Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
suddi

ಸೆ.4ರ ಸೋಮೇಶ್ವರ ಶ್ರೀ ಕೃಷ್ಣ ಜನ್ಮಾಷ್ಠಮಿ ಉತ್ಸವ ಮುದ್ದುಕೃಷ್ಣ ವೇಷ ಸ್ಪರ್ಧೆಯ ಆಮಂತ್ರಣ ಪತ್ರಿಕೆ ಸೋಮೇಶ್ವರ ದೇವಸ್ಥಾನದಲ್ಲಿ ಬಿಡುಗಡೆ

UllalaVaniBy UllalaVaniJuly 7, 2026No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ: ಸೋಮೇಶ್ವರ ಪರಿಸರದಲ್ಲಿ ಶ್ರೀಕೃಷ್ಣ ಆರಾಧನೆ ನಡೆಯುತ್ತಿರುವುದು ಸಂತಸದ ಸಂಗತಿಯಾಗಿದೆ. ಕುಂಪಳದಲ್ಲಿ ಈ ಉತ್ಸವದ ಆರಂಭದ ಸಂದರ್ಭದಲ್ಲಿಯೂ ಸೋಮೇಶ್ವರ ಕ್ಷೇತ್ರದ ತೀರ್ಥವನ್ನು ಪಡೆದು ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿತ್ತು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್‌ ಕುಂಪಲ ಅಭಿಪ್ರಾಯಪಟ್ಟರು.


ಅವರು ಸೋಮೇಶ್ವರದ ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಠಮಿ ಉತ್ಸವ ಸಮಿತಿ ಆಶ್ರಯದಲ್ಲಿ ಸೆ. 4 ರಂದು ನಡೆಯಲಿರುವ ನಾಲ್ಕನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಠಮಿ ಉತ್ಸವ ಮುದ್ದುಕೃಷ್ಣ ವೇಷ ಸ್ಪರ್ಧೆ ಹಾಗೂ ವಿವಿಧ ಮನೋರಂಜನಾ ಸ್ಪರ್ಧೆಗಳ ಆಮಂತ್ರಣ ಪತ್ರಿಕೆಯನ್ನು ಸೋಮೇಶ್ವರ ಶ್ರೀ ಸೋಮನಾಥ ದೇವಸ್ಥಾನದ ವಠಾರದಲ್ಲಿ ಬಿಡುಗಡೆಗೊಳಿಸಿ ಮಾತನಾಡಿದರು.


‌ಉತ್ಸವವನ್ನು ಯಶಸ್ವಿಯಾಗಿ ಆಯೋಜಿಸುವುದು ಸುಲಭದ ಮಾತಲ್ಲ. ಎಲ್ಲರನ್ನು ಒಗ್ಗೂಡಿಸಿ, ಧಾರ್ಮಿಕ ಕ್ಷೇತ್ರವನ್ನು ಮುನ್ನಡೆಸುವುದು ದೊಡ್ಡ ಜವಾಬ್ದಾರಿಯ ಕೆಲಸವಾಗಿದೆ. ಸಂಘಟನೆಯ ಶಕ್ತಿ, ಶಿಸ್ತು ಮತ್ತು ಸಮರ್ಪಣೆಯಿಂದ ಮಾತ್ರ ಇಂತಹ ಧಾರ್ಮಿಕ ಕಾರ್ಯಕ್ರಮಗಳು ಯಶಸ್ವಿಯಾಗಲು ಸಾಧ್ಯ.ಸೋಮೇಶ್ವರದಲ್ಲಿ ನಡೆಯುತ್ತಿರುವ ಶ್ರೀಕೃಷ್ಣ ಆರಾಧನೆ ವಿಜೃಂಭಣೆಯಿಂದ, ಭಕ್ತಿಭಾವದಿಂದ ಹಾಗೂ ಶಿಸ್ತುಬದ್ಧವಾಗಿ ನೆರವೇರಬೇಕು. ಈ ಉತ್ಸವವು ಸಮಾಜದಲ್ಲಿ ಸೌಹಾರ್ದತೆ, ಧಾರ್ಮಿಕ ಮೌಲ್ಯಗಳು ಮತ್ತು ಸಂಘಟನಾ ಮನೋಭಾವವನ್ನು ಮತ್ತಷ್ಟು ಬಲಪಡಿಸಲಿ ಎಂದು ಶುಭ ಹಾರೈಸಿದರು.


