Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
suddi

ಕುತ್ತಾರಿನಲ್ಲಿ ಅದ್ಧೂರಿಯಾಗಿ ನಡೆದ ಕೆವಿಎಫ್‌ಸಿ ಟ್ರೋಫಿ-2026 ಸೀಸನ್-3

UllalaVaniBy UllalaVaniJune 6, 2026No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಕುತ್ತಾರು, ಜೂನ್ 6: ಕುತ್ತಾರು ಭಾಗದ ಕ್ರೀಡಾಪಟುಗಳಿಗೆ ಸುಸಜ್ಜಿತ ಕ್ರೀಡಾಂಗಣದ ವ್ಯವಸ್ಥೆ ಕಲ್ಪಿಸಿ, ವಾಲಿಬಾಲ್ ಪಂದ್ಯಾವಳಿಗಳನ್ನು ಆಯೋಜಿಸುವ ಮೂಲಕ ಸ್ಥಳೀಯ ಆಟಗಾರರನ್ನು ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಪ್ರತಿನಿಧಿಸುವಂತೆ ಪ್ರೋತ್ಸಾಹಿಸುತ್ತಿರುವ ಸಂಘಟಕರ ಕಾರ್ಯ ಶ್ಲಾಘನೀಯ ಎಂದು ಬಿಜೆಪಿ ಮಂಗಳೂರು ವಿಧಾನಸಭಾ ಕ್ಷೇತ್ರ ಅಧ್ಯಕ್ಷ ಜಗದೀಶ್ ಆಳ್ವ ಕುವೆತ್ತಬೈಲ್ ಅಭಿಪ್ರಾಯಪಟ್ಟರು.

ಅವರು ಮುನ್ನೂರು ಕುತ್ತಾರಿನ ವಾಲಿಬಾಲ್ ಫ್ರೆಂಡ್ಸ್ ಸರ್ಕಲ್ ಆಶ್ರಯದಲ್ಲಿ ಹಾಗೂ ಉಳ್ಳಾಲ ತಾಲೂಕು ವಾಲಿಬಾಲ್ ಅಸೋಸಿಯೇಶನ್ ಸಹಭಾಗಿತ್ವದಲ್ಲಿ ಆಯೋಜಿಸಲಾದ ಕೆವಿಎಫ್‌ಸಿ ಟ್ರೋಫಿ-2026 ಸೀಸನ್-3 ವಾಲಿಬಾಲ್ ಪಂದ್ಯಾವಳಿಯನ್ನು ಉದ್ಘಾಟಿಸಿ ಮಾತನಾಡಿದರು.

ಕಿಶೋರ್ ದಂಪತಿಯ ಅವಿರತ ಶ್ರಮ ಹಾಗೂ ಮುನ್ನೂರು ಗ್ರಾಮ ಪಂಚಾಯತ್‌ನ ಪ್ರೋತ್ಸಾಹದಿಂದ ವಾಲಿಬಾಲ್ ಕ್ರೀಡಾಕೂಟ ಯಶಸ್ವಿಯಾಗಿ ನಡೆಯಲು ಸಾಧ್ಯವಾಗಿದೆ. ಕ್ರೀಡಾಂಗಣದ ವ್ಯವಸ್ಥೆಯಿಂದ ಸ್ಥಳೀಯ ಕ್ರೀಡಾಪಟುಗಳಿಗೆ ಉತ್ತಮ ಅವಕಾಶಗಳು ದೊರೆಯುತ್ತಿದ್ದು, ನಿರಂತರ ಪ್ರೋತ್ಸಾಹದಿಂದ ಅವರು ರಾಜ್ಯ ಹಾಗೂ ರಾಷ್ಟ್ರಮಟ್ಟದ ತಂಡಗಳನ್ನು ಪ್ರತಿನಿಧಿಸಲು ಸಾಧ್ಯವಾಗಲಿದೆ ಎಂದು ಅವರು ಹೇಳಿದರು.

ಜಿ.ಪಂ. ಮಾಜಿ ಸದಸ್ಯೆ ಧನಲಕ್ಷ್ಮೀ ಗಟ್ಟಿ ಮಾತನಾಡಿ, ಕ್ರೀಡೆ ದೈಹಿಕ ಹಾಗೂ ಮಾನಸಿಕ ಸದೃಢತೆಗೆ ಸಹಕಾರಿಯಾಗಿದ್ದು, ಯುವ ಪ್ರತಿಭೆಗಳನ್ನು ಬೆಳೆಸುವ ಉದ್ದೇಶದಿಂದ ಇಂತಹ ಕ್ರೀಡಾಕೂಟಗಳನ್ನು ಆಯೋಜಿಸುವುದು ಶ್ಲಾಘನೀಯ ಕಾರ್ಯ ಎಂದರು.

