Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
UllalavaniUllalavani
suddi

ಅಂಬ್ಲಮೊಗರು ಗ್ರಾ.ಪಂ. ಆಡಳಿತಾವಧಿಯ ಕೊನೆಯ ಗ್ರಾಮಸಭೆ

UllalaVaniBy UllalaVaniFebruary 10, 2026No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ: ಅಂಬ್ಲಮೊಗರು ಗ್ರಾಮ ಪಂಚಾಯಿತಿಯ ೨೦೨೫-೨೬ನೇ ಸಾಲಿನ ದ್ವಿತೀಯ ಹಂತದ ಹಾಗೂ ಜನಪ್ರತಿನಿಧಿಗಳ ಆಡಳಿತದ ಕೊನೆಯ ಗ್ರಾಮಸಭೆ ಸೋಮವಾರ ಗ್ರಾ.ಪಂ. ವಠಾರದಲ್ಲಿ ನಡೆಯಿತು.


ಸಭೆಯಲ್ಲಿ ಮಾತನಾಡಿದ ಇಬ್ರಾಹಿಂ ಮದಕ, ನಾಲ್ಕು ವರ್ಷಗಳಿಂದ ಕಂಡಿಲದಿಂದ ಲಕ್ಷ್ಮಿ ನರಸಿಂಹ ದೇವಸ್ಥಾನಕ್ಕೆ ಹೋಗಲು ರಸ್ತೆಯೇ ಇಲ್ಲ. ತಹಸೀಲ್ದಾರ್ ಈ ಬಗ್ಗೆ ಮೌನವಾಗಿದ್ದಾರೆ. ಸರ್ಕಾರಿ ಜಾಗದಲ್ಲಿ ಅಹೋರಾತ್ರಿ ಕೆಲಸ ನಡೆಯುತ್ತಿದ್ದು ಕಂದಾಯ ಇಲಾಖೆ ಮೌನವೇಕೆ? ಈಗಲೂ ಕೆಲಸ ನಡೆಯುತ್ತಿದ್ದು ತಕ್ಷಣ ನಿಲ್ಲಿಸಬೇಕು. ಮೈದಾನದ ಮೀಸಲು ಜಾಗ, ದೇವಸ್ಥಾನ ಸಂಪರ್ಕ ರಸ್ತೆ ಎಲ್ಲಿದೆ ಎಂದು ಪ್ರಶ್ನಿಸಿದರು.


ಜಾಗದ ಬಗ್ಗೆ ಪೂರ್ಣ ವಿವರ ಕಲೆ ಹಾಕಲಾಗಿದ್ದು ಸರ್ವೇ ಇಲಾಖೆ ಸ್ಪಷ್ಟ ವರದಿ ಕೊಡಬೇಕಿದೆ. ಖಾಸಗಿ ಜಾಗಕ್ಕೆ ಅಧಿಕಾರಿಗಳು ಹೋಗುವಂತಿಲ್ಲ, ಪಾವೂರಿನಲ್ಲಿ ಈಗಾಗಲೇ ಖಾಸಗಿ ಜಾಗದವರು ಕೇಸ್ ಹಾಕಿದ್ದಾರೆ. ಸರ್ಕಾರಿ ಜಾಗದಲ್ಲಿ ಕೆಲಸ ನಡೆಯುತ್ತಿದ್ದರೆ ನಿಲ್ಲಿಸುವುದಾಗಿ ಅಂಬ್ಲಮೊಗರು ಗ್ರಾಮ ಆಡಳಿತಗಾರೆ ನಯನ ತಿಳಿಸಿದರು.
ಯು.ಟಿ. ಫರೀದ್ ಹೆಸರಲ್ಲಿ ನಾಲ್ಕೂವರೆ ಎಕರೆ ಜಮೀನು ಮೈದಾನಕ್ಕೆ ಮೀಸಲಿಡಲಾಗಿದೆ. ಆದರೆ ಈಗಿರುವ ಜಾಗ ರಸ್ತೆಬದಿ ಇರುವುದರಿಂದ ಪಂಚಾಯಿತಿಗೆ ಆದಾಯ ಬರುವಂತಹ ಯೋಜನೆ ರೂಪಿಸುವ ನಿಟ್ಟಿನಲ್ಲಿ ಸ್ಪೀಕರ್ ಭರವಸೆ ಮೇರೆಗೆ ಕಾದಿರಿಸಲಾಗಿದೆ. ಒಳಭಾಗದಲ್ಲಿ ಜಾಗ ಸಿಗದಿದ್ದರೆ ಮೀಸಲು ಜಾಗದಲ್ಲೇ ಆಟದ ಮೈದಾನ ನಿರ್ಮಿಸಲಾಗುವುದು. ಸರ್ಕಾರಿ ಜಾಗಕ್ಕೆ ಖಾಸಗಿಯವರು ಮಣ್ಣು ಹಾಕಿದ್ದರೆ ಸರ್ವೇ ಮಾಡಿ ವಶಕ್ಕೆ ಪಡೆಯಲಾಗುವುದು ಎಂದು ಗ್ರಾ.ಪಂ. ಅಧ್ಯಕ್ಷ ಎಸ್.ಮಹಮ್ಮದ್ ಇಕ್ಬಾಲ್ ಭರವಸೆ ನೀಡಿದರು.


