ಉಳ್ಳಾಲ: ಮೇಯಲು ಹೋಗಿದ್ದ ಗಣೇಶ ರೈ ಹಾಗೂ ನಾರಾಯಣ ನಾಯ್ಕ ಎಂಬುವವರ ಒಟ್ಟು 04ದನಗಳು ಕಳ್ಳತನವಾಗಿದ್ದ ಪ್ರಕರಣಕ್ಕೆ ಸಂಬoಧಿಸಿದoತೆ ಇದೀಗ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಬಂಟ್ವಾಳ ತಾಲೂಕಿನ ಪೆರುವಾಯಿ ಗ್ರಾಮದ ಸೊಸೈಟಿ ಆವರಣದಿಂದ ಹುಲ್ಲು ಮೇಯುತ್ತಿದ್ದಾಗ 4 ದನಗಳನ್ನು ಉಳ್ಳಾಲ ತಾಲೂಕಿನ ಝುಲ್ಫಾನ್ ಮಾಲಿಕ್ ಕಳ್ಳತನ ಮಾಡಿದ್ದಾನೆ.
ದನಗಳು ಮರಳಿ ಮನೆಗೆ ಬಾರದ ಹಿನ್ನಲೆ ದನದ ಮಾಲೀಕರು ಠಾಣೆಗೆ ದೂರು ನೀಡಿದ್ದರು. ಇದೀಗ ಆರೋಪಿಯನ್ನು ನ್ಯಾಯಾಲಯ ಪೊಲೀಸ್ ಕಸ್ಟಡಿಗೆ ನೀಡಿದೆ.