Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
UllalavaniUllalavani
ಮಂಗಳೂರು

ಫೆ. 6ರಂದು ಬಹುನಿರೀಕ್ಷಿತ “ನಾನ್‌ವೆಜ್‌” ತುಳು ಸಿನಿಮಾ ಬಿಡುಗಡೆ

UllalaVaniBy UllalaVaniFebruary 3, 2026No Comments4 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಮಂಗಳೂರು: “ಜಯಕಿರಣ ಫಿಲಂಸ್ ಲಾಂಛನದಲ್ಲಿ , ಪ್ರಕಾಶ್ ಪಾಂಡೇಶ್ವರ್ ನಿರ್ಮಾಣದಲ್ಲಿ ಹಾಗೂ ಕೆ. ಸೂರಜ್ ಶೆಟ್ಟಿ ನಿರ್ದೇಶನದಲ್ಲಿ ಅದ್ಭುತವಾಗಿ ಸಿದ್ಧಗೊಂಡಿರುವ ನಾನ್‌ ವೆಜ್ ತುಳು ಸಿನಿಮಾ ಫೆಬ್ರವರಿ 6 ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆಕಾಣಲಿದೆ, ಈ ಸಿನಿಮಾವನ್ನು ಎಲ್ಲ ಮಲ್ಟಿಪ್ಲೆಕ್ಸ್‌ನಲ್ಲೂ ಕೇವಲ 99 ರೂ.ಗೆ ನೋಡಬಹುದಾಗಿದೆ.ದುಬಾರಿ ಟಿಕೆಟ್‌ ಕೊಟ್ಟು ಸಿನಿಮಾ ನೋಡಲು ಸಾಧ್ಯವಾಗದವರು ಇಂಥದ್ದೊಂದು ಸುಂದರ ಹಾಗೂ ಅತ್ಯುತ್ತಮ ಸಿನಿಮಾವನ್ನು ನೋಡದೆ ಇರಬಾರದು ಎಂಬ ಉದ್ದೇಶದಿಂದ ಕೇವಲ 99 ರೂ. ಟಿಕೆಟ್‌ ನಿಗದಿಪಡಿಸಿದ್ದು, ಇದು ತುಳುಚಿತ್ರರಂಗದಲ್ಲಿ ಒಂದು ಹೊಸ ಸಂಚಲನ ಉಂಟು ಮಾಡಿದೆ. ಸಿಂಗಲ್‌ ಥಿಯೇಟರ್‌ಗಿಂತಲೂ ಕಡಿಮೆ ದರದಲ್ಲಿ ಈ ಸಿನಿಮಾವನ್ನು ತುಳು ಪ್ರೇಮಿಗಳು ಮಲ್ಟಿಫ್ಲೆಕ್ಸ್ ಗಳಲ್ಲಿ ನೋಡುವಂತಹ ಅವಕಾಶ ಇದಾಗಿದೆ“ ಎಂದು ಚಿತ್ರದ ನಿರ್ಮಾಪಕ ಪ್ರಕಾಶ್ ಪಾಂಡೇಶ್ವರ್ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು

.”ಕರಾವಳಿಯ ಪ್ರತಿಭೆಗಳಿಂದಲೇ ಸಿದ್ಧವಾಗಿರುವ ನಾನ್‌ವೆಜ್‌ ಒಂದು ಅತ್ಯುತ್ತಮ ಹಾಗೂ ಭಿನ್ನ ಕಥಾವಸ್ತುವನ್ನು ಹೊಂದಿದೆ. ಸು ಫ್ರಂ ಸೋ ಸಿನಿಮಾದ ಹೆಚ್ಚಿನ ಕಲಾವಿದರು ನಾನ್‌ವೆಜ್‌ ಸಿನಿಮಾದಲ್ಲೂ ಇದ್ದಾರೆ. ಚಿತ್ರದ ಪ್ರಮುಖ ಪಾತ್ರದಲ್ಲಿ ಪ್ರಕಾಶ್ ತೂಮಿನಾಡು, ಬಾವ ಬಂದರು ಖ್ಯಾತಿಯ ಪುಷ್ಪರಾಜ್ ಬೊಳ್ಳೂರು, ದೀಪಕ್‌ ರೈ ಪಾಣಾಜೆ, ಮೈಮ್‌ ರಾಮದಾಸ್‌, ವಿಸ್ಮಯ ವಿನಾಯಕ್, ರೂಪಾ ವರ್ಕಾಡಿ ನಟಿಸಿದ್ದಾರೆ. ನಾಯಕಿಯಾಗಿ ಪುಟ್ಟಕ್ಕನ ಮಕ್ಕಳು ಧಾರಾವಾಹಿ ಖ್ಯಾತಿಯ ಸಂಜನಾ ಬುರ್ಲಿ ತಮ್ಮ ಅದ್ಭುತ ನಟನಾ ಕೌಶಲವನ್ನು ಪ್ರದರ್ಶಿಸಿ ದ್ದಾರೆ. ಜತೆಗೆ ಕುಸೇಲ್ದರಸೆ ನವೀನ್‌ ಡಿ. ಪಡೀಲ್‌ ಪ್ರಮುಖ ಪಾತ್ರದಲ್ಲಿದ್ದಾರೆ. ಈಗಾಗಲೇ ಕೆಲವು ತುಳು, ಕನ್ನಡ ಸಿನಿಮಾಗಳಲ್ಲಿ ನಟಿಸಿ ಭರವಸೆಯ ನಾಯಕ ನಟ ಎಂದೇ ಗುರುತಿಸಿಕೊಂಡಿರುವ ಅಥರ್ವ ಪ್ರಕಾಶ್‌ ಪ್ರಮುಖ ಪಾತ್ರದಲ್ಲಿದ್ದಾರೆ“ ಎಂದವರು ಹೇಳಿದರು.

ಚಿತ್ರದ ನಿರ್ದೇಶಕ ಸೂರಜ್ ಶೆಟ್ಟಿ ಮಾತನಾಡಿ ”ಚಿತ್ರದಲ್ಲಿ ಹಾಸ್ಯಕ್ಕೆ ಯಾವುದೇ ಕೊರತೆಯಿಲ್ಲ, ಮನೋರಂಜನೆಯೂ ಕಡಿಮೆ ಇಲ್ಲ, ಸಂದೇಶ – ಕಥೆಯೂ ಅದ್ಭುತವಾಗಿದೆ. ನಾನ್‌ವೆಜ್ ವಿಷಯವೇ ಎಲ್ಲರಿಗೂ ಖುಷಿ ಕೊಡಲಿದೆ. ಪ್ರೀತಿಯ ಹಿಂದೆ ಹೋಗುತ್ತಿರುವ ಮುಗ್ಧ ಯುವಕನೊಬ್ಬನ ಸುತ್ತ ಹೆಣೆದಿರುವ ಕಥೆಯನ್ನು ಈ ಸಿನಿಮಾ ಹೊಂದಿದೆ. ಆದ ಕಾರಣ ಇದು ಯುವ ಸಮುದಾಯವನ್ನು ಸೆಳೆಯುವ ಸಾಧ್ಯತೆ ನಿಚ್ಚಳವಾಗಿದೆ. ಮಕ್ಕಳೊಂದಿಗೆ ಹೆತ್ತವರು ಜತೆಯಾಗಿ ಕುಳಿತು ನೋಡಬೇಕಾದ ಸಿನಿಮಾವಾಗಿದ್ದು, ಇಡೀ ಸಿನಿಮಾದ ಕಥೆ ಹಾಗೂ ಸಂದೇಶವನ್ನು ಹಾಸ್ಯದಲ್ಲೇ ತೆಗೆದುಕೊಂಡು ಹೋಗಿರುವುದು ಒಂದು ದೊಡ್ಡ ಪ್ಲಸ್‌ ಪಾಯಿಂಟ್‌“ ಎಂದು ಹೇಳಿದರು. ನಾಯಕನಟ ಅಥರ್ವ ಪ್ರಕಾಶ್ ಮಾತಾಡಿ, ”ನಾನ್‌ವೆಜ್‌ ಸಿನಿಮಾದ ಟೀಸರ್‌ ಬಿಡುಗಡೆಯಾಗಿದ್ದು, ಇದಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. ಟೀಸರ್‌ನಲ್ಲಿರುವ ಪ್ರತಿಯೊಂದು ಅಂಶವೂ ಕುತೂಹಲ ಕೆರಳಿಸುತ್ತಿದ್ದು, ಒಂದು ಸೂಕ್ಷ್ಮ ವಿಷಯವನನ್ನು ಹಿಡಿದುಕೊಂಡು ಕಥೆಯನ್ನು ಎಷ್ಟು ಹಾಸ್ಯಮಯವಾಗಿ ಕೊಂಡೊಯ್ಯಲಾಗಿದೆ ಎಂಬುದನ್ನು ಟೀಸರ್‌ ತೋರಿಸುತ್ತಿದೆ.ಮಕ್ಕಳ ಮನಸ್ಸೇ ಹಾಗೆ. ವಿಜ್ಞಾನಿಗಳಂತೆ ಅವರು ಒಂದು ವಿಷಯಕ್ಕಾಗಿ ಶೋಧಿಸುತ್ತಲೇ ಇರುತ್ತಾರೆ. ಸಿನಿಮಾದಲ್ಲಿ ಒಂದು ಪ್ರಮುಖ ಟ್ವಿಸ್ಟ್‌ ಇದ್ದು, ಅದರ ಮೂಲಕ ಇಡೀ ಕಥೆಯನ್ನು ಸುಂದರವಾಗಿ ಹಾಸ್ಯದಿಂದಲೇ ಕೊಂಡೊಯ್ಯಲಾಗಿದೆ. ಟ್ರೆಂಡ್‌ನಲ್ಲಿರುವ ಎಲ್ಲ ಪ್ರಮುಖ ಕಲಾವಿದರೂ ಈ ಸಿನಿಮಾದಲ್ಲಿದ್ದಾರೆ. ಟೀಸರ್‌ ಸೂಪರ್‌ ಆಗಿದೆ. ಸಿನಿಮಾವಂತೂ ಭರ್ಜರಿ ಮನೋರಂಜನೆ ನೀಡಲಿದೆ“ ಎಂದರು.

