Site icon Ullalavani

ನಂತೂರು ಅಪಘಾತ- ಪ್ರತಿಭಟನಾಕಾರರ ವಿರುದ್ಧ ಪ್ರಕರಣ ದಾಖಲು

ಮಂಗಳೂರು, ಫೆ. 07 : ನಗರದ ನಂತೂರು ಬಳಿ ಸಂಭವಿಸಿದ ಅಪಘಾತಕ್ಕೆ ಸಂಬಂಧಿಸಿದಂತೆ, ದೀಪ್ತಿ ಅವರ ಮೃತದೇಹವನ್ನು ಖಾಸಗಿ ಆಸ್ಪತ್ರೆಯಿಂದ ಕದ್ರಿ ಪೊಲೀಸ್ ಠಾಣೆಗೆ ತಂದು ಪ್ರತಿಭಟನೆ ನಡೆಸಿದ ಆರೋಪದ ಮೇಲೆ ಪೊಲೀಸರು ಹಲವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಪೊಲೀಸರ ಪ್ರಕಾರ, ಬಲ್ಲಾಳ್‌ಬಾಗ್ ಬಳಿಯ ವಿವೇಕನಗರದ ಅಮಿತ್, ಕೀರ್ತನ್, ನವೀತ್, ಭರತ್‌ರಾಜ್, ಪವನ್ ಮತ್ತು ಲೋಕೇಶ್, ಬಲ್ಲಾಲ್‌ಬಾಗ್‌ನ ಮನ್ವೀತ್, ಕಂಕನಾಡಿಯ ಅನಿಲ್ ಕುಮಾರ್; ಬಲ್ಲಾಲ್‌ಬಾಗ್‌ನ ಪ್ರೇಮನಾಥ್ಮ, ತ್ತು ಸುಮಾರು 50 ಜನರು ಆಂಬ್ಯುಲೆನ್ಸ್‌ನೊಂದಿಗೆ ದ್ವಿಚಕ್ರ ವಾಹನಗಳು ಮತ್ತು ಕಾರುಗಳಲ್ಲಿ ಕದ್ರಿ ಪೊಲೀಸ್ ಠಾಣೆ ಬಳಿ ಬಂದು ಕಾನೂನುಬಾಹಿರವಾಗಿ ಸಭೆ ಸೇರಿ ಪ್ರತಿಭಟನೆ ನಡೆಸಿದ್ದಾರೆ.

ಈ ರೀತಿ ಪ್ರತಿಭಟನೆ ಮಾಡುವುದು ಸರಿಯಲ್ಲವೆಂದು ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಪ್ರತಿಭಟನಾಕಾರರಿಗೆ ಮನವರಿಗೆ ಮಾಡಿದರೂ ಕೇಳದೆ ಪೊಲೀಸ್‌ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂದು ಆರೋಪಿಸಲಾಗಿದೆ. ಪ್ರತಿಭಟನೆಯು ಸಾರ್ವಜನಿಕ ವಾಹನ ಸಂಚಾರಕ್ಕೆ ಅಡಚಣೆಯಾಗಿದ ಎಂದು ಆರೋಪಿಸಲಾಗಿದೆ. ಈ ಆರೋಪಗಳ ಆಧಾರದ ಮೇಲೆ, ಪೊಲೀಸರು ಪ್ರತಿಭಟನಾಕಾರರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

Exit mobile version