Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
All News

ಜು.18 ಕ್ಕೆ (ಇಂದು) ಕೃಷಿ ತಂತ್ರಜ್ಞರ ಸಂಸ್ಥೆ ದಕ್ಷಿಣ ಕನ್ನಡ–ಉಡುಪಿ ಜಿಲ್ಲಾ ಘಟಕ ಉದ್ಘಾಟಿಸಲಿರುವ ಸಚಿವ ಯು.ಟಿ. ಖಾದರ್‌

UllalaVaniBy UllalaVaniJuly 17, 2026Updated:July 17, 2026No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಮಂಗಳೂರು: ಕೃಷಿ ತಂತ್ರಜ್ಞರ ಸಂಸ್ಥೆ (ಬೆಂಗಳೂರು)ಯ ದಕ್ಷಿಣ ಕನ್ನಡ–ಉಡುಪಿ ಜಿಲ್ಲಾ ಘಟಕದ ಉದ್ಘಾಟನಾ ಸಮಾರಂಭ ಹಾಗೂ “ಆಧುನಿಕ ಗೋಡಂಬಿ ಕೃಷಿ ತಂತ್ರಜ್ಞಾನಗಳು ಮತ್ತು ನೆಡುತೋಪು ಬೆಳೆಗಳಿಗೆ ಪರ್ಯಾಯ ಸಾವಯವ ಗೊಬ್ಬರಗಳ ಬಳಕೆ” ಕುರಿತ ವಿಚಾರ ಸಂಕಿರಣವು ಶನಿವಾರ (ಜು.18) ಕೃಷಿ ವಿಜ್ಞಾನ ಕೇಂದ್ರ ಎಕ್ಕೂರು ಮಂಗಳೂರಿನಲ್ಲಿ ಬೆಳಿಗ್ಗೆ 10 ಕ್ಕೆ ನಡೆಯಲಿದೆ.ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್‌ ಉದ್ಘಾಟಿಸಲಿದ್ದಾರೆ.  ಫುಡ್‌ ಚೈನ್‌ ಕ್ಯಾಂಪೇನ್‌ ಸಹಯೋಗದಲ್ಲಿ  ಕಾರ್ಯಕ್ರಮ ನಡೆಯಲಿದ್ದು, ಫುಡ್‌ ಚೈನ್‌  ಸ್ಥಾಪಕರು ಹಾಗೂ  ಕರ್ನಾಟಕ ರಾಜ್ಯ ರೈತ ಸಂಘ ಯುವವೇದಿಕೆ ಅಧ್ಯಕ್ಷರು  ಯತೀಶ್‌ ತುಕರಾಂ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಲಿದೆ.

1968ರಲ್ಲಿ ಬೆಂಗಳೂರಿನಲ್ಲಿ ಸ್ಥಾಪನೆಯಾದ ಕೃಷಿ ತಂತ್ರಜ್ಞರ ಸಂಸ್ಥೆಯು ರಾಜ್ಯದಾದ್ಯಂತ ಸುಮಾರು 6,000ಕ್ಕೂ ಅಧಿಕ ಕೃಷಿ ಹಾಗೂ ಕೃಷಿ ಸಂಬಂಧಿತ ಪದವೀಧರರನ್ನು ಆಜೀವ ಸದಸ್ಯರನ್ನಾಗಿ ಹೊಂದಿದೆ. ರಾಜ್ಯದಲ್ಲಿ ಈಗಾಗಲೇ 22 ಜಿಲ್ಲಾ ಘಟಕಗಳು ಕಾರ್ಯನಿರ್ವಹಿಸುತ್ತಿದ್ದು, ದಕ್ಷಿಣ ಕನ್ನಡ–ಉಡುಪಿ ಜಿಲ್ಲಾ ಘಟಕವು 23ನೇ ಘಟಕವಾಗಿ ಆರಂಭಗೊಳ್ಳುತ್ತಿದೆ. ಸಂಸ್ಥೆಯ ಪ್ರಮುಖ ಉದ್ದೇಶ ಕೃಷಿಕರ ತಾಂತ್ರಿಕ ಸಮಸ್ಯೆಗಳಿಗೆ ಸೂಕ್ತ ಪರಿಹಾರಗಳನ್ನು ಒದಗಿಸುವುದಾಗಿದೆ. ಕೃಷಿ, ತೋಟಗಾರಿಕೆ, ಹೈನುಗಾರಿಕೆ, ರೇಷ್ಮೆ, ಅರಣ್ಯ, ಮೀನುಗಾರಿಕೆ, ಬ್ಯಾಂಕಿಂಗ್ ಹಾಗೂ ಕೃಷಿ ಪರಿಕರ ಕ್ಷೇತ್ರದ ಪರಿಣಿತರನ್ನು ಒಂದೇ ವೇದಿಕೆಗೆ ಕರೆತಂದು ರೈತರಿಗೆ ವೈಜ್ಞಾನಿಕ ಸಲಹೆಗಳನ್ನು ನೀಡುವುದು ಸಂಸ್ಥೆಯ ಧ್ಯೇಯವಾಗಿದೆ.

