Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
UllalavaniUllalavani
suddi

ಬಗೆದಷ್ಟು ಬಯಲಾಗ್ತಿದೆ ಪಿಲಿಕುಳದ ಅಕ್ರಮ: ಕಾಳಿಂಗ ಸರ್ಪದ ಹೆಸರಲ್ಲೂ ಭ್ರಷ್ಟಾಚಾರ?

UllalaVaniBy UllalaVaniFebruary 21, 2026No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಮಂಗಳೂರು, ಫೆ.21: ಪಿಲಿಕುಳ ಝೂ‌‌ ಕಳೆದ ಕೆಲ ವರ್ಷಗಳಿಂದ ಅವ್ಯವಸ್ಥೆಯ ಆಗರವಾಗಿದ್ದು, ಇಲ್ಲಿಯ ಸ್ಥಿತಿ ಕಂಡು ಸ್ವತಃ ಹೈಕೋರ್ಟ್ ಗರಂ ಆಗಿತ್ತು. ಆ ಬೆನ್ನಲ್ಲೇ ಕಾಳಿಂಗ ಸರ್ಪದ ಹೆಸರಲ್ಲೂ ಇಲ್ಲಿ ಭ್ರಷ್ಟಾಚಾರ ನಡೆದಿರುವ ಆರೋಪ ಕೇಳಿಬಂದಿದೆ. ಕಾಳಿಂಗ ಸರ್ಪ ಸಂತಾನಾಭಿವೃದ್ಧಿ ಕೇಂದ್ರ ತೆರೆದು 2 ಕೋಟಿಗೂ ಅಧಿಕ ಅನುದಾನ ಪಡೆದಿದ್ದ ಇಲ್ಲಿಯ ಆಡಳಿತ ಅವುಗಳ ಪಾಲನೆ ಮರೆತಿದೆ. ಹೀಗಾಗಿ ಸರಿಯಾಗಿ ಆಹಾರ, ಆರೈಕೆ ಸಿಗದೆ ಅವು ಸಾವನ್ನಪ್ಪಿವೆ ಎಂದು ದೂರಲಾಗಿದೆ.



2022ರ ಜುಲೈನಲ್ಲಿ ಮೊಟ್ಟೆಯೊಡೆದು 38 ಕಾಳಿಂಗ ಸರ್ಪ ಮರಿಗಳು ಹೊರ ಬಂದಿದ್ದ ವಿಚಾರ ಭಾರಿ ಸದ್ದು ಮಾಡಿತ್ತು. ಆದರೆ ಆ ಮರಿಗಳು ಈಗ ಏನಾಗಿವೆ ಎಂಬುದಕ್ಕೆ ದಾಖಲೆಗಳೇ ಇಲ್ಲ. ಇತ್ತ ಪಿಲುಕುಳದ ಆಡಳಿತ ಮಾತ್ರ ಆ ಮರಿಗಳನ್ನು ಚಾರ್ಮಾಡಿ ಬಳಿ ಬಿಟ್ಟಿದ್ದೇವೆ ಎಂದು ಸಬೂಬು ನೀಡುತ್ತಿದೆ. ಪಶ್ಚಿಮಘಟ್ಟಕ್ಕೆ ಮರಿಗಳನ್ನು ಬಿಡುವಾಗ ಅರಣ್ಯ ಇಲಾಖೆ ಅನುಮತಿ ಪಡೆದುಕೊಳ್ಳಬೇಕು. ಇಲ್ಲಿ ಇವರು ಅರಣ್ಯ ಇಲಾಖೆಯಿಂದ ಯಾವುದೇ ಅನುಮತಿ ಪಡೆದಿಲ್ಲ. ಅಲ್ಲದೆ ಮರಿಗಳನ್ನು ಬಿಟ್ಟಿರುವ ಬಗ್ಗೆ ಯಾವುದೇ ದಾಖಲೆಯನ್ನೂ ಇಟ್ಟುಕೊಂಡಿಲ್ಲ ಎಂಬ ವಿಚಾರ ಮಾಹಿತಿ ಹಕ್ಕಿನಡಿ ಬಹಿರಂಗವಾಗಿದೆ.

ಈ ನಡುವೆ ಹಾವುಗಳಿಗೆ ಆಹಾರ ನೀಡಿದ ಬಿಲ್ ಸಹ ಪಡೆಯಲಾಗಿದ್ದು, ಮಾಂಸ ಪೂರೈಸುವ ವ್ಯಾಪಾರಿಯ ಹೆಸರಲ್ಲಿ ಹಣ ತೆಗೆದುಕೊಂಡಿದ್ದಾರೆ. ಸ್ನೇಕ್ ಫೀಡ್ ಎಂದು ಹೆಸರಿಟ್ಟು ಕೇರೆ ಹಾವು ಪೂರೈಕೆ ಮಾಡಲಾಗಿದ್ದು, ಈ‌ ಅಕ್ರಮಗಳ ಬಗ್ಗೆ ವೈಲ್ಡ್‌ ಲೈಫ್ ಕ್ರೈಮ್ ಕಂಟ್ರೋಲ್​​ಗೆ ದೂರು ನೀಡಿರೋದಾಗಿ ವನ್ಯಜೀವಿ ಸಂರಕ್ಷಕ ಭುವನ್ ತಿಳಿಸಿದ್ದಾರೆ.

