ಉಳ್ಳಾಲ್ ನ್ಯೂಸ್ ನೆಟ್ ವರ್ಕ್
ಕೊಲ್ಯ: ದ.ಕ.ಜಿಲ್ಲೆಗೆ ಮಾರಕವಾಗಿರುವ ಎತ್ತಿನಹೊಳೆ ಯೋಜನೆಯನ್ನು ಕೈ ಬಿಡುವಂತೆ ಒತ್ತಾಯಿಸಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಮನವಿ ಸಲ್ಲಿಸಲು ಕೊಲ್ಯ ಸೋಮೇಶ್ವರ ಬಿಲ್ಲವ ಸಂಘ ಸಭೆಯಲ್ಲಿ ನಿರ್ಣಯಿಸಿದ್ದು, ಜಿಲ್ಲೆಯಲ್ಲಿ ನಡೆಯುತ್ತಿರುವ ಎತ್ತಿನಹೊಳೆ ವಿರುದ್ಧದ ಹೋರಾಟದಲ್ಲಿ ಸರ್ವ ಸದಸ್ಯರು ಭಾಗವಹಿಸುವಂತೆ ನಿರ್ಣಯ ಕೈಗೊಳ್ಳಲಾಯಿತು.
ಟೈಲರ್ಸ್ ಅಸೋಸಿಯೇಷನ್ ಬೆಂಬಲ: ನೇತ್ರಾವತಿ ಉಳಿಸಿ ಹೋರಾಟಕ್ಕೆ ಉಳ್ಳಾಲ ವಲಯದ ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಬೆಂಬಲ ವ್ಯಕ್ತಪಡಿಸಿದೆ ಎಂದು ಅಧ್ಯಕ್ಷ ಬಿ.ನಾರಾಯಣ ಕುಂಪಲ ಹೇಳಿದ್ದಾರೆ.