Site icon Ullalavani

ನಾಗುರಿ ದುರಂತ ; ಸಚಿವ ಖಾದರ್ ದೆಹಲಿ ಪ್ರವಾಸ ಮೊಟಕು: ಶೀಘ್ರ ಪರಿಹಾರ ನೀಡಲು ಸೂಚನೆ 

ಕಂಕನಾಡಿ ಜು.01: ಮಂಗಳವಾರ ರಾತ್ರಿಯಿಂದ ಸುರಿಯುತ್ತಿರುವ ಭಾರೀ ಮಳೆಗೆ ಮಂಗಳೂರಿನ  ಕಂಕನಾಡಿ ಸಮೀಪದ ನಾಗುರಿ ಸಮೀಪ ತಡೆಗೋಡೆ ಕುಸಿದು ಮನೆ ಮೇಲ್ಛಾವಣಿಗೆ ಬಿದ್ದ  ಪರಿಣಾಮ ಓರ್ವ ಮಹಿಳೆ ಇಬ್ಬರು ಮಕ್ಕಳು ಸೇರಿದಂತೆ  ಮೂವರು ಸಾವನ್ನಪ್ಪಿದ ಘಟನೆ ನಡೆದ ಹಿನ್ನಲೆಯಲ್ಲಿ ದೆಹಲಿ ಪ್ರವಾಸದಲ್ಲಿರುವ ಆರೋಗ್ಯ ಸಚಿವ ಯು ಟಿ ಖಾದರ್ ಅವರು ತಮ್ಮ ದೆಹಲಿ ಭೇಟಿಯನ್ನು ಮೊಟಕುಗೊಳಿಸಿದ್ದಾರೆ.

ಘಟನೆಯ ಮಾಹಿತಿ ತಿಳಿದ ತಕ್ಷಣ ಜಿಲ್ಲಾಧಿಕಾರಿಗಳನ್ನು ಸಂಪರ್ಕಿಸಿದ ಸಚಿವರು, ತ್ವರಿತ ಪರಿಹಾರ ಕ್ರಮಗಳಿಗೆ ಸೂಚಿಸಿದರು.

ಗಾಯಾಳುಗಳಿಗೆ ಸರಕಾರದ ವತಿಯಿಂದಲೇ ಆಸ್ಪತ್ರೆಯಲ್ಲಿ ಚಿಕಿತ್ಸಾ ವೆಚ್ಚ ಭರಿಸಲು ಹಾಗೂ ಮೃತರ ಕುಟುಂಬದವರಿಗೆ ಇಂದೇ ಪರಿಹಾರ ಮೊತ್ತ ನೀಡಲು ಅವರು ನಿರ್ದೇಶಿಸಿದ್ದಾರೆ. ಸಚಿವರು ಇಂದು ಮಧ್ಯಾಹ್ನ ಮಂಗಳೂರು ತಲುಪಲಿದ್ದಾರೆ.

Exit mobile version