Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
UllalavaniUllalavani
suddi

ಕಿನ್ಯಾಜೆ- ಕುರ್ನಾಡು ಬೆಟ್ಟು ಸಂಪರ್ಕ ರಸ್ತೆ ಮೇಲೆ ಅತಿಕ್ರಮಣ; ಸಂಚಾರಕ್ಕೆ ಅಡಚಣೆ; ಪ್ರತಿಭಟನೆ ಎಚ್ಚರಿಕೆ

UllalaVaniBy UllalaVaniFebruary 7, 2026No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಕುರ್ನಾಡು : ಕುರ್ನಾಡು ಗ್ರಾಮದ ಕಿನ್ಯಾಜೆಯಿಂದ ಕುರ್ನಾಡು ಬೆಟ್ಟುವನ್ನು ಸಂಪರ್ಕಿಸುವ ಸಾರ್ವಜನಿಕ ರಸ್ತೆಯ ಮೇಲೆ ಅತಿಕ್ರಮಣ ನಡೆಯುತ್ತಿದ್ದು, ಇದರಿಂದ ಸುಮಾರು 12 ಕುಟುಂಬಗಳ ದೈನಂದಿನ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಗಿದೆ. ಆದ್ದರಿಂದ ಕೂಡಲೇ ರಸ್ತೆಗೆ ಅಡ್ಡಲಾಗಿ ಹಾಕಿರುವ ಅಡಿಕೆ ಮರದ ತುಂಡುಗಳು ಹಾಗೂ ಕಲ್ಲಿನ ರಾಶಿಗಳನ್ನು ತೆರವುಗೊಳಿಸಿ ಸಾರ್ವಜನಿಕ ಸಂಚಾರಕ್ಕೆ ಅವಕಾಶ ಕಲ್ಪಿಸಬೇಕು. ಇಲ್ಲದಿದ್ದಲ್ಲಿ ರಸ್ತೆ ವಂಚಿತರು ಹಾಗೂ ಊರಿನ ಪ್ರಮುಖರು ಸಂಘಟನೆಯ ಮುಂದಾಳ್ವತದಲ್ಲಿ ಫೆಬ್ರವರಿ 9ರ ಸೋಮವಾರದಂದು ಪ್ರತಿಭಟನೆ ನಡೆಸಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ದಲಿತ್ ಸೇವಾ ಸಮಿತಿ ಸ್ಥಾಪಕಾಧ್ಯಕ್ಷ ಬಿ.ಕೆ. ಸೇಸಪ್ಪ ಬೆದ್ರಕಾಡು ಎಚ್ಚರಿಕೆ ನೀಡಿದ್ದಾರೆ.



ಅವರು ಶುಕ್ರವಾರ ತೊಕ್ಕೊಟ್ಟು ಪ್ರೆಸ್ ಕ್ಲಬ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ಈ ರಸ್ತೆಯನ್ನು ಶಾಲಾ ಮಕ್ಕಳು, ವೃದ್ಧರು, ಮಹಿಳೆಯರು ಹಾಗೂ ಅನಾರೋಗ್ಯ ಪೀಡಿತರು ಪ್ರತಿದಿನ ಬಳಸುತ್ತಿದ್ದು, ರಸ್ತೆ ಇಕ್ಕೆಲೆಗಳಲ್ಲಿ ಸಂತೋಷ್ ಡಿಸೋಜ ಎಂಬವರು ಅಡಿಕೆ ಮರದ ತುಂಡುಗಳು ಹಾಗೂ ಕಲ್ಲುಗಳನ್ನು ರಾಶಿ ಹಾಕಿರುವುದರಿಂದ ವಾಹನ ಹಾಗೂ ಕಾಲ್ನಡಿಗೆ ಸಂಚಾರಕ್ಕೆ ತೀವ್ರ ಅಡ್ಡಿಯಾಗುತ್ತಿದೆ ಎಂದು ಆರೋಪಿಸಿದರು.
ಈ ರಸ್ತೆಯನ್ನು ಬಳಸುತ್ತಿರುವ 12 ಕುಟುಂಬಗಳಲ್ಲಿ 4 ಕುಟುಂಬಗಳು ದಲಿತ ಸಮುದಾಯಕ್ಕೆ ಸೇರಿದ್ದು, ಇತರ ವರ್ಗದ ಜನರೂ ಸಹ ಈ ರಸ್ತೆಯನ್ನು ಅವಲಂಬಿಸಿದ್ದಾರೆ. ಕಳೆದ 30 ವರ್ಷಗಳಿಂದ ಸಾರ್ವಜನಿಕರು ಈ ರಸ್ತೆಯನ್ನು ಉಪಯೋಗಿಸುತ್ತಾ ಬಂದಿದ್ದು, ಇದೀಗ ಏಕಾಏಕಿ ಸಂಚಾರಕ್ಕೆ ತಡೆ ಸೃಷ್ಟಿಸಿರುವುದು ಸರಿಯಲ್ಲ ಎಂದು ಅವರು ಹೇಳಿದರು.


