಿವರಿಸಿದರು. ಇತ್ತೀಚಿನ ದಿನಗಳಲ್ಲಿ ಗ್ರಾಹಕರು ಆಧುನೀಕರಣ ಮತ್ತು ಹೊಸ ಆಲೋಚನೆಗಳನ್ನು ನಿರೀಕ್ಷಿಸುತ್ತಾರೆ. ನಮ್ಮ ಬ್ಯಾಂಕ್ ಅದನ್ನು ಹೇಗೆ ಸಾಧಿಸುವುದು ಎಂಬುದರ ಸ್ಪಷ್ಟ ದೃಷ್ಟಿಕೋನದೊಂದಿಗೆ ಡಿಜಿಟಲೀಕರಣಕ್ಕೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ಎಲ್ಲಾ 16 ಶಾಖೆಗಳನ್ನು ನವೀಕರಿಸಿದೆ. ಗ್ರಾಹಕರಿಗೆ ಅಗತ್ಯವಿರುವ ಸೌಲಭ್ಯಗಳನ್ನು ಪೂರೈಸುವಲ್ಲಿ ಯಶಸ್ವಿಯಾಗಿದೆ. ಕಂಕನಾಡಿ ಶಾಖೆಯು 54 ವರ್ಷಗಳನ್ನು ಪೂರೈಸಿದ ಸಂದರ್ಭದಲ್ಲಿ, ಗ್ರಾಹಕರು ತಮ್ಮ ವಹಿವಾಟುಗಳನ್ನು ಸಂತೋಷದಾಯಕವಾಗಿ ನಡೆಸಲು ಅನುಕೂಲವಾಗುವಂತೆ ಶಾಖೆಯನ್ನು ನವೀಕರಿಸಲಾಗಿದೆ ಎಂದು ಅವರು ಹೇಳಿದರು.

ಪ್ರಸ್ತುತ ಆಡಳಿತ ಮಂಡಳಿ ಅಧಿಕಾರ ವಹಿಸಿಕೊಂಡಾಗ ಕೇವಲ 16 ಶಾಖೆಗಳಿದ್ದು, ಕಳೆದ 7 ವರ್ಷಗಳಲ್ಲಿ, 22 ವರ್ಷಗಳ ನಂತರ ಐದು ಹೊಸ ಶಾಖೆಗಳನ್ನು ತೆರೆಯಲಾಗಿದೆ. ಆರ್‌ಬಿಐ ಹೆಚ್ಚುವರಿ ಶಾಖೆಗಳನ್ನು ತೆರೆಯಲು ಅನುಮತಿ ನೀಡಿದ್ದು, ಬ್ಯಾಂಕ್ ಆರ್ಥಿಕವಾಗಿ ಸದೃಢವಾಗಿದೆ ಮತ್ತು ಉತ್ತಮವಾಗಿ ನಿರ್ವಹಿಸಲ್ಪಟ್ಟಿದೆ ಎಂದು ಸೂಚಿಸುತ್ತದೆ. ಪ್ರಸ್ತುತ ಆಡಳಿತ ಮಂಡಳಿಯು 2018 ರಲ್ಲಿ ಬ್ಯಾಂಕಿನ ಜವಾಬ್ದಾರಿಯನ್ನು ವಹಿಸಿಕೊಂಡಾಗಿನಿoದ ಬ್ಯಾಂಕ್ ಎಲ್ಲಾ ಹಣಕಾಸು ನಿಯತಾಂಕಗಳನ್ನು ಪೂರೈಸಿದ್ದು, ಇಂದು, ಒಟ್ಟು 21 ಶಾಖೆಗಳು ಮತ್ತು 15 ಎಟಿಎಂಗಳನ್ನು ಹೊಂದಿದೆ. ಮುಂದಿನ ಹಣಕಾಸು ವರ್ಷದಲ್ಲಿ ದೇರಳಕಟ್ಟೆ, ಕಟಪಾಡಿ, ಪಡೀಲ್ ಮತ್ತು ಮುಡಿಪು ಅಥವಾ ವಾಮಂಜೂರಿನಲ್ಲಿ ಇನ್ನೂ ನಾಲ್ಕು ಶಾಖೆಗಳನ್ನು ತೆರೆಯಲು ಯೋಜನೆಯನ್ನು ಹಮ್ಮಿಕೊಂಡಿದೆ. ಕರ್ನಾಟಕ ರಾಜ್ಯದಲ್ಲಿ ಮಾತ್ರವಲ್ಲದೆ ಇಡೀ ರಾಷ್ಟçದಾದ್ಯಂತ ಬ್ಯಾಂಕ್ ಬೆಳೆಯಲು ಅನುವು ಮಾಡಿಕೊಡಲು ಗ್ರಾಹಕರ ಬೆಂಬಲ ಮತ್ತು ಆಶೀರ್ವಾದವನ್ನು ಕೋರಿದರು. ಸಮಾರಂಭದಲ್ಲಿ ಹಾಜರಿದ್ದ ಎಲ್ಲಾ ಗಣ್ಯರು, ಗ್ರಾಹಕರು ಮತ್ತು ಹಿತೈಷಿಗಳನ್ನು ಅವರು ಸ್ವಾಗತಿಸಿದರು.

