Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
suddi

‘ಮನಪಾದಲ್ಲಿ ಜನನ- ಮರಣ ಪ್ರಮಾಣ ಪಕ್ರಿಯೆ ಬಂದ್‌’- ಶಾಸಕ ವೇದವ್ಯಾಸ್‌

UllalaVaniBy UllalaVaniJuly 8, 2026No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಮಂಗಳೂರು, ಜು. 08 : ಮಹಾನಗರ ಪಾಲಿಕೆಯ ಸಿಬ್ಬಂದಿಗಳು, ಅಧಿಕಾರಿಗಳು ಎಸ್ಐಆರ್ ಕರ್ತವ್ಯಕ್ಕೆ ನೇಮಕಗೊಂಡಿರುವುದರಿಂದ ಇನ್ನು “ಒಂದು ತಿಂಗಳು ಜನನ ಮತ್ತು ಮರಣಗಳ ನೋಂದಣಿ ಘಟಕದಲ್ಲಿ ಅರ್ಜಿ ಸ್ವೀಕಾರ ಬಂದ್” ಎಂದು ಬೋರ್ಡ್ ಹಾಕಲಾಗಿದೆ. ಇದರಿಂದ ಸಾರ್ವಜನಿಕರು ತುರ್ತಾಗಿ ಜನನ , ಮರಣ ಪತ್ರ ಪಡೆಯಲು ಸಾಧ್ಯವಾಗದೇ ಕಂಗೆಟ್ಟಿದ್ದಾರೆ. ಮನಪಾ ಆಡಳಿತ ತಕ್ಷಣ ಈ ಸಮಸ್ಯೆ ಬಗೆಹರಿಸಬೇಕು ಎಂದು ಶಾಸಕ ವೇದವ್ಯಾಸ ಕಾಮತ್‌ ಆಗ್ರಹಿಸಿದರು.