ನೀರು ಹರಿಯುವ ಮೋರಿ ಮುಚ್ಚಲಾಗಿದ್ದು ಕಲುಶಿತ ನೀರು ನಿಂತು ದುರ್ನಾತ ಬೀರುತ್ತಿದೆ ಎಂದು ಸ್ಥಳೀಯರು ದೂರಿದ್ದು, ಗ್ರಾಮಸ್ಥರ ಜೊತೆ ನಾವಿದ್ದು ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಗ್ರಾಮಸ್ಥರ ಜೊತೆ ನಾವೂ ತಹಸೀಲ್ದಾರ್ ಬಳಿ ಚರ್ಚಿಸೋಣ ಎಂದು ಪಿಡಿಒ ಅಬ್ದುಲ್ ಖಾದರ್ ಐ ಹಾಗೂ ಮಾರ್ಗದರ್ಶಿ ಅಧಿಕಾರಿ ಎಚ್.ಆರ್.ಈಶ್ವರ್ ಭರವಸೆ ನೀಡಿ ಚರ್ಚೆ ಮುಕ್ತಾಯಗೊಳಿಸಿದರು.
ಅಂಬ್ಲಮೊಗರು ಪಶು ಆಸ್ಪತ್ರೆಯಲ್ಲಿ ವೈದ್ಯರಿಲ್ಲದ ಕಾರಣ ನಮ್ಮ ಮೂರು ದನಗಳು ಸತ್ತು ಹೋಗಿವೆ. ದನಗಳ ಆರೋಗ್ಯ ಹದಗೆಟ್ಟಾಗ ನಾವು ಕರೆ ಮಾಡಿದರೆ ಆಂಬ್ಯುಲೆನ್ಸ್ ಗೆ ಕರೆ ಮಾಡುವಂತೆ ಹೇಳುತ್ತಾರೆಂದು ಗ್ರಾಮಸ್ಥೆ ಜಮೀಲಾ ಎಂಬವರು ಅಳಲು ತೋಡಿಕೊಂಡರು
ಗ್ರಾಮದಲ್ಲಿ ದೊಡ್ಡ ಪಶು ಆಸ್ಪತ್ರೆ ಆಗಿದೆ, ವೈದ್ಯರಿಲ್ಲದೆ ಉದ್ಘಾಟನೆಗೆ ನಾವು ಅವಕಾಶ ಕೊಡದೆ ಬಹಿಷ್ಕರಿಸಿದ್ದೇವೆ. ದೂರುದಾರೆ ಹಾಲು ಮಾರಿ ಜೀವನ ಸಾಗಿಸುತ್ತಿದ್ದು, ದೂರು ಕೊಟ್ಟ ಬಳಿಕ ವೈದ್ಯರು ಬರಬೇಕು, ಇಲ್ಲವೇ ಆಗುವುದಿಲ್ಲ ಎಂದರೆ ಹೇಳಿದರೆ ನಾವು ಪರ್ಯಾಯ ವ್ಯವಸ್ಥೆ ಮಾಡುತ್ತೇವೆಂದು ಪಶುಸಖಿ ವಿದ್ಯಾ ಬಳಿ ಅಧ್ಯಕ್ಷ ಎಸ್. ಮಹಮ್ಮದ್ ಇಕ್ಬಾಲ್ ಅಸಮಾಧಾನ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ಗೃಹಜ್ಯೋತಿ ಯೋಜನೆ ಇರುವುದರಿಂದ ಜನರು ಸೋಲಾರ್ ರೂಫ್ ಟಾಪ್ ಬಗ್ಗೆ ನಿರಾಸಕ್ತಿ ವಹಿಸಿದ್ದಾರೆ. ಹೊಸ ವಿದ್ಯುತ್ ಸಂಪರ್ಕ ಪಡೆಯುವವರಿಗೆ ಪ್ರೀಪೇಡ್ ಮತ್ತು ಪೋಸ್ಟ್ ಪೇಡ್ ಅವಕಾಶ ಇರುವ ಸ್ಮಾರ್ಟ್ ಮೀಟರ್ ಅಳವಡಿಸಲಾಗುತ್ತಿದೆ ಎಂದು ಮೆಸ್ಕಾಂ ಕಿರಿಯ ಅಭಿಯಂತರ ನಿತೇಶ್ ಹೊಸಗದ್ದೆ ತಿಳಿಸಿದರು.
ಸಂಜೆ ಶಾಲೆ ಬಿಟ್ಟ ಬಳಿಕ ಕಲಿಕೆಯಲ್ಲಿ ಹಿಂದುಳಿದ ಮಕ್ಕಳ ಪೋಷಕರಿಗೆ ಕರೆ ಮಾಡಿ ಅರ್ಧ ಗಂಟೆ ಮಕ್ಕಳನ್ನು ಜೊತೆ ಕೂರಿಸಿ ಪಾಠ ಮಾಡುವ ’ಗಣಿತ ಗಣಕ’ ಈ ವರ್ಷದಿಂದ ಆರಂಭಗೊಂಡಿದೆ ಎಂದು ಅಂಬ್ಲಮೊಗರು ಶಾಲಾ ಮುಖ್ಯಶಿಕ್ಷಕ ಜಗದೀಶ್ ಶೆಟ್ಟಿ ಮನವಿ ಮಾಡಿದರು.


