Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
UllalavaniUllalavani
suddi

ಘನ ತ್ಯಾಜ್ಯ ಘಟಕ ನಿರ್ಮಾಣ ತಲಪಾಡಿ ಗ್ರಾ.ಪಂ.ಯೋಜನೆ: ಸ್ಥಳೀಯರ ಆಕ್ಷೇಪ, ಪ್ರತಿಭಟನೆ

UllalaVaniBy UllalaVaniJanuary 23, 2026Updated:January 23, 2026No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ತಲಪಾಡಿ; ತಲಪಾಡಿಯಿಂದ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಕಡೆ ಹೋಗುವ ರಸ್ತೆಯ ಸಮೀಪವಿರುವ ನಾರ್ಲ ಪಡೀಲ್ ಪಶು ಆಸ್ಪತ್ರೆ ಬಳಿ ಘನ ತ್ಯಾಜ್ಯ ಘಟಕವನ್ನು ತಲಪಾಡಿ ಗ್ರಾಮ ಪಂಚಾಯತ್ ನಿರ್ಮಾಣ ಮಾಡುವ ಯೋಜನೆಗೆ ಮುಂದಾಗಿದ್ದು, ಇದರಿಂದ ಸಾರ್ವಜನಿಕರ ಆರೋಗ್ಯ, ಪರಿಸರ ಮತ್ತು ಮಕ್ಕಳ ಭವಿಷ್ಯಕ್ಕೆ ಗಂಭೀರ ಹಾನಿ ಉಂಟುಮಾಡುವ ಸಾಧ್ಯತೆ ಇದೆ ಎಂದು ಆರೋಪಿಸಿ ಸ್ಥಳೀಯರು ನಾರ್ಲ ಪಡೀಲ್ ಪಶು ಆಸ್ಪತ್ರೆಯ ಬಳಿ ಪ್ರತಿಭಟನೆ ನಡೆಸಿದ್ದಾರೆ.

ಈ ವೇಳೆ ಸ್ಥಳೀಯರಾದ ಯಶು ಪಕ್ಕಳ ಮಾತನಾಡಿ, ಈ ಪ್ರದೇಶದಲ್ಲಿ ಕೇವಲ ಎರಡು ಮೂರು ಮನೆಗಳ ಸಹಿ ಹಾಕಿಸಿಕೊಂಡು ಕಾರ್ಖಾನೆಗಳು ತಲೆ ಎತ್ತಿನಿಂತಿದೆ. ಇದೀಗ ಕಸ ವಿಲೇವಾರಿ ಘಟಕ ನಿರ್ಮಾಣವಾದರೆ ಪರಿಸರದ ಜೊತೆಗೆ ಸಾರ್ವಜನಿಕರು ಸಂಕಷ್ಟವನ್ನು ಎದುರಿಸಬೇಕಾದೀತು. ಅದಲ್ಲದೇ ಘಟಕಕ್ಕೆ ಬೇಲಿ ನಿರ್ಮಿಸುವುದರ ಮೂಲಕ ಭದ್ರತೆ ಮಾಡಿದ್ರೂ, ಇದೇ ಪ್ರದೇಶದಲ್ಲಿ ಗಾಂಜಾ ಅಥವಾ ಇನ್ನಿತರ ಅಕ್ರಮ ಚಟುವಟಿಕೆಗಳನ್ನು ನಡೆಯುವ ಸಾಧ್ಯತೆ ಇದೆ. ಅಂಗನವಾಡಿ ಕೇಂದ್ರ, ಪಶು ಆಸ್ಪತ್ರೆ ವಿರುವ ತಾಣದಲ್ಲಿ ಕಸ ವಿಲೇವಾರಿ ಘಟಕ ಇರೋದಿಲ್ಲ. ನಾವೆಲ್ಲರೂ ಒಗ್ಗಟ್ಟಾಗಿ ನಿಂತು ಸಮಸ್ಯೆಗಳನ್ನು ಬಗೆಹರಿಸಿಕೊಳ್ಳೋಣ ಅಂತ ಹೇಳಿದ್ದಾರೆ.

