Site icon Ullalavani

ಈ ಬಾರಿಯ ನರಿಂಗಾನ ಕಂಬಳದ ವಿಶೇಷತೆಗಳೇನು..??

ಮಂಗಳೂರು;ನರಿoಗಾನ ಕಂಬಳ ಸಮಿತಿ ಆಶ್ರಯದಲ್ಲಿ ನರಿಂಗಾನ ಗ್ರಾಮದ ಮೋರ್ಲ ಬೋಳದಲ್ಲಿ ನಾಲ್ಕನೇ ವರ್ಷದ ಹೊನಲು ಬೆಳಕಿನ ಲವಕುಶ ಜೋಡುಕರೆ ನರಿಂಗಾನ ಕಂಬಳೋತ್ಸವ ಜ.10 ಆರಂಭಗೊಳ್ಳಲಿದೆ ಎಂದು ನರಿಂಗಾನ ಕಂಬಳ ಸಮಿತಿಯ ಅಧ್ಯಕ್ಷರು, ಸ್ಪೀಕರ್ ಯು.ಟಿ.ಖಾದರ್ ಹೇಳಿದ್ದಾರೆ.

ಇವರು ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಮೋರ್ಲ-ಬೋಳ ನರಿಂಗಾನದಲ್ಲಿ ನಡೆಯಲಿರುವ ಕಂಬಳೋತ್ಸವವನ್ನು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನAನ ಗುರುದೇವಾನಂದ ಸ್ವಾಮೀಜಿ ಉದ್ಘಾಟಿಸಲಿದ್ದು, ಮೂಡಬಿದ್ರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ.ಎಮ್.ಮೋಹನ್ ಆಳ್ವ ದೀಪ ಬೆಳಗಿಸಲಿದ್ದಾರೆ. ನರಿಂಗಾನ ಗ್ರಾಮ ಪಂಚಾಯತ್ ಅಧ್ಯಕ್ಷ ನವಾಝ್ ನರಿಂಗಾನ ಅಧ್ಯಕ್ಷತೆ ವಹಿಸುವರು. ವಿವಿಧ, ಧಾರ್ಮಿಕ, ಸಾಮಾಜಿಕ ಸೇರಿದಂತೆ ಗಣ್ಯರು, ವಿವಿಧ ಕ್ಷೇತ್ರಗಳ ಮುಖಂಡರು ಭಾಗವಹಿಸಲಿದ್ದಾರೆ ಎಂದರು.