ಹಿಂದೆ ಎರಡು ಮಕ್ಕಳಿಗೆ ಮಾತ್ರ ಸಿಗುತ್ತಿದ್ದ ಭಾಗ್ಯಲಕ್ಷ್ಮಿ ಯೋಜನೆ ಈಗ ತ್ರಿವಳಿ ಮಕ್ಕಳಿಗೂ ನೀಡಲು ಸರ್ಕಾರ ಅವಕಾಶ ನೀಡಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೇಲ್ವಿಚಾರಕಿ ಶಂಕರಿ ಮಾಹಿತಿ ನೀಡಿದರು.
ಗ್ರಾ.ಪಂ. ಅಧ್ಯಕ್ಷ ಎಸ್.ಮಹಮ್ಮದ್ ಇಕ್ಬಾಲ್ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷೆ ಮಮ್ತಾಝ್, ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಆರ್.ಈಶ್ವರ್ ಮಾರ್ಗದರ್ಶಿ ಅಧಿಕಾರಿಯಾಗಿ ಭಾಗವಹಿಸಿದ್ದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೇಲ್ವಿಚಾರಕಿ ಶಂಕರಿ, ಮೆಸ್ಕಾಂ ಕಿರಿಯ ಅಭಿಯಂತರ ನಿತೇಶ್ ಹೊಸಗದ್ದೆ ಆರೋಗ್ಯ ಇಲಾಖೆಯಿಂದ ಜಯಂತಿ ಹಾಗೂ ಅರಣ್ಯ ಇಲಾಖೆ ಅಧಿಕಾರಿ ಭಾಗವಹಿಸಿದ್ದರು.


ಸಿಬಂದಿ ವಿಶ್ವನಾಥ ಹಿಂದಿನ ಗ್ರಾಮಸಭೆಯ ಅಜೆಂಡಾ ವಾಚಿಸಿದರು. ಪಿಡಿಒ ಅಬ್ದುಲ್ ಖಾದರ್ ಐ.ವಂದಿಸಿದರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ರಾಮ ಮಂದಿರ ಮೇಲೆ ದಾಳಿಗೆ ಸಂಚು ರೂಪಿಸಿದ್ದ ಆರೋಪಿ; ಜೈಲಿನಲ್ಲೇ ಕೊಲೆ

February 10, 2026

ಕಾಸರಗೋಡು: ಜನಪ್ರಿಯ ಸೋಷಿಯಲ್ ಮೀಡಿಯ ಇನ್ಫ್ಲ್ಯುಯೆನ್ಸರ್ ಆದೂರು ಚಿನ್ನು ಪಾಪು ಆತ್ಮಹತ್ಯೆ

February 10, 2026

ಹಿದಾಯತ್ ನಗರ ಹುಸೈನಿಯಾ ದರ್ಸ್ ವಾರ್ಷಿಕ ಮಹ್ಳರತುಲ್ ಬದ್ರಿಯಾ

February 9, 2026

Comments are closed.

Advertise
ಸಂಪರ್ಕಿಸಿ

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025
ಬೆಳ್ತಂಗಡಿ

ವಿದ್ಯಾರ್ಥಿನಿ ಅಪಹರಣ ಯತ್ನ ಕೇಸ್​​ಗೆ ಬಿಗ್​​ ಟ್ವಿಸ್ಟ್​​..!