ಮುನ್ನೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ರೆಹನಾ ಬಾನು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಣಚೂರು ಆಸ್ಪತ್ರೆಯ ಡಾ. ರವಿ ವರ್ಮ, ಜಿ.ಪಂ. ಮಾಜಿ ಸದಸ್ಯೆ ಧನಲಕ್ಷ್ಮೀ ಗಟ್ಟಿ, ಸೋಮೇಶ್ವರ ಪುರಸಭೆಯ ನಾಮನಿರ್ದೇಶಿತ ಸದಸ್ಯ ಶ್ರೀಧರ್ ಆಳ್ವ ಪಿಲಾರ್, ಶ್ರೀನಿವಾಸ್ ಹಾಗೂ ಶಾಜು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ರಾಜ್ಯ ಹಾಗೂ ರಾಷ್ಟ್ರಮಟ್ಟದ ವಾಲಿಬಾಲ್ ತಂಡಗಳಲ್ಲಿ ಪ್ರತಿನಿಧಿಸಿದ ಕ್ರೀಡಾಪಟುಗಳು ಹಾಗೂ ಕ್ರೀಡಾ ಪ್ರೋತ್ಸಾಹಕರಾದ ರೆಹಮತ್, ತ್ಯಾಗಂ ಹರೇಕಳ, ನಿಖಿಲ್ ಗಟ್ಟಿ, ಪ್ರಶಾಂತ್ ಕೈರಂಗಳ, ಡಾ. ರವಿ ವರ್ಮ ಹಾಗೂ ಖಲೀಲ್ ಕೈರಂಗಳ ಅವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.

ಕುತ್ತಾರು ಜಂಕ್ಷನ್ ಅಭಿವೃದ್ಧಿಯೊಂದಿಗೆ ಯುವಜನರ ಆರೋಗ್ಯ, ಕ್ರೀಡಾ ಪ್ರತಿಭೆ ಹಾಗೂ ಸಾಮಾಜಿಕ ಚಟುವಟಿಕೆಗಳ ಬೆಳವಣಿಗೆಗೆ ವಿಶೇಷ ಆದ್ಯತೆ ನೀಡುತ್ತಿರುವ ಕಿಶೋರ್ ಹಾಗೂ ಗಾಯತ್ರಿ ಕಿಶೋರ್ ದಂಪತಿಯ ಸೇವೆಯನ್ನು ಕಾರ್ಯಕ್ರಮದಲ್ಲಿ ಪ್ರಶಂಸಿಸಲಾಯಿತು. ಕುತ್ತಾರು ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಹಿಂಭಾಗದಲ್ಲಿ ಸರ್ಕಾರಿ ವ್ಯವಸ್ಥೆಯಡಿ ವಾಲಿಬಾಲ್ ಕೋರ್ಟ್ ನಿರ್ಮಾಣವಾಗುವಂತೆ ಮುಂದಾಳತ್ವ ವಹಿಸಿರುವ ಕಿಶೋರ್ ಅವರು ಸ್ಥಳೀಯ ಯುವಕರಿಗೆ ಉತ್ತಮ ಕ್ರೀಡಾ ವಾತಾವರಣವನ್ನು ಕಲ್ಪಿಸಿದ್ದಾರೆ.

ಈ ಕ್ರೀಡಾಂಗಣವು ಇಂದು ಕೇವಲ ಆಟದ ಮೈದಾನವಾಗಿರದೆ, ಯುವ ಪ್ರತಿಭೆಗಳ ಬೆಳವಣಿಗೆಯ ಕೇಂದ್ರವಾಗಿ ರೂಪುಗೊಂಡಿದೆ. ಪ್ರತಿದಿನ ಸಂಜೆ ವೇಳೆಗೆ ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಸ್ಥಳೀಯ ಯುವಕರು ಇಲ್ಲಿ ವಾಲಿಬಾಲ್ ಅಭ್ಯಾಸದಲ್ಲಿ ತೊಡಗಿಸಿಕೊಂಡಿದ್ದು, ಕ್ರೀಡಾಂಗಣದ ನಿರ್ವಹಣೆ, ಸ್ವಚ್ಛತೆ, ಬೆಳಕಿನ ವ್ಯವಸ್ಥೆ ಹಾಗೂ ಪಂದ್ಯಾವಳಿಗಳ ಆಯೋಜನೆಯಲ್ಲಿ ಕಿಶೋರ್ ದಂಪತಿಯ ಶ್ರಮ ಸ್ಪಷ್ಟವಾಗಿ ಕಾಣಿಸುತ್ತದೆ.