2022ರಲ್ಲಿ ಪಿಲಿಕುಳ ಜೈವಿಕ ಉದ್ಯಾನವನದಲ್ಲಿ 38 ಕಾಳಿಂಗ ಸರ್ಪ ಮರಿಗಳು ಮೊಟ್ಟೆಯೊಡೆದು ಹೊರ ಬಂದಿವೆ ಎಂದು ಹೇಳಲಾಗಿತ್ತು. ಆದರೆ ದಾಖಲೆಯಲ್ಲಿ ಇರುವುದು ಕೇವಲ 22 ಮರಿಗಳ ಉಲ್ಲೇಖ ಮಾತ್ರ. ಅವು ಸಹ ಮೂರು ತಿಂಗಳು ಕಳೆಯುವುದರ ಒಳಗೆ ಮೃತಪಟ್ಟಿವೆ. ಕಾಳಿಂಗ ಸರ್ಪ ಸಂತಾನೋಭಿವೃದ್ಧಿ ಕೇಂದ್ರದ ಹೆಸರಲ್ಲಿ ಇವರು ಕೇಂದ್ರ ಮೃಗಾಲಯ ಪ್ರಾಧಿಕಾರ ಮತ್ತು ಸ್ಥಳೀಯ ಕಂಪನಿಯ ಸಿಎಸ್ಆರ್ ಅನುದಾನದಡಿ ಕೋಟ್ಯಾಂತರ ರೂಪಾಯಿ ಹಣ ಪಡೆದಿದ್ದಾರೆ. ಪಿಲಿಕುಳ ಅವ್ಯವಸ್ಥೆಯ ಕುರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ಹೈಕೋರ್ಟ್​​ನಲ್ಲಿ ನಡೆಯುತ್ತಿದ್ದು, ಈ ವಿಚಾರವನ್ನು ಸಹ ನ್ಯಾಯಾಲಯದ ಗಮನಕ್ಕೆ ತರೋದಾಗಿ ಭುವನ್ ಹೇಳಿದ್ದಾರೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

 ಕೆಎಸ್‌ಆರ್‌ಟಿಸಿ ಬಸ್ ಮತ್ತು ಕಾರು ಡಿಕ್ಕಿ : ಓರ್ವ ಮೃತ್ಯು…..!!

February 21, 2026

ಬಸ್ ದುರಂತದಲ್ಲಿ ಮೃತಪಟ್ಟ ಆಟೋ ಚಾಲಕನ ಕುಟುಂಬಕ್ಕೆ ಯೂನಿಯನ್ ನಿಂದ ನೆರವು

February 21, 2026

‘ಸಹಕಾರ ರತ್ನ’ ಡಾ| ಎಂ.ಎನ್. ರಾಜೇಂದ್ರ ಕುಮಾರ್ 77ನೇ ಹುಟ್ಟುಹಬ್ಬದ ಸಂಭ್ರಮ – ಫೆ.24ರಂದು ಅಭಿವಂದನೆ-ಸವಲತ್ತು ವಿತರಣೆ

February 21, 2026

Comments are closed.

Advertise
ಸಂಪರ್ಕಿಸಿ

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025
suddi

ಬಗೆದಷ್ಟು ಬಯಲಾಗ್ತಿದೆ ಪಿಲಿಕುಳದ ಅಕ್ರಮ: ಕಾಳಿಂಗ ಸರ್ಪದ ಹೆಸರಲ್ಲೂ ಭ್ರಷ್ಟಾಚಾರ?

By UllalaVaniFebruary 21, 20260

ಮಂಗಳೂರು, ಫೆ.21: ಪಿಲಿಕುಳ ಝೂ‌‌ ಕಳೆದ ಕೆಲ ವರ್ಷಗಳಿಂದ ಅವ್ಯವಸ್ಥೆಯ ಆಗರವಾಗಿದ್ದು, ಇಲ್ಲಿಯ ಸ್ಥಿತಿ ಕಂಡು ಸ್ವತಃ ಹೈಕೋರ್ಟ್ ಗರಂ ಆಗಿತ್ತು.…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

 ಕೆಎಸ್‌ಆರ್‌ಟಿಸಿ ಬಸ್ ಮತ್ತು ಕಾರು ಡಿಕ್ಕಿ : ಓರ್ವ ಮೃತ್ಯು…..!!