ಸಿನಿಮಾದ ಕುರಿತು:ನಾನ್ ವೆಜ್ ಅದ್ಭುತ ಕಥಾವಸ್ತು ಹೊಂದಿರುವ ಅತ್ಯದ್ಭುತ ಸಿನಿಮಾ ಆಗಿದೆ. ನಾನು ಕೂಡ ಒಂದು ಗೌರವ ಪಾತ್ರದಲ್ಲಿ ಕಾಣಸಿಕೊಂಡಿದ್ದೇನೆ ಎಂದು ಹಿರಿಯ ನಟ ನವೀನ್‌ ಡಿ.ಪಡೀಲ್‌ ಅವರು ಟೀಸರ್‌ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.ಮಗುವೊಂದಕ್ಕೆ ಒಂದು ವಿಷಯದ ಬಗ್ಗೆ ಕುತೂಹಲ. ಅದಕ್ಕೆ ಉತ್ತರ ಕಂಡುಕೊಳ್ಳಲು ಆ ಮಗು ಪಡುವ ಪ್ರಾಮಾಣಿಕ ಪ್ರಯತ್ನವು ಅದರ ಹೆತ್ತವರಿಗೆ ಕಿರಿಕಿರಿ ಉಂಟು ಮಾಡಿದರೂ, ಮಗು ಮಾತ್ರ ಅದರ ಬೆನ್ನು ಬಿಡುವುದೇ ಇಲ್ಲ. ಮನೆಗೆ ಬಂದ ನೆಂಟರಲ್ಲೂ, ಶಾಲೆಯ ಶಿಕ್ಷಕರಲ್ಲೂ ಮಗುವಿನದ್ದು ಒಂದೇ ಪ್ರಶ್ನೆ. ಅದು ಕೇಳುವ ಮುಗ್ಧತೆಯ ಪ್ರಶ್ನೆಗೆ ಉತ್ತರಿಸಲು ಯಾರಿಗೂ ಸಾಧ್ಯವಾಗುತ್ತಿಲ್ಲ. ಛೀ, ಥೂ ಎಂದು ಹೇಳುವವರೇ ಹೆಚ್ಚು. ಆದರೆ ಕಟ್ಟಕಡೆಗೆ ಆ ಮಗುವಿಗೆ ಉತ್ತರ ಸಿಗುತ್ತದೋ, ಮಗುವಿಗೆ ಸಮಾಜದಲ್ಲಿ ಎಂಥ ಸ್ಥಾನಮಾನ ಸಿಗುತ್ತದೆ, ಮಗು ಸಾಗಿದ ದಾರಿ ಸರಿಯೋ, ತಪ್ಪೋ ಮುಂತಾದವುಗಳಿಗೆ ಉತ್ತರ ಸಿಗಬೇಕಿದ್ದರೆ ನೀವು ಫೆ. 6ರ ಬಳಿಕ ಥಿಯೇಟರ್‌ಗೆ ಹೋಗಲೇಬೇಕು.”ನಾನ್‌ವೆಜ್‌” ಶಬ್ದದಲ್ಲೇ ಗೂಢಾರ್ಥವಿದೆ. ನಾನು ವೆಜ್‌, ನಾನ್‌ವೆಜ್‌ – ಹೀಗೆ ಬೇರೆ ಬೇರೆ ಅರ್ಥ ಕೊಡುವ ಈ ಶಬ್ದದ ಹೆಸರನ್ನು ಇಟ್ಟುಕೊಂಡಿರುವ ಸಿನಿಮಾದ ಕಥೆ ಕೂಡ ಕುತೂಹಲಕಾರಿಯಾಗಿಯೇ ಸಾಗುತ್ತಿದೆ. ಕೇವಲ 99 ರೂಪಾಯಿಗೆ ಮಲ್ಟಿಪ್ಲೆಕ್ಸ್‌ನಲ್ಲಿ ಈ ಸಿನಿಮಾ ನೋಡಲು ಚಿತ್ರತಂಡ ಅವಕಾಶ ಮಾಡಿಕೊಟ್ಟಿದೆ.ಮಲ್ಟಿಫ್ಲೆಕ್ಸ್ ಗಳಲ್ಲಿ 99 ರೂಪಾಯಿ!