ಕಳೆದ ಕೆಲವು ವರ್ಷಗಳಿಂದ ನಿರಂತರವಾಗಿ ಆಯೋಜಿಸಲಾಗುತ್ತಿರುವ ವಾಲಿಬಾಲ್ ಸೀಸನ್ ಪಂದ್ಯಾವಳಿಗಳು ಸ್ಥಳೀಯ ಮಟ್ಟದಲ್ಲಿ ಅಪಾರ ಜನಪ್ರಿಯತೆ ಗಳಿಸಿದ್ದು, ಇತ್ತೀಚೆಗೆ ನಡೆದ ಸೀಸನ್-3 ಪಂದ್ಯಾವಳಿಯಲ್ಲಿ ನೂರಾರು ಕ್ರೀಡಾಪಟುಗಳು ಹಾಗೂ ಕ್ರೀಡಾಭಿಮಾನಿಗಳು ಭಾಗವಹಿಸಿದ್ದರು. ಪಂದ್ಯಾವಳಿಯ ಯಶಸ್ಸಿನ ಹಿಂದೆ ಕಿಶೋರ್ ದಂಪತಿಯ ಪರಿಶ್ರಮ, ಯೋಜನಾ ಸಾಮರ್ಥ್ಯ ಹಾಗೂ ಕ್ರೀಡೆಯ ಮೇಲಿನ ಅಪಾರ ಪ್ರೀತಿಯೇ ಪ್ರಮುಖ ಕಾರಣವಾಗಿದೆ.

ಇಂದಿನ ದಿನಗಳಲ್ಲಿ ಯುವಕರು ಮೊಬೈಲ್ ಹಾಗೂ ಸಾಮಾಜಿಕ ಜಾಲತಾಣಗಳತ್ತ ಹೆಚ್ಚು ಆಕರ್ಷಿತರಾಗುತ್ತಿರುವ ಸಂದರ್ಭದಲ್ಲಿ, ಅವರನ್ನು ಕ್ರೀಡಾ ಚಟುವಟಿಕೆಗಳತ್ತ ಸೆಳೆಯುವಲ್ಲಿ ಕಿಶೋರ್ ದಂಪತಿಯ ಪ್ರಯತ್ನಗಳು ಮಾದರಿಯಾಗಿವೆ. ಆರೋಗ್ಯವಂತ ಸಮಾಜ ನಿರ್ಮಾಣ, ಯುವ ಪ್ರತಿಭೆಗಳ ಅನ್ವೇಷಣೆ ಹಾಗೂ ಸಾಮಾಜಿಕ ಸೌಹಾರ್ದತೆಯ ಬೆಳವಣಿಗೆಗೆ ಅವರು ನೀಡುತ್ತಿರುವ ಕೊಡುಗೆ ಶ್ಲಾಘನೀಯವಾಗಿದೆ.

ಜಯಂತ್ ಕೊಂಡಾಣ ಕಾರ್ಯಕ್ರಮ ನಿರೂಪಿಸಿದರು. ಗಾಯತ್ರಿ ಕಿಶೋರ್ ಗಟ್ಟಿ ಹಾಗೂ ಶಶಿಕಲಾ ಕುತ್ತಾರು ಸನ್ಮಾನಿತರ ಪರಿಚಯ ಮಾಡಿಕೊಟ್ಟರು. ಸಂಘಟಕ ಕಿಶೋರ್ ವಂದಿಸಿದರು.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಮತ್ತೆ ಪರೀಕ್ಷೆ ಬರೆಯಲಾಗದು: ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ನೊಂದು ನೀಟ್ ಆಕಾಂಕ್ಷಿ ಆತ್ಮಹತ್ಯೆ….!!