ಮೂಡಬಿದ್ರೆ ತಹಶೀಲ್ದಾರ್‌ ಗುರುಪ್ರಸಾದ್‌ ಮಾತನಾಡಿ, ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುವ ಉದ್ದೇಶ ಕೇವಲ ಉತ್ಸವ ಆಚರಣೆಯಲ್ಲ; ಸಮಾಜದಲ್ಲಿ ಒಗ್ಗಟ್ಟು ಬೆಳೆಸುವುದು ಹಾಗೂ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವುದಾಗಿದೆ.ಇಂತಹ ಉತ್ಸವಗಳು ಸಮಾಜದ ಎಲ್ಲ ವರ್ಗದ ಜನರನ್ನು ಒಂದೇ ವೇದಿಕೆಗೆ ಕರೆತಂದು ಪರಸ್ಪರ ಸಹಕಾರ, ಸೌಹಾರ್ದತೆ ಮತ್ತು ಸೇವಾ ಮನೋಭಾವವನ್ನು ಬೆಳೆಸುವ ಕೆಲಸ ಮಾಡುತ್ತವೆ. ಕಾರ್ಯಕ್ರಮಗಳು ಶಿಸ್ತುಬದ್ಧವಾಗಿ, ಸಾಂಸ್ಕೃತಿಕ ಮೌಲ್ಯಗಳಿಗೆ ಅನುಗುಣವಾಗಿ ನಡೆಯುವ ಮೂಲಕ ಸಮಾಜಕ್ಕೆ ಉತ್ತಮ ಮಾದರಿಯಾಗಬೇಕು ಎಂದರು.