ತುಳು ಸಿನಿಮಾರಂಗದಲ್ಲಿ ಹೊಸತನ ಇಲ್ಲ” ಅನ್ನೋ ಮಾತು ಮತ್ತೆ ಮತ್ತೆ ಕೇಳಿಸೋ ಸಮಯದಲ್ಲೇ, ಆ ಮಾತಿಗೆ ನೇರ ಉತ್ತರ ಕೊಡುವಂತೆ ‘ನಾನ್ ವೆಜ್’ ಸಿನಿಮಾ ಫೆಬ್ರವರಿ 6ರಿಂದ ಚಿತ್ರಮಂದಿರಗಳಿಗೆ ಗ್ರಾಂಡ್ ಎಂಟ್ರಿ ಕೊಡ್ತಾ ಇದೆ. ಹೆಸರು ಕೇಳಿದ್ರೆ ಥ್ರಿಲ್ಲು, ವಿಷಯ ಕೇಳಿದ್ರೆ ಕುತೂಹಲ – ಕಚಗುಳಿ … ಒಟ್ಟಾರೆ ಇದು ತುಳು ಚಿತ್ರರಂಗಕ್ಕೆ ಹೊಸ ಚೈತನ್ಯ ತುಂಬೋ ಪ್ರಯತ್ನ. ಇತ್ತೀಚಿನ ವರ್ಷಗಳಲ್ಲಿ ತುಳು ಸಿನಿಮಾಗಳು ಪ್ರಯೋಗಾತ್ಮಕವಾಗಿ ಬಂದರೂ ಪ್ರೇಕ್ಷಕರವರೆಗೆ ತಲುಪೋದು ಕಷ್ಟವಾಗಿತ್ತು. ನಿರ್ಮಾಪಕರು ಬಂಡವಾಳ ಹೂಡೋದು ಯೋಚಿಸುವ ಸ್ಥಿತಿ. ಅಂಥ ಸಂದರ್ಭದಲ್ಲಿ ಕುಟುಂಬ ಸಮೇತ ಕೂತು ನೋಡಬಹುದಾದ, ಮನರಂಜನೆಯ ಭರ್ಜರಿ ಬಾಡೂಟ ಹಿಡಿದು ಬರೀ 99 ರೂಪಾಯಿಗಳಿಗೆ ‘ನಾನ್ ವೆಜ್’ ಚಿತ್ರ ಥಿಯೇಟರ್‌ಗೆ ಬರುತ್ತಿದೆ.ಹೆಸರೇನೋ ಸ್ವಲ್ಪ ಡಿಫರೆಂಟ್‌, ಆದರೆ ಕಥೆ, ನಿರೂಪಣೆ ಮತ್ತು ಹಾಸ್ಯದಲ್ಲಿ ಪ್ರೇಕ್ಷಕರನ್ನು ಹಿಡಿದು ಕೂರಿಸಬಲ್ಲ ಪ್ರಯತ್ನ ಮಾಡಲಾಗಿದೆ ಎನ್ನೋದು ಚಿತ್ರತಂಡದ ವಿಶ್ವಾಸ. ನೈಜ ಜೀವನದ ಸನ್ನಿವೇಶಗಳು, ತುಳು ಮಣ್ಣಿನ ವಾಸನೆ, ಮತ್ತು ಭರಪೂರ ಮನರಂಜನೆ –ಇದೆಲ್ಲದರ ಮಿಶ್ರಣವೇ ‘ನಾನ್ ವೆಜ್’.ಒಟ್ಟಿನಲ್ಲಿ, “ತುಳು ಸಿನಿಮಾಗೆ ಪ್ರೇಕ್ಷಕರೇ ಇಲ್ಲ” ಅನ್ನೋ ಮಾತಿಗೆ ಪ್ರಶ್ನಾರ್ಥಕ ಚಿನ್ಹೆ ಹಾಕೋ ಸಿನಿಮಾ ಇದಾಗಬಹುದು ಅನ್ನೋ ನಿರೀಕ್ಷೆ ಚಿತ್ರರಂಗದಲ್ಲಿ ಮೂಡಿದೆ.