ಈ ಕುರಿತು ಪಂಚಾಯತ್ ಸೇರಿದಂತೆ ಸಂಬಂಧಿಸಿದ ಎಲ್ಲಾ ಇಲಾಖೆಗಳಿಗೆ ಮನವಿ ಸಲ್ಲಿಸಿದ್ದರೂ, ರಸ್ತೆಗೆ ಅಡ್ಡಲಾಗಿ ಇಡಲಾಗಿರುವ ಅಡಿಕೆ ಮರದ ತುಂಡುಗಳು ಹಾಗೂ ಕಲ್ಲಿನ ರಾಶಿಗಳನ್ನು ಇನ್ನೂ ತೆರವುಗೊಳಿಸಿಲ್ಲ. ಪಂಚಾಯತ್ ಕೂಡ ಈ ರಸ್ತೆ ಸಾರ್ವಜನಿಕ ರಸ್ತೆ ಎಂದು ಸ್ಪಷ್ಟಪಡಿಸಿದೆ ಎಂದು ತಿಳಿಸಿದರು.


ದೇವಕಿ ಎಂಬವರ ಮಗ ನಿಧನರಾದ ಸಂದರ್ಭದಲ್ಲಿ ಮೃತದೇಹವನ್ನು ಸಾಗಿಸಲು ಅಪಾರ ಕಷ್ಟ ಅನುಭವಿಸಬೇಕಾಯಿತು. ರಸ್ತೆಯ ಅತಿಕ್ರಮಣದಿಂದ ವಾಹನಗಳು ಪ್ರವೇಶಿಸಲಾಗದ ಪರಿಸ್ಥಿತಿ ನಿರ್ಮಾಣವಾಗಿದ್ದು, ಗ್ರಾಮಸ್ಥರು ಮೃತದೇಹವನ್ನು ಹೊತ್ತುಕೊಂಡು ಸಾಗಬೇಕಾದ ದುಸ್ಥಿತಿ ಎದುರಾಯಿತು. ಅನಾರೋಗ್ಯದ ಸಂದರ್ಭದಲ್ಲೂ ಸಾರ್ವಜನಿಕರಿಗೆ ಭಾರೀ ತೊಂದರೆ ಎದುರಾಗುತ್ತಿದೆ ಎಂದು ಅವರು ಆರೋಪಿಸಿದರು.
ಕಳೆದ ಎರಡು ವರ್ಷಗಳಿಂದ ಈ ಸಮಸ್ಯೆ ಮುಂದುವರಿದಿದ್ದು, ಇದುವರೆಗೆ ಶಾಸಕರ ಗಮನಕ್ಕೆ ತರುವಂತೆ ಯಾವುದೇ ಲಿಖಿತ ದೂರು ನೀಡಲಾಗಿಲ್ಲ ಎಂದರು.