February 21, 2026

ಬಸ್ ದುರಂತದಲ್ಲಿ ಮೃತಪಟ್ಟ ಆಟೋ ಚಾಲಕನ ಕುಟುಂಬಕ್ಕೆ ಯೂನಿಯನ್ ನಿಂದ ನೆರವು

February 21, 2026

‘ಸಹಕಾರ ರತ್ನ’ ಡಾ| ಎಂ.ಎನ್. ರಾಜೇಂದ್ರ ಕುಮಾರ್ 77ನೇ ಹುಟ್ಟುಹಬ್ಬದ ಸಂಭ್ರಮ – ಫೆ.24ರಂದು ಅಭಿವಂದನೆ-ಸವಲತ್ತು ವಿತರಣೆ

February 21, 2026
1 2 3 … 1,809 Next
Automatic YouTube Gallery

||mangalore|| ಮಿನಿ ಟೆಂಪೋವೊoದು ನೇತ್ರಾವತಿ ಸೇತುವೆ ಆವರಣ ಗೋಡೆಗೆ ಢಿ..#ಕ್ಕಿ...!

ನೇತ್ರಾವತಿ ಸೇತುವೆ ಆವರಣ ಗೋಡೆಗೆ ಅಪ್ಪಳಿಸಿದ ಮಿನಿ ಟೆಂಪೋ; 60 ಲಕ್ಷ ವೆಚ್ಚದಲ್ಲಿ ಅಳವಡಿಸಿದ ತಡೆಬೇಲಿಗೆ ಭಾರೀ ಹಾನಿ

ಆತ್ಮ*ತ್ಯೆ ಸರಣಿಗೆ ತಡೆ ಹಾಕಿದ್ದ `ಬೇಲಿ' ಬೇಕಿಲ್ಲವೇ?
#ullalavani #news #ullala #latestnews #breakingnews #mangalore #tempo #mnpnews
||mangalore|| ಮಿನಿ ಟೆಂಪೋವೊoದು ನೇತ್ರಾವತಿ ಸೇತುವೆ ಆವರಣ ಗೋಡೆಗೆ ಢಿ..#ಕ್ಕಿ...!
Now Playing
||mangalore|| ಮಿನಿ ಟೆಂಪೋವೊoದು ನೇತ್ರಾವತಿ ಸೇತುವೆ ಆವರಣ ಗೋಡೆಗೆ ಢಿ..#ಕ್ಕಿ...!
ನೇತ್ರಾವತಿ ಸೇತುವೆ ಆವರಣ ಗೋಡೆಗೆ ಅಪ್ಪಳಿಸಿದ ಮಿನಿ ಟೆಂಪೋ; 60 ಲಕ್ಷ ವೆಚ್ಚದಲ್ಲಿ ...
ನೇತ್ರಾವತಿ ಸೇತುವೆ ಆವರಣ ಗೋಡೆಗೆ ಅಪ್ಪಳಿಸಿದ ಮಿನಿ ಟೆಂಪೋ; 60 ಲಕ್ಷ ವೆಚ್ಚದಲ್ಲಿ ಅಳವಡಿಸಿದ ತಡೆಬೇಲಿಗೆ ಭಾರೀ ಹಾನಿ

ಆತ್ಮ*ತ್ಯೆ ಸರಣಿಗೆ ತಡೆ ಹಾಕಿದ್ದ `ಬೇಲಿ' ಬೇಕಿಲ್ಲವೇ?
#ullalavani #news #ullala #latestnews #breakingnews #mangalore #tempo #mnpnews
||ಮನಕಲಕುವ ದೃಶ್ಯ|| ಅಯ್ಯೋ.. ಕಂದಮ್ಮ ಅಮ್ಮ ಕೊನೆಗೂ ಸಿಕ್ಕಿದ್ಲಾ....?!
Now Playing
||ಮನಕಲಕುವ ದೃಶ್ಯ|| ಅಯ್ಯೋ.. ಕಂದಮ್ಮ ಅಮ್ಮ ಕೊನೆಗೂ ಸಿಕ್ಕಿದ್ಲಾ....?!
ತಾಯಿಂದ ಬೇರ್ಪಟ್ಟ ಕೋತಿ ಮರಿಗೆ ತೀವ್ರ ಕಿರುಕುಳ..!; ಕೊನೆಗೂ ಸಿಕ್ತು ಅಮ್ಮನ ...
ತಾಯಿಂದ ಬೇರ್ಪಟ್ಟ ಕೋತಿ ಮರಿಗೆ ತೀವ್ರ ಕಿರುಕುಳ..!; ಕೊನೆಗೂ ಸಿಕ್ತು ಅಮ್ಮನ ಪ್ರೀತಿ

ಕಣ್ಣಲ್ಲಿ ನೀರು ತರಿಸುತ್ತೆ ಪಂಚ್‌ನ ಮುಗ್ಧತೆ
#ullalavani #News #package #Monkey #happiness #japan #zoo #babymonkey #latestnews #viralvideo #viral #emmotional
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version
%d