By UllalaVaniFebruary 10, 20260

ಬೆಳ್ತಂಗಡಿ,ಫೆ. 10 :  ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ವಿದ್ಯಾರ್ಥಿನಿ ಅಪಹರಣ ಯತ್ನ ಕೇಸ್​​ಗೆ ಬಿಗ್​​ ಟ್ವಿಸ್ಟ್​​ ಸಿಕ್ಕಿದೆ. …

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

ಚಲಿಸುತ್ತಿದ್ದ ಕಾರಿನಲ್ಲಿ ಕಾಣಿಸಿಕೊಂಡ ದಿಢೀರ್ ಬೆಂಕಿ- ಪ್ರಯಾಣಿಕರು ಅಪಾಯದಿಂದ ಪಾರು..!!

February 10, 2026

ಅಂಬ್ಲಮೊಗರು ಗ್ರಾ.ಪಂ. ಆಡಳಿತಾವಧಿಯ ಕೊನೆಯ ಗ್ರಾಮಸಭೆ

February 10, 2026

ರಾಮ ಮಂದಿರ ಮೇಲೆ ದಾಳಿಗೆ ಸಂಚು ರೂಪಿಸಿದ್ದ ಆರೋಪಿ; ಜೈಲಿನಲ್ಲೇ ಕೊಲೆ

February 10, 2026
1 2 3 … 1,799 Next
Automatic YouTube Gallery

ರಸ್ತೆಗಾಗಿ ಕುರ್ನಾಡು ಗ್ರಾಮ ಪಂಚಾಯತ್‌ ಮುಂಭಾಗ ಪ್ರತಿಭಟನೆ; ಕಣ್ಣೀರಿಟ್ಟ ಮಹಿಳೆ

ರಸ್ತೆಗಾಗಿ ಕುರ್ನಾಡು ಗ್ರಾಮ ಪಂಚಾಯತ್‌ ಮುಂಭಾಗ ಪ್ರತಿಭಟನೆ; ಕಣ್ಣೀರಿಟ್ಟ ಮಹಿಳೆ

#ullalavani #Kurnadu #Road #GramaPanchayath
ರಸ್ತೆಗಾಗಿ ಕುರ್ನಾಡು ಗ್ರಾಮ ಪಂಚಾಯತ್‌ ಮುಂಭಾಗ ಪ್ರತಿಭಟನೆ; ಕಣ್ಣೀರಿಟ್ಟ ಮಹಿಳೆ
Now Playing
ರಸ್ತೆಗಾಗಿ ಕುರ್ನಾಡು ಗ್ರಾಮ ಪಂಚಾಯತ್‌ ಮುಂಭಾಗ ಪ್ರತಿಭಟನೆ; ಕಣ್ಣೀರಿಟ್ಟ ಮಹಿಳೆ
ರಸ್ತೆಗಾಗಿ ಕುರ್ನಾಡು ಗ್ರಾಮ ಪಂಚಾಯತ್‌ ಮುಂಭಾಗ ಪ್ರತಿಭಟನೆ; ಕಣ್ಣೀರಿಟ್ಟ ಮಹಿಳೆ ...
ರಸ್ತೆಗಾಗಿ ಕುರ್ನಾಡು ಗ್ರಾಮ ಪಂಚಾಯತ್‌ ಮುಂಭಾಗ ಪ್ರತಿಭಟನೆ; ಕಣ್ಣೀರಿಟ್ಟ ಮಹಿಳೆ

#ullalavani #Kurnadu #Road #GramaPanchayath
ಗ್ರಾಮಸೌಧ ಕೇವಲ ಕಟ್ಟಡವಲ್ಲ, ಗ್ರಾಮದ ಹೃದಯ ಎಂದ ಸ್ಪೀಕರ್ ಯು.ಟಿ.ಖಾದರ್
Now Playing
ಗ್ರಾಮಸೌಧ ಕೇವಲ ಕಟ್ಟಡವಲ್ಲ, ಗ್ರಾಮದ ಹೃದಯ ಎಂದ ಸ್ಪೀಕರ್ ಯು.ಟಿ.ಖಾದರ್
ಪಾವೂರು ಗ್ರಾ.ಪಂ.ನವೀಕೃತ ಕಟ್ಟಡ 'ಗ್ರಾಮ ಸೌಧ' ಲೋಕಾರ್ಪಣೆ;ಉದ್ಘಾಟನೆಗೊಳಿಸಿದ ...
ಪಾವೂರು ಗ್ರಾ.ಪಂ.ನವೀಕೃತ ಕಟ್ಟಡ 'ಗ್ರಾಮ ಸೌಧ' ಲೋಕಾರ್ಪಣೆ;ಉದ್ಘಾಟನೆಗೊಳಿಸಿದ ಸ್ಪೀಕರ್ ಯು.ಟಿ.ಖಾದರ್

ಒಗ್ಗಟ್ಟಿನಿಂದ ಗ್ರಾಮದ ಗೌರವ ವೃದ್ಧಿ; ಸ್ಪೀಕರ್

#Ullalavani #News #package #Pavooru #Speaker #UtKhader #Gramapanchayat
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version
%d