ನಗು, ಕುತೂಹಲ, ಮನೋರಂಜನೆ ಎಂದರೆ ನಾನೆವೆಜ್‌! ಹೊಸ ದಾಖಲೆ ಬರೆಯುವ ನಿರೀಕ್ಷೆಇಲ್ಲಿ ಪ್ರತಿಯೊಂದು ದೃಶ್ಯವೂ ಕುತೂಹಲ ಕೆರಳಿಸುತ್ತದೆ, ಸಾಕಷ್ಟು ನಗುವಿಗೂ ಕಾರಣವಾಗುತ್ತದೆ. ಮುಂದೇನು ಎಂಬ ಕುತೂಹಲ ಕೊನೆ ತನಕವೂ ಇರಲಿದೆ. ಪ್ರತಿಯೊಬ್ಬ ನಟ- ನಟಿಯರೂ ಅದ್ಭುತವಾಗಿ ನಟಿಸಿದ್ದಾರೆ. ಇನ್ನೇನು ಬೇಕು ಒಂದು ಸಿನಿಮಾ ಗೆಲ್ಲಲು?ಇಂಥದ್ದೊಂದು ಸಿನಿಮಾ ಫೆಬ್ರವರಿ 6ರಂದು ಬಿಡುಗಡೆಯಾಗಲಿದ್ದು, ಈಗಲೇ ಅದರ ಟೀಸರ್‌ ಎಲ್ಲರಲ್ಲೂ ಸಿನಿಮಾ ನೋಡಲು ಕಾತರಿಸುವಂತೆ ಮಾಡಿದೆ.ಅಂದ ಹಾಗೆ ಈ ಸಿನಿಮಾ ಯಾವುದೆಂಬ ಪ್ರಶ್ನೆಗೆ “ನಾನ್‌ವೆಜ್‌” ಎಂಬುದು ಉತ್ತರವಾಗಿದೆ. ಇದೊಂದು ಕುಟುಂಬ ಸಮೇತರಾಗಿ ಎಲ್ಲರೂ ಕುಳಿತು ನೋಡಬಹುದಾದ ಸಿನಿಮಾ. ಯಾಕೆಂದರೆ ಇದರಲ್ಲಿ ಎಲ್ಲೂ ದ್ವಂದ್ವಾರ್ಥವಾಗಲೀ, ಮುಜುಗರ ತರಿಸುವಂಥ ಸಂಭಾಷಣೆ ಅಥವಾ ದೃಶ್ಯವಾಗಲೀ ಇಲ್ಲವೇ ಇಲ್ಲ. ಮಕ್ಕಳ ಸಹಜ ಕುತೂಹಲಕ್ಕೆ ಉತ್ತರ ನೀಡುವಂಥ ಈ ಸಿನಿಮಾವನ್ನು ಪ್ರತಿಯೊಬ್ಬ ಹೆತ್ತವರೂ ತಮ್ಮ ಮಕ್ಕಳಿಗೆ ತೋರಿಸಲೇಬೇಕಾಗಿದೆ. ಈ ಹಿಂದೆ ಸೂಪರ್‌ಹಿಟ್‌ ಹಾಗೂ ಅಸಂಖ್ಯ ದಾಖಲೆಗಳಿಗೆ ಕಾರಣವಾಗಿರುವ “ಚಾಲಿಪೋಲಿಲು” ಸಿನಿಮಾವನ್ನು ಕೊಟ್ಟಿರುವ ಪ್ರಕಾಶ್‌ ಪಾಂಡೇಶ್ವರ ಅವರು “ನಾನ್‌ವೆಜ್‌” ಸಿನಿಮಾದ ನಿರ್ಮಾಪಕರು. ಪ್ರಕಾಶ್‌ ಪಾಂಡೇಶ್ವರ ಅವರ ಸಿನಿಮಾ ಎಂದರೆ ಕೇಳುವುದೇ ಬೇಡ. ಅದರಲ್ಲಿ ಪ್ರೇಕ್ಷಕರನ್ನು ಹಿಡಿದಿಟ್ಟುಕೊಳ್ಳುವಂಥ ಅತ್ಯುತ್ತಮ ವಿಷಯಗಳು ಇದ್ದೇ ಇರುತ್ತವೆ. ಸಾಲದ್ದಕ್ಕೆ ಈ ಸಿನಿಮಾಕ್ಕೆ ಯಶಸ್ವಿ ನಿರ್ದೇಶಕ ಕೆ.