ಆಡಳಿತಾಧಿಕಾರಿ ಮೂಲಕ ಪಾಲಿಕೆಯಲ್ಲಿ ಆಡಳಿತ ನಡೆಸುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ಪ್ರಕಾರ ಇನ್ನು ಒಂದು ತಿಂಗಳು ಮಂಗಳೂರಿನಲ್ಲಿ ಜನನ ಮರಣಗಳು ಇರುವುದೇ ಇಲ್ಲವೇ? ಶಾಲಾ ಮಕ್ಕಳ ದಾಖಲಾತಿಗೆ ಜನನ ಪ್ರಮಾಣ ಪತ್ರ ಅಗತ್ಯವಾಗಿ ಬೇಕಿರುವ ಪೋಷಕರು ಏನು ಮಾಡಬೇಕು? ಪಾಸ್ ಪೋರ್ಟ್ ಮಾಡಿಸಿಕೊಳ್ಳವವರು ಏನು ಮಾಡಬೇಕು? ಸಾರ್ವಜನಿಕರು ಕಂಗಾಲಾಗಿ ಬೇರೆ ದಾರಿ ಕಾಣದೇ, ಸಾರ್ವಜನಿಕರು ನಾವು ಶಾಸಕರಿಗೆ ದೂರು ಕೊಡುತ್ತೇವೆ ಎಂದಿದ್ದಕ್ಕೆ, ನಿನ್ನೆಯಿಂದ ಅರ್ಜಿ ತೆಗೆದುಕೊಳ್ಳಲು ಆರಂಭಿಸಿದ್ದಾರೆ. ಆದರೆ ಪ್ರಮಾಣ ಪತ್ರಕ್ಕೆ ಅರ್ಜೆಂಟ್ ಮಾಡುವ ಹಾಗಿಲ್ಲ, ಎಂದು ಕಂಡೀಷನ್ ಹಾಕುತ್ತಿದ್ದಾರೆ ಎಂದು ಕಿಡಿಕಾರಿದರು.ಹಾಗಾದರೆ ಇನ್ನು ಒಂದು ತಿಂಗಳು ಮಂಗಳೂರಿನ ಜನರಿಂದ ಯಾವುದೇ ರೀತಿಯ ತೆರಿಗೆ ವಸೂಲಿ ಇಲ್ಲ ಎಂದು ಪಾಲಿಕೆಯವರು ಬೋರ್ಡ್ ಹಾಕಲಿ. ಈ ಕಾಂಗ್ರೆಸ್ ನೇತೃತ್ವದ ಪಾಲಿಕೆಯ ಆಡಳಿತ ಜನರಿಗೆ ಯಾವ ರೀತಿಯಲ್ಲಿ ಹಿಂಸೆ ನೀಡುತ್ತಿದೆ ಎಂಬುದಕ್ಕೆ, ಪ್ರತಿನಿತ್ಯ ಪಾಲಿಕೆಯ ಕಚೇರಿ ಮುಂದೆ ಜನರು ತಮ್ಮ ಎಲ್ಲಾ ಕೆಲಸಗಳನ್ನು ಬಿಟ್ಟು ಸಾಲುಗಟ್ಟಿ ನಿಂತಿರುವುದೇ ಸಾಕ್ಷಿ. ಈ ಅವ್ಯವಸ್ಥೆಯಿಂದಾಗಿ ಪ್ರತಿನಿತ್ಯ ಸಾರ್ವಜನಿಕರ ಹಾಗೂ ಪಾಲಿಕೆಯ ಸಿಬ್ಬಂದಿಗಳ ನಡುವೆ ಅನಗತ್ಯ ಮಾತಿನ ಚಕಮಕಿ ನಡೆಯುತ್ತಿದ್ದು, ಇದಕ್ಕೆಲ್ಲ ಅಂತ್ಯ ಹಾಡಿ ಸಾರ್ವಜನಿಕರ ಕೆಲಸಗಳು ಸುಗಮವಾಗಿ ನಡೆಯಬೇಕು ಎಂದು ಪಾಲಿಕೆಗೆ ಎಚ್ಚರಿಕೆ ನೀಡಿದರು.ಮಂಗಳೂರು ನಗರ ವ್ಯಾಪ್ತಿಯಲ್ಲಿ ಭೂಪರಿವರ್ತನೆ (ಕನ್ವರ್ಷನ್) ಗೊಂದಲ 
ಮಂಗಳೂರು ನಗರ ವ್ಯಾಪ್ತಿಯಲ್ಲಿ ಈಗ ಭೂಪರಿವರ್ತನೆ (ಕನ್ವರ್ಷನ್) ಕಗ್ಗಂಟಾಗಿದ್ದು ಜನ ಸಾಮಾನ್ಯರು ತೀವ್ರ ತೊಂದರೆ ಅನುಭವಿಸುವಂತಾಗಿದೆ. ಈ ಮೊದಲು ಕಂದಾಯ ಇಲಾಖೆಯಡಿ ತಹಶೀಲ್ದಾರ್ ಹಾಗೂ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಆಗುತ್ತಿದ್ದ ಭೂಪರಿವರ್ತನೆ ಪ್ರಕ್ರಿಯೆಯನ್ನು ರಾಜ್ಯ ಸರ್ಕಾರವು ಈಗ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ (ಮುಡಾ) ವಹಿಸಿಕೊಟ್ಟಿದೆ. ಹಿಂದೆ ಕಂದಾಯ ಇಲಾಖೆಯಡಿ ಬರುವ ಸರ್ವೇಯರ್ ಗಳು, ಯಾವುದೇ ಒಂದು ಪ್ರದೇಶಕ್ಕೆ ಭೇಟಿ ನೀಡಿ, ದಾಖಲೆಗಳನ್ನು ಪರೀಕ್ಷಿಸಿ, ಸರ್ವೇ ಮಾಡಿ, ನಕ್ಷೆ ತಯಾರಿಸಿ ಕೊಡುತ್ತಿದ್ದರು. ಜನಸಾಮಾನ್ಯರು ಅಂತಹ ನಕ್ಷೆಯ ಸಹಾಯದಿಂದ ತಾಲೂಕು ಕಚೇರಿಗಳಲ್ಲಿ ಕನ್ವರ್ಷನ್ ಪಡೆದುಕೊಳ್ಳುತ್ತಿದ್ದರು.ಇದೀಗ ಕನ್ವರ್ಷನ್ ಗೆ ಸಂಬಂಧಪಟ್ಟ ಎಲ್ಲಾ ದಾಖಲೆಗಳನ್ನು, ಸರ್ವೆಯರ್ ಗಳನ್ನು, ಕಂದಾಯ ಇಲಾಖೆಯಲ್ಲಿ ಇಟ್ಟುಕೊಂಡು, ಯಾವುದೇ ಪರ್ಯಾಯ ವ್ಯವಸ್ಥೆಗಳನ್ನು ಮಾಡದೇ, ನೇರವಾಗಿ ಮುಡಾಗೆ ವಹಿಸಿದ ಪರಿಣಾಮ ಗೊಂದಲ ಉಂಟಾಗಿದೆ.
ಯಾವುದೇ ನಕ್ಷೆ ಇಲ್ಲದೇ ಕನ್ವರ್ಷನ್ ಮಾಡಲು ಸಾಧ್ಯವಿಲ್ಲ ಎಂದು ಮುಡಾದವರು ಹೇಳುತ್ತಾರೆ. ನಕ್ಷೆ ಮಾಡಬೇಕಾದ ಕಂದಾಯ ಇಲಾಖೆಯವರು ಸರಕಾರದ ಆದೇಶದ ಪ್ರಕಾರ ನಾವು ಮಾಡುವಂತಿಲ್ಲ ಎನ್ನುತ್ತಿದ್ದಾರೆ. ಕನ್ವರ್ಷನ್ ಆಗದೇ ಯಾವುದೇ ಸೈಟ್ ಮಾರಾಟ ಸಾಧ್ಯವಿಲ್ಲ, ಖರೀದಿಗೂ ಯಾರೂ ಮುಂದೆ ಬರುವುದಿಲ್ಲ. ಈ ವಿಚಾರದಲ್ಲಿ ಸಾರ್ವಜನಿರು ಪರದಾಡುವಂತಾಗಿದೆ ಎಂದು ಆರೋಪಿಸಿದರು.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದ ಅತ್ಯಾಚಾರ-ಕೊಲೆ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ…!!