June 6, 2026

ಬೆಂಗ್ರೆಯ ಸತ್ತ ಮೀನುಗಳು ಕೇವಲ ಜಲಚರಗಳ ಸಾವಲ್ಲ; ಅದು ಪರಿಸರ ಸಂರಕ್ಷಣೆಯಲ್ಲಿ ನಮ್ಮ ವೈಫಲ್ಯದ ಪ್ರತಿಬಿಂಬ

June 6, 2026

ಜಂತರ್ ಮಂತರ್‌ನಲ್ಲಿ ಶಾಂತಿಯುತ ಪ್ರತಿಭಟನೆ: NEET ಅಕ್ರಮಗಳಿಂದ ನೊಂದು ಸಾವನ್ನು ಅಪ್ಪಿದ ವಿದ್ಯಾರ್ಥಿಗಳಿಗೆ ಶ್ರದ್ಧಾಂಜಲಿ

June 6, 2026

Comments are closed.

Advertise
ಸಂಪರ್ಕಿಸಿ

ಫೀಲ್ಡ್ ಗೆ ಇಳಿದ ಯು.ಟಿ. ಖಾದರ್ – ಸರ್ಕಾರಿ ಆಸ್ಪತ್ರೆ ವೈದ್ಯರಿಗೆ ಕ್ಲಾಸ್…!

June 5, 2026

ವೆನ್ಲಾಕ್ ಆಸ್ಪತ್ರೆಯಲ್ಲಿ ಮನೋವೈದ್ಯರು ಮತ್ತು ಕ್ಲಿನಿಕಲ್ ಸೈಕಾಲಜಿಸ್ಟ್‌ಗಳ ತೀವ್ರ ಕೊರತೆ – ಬಡ ರೋಗಿಗಳ ನಿರ್ಲಕ್ಷ್ಯ ಯಾಕೆ ಎಂದು ಸಾರ್ವಜನಿಕರ ಪ್ರಶ್ನೆ

May 26, 2026

13ಗಂಟೆಗಳ ಶಸ್ತ್ರಚಿಕಿತ್ಸೆ; ಯೆನೆಪೋಯ ವೈದ್ಯರ ತಂಡಕ್ಕೆ ಬಿಗ್ ಸೆಲ್ಯೂಟ್

April 28, 2026

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ತಮಿಳುನಾಡಿನ ಆಡಳಿತದಲ್ಲಿ ಮಹಿಳಾ ನಾಯಕತ್ವದ ಹೊಸ ಅಧ್ಯಾಯ

By UllalaVaniJune 6, 20260

ವಿಜಯ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ತಮಿಳುನಾಡಿನ ಆಡಳಿತ ವ್ಯವಸ್ಥೆಯಲ್ಲಿ ಮಹಿಳೆಯರಿಗೆ ಹೆಚ್ಚಿನ ಅವಕಾಶಗಳು ದೊರೆಯುತ್ತಿವೆ ಎಂಬ ಅಭಿಪ್ರಾಯ…

ತೊಕ್ಕೊಟ್ಟು ಪಿಲಾರಿನ ಶ್ರೀ ಸಾಯಿಬಾಬಾ ಮಂದಿರಕ್ಕೆ ಧರ್ಮಸ್ಥಳ ಭಜನಾ ಪರಿಷತ್ ಜಿಲ್ಲಾ ಸಮನ್ವಯಾಧಿಕಾರಿ ಸಂತೋಷ್ ಪಿ ಅಳಿಯೂರು ಭೇಟಿ

June 6, 2026

ಮಂಗಳೂರು ಕಾಲೇಜ್ ಆಫ್ ನರ್ಸಿಂಗ್ ಹಾಗೂ ಮಂಗಳೂರು ಇನ್‌ಸ್ಟಿಟ್ಯೂಟ್ ಆಫ್ ನರ್ಸಿಂಗ್ ಸೈನ್ಸಸ್‌ನಲ್ಲಿ ಪದವಿ ಮತ್ತು ಡಿಪ್ಲೊಮಾ ಪ್ರದಾನ ಸಮಾರಂಭ