ಉತ್ಸವ ಸಮಿತಿ ಗೌರವ ಸಲಹೆಗಾರರಾದ ವಾಸುಗೋಪಾಲ್‌ ಮಾತನಾಡಿ, ನಾಲ್ಕು ವರ್ಷಗಳ ಪಯಣವನ್ನು ಪೂರ್ಣಗೊಳಿಸಿದ್ದರೂ ಪ್ರತಿವರ್ಷ ಹೊಸ ಹೆಜ್ಜೆಗಳನ್ನು ಇಡುತ್ತಾ ಉತ್ಸವವನ್ನು ಮತ್ತಷ್ಟು ಅರ್ಥಪೂರ್ಣವಾಗಿ ರೂಪಿಸಲಾಗುತ್ತಿದೆ.ಆರಂಭದಿಂದಲೂ ಹಲವು ಸವಾಲುಗಳು ಮತ್ತು ಸಮಸ್ಯೆಗಳು ಎದುರಾದರೂ, ಸಂಘಟನೆಯ ಸದಸ್ಯರು, ಭಕ್ತರು ಹಾಗೂ ಸಾರ್ವಜನಿಕರ ಸಹಕಾರದಿಂದ ಅವುಗಳನ್ನು ಯಶಸ್ವಿಯಾಗಿ ಎದುರಿಸಿ ಉತ್ಸವವನ್ನು ನಿರಂತರವಾಗಿ ನಡೆಸಿಕೊಂಡು ಬರಲಾಗುತ್ತಿದೆ.ಪ್ರತಿಯೊಂದು ಅನುಭವವೂ ಮುಂದಿನ ವರ್ಷಗಳ ಉತ್ಸವವನ್ನು ಇನ್ನಷ್ಟು ಉತ್ತಮವಾಗಿ ರೂಪಿಸಲು ನೆರವಾಗಿದ್ದು, ಸಮಾಜದ ಎಲ್ಲರ ಸಹಭಾಗಿತ್ವದೊಂದಿಗೆ ಉತ್ಸವವನ್ನು ಇನ್ನಷ್ಟು ವಿಜೃಂಭಣೆಯಿಂದ, ಶಿಸ್ತುಬದ್ಧವಾಗಿ ಹಾಗೂ ಆದರ್ಶಪ್ರಾಯವಾಗಿ ನಡೆಸುವ ಸಂಕಲ್ಪ ಹೊಂದಿದ್ದೇವೆ ಎಂದರು.
ಆಮಂತ್ರಣ ಪತ್ರಿಕೆ ಬಿಡುಗಡೆಗೆ ಮುನ್ನ ಶ್ರೀ ಕ್ಷೇತ್ರ ಸೋಮೇಶ್ವರದಲ್ಲಿ ವಿಶೇಷ ಪೂಜೆ ನೆರವೇರಿಸಿ, ಕಾರ್ಯಕ್ರಮದ ಪ್ರತಿಯೊಂದು ವಿಚಾರವೂ ಯಶಸ್ವಿಯಾಗಿ ನೆರವೇರಲಿ ಎಂದು ಪ್ರಾರ್ಥನೆ ಸಲ್ಲಿಸಲಾಯಿತು.
ಮುಖ್ಯ ಅತಿಥಿಗಳಾಗಿ ಉತ್ಸವ ಸಮಿತಿ ಗೌರವ ಸಲಹೆಗಾರರಾದ ಶರತ್‌ ಚಂದ್ರ ಗಟ್ಟಿ, ದಿನೇಶ್‌ ಕಾಜವ, ರಾಜಗೋಪಾಲ್‌, ಬೆಂಗಳೂರಿನ ವೈದ್ಯ ಡಾ. ಸಂತೋಷ್‌ ಉಪಸ್ಥಿತರಿದ್ದರು . ಉತ್ಸವ ಸಮಿತಿ ಅಧ್ಯಕ್ಷರಾದ ರಾಘವ ಉಚ್ಚಿಲ್‌ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಪ್ರವೀಣ್‌ ಸೋಮೇಶ್ವರ ನಿರೂಪಿಸಿ ವಂದಿಸಿದರು.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಸುಳ್ಯ: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ, ಬ್ರಿಡ್ಜ್ ಮ್ಯಾನ್ ಆಫ್ ಇಂಡಿಯಾ ಎಂದೇ ಪ್ರಸಿದ್ಧಿಯಾದ ‘ ಡಾ. ಗಿರೀಶ್ ಭಾರದ್ವಾಜ್ ನಿಧನ

July 7, 2026

ಬಂಟ್ವಾಳ: ಹೆದ್ದಾರಿಯಲ್ಲಿ ಕಾರು-ಬೈಕ್ ಮುಖಾಮುಖಿ; ಬೈಕ್ ಸವಾರ ಸಾವು…!

July 6, 2026

ಯುವವಾಹಿನಿ ಗ್ರಾಮಚಾವಡಿ-ಕೊಣಾಜೆ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ; ಪ್ರತಿಭಾವಂತರಿಗೆ ಪುರಸ್ಕಾರ

July 6, 2026

Comments are closed.