July 8, 2026

ಕಿನ್ಯಾ ಗ್ರಾಮ ಪಂಚಾಯತ್ ಕಾರ್ಯದರ್ಶಿ ವಾಣಿಶ್ರೀ ಅವರಿಗೆ ಬೀಳ್ಕೊಡುಗೆ ಸಮಾರಂಭ

July 8, 2026

ರದ್ದಾದ ಬಿಪಿಎಲ್ ಕಾರ್ಡ್‌ದಾರರಿಗೆ ರಾಜ್ಯ ಸರ್ಕಾರದ ಸಿಹಿಸುದ್ದಿ: ಮರು ಸಕ್ರಿಯಗೊಳಿಸಲು ಅವಕಾಶ

July 8, 2026

Comments are closed.

Advertise
ಸಂಪರ್ಕಿಸಿ

ಕರ್ನಾಟಕದಾದ್ಯಂತ ಆರೋಗ್ಯ ಇಲಾಖೆಯಲ್ಲಿ ಮೆಗಾ ನೇಮಕಾತಿ: ಸಾರ್ವಜನಿಕ ಆರೋಗ್ಯ ಸೇವೆ ಬಲಪಡಿಸಲು ಮಹತ್ವದ ಹೆಜ್ಜೆ

June 11, 2026

ರಾಜ್ಯದಲ್ಲಿ ಖಾಸಗಿ ಅಸ್ಪತ್ರೆಯಲ್ಲಿ ಆಯುಷ್ಮಾನ್ ಯೋಜನೆ ಸಮರ್ಪಕ ಜಾರಿಗೆ ಜ್ಯಾರಿ ಆಗದಿದ್ದರೆ ಜಿಲ್ಲೆಯ ಅರೋಗ್ಯಧಾರಿಗಳ ಮೇಲೆ ಕ್ರಮ :- ಅರೋಗ್ಯ ಸಚಿವ ಯು.ಟಿ ಖಾದರ್

June 9, 2026

ಫೀಲ್ಡ್ ಗೆ ಇಳಿದ ಯು.ಟಿ. ಖಾದರ್ – ಸರ್ಕಾರಿ ಆಸ್ಪತ್ರೆ ವೈದ್ಯರಿಗೆ ಕ್ಲಾಸ್…!

June 5, 2026

ವೆನ್ಲಾಕ್ ಆಸ್ಪತ್ರೆಯಲ್ಲಿ ಮನೋವೈದ್ಯರು ಮತ್ತು ಕ್ಲಿನಿಕಲ್ ಸೈಕಾಲಜಿಸ್ಟ್‌ಗಳ ತೀವ್ರ ಕೊರತೆ – ಬಡ ರೋಗಿಗಳ ನಿರ್ಲಕ್ಷ್ಯ ಯಾಕೆ ಎಂದು ಸಾರ್ವಜನಿಕರ ಪ್ರಶ್ನೆ

May 26, 2026
suddi

‘ಮನಪಾದಲ್ಲಿ ಜನನ- ಮರಣ ಪ್ರಮಾಣ ಪಕ್ರಿಯೆ ಬಂದ್‌’- ಶಾಸಕ ವೇದವ್ಯಾಸ್‌

By UllalaVaniJuly 8, 20260

ಮಂಗಳೂರು, ಜು. 08 : ಮಹಾನಗರ ಪಾಲಿಕೆಯ ಸಿಬ್ಬಂದಿಗಳು, ಅಧಿಕಾರಿಗಳು ಎಸ್ಐಆರ್ ಕರ್ತವ್ಯಕ್ಕೆ ನೇಮಕಗೊಂಡಿರುವುದರಿಂದ ಇನ್ನು “ಒಂದು ತಿಂಗಳು ಜನನ ಮತ್ತು…

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದ ಅತ್ಯಾಚಾರ-ಕೊಲೆ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ…!!