ರೈತರು ಹಾಗೂ ಸದಸ್ಯರಿಗಾಗಿ ವಿಚಾರ ಸಂಕಿರಣ, ಸಮ್ಮೇಳನ, ಗುಂಪುಚರ್ಚೆ, ಶೈಕ್ಷಣಿಕ ಪ್ರವಾಸಗಳನ್ನು ಆಯೋಜಿಸುವುದರ ಜೊತೆಗೆ ಜಿಲ್ಲೆಯ ಸಮಗ್ರ ಕೃಷಿ ಅಭಿವೃದ್ಧಿಗೆ ಜಿಲ್ಲಾಡಳಿತಕ್ಕೆ ಸಲಹೆ ನೀಡುವುದು, ಕೃಷಿ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಉದ್ಯೋಗ ಮತ್ತು ವೃತ್ತಿ ಮಾರ್ಗದರ್ಶನ ಒದಗಿಸುವ ಕಾರ್ಯಗಳನ್ನೂ ಸಂಸ್ಥೆ ಕೈಗೊಳ್ಳಲಿದೆ. ಮೀನುಗಾರಿಕೆ, ಗೋಡಂಬಿ ಹಾಗೂ ಮೌಲ್ಯವರ್ಧಿತ ಕೃಷಿ ಉತ್ಪನ್ನಗಳ ರಫ್ತು ಅವಕಾಶಗಳನ್ನು ವಿಸ್ತರಿಸುವ ನಿಟ್ಟಿನಲ್ಲಿ ಸರ್ಕಾರದ ವಿವಿಧ ಯೋಜನೆಗಳ ಕುರಿತು ಮಾಹಿತಿ ನೀಡುವುದು ಮತ್ತು ರೈತರನ್ನು ಅವುಗಳ ಸದುಪಯೋಗಕ್ಕೆ ಪ್ರೇರೇಪಿಸುವುದೂ ಸಂಸ್ಥೆಯ ಪ್ರಮುಖ ಉದ್ದೇಶವಾಗಿದೆ. ಈ ಕಾರ್ಯಕ್ರಮವನ್ನು ಕೃಷಿ ತಂತ್ರಜ್ಞರ ಸಂಸ್ಥೆ, ಕೃಷಿಕ ಸಮಾಜ ಜಿಲ್ಲಾ ಘಟಕ, ರಾಷ್ಟ್ರೀಯ ಗೋಡಂಬಿ ಸಂಶೋಧನಾ ಸಂಸ್ಥೆ ಪುತ್ತೂರು ಹಾಗೂ ಫುಡ್ ಚೈನ್ ಕ್ಯಾಂಪೇನ್ ಇವರ ಸಹಯೋಗದಲ್ಲಿ ಆಯೋಜಿಸಲಾಗಿದೆ. ಪ್ರಸ್ತುತ ದಕ್ಷಿಣ ಕನ್ನಡ–ಉಡುಪಿ ಜಿಲ್ಲಾ ಘಟಕದಲ್ಲಿ 50 ಆಜೀವ ಸದಸ್ಯರಿದ್ದು, ಕಂಕನಾಡಿಯ ಕೃಷಿ ವಿಜ್ಞಾನ ಕೇಂದ್ರದಲ್ಲಿ ಘಟಕದ ಕಾರ್ಯಾಲಯವನ್ನು ಆರಂಭಿಸಲಾಗಿದೆ. ಅಧ್ಯಕ್ಷರು, ಉಪಾಧ್ಯಕ್ಷರು, ಕಾರ್ಯದರ್ಶಿ, ಜಂಟಿ ಕಾರ್ಯದರ್ಶಿ, ಖಜಾಂಚಿ, ನಾಲ್ವರು ವ್ಯವಸ್ಥಾಪನಾ ಸಮಿತಿ ಸದಸ್ಯರು ಹಾಗೂ ಇಬ್ಬರು ಕೋ-ಆಪ್ಟೆಡ್ ಸದಸ್ಯರನ್ನು ಒಳಗೊಂಡ 11 ಸದಸ್ಯರ ಆಡಳಿತ ಮಂಡಳಿ ರಚಿಸಲಾಗಿದೆ.

