Site icon Ullalavani

ಸುಳ್ಳು ಸೌಹಾರ್ದ ನಾಟಕ; ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರನ್ನೇ ಯಮಾರಿಸಿದ್ರಾ ಬುರ್ಖಾಧಾರಿ ಮಹಿಳೆಯರು….!

ಉಡುಪಿ ; ಹಿಂದು ವೃದ್ಧ ಮಹಿಳೆಯೊಬ್ಬರನ್ನು ಕರೆದುಕೊಂಡು ಬಂದ ಇಬ್ಬರು ಬುರ್ಖಾಧಾರಿ ಮಹಿಳೆಯರು, ತಾವು ಹಿಂದೂ ಮಹಿಳೆಯ ನೆರೆಮನೆಯವರು, ಬಡ ಮಹಿಳೆಗೆ ಮನೆ ನಿವೇಶನ ನೀಡುವಂತೆ ಉಡುಪಿಗೆ ಬಂದಿದ್ದ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರ ನಿವಾಸಕ್ಕೆ ಬಂದು ಮನವಿ ಮಾಡಿದ್ದು, ಈ ಸಂದರ್ಭದಲ್ಲಿ ಸಚಿವೆ, ಇದು ಹಿಂದು ಮುಸ್ಲಿಂ ಸೌಹಾರ್ದ, ಉಡುಪಿಯ ಬಿಜೆಪಿಯವರು ಇದರಿಂದ ಪಾಠ ಕಲಿಯಬೇಕು ಎಂದು ಹೇಳಿದ್ದರು.

ಆದರೆ ಉಸ್ತುವಾರಿ ಸಚಿವರನ್ನು ಭೇಟಿಯಾಗಲು ಬಂದ ಗಿರಿಜಾ ಶೆಟ್ಟಿಗಾರ್ ಅವರನ್ನು ಮುಸ್ಲಿಂ ಧರ್ಮಕ್ಕೆ ಮತಾಂತರಗೊAಡಿರುವ ಅವರ ಪುತ್ರಿಯೇ ಕರೆತಂದಿದ್ದು, ಸಚಿವರ ಮುಂದೆ ಮಾತ್ರ ತಾನು ಹಿಂದೂ ಮಹಿಳೆಯ ನೆರೆಮನೆಯವರು ಎಂದು ಸುಳ್ಳು ಹೇಳಿ ಉಸ್ತುವಾರಿ ಸಚಿವರನ್ನೇ ಯಾಮಾರಿಸಿದ್ದಾರೆ. ಆದರೆ ಲಕ್ಷಿö್ಮÃ ಹೆಬ್ಬಾಳ್ಳರ್‌ಅವರು ಹಿಂದೆ ಮುಂದೆ ಯೋಚಿಸದೇ ಮಾಧ್ಯಮದ ಮುಂದೆ ಉಡುಪಿ ಬಿಜೆಪಿಗರಿಗೆ ಸೌಹಾರ್ದತೆಯ ಭಾಷಣ ಮಾಡಿ ಅಪಹಾಸ್ಯಕ್ಕೆ ಗುರಿಯಾಗಿದ್ದಾರೆ.

ಉಡುಪಿಯ ಜನತೆ ಸೌಹಾರ್ದತೆಯ ಬಗ್ಗೆ ಬೆಳಗಾವಿಯಿಂದ ಬಂದ ಉಸ್ತುವಾರಿ ಸಚಿವರಿಂದ ಕಲಿಯುವ ಅಗತ್ಯವಿಲ್ಲ ಎಂದು ಉಡುಪಿ ನಗರ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ನೀತಾ ಪ್ರಭು ಪ್ರಕಟಣೆಯಲ್ಲಿ ಹೇಳಿದ್ದಾರೆ.

ಉಡುಪಿ ಜಿಲ್ಲೆಗೆ ಅತಿಥಿಯಂತೆ ಆಗಮಿಸಿ, 3 ವರ್ಷಗಳಿಂದ ಜಿಲ್ಲೆಯ ಅಭಿವೃದ್ಧಿಗೆ ಎಳ್ಳುನೀರು ಬಿಟ್ಟಿರುವ ಜಿಲ್ಲಾ ಉಸ್ತುವಾರಿ ಸಚಿವರು ಇಂತಹ ಅವಿವೇಕದ ಮಾತು ಮಹಿಳಾ ಅಕ್ಷಮ್ಯ. ಮುಂದಿನ ದಿನಗಳಲ್ಲಿ ಬಿಜೆಪಿ ಪಕ್ಷದ ನಾಯಕರು, ಜನಪ್ರತಿನಿಧಿಗಳ ವಿರುದ್ಧ ಬೇಜವಾಬ್ದಾರಿ ಹೇಳಿಕೆ ಮುಂದುವರಿಸಿದರೆ ಮೋರ್ಚಾದ ವತಿಯಿಂದ ಲಕ್ಷ್ಮಿ ಹೆಬ್ಬಾಳ್ಳರ್‌ವಿರುದ್ಧ ಉಗ್ರ ಹೋರಾಟ ನಡೆಸುವುದಾಗಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್ ಎಚ್ಚರಿಕೆ ನೀಡಿದ್ದಾರೆ.

Exit mobile version