ಪ್ರತಿಭಟನಾ ಸ್ಥಳಕ್ಕೆ ತಲಪಾಡಿ ಗ್ರಾಮ ಪಂಚಾಯತ್ ಕಾರ್ಯದರ್ಶಿಯಾದ ಮಂಜಪ್ಪ ಅಗಮಿಸಿದ್ದು, ಅವರಿಗೆ ಸ್ಥಳೀಯರು ಮನವಿಯನ್ನು ಸಲ್ಲಿಸಿದ್ದಾರೆ. ಕಸ ತ್ಯಾಜ್ಯವಿಲೇವಾರಿ ಘಟಕವನ್ನು ತಲಪಾಡಿ ಗ್ರಾಮದ ಬೇರೆ ಪ್ರದೇಶಗಳಲ್ಲಿ ಸ್ಥಾಪಿಸಲು ಸಾಕಷ್ಟು ಸ್ಥಳಾವಕಾಶವಿದ್ದರೂ ಈ ಘಟಕವನ್ನು ನಾರ್ಲ ಪಡೀಲ್ ಶಾಲೆಯ ಬಳಿ ಸ್ಥಾಪಿಸಲು ತಲಪಾಡಿ ಗ್ರಾಮ ಪಂಚಾಯತ್ ಎಲ್ಲಾ ರೀತಿಯ ತಯಾರಿಯನ್ನು ನಡೆಸಿರುವುದು ಖಂಡನೀಯ. ಈ ಪ್ರದೇಶವು ಜನವಸತಿ ಪ್ರದೇಶವಾಗಿದ್ದು ಹಾಗೂ ದಿನಂಪ್ರತಿ ನೂರಾರು ಜನರು ಸಂಚರಿಸುವ ಮಾರ್ಗವನ್ನು ಹೊಂದಿದ್ದು ಮತ್ತು ಸಮೀಪದಲ್ಲಿ ಶಾಲೆ ಕೂಡ ಇದೇ ಹಾಗಾಗಿ ಈ ಪ್ರದೇಶದಲ್ಲಿ ಘಟಕ ನಿರ್ಮಿಸುವ ವಿಚಾರವನ್ನು ಹಿಂಪಡೆಯುವAತೆ ಮನವಿಯಲ್ಲಿ ಉಲ್ಲೇಖಿಸಲಾಗಿದೆ.

ಮನವಿ ಸ್ವೀಕರಿಸಿ ಮಾತನಾಡಿದ ಕಾರ್ಯದರ್ಶಿ ಅವರು, ಘನ ತ್ಯಾಜ್ಯ ಘಟಕದ ನಿರ್ಮಾಣಕ್ಕೆ ಕೇವಲ ಜಾಗದ ಗುರುತನ್ನು ಹಾಕಿದ್ದೇವೆ. ನಿರ್ಮಿಸುವುದರ ಬಗ್ಗೆ ಚರ್ಚೆಯಾಗಬೇಕಷ್ಟೇ. ಇದೀಗ ಘನ ತ್ಯಾಜ್ಯಗಳನ್ನು ವಿಲೇವಾರಿ ಮಾಡಲು ಗ್ರಾಮ ಪಂಚಾಯತಿಯ ಘಟಕವಿದ್ದರೇ ಉತ್ತಮ ಎಂಬ ಕಲ್ಪನೆಯಲ್ಲಿ ನಿರ್ಮಾಣಕ್ಕೆ ಮುಂದಾಗಿದೆ. ತ್ಯಾಜ್ಯಗಳನ್ನು ವರ್ಷಾನುಗಟ್ಟನೆ ಇಡುವುದಿಲ್ಲ. ವಾರದಲ್ಲಿ ಒಮ್ಮೆ ಶಂಭೂರು ಘಟಕಕ್ಕೆ ಇಲ್ಲಿನ ತ್ಯಾಜ್ಯಗಳನ್ನು ಕೊಂಡೊಯ್ಯಲು ವಾಹನಗಳು ಬರುತ್ತವೆ. ಈ ಬಗ್ಗೆ ಗ್ರಾಮ ಸಭೆ ನಡೆಸಿ ಗ್ರಾಮಸ್ಥರ ಅಭಿಪ್ರಾಯವನ್ನು ಸಂಗ್ರಹಿಸಿಸುತ್ತೇವೆ ಎನ್ನುತ್ತಾಲೇ, ಸ್ಥಳೀಯರು, ಯಾವುದೇ ಗ್ರಾಮ ಸಭೆ, ಚರ್ಚೆಯ ಅಗತ್ಯವಿಲ್ಲ. ನಾವು ಇಲ್ಲಿ ಘನ ತ್ಯಾಜ್ಯ ವಿಲೇವಾರಿ ಘಟಕ ಸ್ಥಾಪನೆಗೆ ಅವಕಾಶವನ್ನು ಮಾಡಿಕೊಡುವುದಿಲ್ಲ ಎಂದೇ ಗಟ್ಟಿ ಧ್ವನಿಯಲ್ಲಿ ಹೇಳಿದ್ದಾರೆ. ಬಳಿಕ ಕಾರ್ಯದರ್ಶಿಗಳು ವಾಪಾಸ್ಸಾದರು. ಮುಂದಿನ ದಿನಗಳಲ್ಲಿ ಈ ವಿಚಾರವಾದ ಬೆಳವಣಿಗೆಗಳು ಎತ್ತ ಸಾಗುತ್ತವೆ ಎಂಬುವುದನ್ನು ಕಾದು ನೋಡಬೇಕಾಗಿದೆ.