ತಮ್ಮ ಭಾಷಣದಲ್ಲಿ, ಮೈಕೆಲ್ ಡಿಸೋಜಾ ಅವರು ಬ್ಯಾಂಕಿನ ಪ್ರಗತಿಗೆ ಕಾರಣಕರ್ತರಾದ ಬ್ಯಾಂಕಿನ ಅಧ್ಯಕ್ಷರು, ಆಡಳಿತ ಮಂಡಳಿ ಮತ್ತು ಸಿಬ್ಬಂದಿಯನ್ನು ಅಭಿನಂದಿಸಿದರು. ಬ್ಯಾಂಕಿನ ಅಧ್ಯಕ್ಷ ಅನಿಲ್ ಲೋಬೊ ಅವರ ಕ್ರಿಯಾತ್ಮಕ ನಾಯಕತ್ವದಲ್ಲಿ ಬ್ಯಾಂಕ್ ಸಾಧಿಸಿರುವ ಅಮೋಘ ಸುಧಾರಣೆ ಮತ್ತು ಬೆಳವಣಿಗೆಯನ್ನು ವಿವರಿಸಿ ಶಾಖೆಗಳ ಅಭಿವೃದ್ಧಿ, ಸಿಬ್ಬಂದಿ ಅಭಿವೃದ್ಧಿ, ಗ್ರಾಹಕ ಸಂಬoಧಗಳು, ಪ್ರಚಾರ ಮತ್ತು ಇನ್ನೂ ಹೆಚ್ಚಿನವುಗಳನ್ನು ಒಳಗೊಂಡAತೆ ಎಲ್ಲಾ ಕ್ಷೇತ್ರಗಳಲ್ಲಿ ಬ್ಯಾಂಕ್ ಸ್ಥಿರ ಪ್ರಗತಿಯನ್ನು ಸಾಧಿಸಿದೆ ಎಂದು ತಿಳಿಸಿ ಕಾರ್ಯಕ್ರಮಕ್ಕಾಗಿ ಗಣ್ಯರು ಮತ್ತು ಗ್ರಾಹಕರನ್ನು ಒಟ್ಟುಗೂಡಿಸುವ ಅಧ್ಯಕ್ಷರ ಸಾಮರ್ಥ್ಯವನ್ನು ಅವರು ಶ್ಲಾಘಿಸಿದರು. “ನಾವು ಸೇವೆ ಮಾಡಲು ಬೆಳೆಯುತ್ತೇವೆ, ಬೆಳೆಯಲು ಸೇವೆ ಮಾಡುತ್ತೇವೆ” ಎಂಬ ಪದಗಳನ್ನು ಅವರು ಉಲ್ಲೇಖಿಸಿ ಗ್ರಾಹಕರ ನಿರಂತರ ಬೆಂಬಲದೊoದಿಗೆ ನಿರ್ದೇಶಕರು ಮತ್ತು ಸಿಬ್ಬಂದಿಯ ಸಂಯೋಜಿತ ಪ್ರಯತ್ನಗಳ ಮೂಲಕ ಉತ್ತಮ ಸಾಲ ನೀಡುವಿಕೆ ಮತ್ತು ಸಕಾಲಿಕ ಸಾಲ ವಸೂಲಾತಿ ಪ್ರಕ್ರಿಯೆ ಕೈಗೊಳ್ಳಲು ಸಲಹೆ ನೀಡಿದರು.