ಸಂತೋಷ್ ಡಿಸೋಜ ಅವರು ಈ ವಿಚಾರವಾಗಿ ನ್ಯಾಯಾಲಯಕ್ಕೆ ಮೊರೆ ಹೋಗಿದ್ದು, ರಸ್ತೆಯಲ್ಲಿ ಯಾವುದೇ ಅಭಿವೃದ್ಧಿ ಮಾಡಬಾರದು ಎಂದು ತಿಳಿಸಿದ್ದಾರೆ. ಆದರೆ ನಮಗೆ ಯಾವುದೇ ಅಭಿವೃದ್ಧಿ ಬೇಡ, ಕೇವಲ ರಸ್ತೆಗೆ ಅಡ್ಡಲಾಗಿ ಹಾಕಿರುವ ಅಡಿಕೆ ಮರದ ತುಂಡುಗಳು ಹಾಗೂ ಕಲ್ಲಿನ ರಾಶಿಗಳನ್ನು ತೆರವುಗೊಳಿಸಿದರೆ ಸಾಕು ಎಂದು ಅವರು ಸ್ಪಷ್ಟಪಡಿಸಿದರು.


ರಸ್ತೆ ವಂಚಿತರಾದ ಚಂದ್ರಶೇಖರ್ ಆಚಾರ್ಯ ಮಾತನಾಡಿ, “ನನಗೆ ಲೋ ಬಿಪಿ ಆಗಿ ಮನೆಯಲ್ಲಿ ಬಿದ್ದಿದ್ದಾಗ ಸ್ಥಳೀಯ ಯುವಕರು ಬೆಂಚಿನ ಮೂಲಕ ಹೊತ್ತುಕೊಂಡು ಹೋಗಬೇಕಾಯಿತು. ಮತ್ತೊಮ್ಮೆ ಕಾಲು ಶಸ್ತ್ರಚಿಕಿತ್ಸೆಯ ಸಂದರ್ಭದಲ್ಲೂ ಆಟೋ ರಿಕ್ಷಾ ಬರಲು ಅವಕಾಶ ನೀಡುವಂತೆ ವಿನಂತಿಸಿದರೂ ಸಂತೋಷ್ ಡಿಸೋಜ ಅವರು ಒಪ್ಪಲಿಲ್ಲ” ಎಂದು ಆರೋಪಿಸಿದರು.


ತಾತ್ಕಾಲಿಕ ಪರ್ಯಾಯ ರಸ್ತೆ ನೀಡಲಾಗಿದ್ದರೂ, ಮಳೆಗಾಲದಲ್ಲಿ ಆ ರಸ್ತೆ ಸಂಪೂರ್ಣವಾಗಿ ಉಪಯೋಗಕ್ಕೆ ಅಸಾಧ್ಯವಾಗಿದ್ದು ಜನರಿಗೆ ತೀವ್ರ ತೊಂದರೆ ಉಂಟಾಗಿದೆ. ಆದ್ದರಿಂದ ಕೂಡಲೇ ರಸ್ತೆ ಮೇಲಿನ ಅಡಿಕೆ ಮರದ ತುಂಡುಗಳು ಹಾಗೂ ಕಲ್ಲಿನ ರಾಶಿಗಳನ್ನು ತೆರವುಗೊಳಿಸಿ ಸಾರ್ವಜನಿಕ ಸಂಚಾರಕ್ಕೆ ಅವಕಾಶ ಕಲ್ಪಿಸಬೇಕು ಎಂದು ಅವರು ಒತ್ತಾಯಿಸಿದರು.


ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಅಧ್ಯಕ್ಷ ಪ್ರಸಾದ್ ಬೊಳ್ಯಾರು, ತಾಲೂಕು ಸಂಚಾಲಕ ಜಗದೀಶ್ ಮಂಜನಾಡಿ, ರಸ್ತೆ ವಂಚಿತರಾದ ಭವಾನಿ, ರತ್ನ, ನಾರಾಯಣ ಆಚಾರ್ಯ ಸೇರಿದಂತೆ ಇತರರು ಉಪಸ್ಥಿತರಿದ್ದರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಉಳ್ಳಾಲ ಮಸೀದಿಗೆ ಬಾಂಬ್ ಬೆದರಿಕೆ ಪೋಸ್ಟ್: ಕಠಿಣ ಕ್ರಮಕ್ಕೆ ಯು.ಟಿ. ಖಾದರ್ ಸೂಚನೆ

March 3, 2026

ವಿದೇಶಿ ಕರೆನ್ಸಿ ಅಕ್ರಮ ಸಾಗಾಟ – ಓರ್ವ ಪುರುಷ, ಇಬ್ಬರು ಮಹಿಳೆಯರು ಸೆರೆ

March 2, 2026

ಇರಾನ್ ದಾಳಿ ; ಕರಾವಳಿಗರಲ್ಲಿ ಆತಂಕ ಬೇಡ – ಅನಿವಾಸಿ ಭಾರತೀಯರ ಮಾಹಿತಿ

March 2, 2026

Comments are closed.

Advertise
ಸಂಪರ್ಕಿಸಿ

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025
suddi

ಉಳ್ಳಾಲ ಮಸೀದಿಗೆ ಬಾಂಬ್ ಬೆದರಿಕೆ ಪೋಸ್ಟ್: ಕಠಿಣ ಕ್ರಮಕ್ಕೆ ಯು.ಟಿ. ಖಾದರ್ ಸೂಚನೆ

By UllalaVaniMarch 3, 20260

ಮಂಗಳೂರು, ಮಾ. 03 : ಬಜ್ಪೆಯಲ್ಲಿ ಹತ್ಯೆಗೀಡಾದ ಹಿಂದೂ ಸಂಘಟನೆಯ ಕಾರ್ಯಕರ್ತ ಸುಹಾಸ್ ಶೆಟ್ಟಿ ಅವರ ಫೋಟೋ ಇರುವ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ,…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

ವಿದೇಶಿ ಕರೆನ್ಸಿ ಅಕ್ರಮ ಸಾಗಾಟ – ಓರ್ವ ಪುರುಷ, ಇಬ್ಬರು ಮಹಿಳೆಯರು ಸೆರೆ

March 2, 2026

ಇರಾನ್ ದಾಳಿ ; ಕರಾವಳಿಗರಲ್ಲಿ ಆತಂಕ ಬೇಡ – ಅನಿವಾಸಿ ಭಾರತೀಯರ ಮಾಹಿತಿ

March 2, 2026

ನೇತ್ರಾವತಿ ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನ – ವ್ಯಕ್ತಿಯ ರಕ್ಷಣೆ

March 2, 2026
1 2 3 … 1,819 Next
Automatic YouTube Gallery

ಉಳ್ಳಾಲ ಖಿಲೇರಿಯಾ ರಸ್ತೆ ಕಾಂಕ್ರಿಟೀಕರಣ | ಚರಂಡಿ ನಿರ್ಮಾಣಕ್ಕೆ ಸ್ಪಿಕರ್ ಯು.ಟಿ.ಖಾದರ್ ಶಿಲಾನ್ಯಾಸ

ಉಳ್ಳಾಲ ಖಿಲೇರಿಯಾ ರಸ್ತೆ ಕಾಂಕ್ರಿಟೀಕರಣ ಚರಂಡಿ ನಿರ್ಮಾಣಕ್ಕೆ ಯು.ಟಿ.ಖಾದರ್ ಶಿಲಾನ್ಯಾಸ; ಹಿರಿಯರಾದ ಮಹಮ್ಮದ್ ಮುಕಚ್ಚೇರಿ ಸಮ್ಮುಖದಲ್ಲೇ ಶಂಕು ಸ್ಥಾಪನೆ