ಸೂರಜ್ ಶೆಟ್ಟಿ ಅವರ ನಿರ್ದೇಶನವೂ ಇರುವುದು ಮತ್ತೊಂದು ಪ್ಲಸ್‌ ಪಾಯಿಂಟ್‌. ಸೂರಜ್‌ ಶೆಟ್ಟಿ ಈ ಹಿಂದೆ ಸಾಕಷ್ಟು ಯಶಸ್ವಿ ಸಿನಿಮಾಗಳನ್ನು ನೀಡಿದವರು. ಆದ್ದರಿಂದ ಪ್ರಕಾಶ್‌ ಪಾಂಡೇಶ್ವರ ಮತ್ತು ಸೂರಜ್‌ ಶೆಟ್ಟಿ ಜೋಡಿ ಕೆಲಸ ಮಾಡಿರುವ “ನಾನ್‌ವೆಜ್‌” ಸಿನಿಮಾದ ಬಗ್ಗೆ ಎಲ್ಲರಲ್ಲೂ ನಿರೀಕ್ಷೆ ಅಪಾರವಿದೆ. ಆ ನಿರೀಕ್ಷೆಯನ್ನು ಮೀರಿಸುವಂಥ ಸಿನಿಮಾವಾಗಿ ಇದು ಹೊರಹೊಮ್ಮುವುದು ಖಚಿತ.ಈ ಸಿನಿಮಾದಲ್ಲಿ ಬಾಲ್ಯದಲ್ಲಿ ಎಲ್ಲರೂ ಅನುಭವಿಸಿದ ಸನ್ನಿವೇಶಗಳ ಗುಚ್ಛಗಳಿವೆ. ಆದ್ದರಿಂದ ಇದೊಂದು ಎಲ್ಲರ ಜೀವನದ ನಿಜಕಥೆ ಎಂದೇ ಹೇಳಬಹುದು. ಮಂಗಳೂರಿನ ಪ್ರತಿಭೆ ಅಥರ್ವ ಪ್ರಕಾಶ್ ಅವರ ಮನಸ್ಪರ್ಶಿ ಅಭಿನಯ, ನಾಯಕಿ ಸಂಜನಾ ಬುರ್ಲಿ ಅವರ ಆಕರ್ಷಕತೆ, ಹಾಸ್ಯದಲ್ಲಿ ಕಚಗುಳಿ ಇಡುವ ದೀಪಕ್ ರೈ ಪಾಣಾಜೆ, ಪ್ರಕಾಶ್ ತೂಮಿನಾಡ್, ಪುಷ್ಪರಾಜ್ ಬೊಳ್ಳಾರ್, ವಿಸ್ಮಯ ವಿನಾಯಕ್ ಹಾಸ್ಯ, ನವೀನ್ ಡಿ ಪಡೀಲ್, ರೂಪಾ ವರ್ಕಾಡಿ ಇವರೆಲ್ಲರೂ ಈ ಸಿನಿಮಾದಲ್ಲಿರುವುದು ನಿರೀಕ್ಷೆ ದುಪ್ಪಟ್ಟಾಗಲು ಮತ್ತೊಂದು ಪ್ರಮುಖ ಕಾರಣ. ಅಂದ ಹಾಗೆ ಫೆ. 6ರಂದು ಬಿಡುಗಡೆಯಾಗಲಿರುವ ಈ ಸಿನಿಮಾವನ್ನು ಮಲ್ಟಿಪ್ಲೆಕ್ಸ್‌ನಲ್ಲೂ ಕೇವಲ 99 ರೂಪಾಯಿಗೆ ನೋಡಬಹುದು. ಇದು ಸಿನಿಮಾ ಪ್ರಿಯರಿಗೆ ಚಿತ್ರತಂಡದ ಉಡುಗೊರೆ. ಆದ್ದರಿಂದ ಇಂಥದ್ದೊಂದು ಸದವಕಾಶವನ್ನು ಯಾರೂ ಮಿಸ್‌ ಮಾಡಿಕೊಳ್ಳದೆ ಮಲ್ಪಿಪ್ಲೆಕ್ಸ್‌ನಲ್ಲಿ ಚಿತ್ರನೋಡಿ ನಕ್ಕು ಹಗುರಾಗಿ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ತೀವ್ರ ರಕ್ತದೊತ್ತಡ ಸಿಎಆರ್ ಸಿಬ್ಬಂದಿ ನಿಧನ…!