ಫಾದರ್ ಜೆ. ಬಿ. ಕ್ರಾಸ್ತಾ ಅವರು ತಮ್ಮ ಭಾಷಣದಲ್ಲಿ, ಗ್ರಾಹಕರಿಗೆ ಬ್ಯಾಂಕ್ ನೀಡುವ ಅನುಕರಣೀಯ ಸೇವೆ ಮತ್ತು ಸುರಕ್ಷತೆಗಾಗಿ ಸಂತೋಷ ವ್ಯಕ್ತಪಡಿಸಿದರು. ಶಾಖೆಯ ಸಿಬ್ಬಂದಿಗಳ ಸಮರ್ಪಣೆ ಮತ್ತು ಬದ್ಧತೆಯನ್ನು ಹಾಗೂ ಶಾಖೆಯ ವ್ಯವಹಾರವನ್ನು ಅಭಿವೃದ್ಧಿಪಡಿಸುವಲ್ಲಿ ಅವರ ಆಸಕ್ತಿಯನ್ನು ಶ್ಲಾಘಿಸಿದರು. ಬ್ಯಾಂಕಿನ ಪ್ರಗತಿ ಮತ್ತು ಅಭಿವೃದ್ಧಿಗೆ ತಮ್ಮ ಶುಭಾಶಯಗಳನ್ನು ಸಲ್ಲಿಸುವ ಮೂಲಕ ಅವರು ತಮ್ಮ ಭಾಷಣವನ್ನು ಮುಕ್ತಾಯಗೊಳಿಸಿದರು.

ಲಿಯೋ ರೊಡ್ರಿಗಸ್ ಅವರು ಬ್ಯಾಂಕಿನ ಬೆಳವಣಿಗೆಗೆ ಅಧ್ಯಕ್ಷರನ್ನು ಅಭಿನಂದಿಸಿ, ಗಣ್ಯರು, ಸಿಬ್ಬಂದಿ ಮತ್ತು ಗ್ರಾಹಕರ ಉಪಸ್ಥಿತಿಗೆ ಧನ್ಯವಾದಗಳನ್ನು ಅರ್ಪಿಸಿದರು.

ಫಾದರ್ ಫೌಸ್ಟಿನ್ ಲೋಬೊ ತಮ್ಮ ಭಾಷಣದಲ್ಲಿ, ಒಬ್ಬ ವ್ಯಕ್ತಿಯು ಸಲ್ಲಿಸಿದ ಸೇವೆಯಿಂದ ಗುರುತಿಸಲ್ಪಡುತ್ತಾನೆ ಎಂಬ ಬೈಬಲ್‌ನ ವಚನವನ್ನು ಉಲ್ಲೇಖಿಸಿದರು. ನಾವು ಬದುಕಬೇಕು ಮತ್ತು ಇತರರನ್ನು ಬದುಕಲು ಬಿಡಬೇಕು ಎಂದು ಹೇಳಿ, ಇದು ಬ್ಯಾಂಕಿಗೆ ಸಮಾನವಾಗಿ ಅನ್ವಯಿಸುತ್ತದೆ, ಬ್ಯಾಂಕಿನಿAದ ಸೇವೆ ಸಲ್ಲಿಸುವ ಗ್ರಾಹಕರ ಬೆಳವಣಿಗೆಯೊಂದಿಗೆ ಅದು ಬೆಳೆಯಬೇಕು. ಬದಲಾವಣೆ ಅನಿವಾರ್ಯ ಮತ್ತು ಎಲ್ಲಾ ಜೀವಿಗಳಿಗೆ ನಿರಂತರ ಪ್ರಕ್ರಿಯೆ ಎಂದು ಅವರು ಹೇಳಿದರು. ಸಮಾಜಕ್ಕೆ ಸೇವೆ ಸಲ್ಲಿಸಲು ಬ್ಯಾಂಕ್ ತನ್ನ ಸೌಲಭ್ಯಗಳು ಮತ್ತು ಸೇವೆಗಳನ್ನು ಸುಧಾರಿಸುವ ಮೂಲಕ ಸ್ಥಿರ ಬೆಳವಣಿಗೆಯ ಹಾದಿಯಲ್ಲಿ ಮುಂದುವರಿಯಬೇಕು ಎಂದು ಹೇಳಿ ಬ್ಯಾಂಕಿನ ಮುಂದಿನ ಯೋಜನೆಗಳಿಗೆ ಶುಭ ಹಾರೈಸಿದರು.


ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತೆ, ಮಂಗಳೂರಿನ ದಿ ವೈಟ್ ಡವ್ಸ್ ಸೈಕಿಯಾಟ್ರಿಕ್ ನರ್ಸಿಂಗ್ & ಡೆಸ್ಟಿಟ್ಯೂಟ್ ಹೋಂನ ಸಂಸ್ಥಾಪಕಿ ಕೊರಿನ್ ರಸ್ಕಿನ್ಹಾ ಅವರನ್ನು ಶಾಲು, ಹಣ್ಣು ಹಂಪಲು, ಸ್ಮರಣಿಕೆ, ಸನ್ಮಾನ ಪತ್ರ ಮತ್ತು ಹೂವಿನ ಪುಷ್ಪ್ಪಗುಚ್ಛದೊಂದಿಗೆ ಸನ್ಮಾನಿಸಲಾಯಿತು.

ಮೈಕೆಲ್ ಡಿಸೋಜಾ ಅವರನ್ನು ET Now ಬಿಸಿನೆಸ್ ಕಾನ್ಕ್ಲೇವ್ & ಅವಾರ್ಡ್ಸ್ 2025 – ಮಂಗಳೂರು ಆವೃತ್ತಿಯಲ್ಲಿ ರೂಪಾಂತರಗೊoಡ ಲೋಕೋಪಕಾರಿ ಮತ್ತು ಸಮುದಾಯ ನಾಯಕತ್ವ ವಿಭಾಗದಲ್ಲಿ ಪ್ರಶಸ್ತಿಗೆ ಭಾಜನರಾಗಿದ್ದಕ್ಕಾಗಿ ಗೌರವಿಸಲಾಯಿತು.

ಡಿಸೆಂಬರ್ 11 ರಂದು ಚಂಡೀಗಢದಲ್ಲಿ ನಡೆಯುವ ಭಾರತ ಮತ್ತು ದಕ್ಷಿಣ ಆಫ್ರಿಕಾ ಟಿ 20 ಪಂದ್ಯದಲ್ಲಿ ಎಸ್‌ಬಿಐ ಲೈಫ್ ಪರವಾಗಿ ಕ್ರಿಕೆಟ್ ತಾರೆಯೊಬ್ಬರಿಗೆ ಪಂದ್ಯ ಶೇಷ್ಟ ಪ್ರಶಸ್ತಿಯನ್ನು ಪ್ರದಾನ ಮಾಡಲು ಆಯ್ಕೆಯಾಗಿದ್ದಕ್ಕಾಗಿ ಐವಾನ್ ಫ್ರಾಂಕ್ ಅವರನ್ನು ಗೌರವಿಸಲಾಯಿತು.
ಇತ್ತೀಚೆಗೆ ಬಿಡುಗಡೆಯಾದ ಕೊಂಕಣಿ ಚಲನಚಿತ್ರ ‘ಬಾಪಾಚೆ ಪುತಾಚೆ ನಾವಿ’ ದಲ್ಲಿ ನಟಿಸಿರುವ ಶ್ರೀ ಮೆಲ್ವಿನ್ ಡಿಅಲ್ಮೇಡಾ ಅವರನ್ನು ಸಹ ಸನ್ಮಾನಿಸಲಾಯಿತು.

ಕಾರ್ಯಕ್ರಮದ ಭಾಗವಾಗಿ, ಎಂಸಿಸಿ ಬ್ಯಾಂಕ್ ದಸೆಂಬರ್ ತಿಂಗಳಲ್ಲಿ ವಿಶೇಷ ಹುಟ್ಟು ಹಬ್ಬ ಆಚರಿಸಿದ ಗ್ರಾಹಕರಾದ ಎಡ್ಮಂಡ್ ಫ್ರಾಂಕ್ – 75 ನೇ ಹುಟ್ಟುಹಬ್ಬ (ಡಿಸೆಂಬರ್ 1), ಜಾನ್ ಸೈಮನ್ ಡಿ’ಸೋಜಾ – 60 ನೇ ಹುಟ್ಟುಹಬ್ಬ (ಡಿಸೆಂಬರ್ 3), ಮೆರ್ಲಿನ್ ರೇಗೊ – 60 ನೇ ಹುಟ್ಟುಹಬ್ಬ (ಡಿಸೆಂಬರ್ 7), ಶಾಲೆಟ್ ಡಿ’ಸೋಜಾ – 50 ನೇ ಹುಟ್ಟುಹಬ್ಬ (ಡಿಸೆಂಬರ್ 20), ವಿ. ಸುರೇಶ್ ಕುಮಾರ್ – 50 ನೇ ಹುಟ್ಟುಹಬ್ಬ (ಡಿಸೆಂಬರ್ 21) ಇವರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮವನ್ನು ರೋಶನ್ ಕ್ರಾಸ್ತಾ ನಿರೂಪಿಸಿ ವಂದಿಸಿದರು.

