Site icon Ullalavani

ಏ.24-26: ಮುಡಿಪುವಿನಲ್ಲಿ ಬೃಹತ್ ಕೃಷಿ ಉತ್ಸವ


ಉಳ್ಳಾಲ‌: ಮುಡಿಪು ಉತ್ಸವ ಸಮಿತಿ, ಕೃಷಿಕ ಸಮಾಜ ಉಳ್ಳಾಲ‌ ಹಾಗೂ ಯು.ಟಿ‌.ಫರೀದ್ ಚಾರಿಟೇಬಲ್ ಫೌಂಡೇಶನ್ ಟ್ರಸ್ಟ್ ಸಂಯುಕ್ತ ಆಶ್ರಯದಲ್ಲಿ ವಿವಿಧ ಸಂಘ ಸಂಸ್ಥೆಗಳು ಮತ್ತು ಸರ್ಕಾರಿ ಇಲಾಖೆಗಳ ಸಹಭಾಗಿತ್ವದಲ್ಲಿ ಬೃಹತ್ ಕೃಷಿ ಮೇಳ ಹಾಗೂ ಮುಡಿಪು ಉತ್ಸವ ಏ.24ರಿಂದ 26ರವರೆಗೆ ಮುಡಿಪು ಬೆಟ್ಟದ ಬಳಿ ನಡೆಯಲಿದೆ ಎಂದು ಉತ್ಸವ ಸಮಿತಿಯ ಕಾರ್ಯಾಧ್ಯಕ್ಷ ದೇವದಾಸ್ ಭಂಡಾರಿ ತಿಳಿಸಿದರು.


ತೊಕ್ಕೊಟ್ಟು ಪ್ರೆಸ್ ಕ್ಲಬ್ ನಲ್ಲಿ ಗುರುವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ವಿದಾನಸಭಾಧ್ಯಕ್ಷ ಯು.ಟಿ.ಖಾದರ್ ಅಧ್ಯಕ್ಷತೆಯಲ್ಲಿ ಏ.24ರಂದು ಬೆಳಗ್ಗೆ 9:30ಕ್ಕೆ ಕೃಷಿ ಸಚಿವ ಚೆಲುವರಾಯ ಸ್ವಾಮಿ ಕೃಷಿ ಮೇಳ, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಉತ್ಸವ ಹಾಗೂ ಸಂಸದ ಕ್ಯಾ.ಬ್ರಿಜೇಶ್ ಚೌಟ ಆಹಾರ ಮೇಳ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಶ್ರೀ ಕೃಷ್ಣ ಧ್ಯಾನ ಮಂದಿರದ ಸ್ಥಾಪಕ ಡಾ.ಮದನ್ ಮೋಹನ್ ನಾಯಕ್ ಅಡೇಕಳ‌ ಇವರಿಗೆ ‘ಸೇವಾ ಧುರಂಧರ’ ಪ್ರಶಸ್ತಿ, ಮಾನವ ಹಕ್ಕು ಅಯೋಗದ ಅಧ್ಯಕ್ಷ ಶ್ಯಾಮ್ ಭಟ್, ಯೇನೆಪೊಯ ವಿವಿ ಕುಲಾಧಿಪತಿ ವೈ.ಅಬ್ದುಲ್ಲಾ ಕುಂಞಿ, ಅದಾನಿ ಗ್ರೂಪ್ ಅಧ್ಯಕ್ಷ ಕಿಶೋರ್ ಆಳ್ವ ಹಾಗೂ ಅನಿವಾಸಿ ಭಾರತೀಯ ರೊನಾಲ್ಡ್ ಕೊಲಾಸೋ ಇವರಿಗೆ ಗೌರವಾಭಿನಂದನೆ ನಡೆಯಲಿದೆ. ಏ.26ರಂದು ಸಂಜೆ 5:30ಕ್ಕೆ ಸಮಾರೋಪ ಸಮಾರಂಭ ನಡೆಯಲಿದೆ ಎಂದರು.


ಸಂಚಾಲಕ ನಾಸೀರ್ ನಡುಪದವು ಮಾತನಾಡಿ
ಕೃಷಿ ವಿಚಾರ ಸಂಕಿರಣದಲ್ಲಿ ಏ.25ರಂದು ಬೆಳಗ್ಗೆ 9:30ರಿಂದ ‘ಮಣ್ಣಿನ ಫಲವತ್ತತೆ, ಪೋಷಕಾಂಶ ನಿರ್ವಹಣೆ, 11ರಿಂದ ‘ಉನ್ನತ ತಳಿಯ ಕರು ಪ್ರದರ್ಶನ ಮತ್ತು ಮಾಹಿತಿ’, 12ರಿಂದ ‘ಅಡಿಕೆ ಎಲೆಚುಕ್ಕಿ ರೋಗ ಮತ್ತು ತೋಟಗಾರಿಕಾ ಬೆಳೆಗಳಲ್ಲಿ ಸಮಗ್ರ ಪೀಡೆ ನಿರ್ವಹಣೆ’ ‘ ಏ.26 ಬೆಳಗ್ಗೆ 9:30ರಿಂದ ‘ಗೇರು ಹಣ್ಣಿನ ಸಂಸ್ಕರಣೆ ಮತ್ತು ಮೌಲ್ಯವರ್ಧನೆ’, 11ರಿಂದ ‘ಜೇನು ಸಾಕಾಣಿಕೆ’, 12ರಿಂದ ತೋಟಗಾರಿಕಾ ಬೆಳೆಗಳ ಅಭಿವೃದ್ಧಿ ಹಾಗೂ ಸರ್ಕಾರದ ನೆರವು’, ವಿಷಯದಲ್ಲಿ ವಿಚಾರ ಸಂಕಿರಣ ನಡೆಯಲಿದೆ ಎಂದು ಮಾಹಿತಿ ನೀಡಿದರು.
ಮಹಿಳಾ ವಿಭಾಗ ಅಧ್ಯಕ್ಷೆ ಮಮತಾ ಗಟ್ಟಿ, ಸಾಂಸ್ಕೃತಿಕ ಸಂಚಾಲಕ ಚಂದ್ರಹಾಸ ಕಣಂತೂರು, ಉತ್ಸವ ಸಮಿತಿ ಪ್ರ.ಸಂ. ಅಬ್ದುಲ್ ಜಲೀಲ್ ಮೋಂಟುಗೋಳಿ, ಕಾರ್ಯಕ್ರಮ ಸಂಯೋಜಕ ಅಜಿತ್ ಪೂಜಾರಿ ಹಾಗೂ ಪ್ರದೀಪ್ ಡಿಸೋಜ ಸುದ್ದಿಗೋಷ್ಟಿಯಲ್ಲಿದ್ದರು‌.

Exit mobile version