Site icon Ullalavani

ಬೆಳ್ತಂಗಡಿ: ಎರಡು ಕಾರು, ಬೈಕ್ ನಡುವೆ ಢಿಕ್ಕಿ- ಸವಾರನಿಗೆ ಗಾಯ

ಬೆಳ್ತಂಗಡಿ, ಜೂ. 18 ; ಎರಡು ಕಾರುಗಳು ಮತ್ತು ಬೈಕ್‌ ನಡುವೆ ಅಪಘಾತವಾಗಿ ಬೈಕ್‌ ಸವಾರ ಗಾಯಗೊಂಡ ಘಟನೆ ಗುರುವಾಯನಕೆರೆ ಬಳಿ ಬುಧವಾರ ಮಧ್ಯಾಹ್ನ ನಡೆದಿದೆ.

ಮಂಗಳೂರು-ಚಿಕ್ಕಮಗಳೂರು ರಾಷ್ಟ್ರೀಯ ಹೆದ್ದಾರಿಯ ಮದ್ದಡ್ಕ ಬಳಿ ಈ ಅಪಘಾತ ಸಂಭವಿಸಿದ್ದು, ಮಂಗಳೂರಿನಿಂದ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ, ಎದುರುಗಡೆ ಬರುತ್ತಿದ್ದ ಕಾರು ಮತ್ತು ಬೈಕ್‌ಗೆ ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ರಸ್ತೆಗೆ ಉರುಳಿ ಬಿದ್ದು ಗಾಯಗೊಂಡರು. ತಕ್ಷಣ ಅವರನ್ನು ಹತ್ತಿರದ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದೊಯ್ಯಲಾಯಿತು. ಡಿಕ್ಕಿಯ ಬಲಕ್ಕೆ ಒಂದು ಕಾರು ಪಲ್ಟಿಯಾಗಿದ್ದು, ಇನ್ನೊಂದು ಕಾರಿನ ಮುಂಭಾಗ ತೀವ್ರವಾಗಿ ಹಾನಿಯಾಗಿದೆ.ಕಾರುಗಳಲ್ಲಿದ್ದವರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ ಎಂದು ವರದಿಯಾಗಿದೆ.

Exit mobile version