ಸಂಜೆ ನಡೆಯುವ ಸಭಾ ಕಾರ್ಯಕ್ರಮವನ್ನು ಡಿಸಿಎಂ ಡಿಕೆ ಶಿವಕುಮಾರ್ ಉದ್ಘಾಟಿಸುವರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ದಕ್ಷಿಣ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಕಾನೂನು ಮತ್ತು ಸಂಸದೀಯ ವ್ಯವಹಾರ ಹಾಗೂ ಯುವಜನ ಮತ್ತು ಕ್ರೀಡಾ ಸಚಿವ ಎಚ್ ಕೆ ಪಾಟೀಲ್ , ಕಾರ್ಮಿಕ ಸಚಿವರಾಗಿರುವ ಸಂತೋಷ್ ಲಾಡ್, ವಕ್ಫ್ ಮತ್ತು ವಸತಿ ಸಚಿವ ಜಮೀರ್ ಅಹ್ಮದ್ ಖಾನ್, ಸಂಸದ ಬ್ರಿಜೇಶ್ ಚೌಟ, ಕಾಸರಗೋಡು ಸಂಸದ ರಾಜು ಮೋಹನ್ ಉನ್ನಿತ್ತನ್, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಂ.ಎನ್.ರಾಜೇAದ್ರ ಕುಮಾರ್, ಬಂಜಾರ ಗ್ರೂಫ್ ಆಫ್ ಹೊಟೇಲ್ಸ್ ಆಡಳಿತ ನಿರ್ದೇಶಕ ಪ್ರಕಾಶ್ ಶೆಟ್ಟಿ, ಅನಿವಾಸಿ ಭಾರತೀಯ ಉದ್ಯಮಿ ರೊನಾಲ್ಡ್ ಕೊಲಸೋ, ಅದಾನಿ ಗ್ರೂಪಿನ ಪ್ರೆಸಿಡೆಂಟ್ ಮತ್ತು ಎಕ್ಸಿಕ್ಯೂಟಿವ್ ಡೈರೆಕ್ಟರ್ ಕಿಶೋರ್ ಕುಮಾರ್ ಆಳ್ವ, ನ್ಯಾಷನಲ್ ಕಮಿಷನ್ ಫಾರ್ ಎಲೈಡ್ ಅಂಡ್ ಹೆಲ್ತ್ ಕೇರ್ ಫ್ರೊಪೆಶನ್ಸ್ ಕರ್ನಾಟಕ ಚೇರ್ಮನ್ ಡಾ.ಯು.ಟಿ.ಇಫ್ತಿಕಾರ್ ಅಲಿ, ಜಿಲ್ಲೆಯ ಶಾಸಕರು, ವಿಧಾನ ಪರಿಷತ್ ಸದಸ್ಯರು, ಮಾಜಿ ಸಚಿವರು, ಮಾಜಿ ಶಾಸಕರು, ವಿವಿಧ ನಿಗಮ ಮಂಡಳಿ ಅಧ್ಯಕ್ಷರು, ಉದ್ಯಮಿಗಳು, ಯುನಿವರ್ಸಿಟಿಗಳ ಕುಲಾಧಿಪತಿಗಳು, ಧಾರ್ಮಿಕ ಪರಿಷತ್ ಸದಸ್ಯರು, ವಿವಿಧ ಪಕ್ಷಗಳ ಸಂಘ ಸಂಸ್ಥೆಗಳ ಪ್ರಮುಖರು ಭಾಗವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಕಂಬಳ ಸಮಿತಿ ಜಿಲ್ಲಾಧ್ಯಕ್ಷರಾದ ದೇವಿ ಪ್ರಸಾದ್ ಶೆಟ್ಟಿ ಬೆಳಪು, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಝಕಾರಿಯ ಜೋಕಟ್ಟೆ, ಸಹಕಾರ ರತ್ನ ಪುರಸ್ಕೃತ ಟಿ.ಜಿ.ರಾಜಾರಾಮ್ ಭಟ್, ಭಾಸ್ಕರ್ ಕೋಟ್ಯಾನ್ ಹಾಗೂ ಬಾರ್ಕೂರು ಶಾಂತಾರಾಮ್ ಶೆಟ್ಟಿ, ಕರ್ನಾಟಕ ಕ್ರೀಡಾ ರತ್ನ ಭಾಸ್ಕರ್ ದೇವಾಡಿಗ, ವಿಶ್ವಕಪ್ ವಿಜೇತೆ, ಕಬಡ್ಡಿ ಆಟಗಾರ್ತಿ ಧನಲಕ್ಷಿö್ಮÃ ಪೂಜಾರಿ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಗಣೇಶ್ ಪಂಬದ ಚಿಪ್ಪಾರು, ಪ್ರತಿಭಾನ್ವಿತ ವಿದ್ಯಾರ್ಥಿನಿ ಅಪೇಕ್ಯ ಪುಂಡಿಕಾಯಿ ಅವರನ್ನು ಸನ್ಮಾನಿಸಲಾಗುವುದು.

ವಿಶೇಷವೆಂದರೆ ಸ್ಪರ್ಧಾಕೂಟದಲ್ಲಿ ಭಾಗವಹಿಸಿದ ಕೋಣಗಳ ಯಜಮಾನರಿಗೆ ಬೆಳ್ಳಿಯ ಪದಕ ಹಾಗೂ ಟ್ರೋಫಿ ನೀಡಿ ಗೌರವಿಸಲಾಗುವುದು.