ಉಪಾಧ್ಯಕ್ಷ ಜೆರಾಲ್ಡ್ ಜೂಡ್ ಡಿಸಿಲ್ವಾ, ಕಂಕನಾಡಿ ಶಾಖಾ ನಿರ್ದೇಶಕರಾದ ಹೆರಾಲ್ಡ್ ಮೊಂತೇರೊ, ನಿರ್ದೆಶಕರಾದ ಮೆಲ್ವಿನ್ ವಾಸ್, ಸಿ.ಜಿ.ಪಿಂಟೊ, ಜೆ.ಪಿ.ರೊಡ್ರಿಗಸ್, ಐರೀನ್ ರೆಬೆಲ್ಲೊ, ಡಾ| ಫ್ರೀಡಾ ಡಿಸೋಜ, ರೋಶನ್ ಡಿಸೋಜ, ಫೆಲಿಕ್ಸ್ ಡಿಕ್ರೂಜ್, ಆಲ್ವಿನ್ ಮೊಂತೇರೊ, ಜನರಲ್ ಮ್ಯಾನೇಜರ್ ಸುನಿಲ್ ಮಿನೇಜಸ್, ಶಾಖಾ ವ್ಯವಸ್ಥಾಪಕಿ ಐಡಾ ಪಿಂಟೊ, ಸಿಬ್ಬಂದಿ ಸದಸ್ಯರು ಮತ್ತು ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು. ಸಿಬ್ಬಂದಿ ನೇತೃತ್ವದಲ್ಲಿ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಪ್ರಾರಂಭವಾಯಿತು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ವಿದೇಶಿ ಕರೆನ್ಸಿ ಅಕ್ರಮ ಸಾಗಾಟ – ಓರ್ವ ಪುರುಷ, ಇಬ್ಬರು ಮಹಿಳೆಯರು ಸೆರೆ

March 2, 2026

ಇರಾನ್ ದಾಳಿ ; ಕರಾವಳಿಗರಲ್ಲಿ ಆತಂಕ ಬೇಡ – ಅನಿವಾಸಿ ಭಾರತೀಯರ ಮಾಹಿತಿ

March 2, 2026

ನೇತ್ರಾವತಿ ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನ – ವ್ಯಕ್ತಿಯ ರಕ್ಷಣೆ

March 2, 2026

Comments are closed.

Advertise
ಸಂಪರ್ಕಿಸಿ

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025
suddi

ವಿದೇಶಿ ಕರೆನ್ಸಿ ಅಕ್ರಮ ಸಾಗಾಟ – ಓರ್ವ ಪುರುಷ, ಇಬ್ಬರು ಮಹಿಳೆಯರು ಸೆರೆ

By UllalaVaniMarch 2, 20260

ಮಂಗಳೂರು, ಮಾ. 02: ಸುಮಾರು 80 ಲಕ್ಷ ರೂ. ಮೌಲ್ಯದ ವಿದೇಶಿ ಕರೆನ್ಸಿಯನ್ನು ಬಜಪೆಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗುತ್ತಿದ್ದ…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

ಇರಾನ್ ದಾಳಿ ; ಕರಾವಳಿಗರಲ್ಲಿ ಆತಂಕ ಬೇಡ – ಅನಿವಾಸಿ ಭಾರತೀಯರ ಮಾಹಿತಿ

March 2, 2026

ನೇತ್ರಾವತಿ ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನ – ವ್ಯಕ್ತಿಯ ರಕ್ಷಣೆ

March 2, 2026

ಇರಾನ್ ಮೇಲೆ ದಾಳಿ;ಮಂಗಳೂರು-ಗಲ್ಫ್ ರಾಷ್ಟ್ರಗಳ ನಡುವಿನ ವಿಮಾನ ಸೇವೆಗಳಲ್ಲಿ ವ್ಯತ್ಯಯ…!!