February 3, 2026

ಫೆ.6ಕ್ಕೆ ರಾಜ್ಯಾದ್ಯಂತ “ಕರಿಕಾಡ”‘ಸಿನಿಮಾ ಬಿಡುಗಡೆ

February 2, 2026

ಉಮಾಮಹೇಶ್ವರಿ ದೇವಳದ ಬ್ರಹ್ಮಕಲಶೋತ್ಸವ; ಶರವು ಕ್ಷೇತ್ರದಲ್ಲಿ ಹೊರೆಕಾಣಿಕೆ ಕೇಂದ್ರ ಉದ್ಘಾಟನೆ

January 31, 2026

Comments are closed.

Advertise
ಸಂಪರ್ಕಿಸಿ

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025

ಕ್ಯಾನ್ಸರ್ ಹಾಗೂ ಸ್ತ್ರೀ ರೋಗ ಜಾಗ್ರತಿ ಅರಿವು

November 11, 2025
suddi

ಕೆನರಾ ಬ್ಯಾಂಕ್ ದೇರಳಕಟ್ಟೆ ಶಾಖೆಯ ಶಿವರಾಮ ಕಾಸರಗೋಡು ಅವರಿಗೆ ಬೀಳ್ಕೊಡುಗೆ

By UllalaVaniFebruary 4, 20260

ದೇರಳಕಟ್ಟೆ : ಧನಾತ್ಮಕ ಚಿಂತನೆಯೊAದಿಗೆ ಕೆನರಾ ಬ್ಯಾಂಕ್‌ನಲ್ಲಿ ಸೇವೆ ಸಲ್ಲಿಸುವ ಅವಕಾಶ ದೊರೆತಿರುವುದು ನನಗೆ ಅಪಾರ ಸಂತೋಷ ಮತ್ತು ಗೌರವದ…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