ನರಿಂಗಾನ ಗ್ರಾಮ ಪಂಚಾಯತ್ ಆಶ್ರಯದಲ್ಲಿ ನ.12ರಂದು ನರಿಂಗಾನ ಗ್ರಾಮೋತ್ಸವ ಎಂಬ ವಿಶೇಷ ಸ್ನೇಹ ಸಮ್ಮಿಲನ, ಪ್ರತಿಭಾ ಪುರಸ್ಕಾರ, ಜಿಲ್ಲೆಯ ಪ್ರಸಿದ್ಧ ಕಲಾವಿದರಿಂದ ನೃತ್ಯವೈಭವ, ಸಂಗೀತ ರಸಮಂಜರಿ ಕ್ರೀಡಾಕೂಟಗಳು ನಡೆಯಲಿದ್ದು, ಸಾವಿರಾರು ಸಂಖ್ಯೆಯಲ್ಲಿ ಜನರು ಭಾಗವಹಿಸಲಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಕಂಬಳ ಸಮಿತಿ ಕಾರ್ಯಾಧ್ಯಕ್ಷರಾದ ಪ್ರಶಾಂತ್ ಕಾಜವ ಮಿತ್ತಕೋಡಿ, ಪ್ರಧಾನ ಕಾರ್ಯದರ್ಶಿ ನವಾಝ್ ನರಿಂಗಾನ, ಕಣಚೂರು ಸಮೂಹ ಸಂಸ್ಥೆಯ ಚೇರ್‌ಮ್ಯಾನ್ ಯು.ಕೆ.ಮೋನು, ಉಪಾಧ್ಯಕ್ಷರಾದ ಮ್ಯಾಕ್ಸಿಯಂ ಡಿ’ಸೋಜ ಉಪಸ್ಥಿತರಿದ್ದರು.

ಕನೆ ಹಲಗೆ ವಿಭಾಗದಲ್ಲಿ ಏಳೂವರೆ ಕೋಲು ನೀರು ಹಾಯಿಸುವ ಕೋಣಗಳ ತಂಡಕ್ಕೆ 1 ಪವನ್ ಚಿನ್ನ ಹಾಗೂ ಟ್ರೋಫಿ, ಆರೂವರೆ ಕೋಲು ನೀರು ಹಾಯಿಸುವ ಕೋಣಗಳಿಗೆ ಮುಕ್ಕಾಲು ಪವನ್ ಚಿನ್ನ ಹಾಗೂ ಟ್ರೋಫಿ ನೀಡಲಾಗುವುದು. ಅಡ್ಡ ಹಲಗೆ ವಿಭಾಗದ ಪ್ರಥಮ ವಿಜೇತ ಕೋಣಗಳ ತಂಡಕ್ಕೆ 1ಪವನ್ ಚಿನ್ನ, ದ್ವಿತೀಯ ಸ್ಥಾನ ಅರ್ಧ ಪವನ್, ತೃತೀಯ ಹಾಗೂ ಚತುರ್ಥ ಸ್ಥಾನ ಪಡೆದ ತಂಡಕ್ಕೆ ತಲಾ ಕಾಲ್ ಪವನ್ ಚಿನ್ನದೊಂದಿಗೆ ಟ್ರೋಫಿ ನೀಡಿ ಗೌರವಿಸಲಾಗುವುದು.
ಹಗ್ಗ ಸೀನಿಯರ್ ವಿಭಾಗದಲ್ಲಿ ಪ್ರಥಮ 2 ಪವನ್, ದ್ವಿತೀಯ 1ಪವನ್, ತೃತೀಯ ಹಾಗೂ ಚತುರ್ಥ ಅರ್ಧ ಪವನ್ ಚಿನ್ನದ ಜೊತೆ ಟ್ರೋಫಿ ನೀಡಲಾಗುವುದು. ನೇಗಿಲು ಸೀನಿಯರ್ ವಿಭಾಗದಲ್ಲಿ ಪ್ರಥಮ, ದ್ವಿತೀಯ, ತೃತೀಯ ಹಾಗೂ ಚತುರ್ಥ ಸ್ಥಾನ ಪಡೆದ ತಂಡಗಳಿಗೆ ತಲಾ ಅರ್ಧ ಪವನ್ ಚಿನ್ನ ಹಾಗು ಟ್ರೋಫಿ ನೀಡಲಾಗುವದು. ನೇಗಿಲು ಹಾಗೂ ಹಗ್ಗ ಜೂನಿಯರ್ ವಿಭಾಗದಲ್ಲಿ ಪ್ರಥಮ ಒಂದು ಪವನ್, ದ್ವಿತೀಯ ಅರ್ಧ ಹಾಗೂ ತೃತೀಯ ಮತ್ತು ಚತುರ್ಥ ಕಾಲ್ ಪವನ್ ಚಿನ್ನ ಹಾಗೂ ಟ್ರೋಫಿ ನೀಡಲಾಗುವುದು.

Exit mobile version