ಕೃಷಿಕ ಸಮಾಜದ ರಾಜ್ಯಾಧ್ಯಕ್ಷ ನಗರದ ಮಹದೇವಪ್ಪ, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಡಿ.ಎಸ್‌ ಗಟ್ಟಿ, ಆಳ್ವಾಸ್ ಸಂಸ್ಥೆಯ ಟ್ರಸ್ಟಿ ವಿವೇಕ ಆಳ್ವ, ಕೃಷಿ ತಂತ್ರಜ್ಞರ ಸಂಸ್ಥೆಯ ರಾಜ್ಯಾಧ್ಯಕ್ಷ ಡಾ. ಎ.ಬಿ. ಪಾಟೀಲ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಜಿಲ್ಲಾ ಘಟಕದ ಅಧ್ಯಕ್ಷ ಡಾ. ಶಿವಪ್ರಕಾಶ್, ಬೋಲಾಸ್ ರಾಹುಲ್ ರಾವ್, ಡಾ. ಆಂಜನೇಯಪ್ಪ, ವಿಜಯಕುಮಾರ ರೈ, ಪದ್ಮನಾಭ ರೈ, ಕಾರ್ಯದರ್ಶಿ ಡಾ. ರಮೇಶ್, ಲೋಕೇಶ್ವರ ಸೇರಿದಂತೆ ಹಲವರು ಉಪಸ್ಥಿತರಿರುವರು. ರಾಷ್ಟ್ರೀಯ ಗೋಡಂಬಿ ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ. ದಿನಕರ ಅಡಿಗ ಹಾಗೂ ವಿಜ್ಞಾನಿಗಳು ಆಧುನಿಕ ಗೋಡಂಬಿ ಕೃಷಿ ತಂತ್ರಜ್ಞಾನಗಳ ಕುರಿತು ವಿಶೇಷ ಉಪನ್ಯಾಸ ನೀಡಲಿದ್ದಾರೆ.

ಸಮಾರಂಭದಲ್ಲಿ ಕೃಷಿ ತಂತ್ರಜ್ಞರ ಸಂಸ್ಥೆಯ ಸದಸ್ಯರು, ಕೃಷಿಕ ಸಮಾಜದ ಸದಸ್ಯರು, ಗೋಡಂಬಿ ಬೆಳೆಗಾರರು, ಆಳ್ವಾಸ್ ಕೃಷಿ ಕಾಲೇಜಿನ ವಿದ್ಯಾರ್ಥಿಗಳು, ಕೃಷಿ ಹಾಗೂ ಕೃಷಿ ಸಂಬಂಧಿತ ಇಲಾಖೆಗಳ ಅಧಿಕಾರಿಗಳು ಮತ್ತು ವಿಜ್ಞಾನಿಗಳು ಭಾಗವಹಿಸಲಿದ್ದಾರೆ ಎಂದು ಜಿಲ್ಲಾ ಘಟಕದ ಕಾರ್ಯದರ್ಶಿ ಡಾ. ರಮೇಶ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಸರ್ವೋದಯ ಯುವಕ ಮಂಡಲದ ಅಧ್ಯಕ್ಷರಾಗಿ ಲೋಹಿತ್ ಪಜೀರು

July 17, 2026

ಮಂಜನಾಡಿ ದುರಂತ ಪ್ರಕರಣ: ಪೊಲೀಸ್ ಆಯುಕ್ತರು ಹಾಗೂ ಕೊಣಾಜೆ ಠಾಣಾಧಿಕಾರಿಗೆ ಹೈಕೋರ್ಟ್ ನೋಟಿಸ್ ಒಂದು ವರ್ಷ ಕಳೆದರೂ ಎಫ್‌ಐಆರ್‌ಗಾಗಿ ಕಾಯುತ್ತಿರುವ ಆಶ್ವಿನಿ

July 17, 2026

ʻಆತ ಬಸ್ಸಿನಲ್ಲಿ ನನ್ನ ಪಕ್ಕದಲ್ಲೇ ಕುಳಿತಿದ್ದಾನೆʼ ಅಂದಿದ್ದ ಲಾವಣ್ಯ ಕ್ಷಣಮಾತ್ರದಲ್ಲೇ ಹೆಣವಾಗಿದ್ದಳು

July 16, 2026
Leave A Reply

Advertise
ಸಂಪರ್ಕಿಸಿ

ಕರ್ನಾಟಕದಾದ್ಯಂತ ಆರೋಗ್ಯ ಇಲಾಖೆಯಲ್ಲಿ ಮೆಗಾ ನೇಮಕಾತಿ: ಸಾರ್ವಜನಿಕ ಆರೋಗ್ಯ ಸೇವೆ ಬಲಪಡಿಸಲು ಮಹತ್ವದ ಹೆಜ್ಜೆ