Advertise
ಸಂಪರ್ಕಿಸಿ

ಕರ್ನಾಟಕದಾದ್ಯಂತ ಆರೋಗ್ಯ ಇಲಾಖೆಯಲ್ಲಿ ಮೆಗಾ ನೇಮಕಾತಿ: ಸಾರ್ವಜನಿಕ ಆರೋಗ್ಯ ಸೇವೆ ಬಲಪಡಿಸಲು ಮಹತ್ವದ ಹೆಜ್ಜೆ

June 11, 2026

ರಾಜ್ಯದಲ್ಲಿ ಖಾಸಗಿ ಅಸ್ಪತ್ರೆಯಲ್ಲಿ ಆಯುಷ್ಮಾನ್ ಯೋಜನೆ ಸಮರ್ಪಕ ಜಾರಿಗೆ ಜ್ಯಾರಿ ಆಗದಿದ್ದರೆ ಜಿಲ್ಲೆಯ ಅರೋಗ್ಯಧಾರಿಗಳ ಮೇಲೆ ಕ್ರಮ :- ಅರೋಗ್ಯ ಸಚಿವ ಯು.ಟಿ ಖಾದರ್

June 9, 2026

ಫೀಲ್ಡ್ ಗೆ ಇಳಿದ ಯು.ಟಿ. ಖಾದರ್ – ಸರ್ಕಾರಿ ಆಸ್ಪತ್ರೆ ವೈದ್ಯರಿಗೆ ಕ್ಲಾಸ್…!

June 5, 2026

ವೆನ್ಲಾಕ್ ಆಸ್ಪತ್ರೆಯಲ್ಲಿ ಮನೋವೈದ್ಯರು ಮತ್ತು ಕ್ಲಿನಿಕಲ್ ಸೈಕಾಲಜಿಸ್ಟ್‌ಗಳ ತೀವ್ರ ಕೊರತೆ – ಬಡ ರೋಗಿಗಳ ನಿರ್ಲಕ್ಷ್ಯ ಯಾಕೆ ಎಂದು ಸಾರ್ವಜನಿಕರ ಪ್ರಶ್ನೆ

May 26, 2026
suddi

ಸುಳ್ಯ: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ, ಬ್ರಿಡ್ಜ್ ಮ್ಯಾನ್ ಆಫ್ ಇಂಡಿಯಾ ಎಂದೇ ಪ್ರಸಿದ್ಧಿಯಾದ ‘ ಡಾ. ಗಿರೀಶ್ ಭಾರದ್ವಾಜ್ ನಿಧನ

By UllalaVaniJuly 7, 20260

ಸುಳ್ಯ , ಜು. 07: 150 ಕ್ಕೂ ಹೆಚ್ಚು ತೂಗು ಸೇತುವೆಗಳನ್ನು ನಿರ್ಮಿಸಿದ ‘ ಬ್ರಿಡ್ಜ್ ಮ್ಯಾನ್ ಆಫ್ ಇಂಡಿಯಾ ಎಂದೇ…

ಸೆ.4ರ ಸೋಮೇಶ್ವರ ಶ್ರೀ ಕೃಷ್ಣ ಜನ್ಮಾಷ್ಠಮಿ ಉತ್ಸವ ಮುದ್ದುಕೃಷ್ಣ ವೇಷ ಸ್ಪರ್ಧೆಯ ಆಮಂತ್ರಣ ಪತ್ರಿಕೆ ಸೋಮೇಶ್ವರ ದೇವಸ್ಥಾನದಲ್ಲಿ ಬಿಡುಗಡೆ

July 7, 2026

ಬಂಟ್ವಾಳ: ಹೆದ್ದಾರಿಯಲ್ಲಿ ಕಾರು-ಬೈಕ್ ಮುಖಾಮುಖಿ; ಬೈಕ್ ಸವಾರ ಸಾವು…!