ಇನ್ನು ಈ ಪ್ರತಿಭಟನೆಯಲ್ಲಿ ತಲಪಾಡಿ ಗ್ರಾಮ ಪಂಚಾಯತ್ ಸದಸ್ಯರು ವೈಭವ್ ಶೆಟ್ಟಿ, ಪ್ರಶಾಂತ್, ಶ್ರೀರಾಮ ಭಜನಾ ಮಂಡಳಿಯ ಅಧ್ಯಕ್ಷ ಸುದೀಪ್ ಶೆಟ್ಟಿ ನಾರ್ಲ, ರಾಜೇಶ್ ಕೊಟ್ಟಾರಿ, ರಿಕ್ಷಾ ಚಾಲಕ-ಮಾಲಕರ ಸಂಘದ ಪದಾಧಿಕಾರಿಗಳು ಸೇರಿದಂತೆ ಅನೇಕರು ಭಾಗಿಯಾಗಿದ್ದಾರೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಕೆನರಾ ಬ್ಯಾಂಕ್ ದೇರಳಕಟ್ಟೆ ಶಾಖೆಯ ಶಿವರಾಮ ಕಾಸರಗೋಡು ಅವರಿಗೆ ಬೀಳ್ಕೊಡುಗೆ

February 4, 2026

ಫೆ, 8.ಹಿದಾಯತ್ ನಗರ ಹುಸೈನಿಯಾ ದರ್ಸ್ ವಾರ್ಷಿಕ ಮಹ್ಳರತುಲ್ ಬದ್ರಿಯಾ

February 4, 2026

ಪಟ್ಲ ಫೌಂಡೇಶನ್ ಟ್ರಸ್ಟ್: ಕೇಂದ್ರೀಯ ಮಹಿಳಾ ಘಟಕದ ವಾರ್ಷಿಕೋತ್ಸವ

February 4, 2026

Comments are closed.

Advertise
ಸಂಪರ್ಕಿಸಿ

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025

ಕ್ಯಾನ್ಸರ್ ಹಾಗೂ ಸ್ತ್ರೀ ರೋಗ ಜಾಗ್ರತಿ ಅರಿವು

November 11, 2025
suddi

ಕೆನರಾ ಬ್ಯಾಂಕ್ ದೇರಳಕಟ್ಟೆ ಶಾಖೆಯ ಶಿವರಾಮ ಕಾಸರಗೋಡು ಅವರಿಗೆ ಬೀಳ್ಕೊಡುಗೆ

By UllalaVaniFebruary 4, 20260

ದೇರಳಕಟ್ಟೆ : ಧನಾತ್ಮಕ ಚಿಂತನೆಯೊAದಿಗೆ ಕೆನರಾ ಬ್ಯಾಂಕ್‌ನಲ್ಲಿ ಸೇವೆ ಸಲ್ಲಿಸುವ ಅವಕಾಶ ದೊರೆತಿರುವುದು ನನಗೆ ಅಪಾರ ಸಂತೋಷ ಮತ್ತು ಗೌರವದ…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

