Site icon Ullalavani

ಮಂಗಳೂರಿನಲ್ಲಿ ಉದ್ಯಮಿಯ ದರೋಡೆ ಪ್ರಕರಣ: ಮೂವರ ಬಂಧನ..!!

ಮಂಗಳೂರಿನಲ್ಲಿ ಸ್ವರ್ಣೋದ್ಯಮಿಯ ಚಿನ್ನಾಭರಣಗಳನ್ನು ದರೋಡೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಪ್ರಕರಣದಲ್ಲಿ ಭಾಗಿಯಾಗಿದ್ದ ಒಟ್ಟು 16 ಆರೋಪಿಗಳ ಪೈಕಿ ಮೂವರನ್ನು ಬಂಧಿಸಲಾಗಿದೆ. ಕೇರಳ ರಾಜ್ಯದ ಕಣ್ಣೂರು ಜಿಲ್ಲೆಯ ನಿಮಿಲ್ ಆರ್.ಕೆ (37), ಮಡಿಕೇರಿಯ ಇರ್ಷಾದ್ (40) ಹಾಗು ಮಡಿಕೇರಿಯ ಮುಸ್ತಾಫ (49) ಬಂಧಿತರು.

ಜೂ.29ರಂದು ನಸುಕಿನ 2:45 ಗಂಟೆ ವೇಳೆಗೆ ಮಂಗಳೂರಿನ ಬೈಕಂಪಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ದರೋಡೆ ನಡೆದಿತ್ತು.

ಉದ್ಯಮಿ ವಿಕಾಸ್ ಸುಬ್ಬರಾವ್‌ ಧನವಡೆ ಮಹಾರಾಷ್ಟ್ರದಿಂದ ಕೇರಳದ ಪಯ್ಯನ್ನೂರಿಗೆ ತಮ್ಮ ಕುಟುಂಬದೊಂದಿಗೆ ಸ್ವಿಫ್ಟ್ ಡಿಸೈರ್ ಕಾರಿನಲ್ಲಿ ತೆರಳುತ್ತಿದ್ದ ವೇಳೆ, ಮಂಗಳೂರಿನ ಬೈಕಂಪಾಡಿ ಸಮೀಪ ದರೊ ಮಾಡಲಾಗಿತ್ತು.

ಸದ್ಯ ಮೂವರನ್ನು ಬಂಧಿಸಿದ್ದು ಉಳಿದವರಿಗಾಗಿ ಶೋಧ ಮುಂದುವರಿದಿದೆ.

Exit mobile version