ಕಾಮಗಾರಿಗೆ ಅಡ್ಡಿಪಡಿಸಿದ ಜನರ ಬಗ್ಗೆ ಯು.ಟಿ.ಕೆ ಹೇಳಿದ್ದೇನು..?
#ullalavani #news #Utkhader #Road #Ullala
ಉಳ್ಳಾಲ ಖಿಲೇರಿಯಾ ರಸ್ತೆ ಕಾಂಕ್ರಿಟೀಕರಣ | ಚರಂಡಿ ನಿರ್ಮಾಣಕ್ಕೆ ಸ್ಪಿಕರ್ ಯು.ಟಿ.ಖಾದರ್   ಶಿಲಾನ್ಯಾಸ
Now Playing
ಉಳ್ಳಾಲ ಖಿಲೇರಿಯಾ ರಸ್ತೆ ಕಾಂಕ್ರಿಟೀಕರಣ | ಚರಂಡಿ ನಿರ್ಮಾಣಕ್ಕೆ ಸ್ಪಿಕರ್ ಯು.ಟಿ.ಖಾದರ್ ಶಿಲಾನ್ಯಾಸ
ಉಳ್ಳಾಲ ಖಿಲೇರಿಯಾ ರಸ್ತೆ ಕಾಂಕ್ರಿಟೀಕರಣ ಚರಂಡಿ ನಿರ್ಮಾಣಕ್ಕೆ ಯು.ಟಿ.ಖಾದರ್ ...
ಉಳ್ಳಾಲ ಖಿಲೇರಿಯಾ ರಸ್ತೆ ಕಾಂಕ್ರಿಟೀಕರಣ ಚರಂಡಿ ನಿರ್ಮಾಣಕ್ಕೆ ಯು.ಟಿ.ಖಾದರ್ ಶಿಲಾನ್ಯಾಸ; ಹಿರಿಯರಾದ ಮಹಮ್ಮದ್ ಮುಕಚ್ಚೇರಿ ಸಮ್ಮುಖದಲ್ಲೇ ಶಂಕು ಸ್ಥಾಪನೆ

ಕಾಮಗಾರಿಗೆ ಅಡ್ಡಿಪಡಿಸಿದ ಜನರ ಬಗ್ಗೆ ಯು.ಟಿ.ಕೆ ಹೇಳಿದ್ದೇನು..?
#ullalavani #news #Utkhader #Road #Ullala
ಮಾ.4-8ರಂದು ಸಸಿಹಿತ್ಲು ಶ್ರೀ ಭಗವತಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಕಾರ್ಯಕ್ರಮ
Now Playing
ಮಾ.4-8ರಂದು ಸಸಿಹಿತ್ಲು ಶ್ರೀ ಭಗವತಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಕಾರ್ಯಕ್ರಮ
ಸಸಿಹಿತ್ಲು ಶ್ರೀ ಭಗವತಿ ದೇವಸ್ಥಾನದ ಬ್ರಹ್ಮಕಲಶೋತ್ಸವ;ಮಾ.4ರಂದು ವಿವಿಧ ಧಾರ್ಮಿಕ ...
ಸಸಿಹಿತ್ಲು ಶ್ರೀ ಭಗವತಿ ದೇವಸ್ಥಾನದ ಬ್ರಹ್ಮಕಲಶೋತ್ಸವ;ಮಾ.4ರಂದು ವಿವಿಧ ಧಾರ್ಮಿಕ ವಿಧಿವಿಧಾನಗಳೊಂದಿಗೆ ಆರಂಭ

ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ನಳೀನ್ ಕಟೀಲ್ ಮಾಹಿತಿ

#ullalavani #news #tulunad #ullala #latestnews #breakingnews #package #mangalore #Sasihitlutemple
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version
%d