June 6, 2026

ಕುತ್ತಾರಿನಲ್ಲಿ ಅದ್ಧೂರಿಯಾಗಿ ನಡೆದ ಕೆವಿಎಫ್‌ಸಿ ಟ್ರೋಫಿ-2026 ಸೀಸನ್-3

June 6, 2026
1 2 3 … 1,952 Next
Automatic YouTube Gallery

ಕೋಟೆಕಾರಿನಲ್ಲಿ ಹಲಸು-ಮಾವು ಮೇಳಕ್ಕೆ ದೇವದಾಸ್ ಕಾಪಿಕಾಡ್ ಚಾಲನೆ

ಕೋಟೆಕಾರಿನಲ್ಲಿ ಹಲಸು-ಮಾವು ಮೇಳಕ್ಕೆ ದೇವದಾಸ್ ಕಾಪಿಕಾಡ್ ಚಾಲನೆ; ಕೆವಿಎಸ್‌ಎಸ್ ಕನ್ವೆನ್ಶನ್ ಹಾಲ್‌ನಲ್ಲಿ ವೈವಿಧ್ಯಮಯ ಹಣ್ಣುಗಳ ಪ್ರದರ್ಶನ

ಮಿಯಾಜಾಕಿ ಮಾವು ಸೇರಿದಂತೆ ವಿಶೇಷ ತಳಿಗಳ ಪ್ರದರ್ಶನ ಮೇಳದ ಆಕರ್ಷಣೆ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ...
ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಕೋಟೆಕಾರಿನಲ್ಲಿ ಹಲಸು-ಮಾವು ಮೇಳಕ್ಕೆ ದೇವದಾಸ್ ಕಾಪಿಕಾಡ್ ಚಾಲನೆ
Now Playing
ಕೋಟೆಕಾರಿನಲ್ಲಿ ಹಲಸು-ಮಾವು ಮೇಳಕ್ಕೆ ದೇವದಾಸ್ ಕಾಪಿಕಾಡ್ ಚಾಲನೆ
ಕೋಟೆಕಾರಿನಲ್ಲಿ ಹಲಸು-ಮಾವು ಮೇಳಕ್ಕೆ ದೇವದಾಸ್ ಕಾಪಿಕಾಡ್ ಚಾಲನೆ; ಕೆವಿಎಸ್‌ಎಸ್ ...
ಕೋಟೆಕಾರಿನಲ್ಲಿ ಹಲಸು-ಮಾವು ಮೇಳಕ್ಕೆ ದೇವದಾಸ್ ಕಾಪಿಕಾಡ್ ಚಾಲನೆ; ಕೆವಿಎಸ್‌ಎಸ್ ಕನ್ವೆನ್ಶನ್ ಹಾಲ್‌ನಲ್ಲಿ ವೈವಿಧ್ಯಮಯ ಹಣ್ಣುಗಳ ಪ್ರದರ್ಶನ

ಮಿಯಾಜಾಕಿ ಮಾವು ಸೇರಿದಂತೆ ವಿಶೇಷ ತಳಿಗಳ ಪ್ರದರ್ಶನ ಮೇಳದ ಆಕರ್ಷಣೆ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ...
ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಕೋಟೆಕಾರು: ನಾಳೆಯಿಂದ ದೇವದಾಸ್ ಕಾಪಿಕಾಡ್ ಉದ್ಘಾಟನೆಯೊಂದಿಗೆ ಹಲಸು-ಮಾವು ಮೇಳ ಆರಂಭ
Now Playing
ಕೋಟೆಕಾರು: ನಾಳೆಯಿಂದ ದೇವದಾಸ್ ಕಾಪಿಕಾಡ್ ಉದ್ಘಾಟನೆಯೊಂದಿಗೆ ಹಲಸು-ಮಾವು ಮೇಳ ಆರಂಭ
ಕೋಟೆಕಾರು ಬೀರಿಯಲ್ಲಿ ಹಲಸು-ಮಾವು ಮೇಳ; ಜೂನ್ 5ರಿಂದ 7ರವರೆಗೆ ಕೆವಿಎಸ್‌ಎಸ್ ...
ಕೋಟೆಕಾರು ಬೀರಿಯಲ್ಲಿ ಹಲಸು-ಮಾವು ಮೇಳ; ಜೂನ್ 5ರಿಂದ 7ರವರೆಗೆ ಕೆವಿಎಸ್‌ಎಸ್ ಹಾಲ್‌ನಲ್ಲಿ ಹಣ್ಣಿನ ಸಂಭ್ರಮ

25ಕ್ಕೂ ಅಧಿಕ ಮಾವಿನ ತಳಿಗಳು, ವೈವಿಧ್ಯಮಯ ಹಲಸು ಉತ್ಪನ್ನಗಳ ಪ್ರದರ್ಶನ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ...
ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version