ಫೆ, 8.ಹಿದಾಯತ್ ನಗರ ಹುಸೈನಿಯಾ ದರ್ಸ್ ವಾರ್ಷಿಕ ಮಹ್ಳರತುಲ್ ಬದ್ರಿಯಾ

February 4, 2026

ಪಟ್ಲ ಫೌಂಡೇಶನ್ ಟ್ರಸ್ಟ್: ಕೇಂದ್ರೀಯ ಮಹಿಳಾ ಘಟಕದ ವಾರ್ಷಿಕೋತ್ಸವ

February 4, 2026

ನ್ಯಾಯಾಲಯದಿಂದ ತಪ್ಪಿಸಿಕೊಂಡಿದ್ದ ಮುಕ್ಕಚ್ಚೇರಿ ನಿವಾಸಿ 14 ವರ್ಷಗಳ ಬಳಿಕ  ಸೆರೆ

February 4, 2026
1 2 3 … 1,792 Next
Automatic YouTube Gallery

ಉಮಾಮಹೇಶ್ವರಿ ಕ್ಷೇತ್ರದಲ್ಲಿ ನಡೆದ ಸಭಾ ಕಾರ್ಯಕ್ರಮ

ಕಾಪಿಕಾಡ್ ಉಮಾಮಹೇಶ್ವರಿ ಕ್ಷೇತ್ರದಲ್ಲಿ ಬ್ರಹ್ಮಲಕಶೋತ್ಸವ;ಮೂರನೇ ದಿನದ ಸಭಾ ಕಾರ್ಯಕ್ರಮಕ್ಕೆ ಚಾಲನೆ

ಕಟೀಲು ಕ್ಷೇತ್ರದ ಅರ್ಚಕರಾದ ಹರಿನಾರಾಯಣದಾಸ ಅಸ್ರಣ್ಣರಿಂದ ಆಶೀವರ್ಚನ
ಉಮಾಮಹೇಶ್ವರಿ ಕ್ಷೇತ್ರದಲ್ಲಿ ನಡೆದ ಸಭಾ ಕಾರ್ಯಕ್ರಮ
Now Playing
ಉಮಾಮಹೇಶ್ವರಿ ಕ್ಷೇತ್ರದಲ್ಲಿ ನಡೆದ ಸಭಾ ಕಾರ್ಯಕ್ರಮ
ಕಾಪಿಕಾಡ್ ಉಮಾಮಹೇಶ್ವರಿ ಕ್ಷೇತ್ರದಲ್ಲಿ ಬ್ರಹ್ಮಲಕಶೋತ್ಸವ;ಮೂರನೇ ದಿನದ ಸಭಾ ...
ಕಾಪಿಕಾಡ್ ಉಮಾಮಹೇಶ್ವರಿ ಕ್ಷೇತ್ರದಲ್ಲಿ ಬ್ರಹ್ಮಲಕಶೋತ್ಸವ;ಮೂರನೇ ದಿನದ ಸಭಾ ಕಾರ್ಯಕ್ರಮಕ್ಕೆ ಚಾಲನೆ

ಕಟೀಲು ಕ್ಷೇತ್ರದ ಅರ್ಚಕರಾದ ಹರಿನಾರಾಯಣದಾಸ ಅಸ್ರಣ್ಣರಿಂದ ಆಶೀವರ್ಚನ
ಮಹಿಷಾಸುರನ್ ಕೆರ್ನಗ ದೇವಿಗ್ ಬೇಜಾರ್..??
Now Playing
ಮಹಿಷಾಸುರನ್ ಕೆರ್ನಗ ದೇವಿಗ್ ಬೇಜಾರ್..??
ಮಹಿಷಾಸುರನ ಜೊತೆ ತಾಯಿ 9 ದಿನ ಯುದ್ಧ ಮಾಡಿದ ಕಾರಣವೇ ರೋಚಕ.. ಸ್ವರ್ಗದತ್ತ ಮಹಿಷಾ ...
ಮಹಿಷಾಸುರನ ಜೊತೆ ತಾಯಿ 9 ದಿನ ಯುದ್ಧ ಮಾಡಿದ ಕಾರಣವೇ ರೋಚಕ..

ಸ್ವರ್ಗದತ್ತ ಮಹಿಷಾ ಹೋಗಲು ಇದೇ ಕಾರಣ; ಕಟೀಲು ಅಸ್ರಣ್ಣರಿಂದ ಅದ್ಭುತ ವಿವರಣೆ
Follow us on Facebook
Recent Editions
JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version
%d