July 8, 2026

ಕಿನ್ಯಾ ಗ್ರಾಮ ಪಂಚಾಯತ್ ಕಾರ್ಯದರ್ಶಿ ವಾಣಿಶ್ರೀ ಅವರಿಗೆ ಬೀಳ್ಕೊಡುಗೆ ಸಮಾರಂಭ

July 8, 2026

ರದ್ದಾದ ಬಿಪಿಎಲ್ ಕಾರ್ಡ್‌ದಾರರಿಗೆ ರಾಜ್ಯ ಸರ್ಕಾರದ ಸಿಹಿಸುದ್ದಿ: ಮರು ಸಕ್ರಿಯಗೊಳಿಸಲು ಅವಕಾಶ

July 8, 2026
1 2 3 … 2,005 Next
Automatic YouTube Gallery

ನಿಟ್ಟೆ-ಪತ್ರಕರ್ತರ ಸಂಘದಿoದ ಉಳ್ಳಾಲದಲ್ಲಿ ಪತ್ರಿಕಾ ದಿನಾಚರಣೆ ಆಚರಣೆ

ಉಳ್ಳಾಲದಲ್ಲಿ ಪತ್ರಿಕಾ ದಿನಾಚರಣೆ-2026;ಮಾಧ್ಯಮಗಳ ಜವಾಬ್ದಾರಿ ಕುರಿತು ಚರ್ಚೆ

'ಮಂಗಳೂರು ಸಮಾಚಾರ' ಕನ್ನಡದ ಮೊದಲ ಪತ್ರಿಕೆ: ಡಾ. ಸಾಯಿ ಗೀತಾ ಹೆಗ್ಡೆ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ ...
Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ನಿಟ್ಟೆ-ಪತ್ರಕರ್ತರ ಸಂಘದಿoದ ಉಳ್ಳಾಲದಲ್ಲಿ ಪತ್ರಿಕಾ ದಿನಾಚರಣೆ ಆಚರಣೆ
Now Playing
ನಿಟ್ಟೆ-ಪತ್ರಕರ್ತರ ಸಂಘದಿoದ ಉಳ್ಳಾಲದಲ್ಲಿ ಪತ್ರಿಕಾ ದಿನಾಚರಣೆ ಆಚರಣೆ
ಉಳ್ಳಾಲದಲ್ಲಿ ಪತ್ರಿಕಾ ದಿನಾಚರಣೆ-2026;ಮಾಧ್ಯಮಗಳ ಜವಾಬ್ದಾರಿ ಕುರಿತು ಚರ್ಚೆ ...
ಉಳ್ಳಾಲದಲ್ಲಿ ಪತ್ರಿಕಾ ದಿನಾಚರಣೆ-2026;ಮಾಧ್ಯಮಗಳ ಜವಾಬ್ದಾರಿ ಕುರಿತು ಚರ್ಚೆ

'ಮಂಗಳೂರು ಸಮಾಚಾರ' ಕನ್ನಡದ ಮೊದಲ ಪತ್ರಿಕೆ: ಡಾ. ಸಾಯಿ ಗೀತಾ ಹೆಗ್ಡೆ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ ...
Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಮೊಂತಿಮಾರು ಘಟನೆ; ಬಾಲಕಿ ಪ್ರಾಣಾಪಾಯದಿಂದ ಪಾರು.. ಆದ್ರೆ ಆಕೆಯ ಮುಂದಿನ ಸ್ಥಿತಿ..!
Now Playing
ಮೊಂತಿಮಾರು ಘಟನೆ; ಬಾಲಕಿ ಪ್ರಾಣಾಪಾಯದಿಂದ ಪಾರು.. ಆದ್ರೆ ಆಕೆಯ ಮುಂದಿನ ಸ್ಥಿತಿ..!
"ಒಂದು ಕ್ಷಣದ ಕೋಪ, ಅನೇಕ ಜೀವಗಳ ಬದುಕನ್ನೇ ಬದಲಾಯಿಸುತ್ತದೆ"; ಹಿಂಸೆಯಲ್ಲ, ...
"ಒಂದು ಕ್ಷಣದ ಕೋಪ, ಅನೇಕ ಜೀವಗಳ ಬದುಕನ್ನೇ ಬದಲಾಯಿಸುತ್ತದೆ"; ಹಿಂಸೆಯಲ್ಲ, ಮಾನವೀಯತೆಯೇ ನಮ್ಮ ಸಮಾಜದ ಗುರುತಾಗಲಿ."

ಆಯುಧ ಹಿಡಿಯುವುದು ಧೈರ್ಯವಲ್ಲ; ಕೋಪವನ್ನು ನಿಯಂತ್ರಿಸುವುದೇ ನಿಜವಾದ ಧೈರ್ಯ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ...
ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version