ಫೆ, 8.ಹಿದಾಯತ್ ನಗರ ಹುಸೈನಿಯಾ ದರ್ಸ್ ವಾರ್ಷಿಕ ಮಹ್ಳರತುಲ್ ಬದ್ರಿಯಾ

February 4, 2026

ಪಟ್ಲ ಫೌಂಡೇಶನ್ ಟ್ರಸ್ಟ್: ಕೇಂದ್ರೀಯ ಮಹಿಳಾ ಘಟಕದ ವಾರ್ಷಿಕೋತ್ಸವ

February 4, 2026

ನ್ಯಾಯಾಲಯದಿಂದ ತಪ್ಪಿಸಿಕೊಂಡಿದ್ದ ಮುಕ್ಕಚ್ಚೇರಿ ನಿವಾಸಿ 14 ವರ್ಷಗಳ ಬಳಿಕ  ಸೆರೆ

February 4, 2026
1 2 3 … 1,792 Next
Automatic YouTube Gallery

ಉಮಾಮಹೇಶ್ವರಿ ಕ್ಷೇತ್ರದಲ್ಲಿ ನಡೆದ ಸಭಾ ಕಾರ್ಯಕ್ರಮ

ಕಾಪಿಕಾಡ್ ಉಮಾಮಹೇಶ್ವರಿ ಕ್ಷೇತ್ರದಲ್ಲಿ ಬ್ರಹ್ಮಲಕಶೋತ್ಸವ;ಮೂರನೇ ದಿನದ ಸಭಾ ಕಾರ್ಯಕ್ರಮಕ್ಕೆ ಚಾಲನೆ

ಕಟೀಲು ಕ್ಷೇತ್ರದ ಅರ್ಚಕರಾದ ಹರಿನಾರಾಯಣದಾಸ ಅಸ್ರಣ್ಣರಿಂದ ಆಶೀವರ್ಚನ
ಉಮಾಮಹೇಶ್ವರಿ ಕ್ಷೇತ್ರದಲ್ಲಿ ನಡೆದ ಸಭಾ ಕಾರ್ಯಕ್ರಮ
Now Playing
ಉಮಾಮಹೇಶ್ವರಿ ಕ್ಷೇತ್ರದಲ್ಲಿ ನಡೆದ ಸಭಾ ಕಾರ್ಯಕ್ರಮ
ಕಾಪಿಕಾಡ್ ಉಮಾಮಹೇಶ್ವರಿ ಕ್ಷೇತ್ರದಲ್ಲಿ ಬ್ರಹ್ಮಲಕಶೋತ್ಸವ;ಮೂರನೇ ದಿನದ ಸಭಾ ...
ಕಾಪಿಕಾಡ್ ಉಮಾಮಹೇಶ್ವರಿ ಕ್ಷೇತ್ರದಲ್ಲಿ ಬ್ರಹ್ಮಲಕಶೋತ್ಸವ;ಮೂರನೇ ದಿನದ ಸಭಾ ಕಾರ್ಯಕ್ರಮಕ್ಕೆ ಚಾಲನೆ

ಕಟೀಲು ಕ್ಷೇತ್ರದ ಅರ್ಚಕರಾದ ಹರಿನಾರಾಯಣದಾಸ ಅಸ್ರಣ್ಣರಿಂದ ಆಶೀವರ್ಚನ
ಮಹಿಷಾಸುರನ್ ಕೆರ್ನಗ ದೇವಿಗ್ ಬೇಜಾರ್..??
Now Playing
ಮಹಿಷಾಸುರನ್ ಕೆರ್ನಗ ದೇವಿಗ್ ಬೇಜಾರ್..??
ಮಹಿಷಾಸುರನ ಜೊತೆ ತಾಯಿ 9 ದಿನ ಯುದ್ಧ ಮಾಡಿದ ಕಾರಣವೇ ರೋಚಕ.. ಸ್ವರ್ಗದತ್ತ ಮಹಿಷಾ ...
ಮಹಿಷಾಸುರನ ಜೊತೆ ತಾಯಿ 9 ದಿನ ಯುದ್ಧ ಮಾಡಿದ ಕಾರಣವೇ ರೋಚಕ..

ಸ್ವರ್ಗದತ್ತ ಮಹಿಷಾ ಹೋಗಲು ಇದೇ ಕಾರಣ; ಕಟೀಲು ಅಸ್ರಣ್ಣರಿಂದ ಅದ್ಭುತ ವಿವರಣೆ
Follow us on Facebook
Recent Editions
JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version
%d