February 28, 2026
1 2 3 … 1,819 Next
Automatic YouTube Gallery

ಮಾ.4-8ರಂದು ಸಸಿಹಿತ್ಲು ಶ್ರೀ ಭಗವತಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಕಾರ್ಯಕ್ರಮ

ಸಸಿಹಿತ್ಲು ಶ್ರೀ ಭಗವತಿ ದೇವಸ್ಥಾನದ ಬ್ರಹ್ಮಕಲಶೋತ್ಸವ;ಮಾ.4ರಂದು ವಿವಿಧ ಧಾರ್ಮಿಕ ವಿಧಿವಿಧಾನಗಳೊಂದಿಗೆ ಆರಂಭ

ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ನಳೀನ್ ಕಟೀಲ್ ಮಾಹಿತಿ

#ullalavani #news #tulunad #ullala #latestnews #breakingnews #package #mangalore #Sasihitlutemple
ಮಾ.4-8ರಂದು ಸಸಿಹಿತ್ಲು ಶ್ರೀ ಭಗವತಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಕಾರ್ಯಕ್ರಮ
Now Playing
ಮಾ.4-8ರಂದು ಸಸಿಹಿತ್ಲು ಶ್ರೀ ಭಗವತಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಕಾರ್ಯಕ್ರಮ
ಸಸಿಹಿತ್ಲು ಶ್ರೀ ಭಗವತಿ ದೇವಸ್ಥಾನದ ಬ್ರಹ್ಮಕಲಶೋತ್ಸವ;ಮಾ.4ರಂದು ವಿವಿಧ ಧಾರ್ಮಿಕ ...
ಸಸಿಹಿತ್ಲು ಶ್ರೀ ಭಗವತಿ ದೇವಸ್ಥಾನದ ಬ್ರಹ್ಮಕಲಶೋತ್ಸವ;ಮಾ.4ರಂದು ವಿವಿಧ ಧಾರ್ಮಿಕ ವಿಧಿವಿಧಾನಗಳೊಂದಿಗೆ ಆರಂಭ

ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ನಳೀನ್ ಕಟೀಲ್ ಮಾಹಿತಿ

#ullalavani #news #tulunad #ullala #latestnews #breakingnews #package #mangalore #Sasihitlutemple
ಕೊಣಾಜೆ:ಮಂಗಳಾ ಅಲ್ಯುಮಿನಿ ಮೀಟ್ ಸ್ಮೃತಿ ಸಂಗಮ ಕಾರ್ಯಕ್ರಮಕ್ಕೆ ಚಾಲನೆ
Now Playing
ಕೊಣಾಜೆ:ಮಂಗಳಾ ಅಲ್ಯುಮಿನಿ ಮೀಟ್ ಸ್ಮೃತಿ ಸಂಗಮ ಕಾರ್ಯಕ್ರಮಕ್ಕೆ ಚಾಲನೆ
ಮಂಗಳಾ ಅಲ್ಯುಮಿನಿ ಮೀಟ್ ಸ್ಮೃತಿ ಸಂಗಮ ಕಾರ್ಯಕ್ರಮಕ್ಕೆ ಚಾಲನೆ ;ಮಂಗಳೂರು ...
ಮಂಗಳಾ ಅಲ್ಯುಮಿನಿ ಮೀಟ್ ಸ್ಮೃತಿ ಸಂಗಮ ಕಾರ್ಯಕ್ರಮಕ್ಕೆ ಚಾಲನೆ ;ಮಂಗಳೂರು ವಿಶ್ವವಿದ್ಯಾನಿಲಯದ ಸ್ಪೋರ್ಟ್ಸ್ ಮೈದಾನದಲ್ಲಿ ಆಯೋಜನೆ

ವೆಬ್ಸೈಟ್ ಅನಾವರಣಗೊಳಿಸಿದ ಕಣಚೂರು ಸಂಸ್ಥೆಗಳ ಅಧ್ಯಕ್ಷ ಯು.ಕಣಚೂರು ಮೋನು

#ullalavaninews #ullalavani #ullala #ullalvaninewspaper #mangloreunivercity
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version
%d