July 6, 2026

ಯುವವಾಹಿನಿ ಗ್ರಾಮಚಾವಡಿ-ಕೊಣಾಜೆ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ; ಪ್ರತಿಭಾವಂತರಿಗೆ ಪುರಸ್ಕಾರ

July 6, 2026
1 2 3 … 2,002 Next
Automatic YouTube Gallery

ಚುನಾವಣಾ ಆಯೋಗದ ಹೆಸರಿನಲ್ಲಿ ತಪ್ಪು ಮಾಹಿತಿ: ಜಿಲ್ಲಾಧಿಕಾರಿಗೆ ಕ್ರಮಕ್ಕೆ ಆಗ್ರಹ

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಅಕ್ರಮ ಆರೋಪ; ಬಿಜೆಪಿ ಮಂಗಳೂರು ಮಂಡಲ ಆಕ್ರೋಶ

ಪ್ರಾರ್ಥನಾ ಮಂದಿರಗಳಲ್ಲಿ ಎಸ್‌ಐಆರ್ ಫಾರಂ ಭರ್ತಿ ಆರೋಪ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ...
ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಚುನಾವಣಾ ಆಯೋಗದ ಹೆಸರಿನಲ್ಲಿ ತಪ್ಪು ಮಾಹಿತಿ: ಜಿಲ್ಲಾಧಿಕಾರಿಗೆ ಕ್ರಮಕ್ಕೆ ಆಗ್ರಹ
Now Playing
ಚುನಾವಣಾ ಆಯೋಗದ ಹೆಸರಿನಲ್ಲಿ ತಪ್ಪು ಮಾಹಿತಿ: ಜಿಲ್ಲಾಧಿಕಾರಿಗೆ ಕ್ರಮಕ್ಕೆ ಆಗ್ರಹ
ಎಸ್‌ಐಆರ್ ಪ್ರಕ್ರಿಯೆಯಲ್ಲಿ ಅಕ್ರಮ ಆರೋಪ; ಬಿಜೆಪಿ ಮಂಗಳೂರು ಮಂಡಲ ಆಕ್ರೋಶ ...
ಎಸ್‌ಐಆರ್ ಪ್ರಕ್ರಿಯೆಯಲ್ಲಿ ಅಕ್ರಮ ಆರೋಪ; ಬಿಜೆಪಿ ಮಂಗಳೂರು ಮಂಡಲ ಆಕ್ರೋಶ

ಪ್ರಾರ್ಥನಾ ಮಂದಿರಗಳಲ್ಲಿ ಎಸ್‌ಐಆರ್ ಫಾರಂ ಭರ್ತಿ ಆರೋಪ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ...
ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಮಂಗಳೂರಿನಲ್ಲಿ ದಾಸ್ ಪ್ರಮೋಷನ್ಸ್ ಐದು ಅಂಗಸoಸ್ಥೆಗಳ ನೂತನ ಕಚೇರಿ ಉದ್ಘಾಟನೆ
Now Playing
ಮಂಗಳೂರಿನಲ್ಲಿ ದಾಸ್ ಪ್ರಮೋಷನ್ಸ್ ಐದು ಅಂಗಸoಸ್ಥೆಗಳ ನೂತನ ಕಚೇರಿ ಉದ್ಘಾಟನೆ
ಕಂಕನಾಡಿಯಲ್ಲಿ ದಾಸ್ ಪ್ರಮೋಷನ್ಸ್ ನವೀಕೃತ ಕಚೇರಿ ಲೋಕಾರ್ಪಣೆ; ಕಾರ್ಯಕ್ರಮಕ್ಕೆ ...
ಕಂಕನಾಡಿಯಲ್ಲಿ ದಾಸ್ ಪ್ರಮೋಷನ್ಸ್ ನವೀಕೃತ ಕಚೇರಿ ಲೋಕಾರ್ಪಣೆ; ಕಾರ್ಯಕ್ರಮಕ್ಕೆ ಕಮಲಾದೇವಿ ಪ್ರಸಾದ್ ಅಸ್ರಣ್ಣರು ದೀಪಬೆಳಗಿಸಿ ಚಾಲನೆ

ನೂತನ ಕಚೇರಿಯ ನಾಮಫಲಕ ಅನಾವರಣಗೊಳಿಸಿದ ವಾಲ್ಟರ್ ನಂದಳಿಕೆ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ...
ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version