June 11, 2026

ರಾಜ್ಯದಲ್ಲಿ ಖಾಸಗಿ ಅಸ್ಪತ್ರೆಯಲ್ಲಿ ಆಯುಷ್ಮಾನ್ ಯೋಜನೆ ಸಮರ್ಪಕ ಜಾರಿಗೆ ಜ್ಯಾರಿ ಆಗದಿದ್ದರೆ ಜಿಲ್ಲೆಯ ಅರೋಗ್ಯಧಾರಿಗಳ ಮೇಲೆ ಕ್ರಮ :- ಅರೋಗ್ಯ ಸಚಿವ ಯು.ಟಿ ಖಾದರ್

June 9, 2026

ಫೀಲ್ಡ್ ಗೆ ಇಳಿದ ಯು.ಟಿ. ಖಾದರ್ – ಸರ್ಕಾರಿ ಆಸ್ಪತ್ರೆ ವೈದ್ಯರಿಗೆ ಕ್ಲಾಸ್…!

June 5, 2026

ವೆನ್ಲಾಕ್ ಆಸ್ಪತ್ರೆಯಲ್ಲಿ ಮನೋವೈದ್ಯರು ಮತ್ತು ಕ್ಲಿನಿಕಲ್ ಸೈಕಾಲಜಿಸ್ಟ್‌ಗಳ ತೀವ್ರ ಕೊರತೆ – ಬಡ ರೋಗಿಗಳ ನಿರ್ಲಕ್ಷ್ಯ ಯಾಕೆ ಎಂದು ಸಾರ್ವಜನಿಕರ ಪ್ರಶ್ನೆ

May 26, 2026
All News

ಸರ್ವೋದಯ ಯುವಕ ಮಂಡಲದ ಅಧ್ಯಕ್ಷರಾಗಿ ಲೋಹಿತ್ ಪಜೀರು

By UllalaVaniJuly 17, 20260

ಪಜೀರು : ಸರ್ವೋದಯ ಯುವಕ ಮಂಡಲ (ರಿ.) ಸುದರ್ಶನ ನಗರ ಇದರ 2026-27 ನೇ ಸಾಲಿನ ಅಧ್ಯಕ್ಷರಾಗಿ ಲೋಹಿತ್ ಪಜೀರು…

ಜು.18 ಕ್ಕೆ (ಇಂದು) ಕೃಷಿ ತಂತ್ರಜ್ಞರ ಸಂಸ್ಥೆ ದಕ್ಷಿಣ ಕನ್ನಡ–ಉಡುಪಿ ಜಿಲ್ಲಾ ಘಟಕ ಉದ್ಘಾಟಿಸಲಿರುವ ಸಚಿವ ಯು.ಟಿ. ಖಾದರ್‌

July 17, 2026

ಮಂಜನಾಡಿ ದುರಂತ ಪ್ರಕರಣ: ಪೊಲೀಸ್ ಆಯುಕ್ತರು ಹಾಗೂ ಕೊಣಾಜೆ ಠಾಣಾಧಿಕಾರಿಗೆ ಹೈಕೋರ್ಟ್ ನೋಟಿಸ್ ಒಂದು ವರ್ಷ ಕಳೆದರೂ ಎಫ್‌ಐಆರ್‌ಗಾಗಿ ಕಾಯುತ್ತಿರುವ ಆಶ್ವಿನಿ

July 17, 2026

ಮುಲ್ಕಿ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ಸುರೇಶ್ ದೇವಾಡಿಗ ನೇಮಕ

July 17, 2026
1 2 3 … 2,021 Next
Automatic YouTube Gallery

"ಅಚ್ಯುತ ಅವಾತರಂ" ಸಿನಿಮಾ ಹವಾ..! ಹೇಗಿದೆ ಗೊತ್ತಾ..?|

ಸಿನಿಮಾದ ಒಂದೊಂದು ಪಾತ್ರನೂ ವಿಭಿನ್ನ; ಆಧುನಿಕ ಜಗತ್ತಿನ ಅನಾವರಣ

ಸಿನಿಮಾ ನೋಡಿ ಸಿನಿಪ್ರಿಯರು ಫಿದಾ....

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay ...
connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
"ಅಚ್ಯುತ ಅವಾತರಂ" ಸಿನಿಮಾ ಹವಾ..! ಹೇಗಿದೆ ಗೊತ್ತಾ..?|
Now Playing
"ಅಚ್ಯುತ ಅವಾತರಂ" ಸಿನಿಮಾ ಹವಾ..! ಹೇಗಿದೆ ಗೊತ್ತಾ..?|
ಸಿನಿಮಾದ ಒಂದೊಂದು ಪಾತ್ರನೂ ವಿಭಿನ್ನ; ಆಧುನಿಕ ಜಗತ್ತಿನ ಅನಾವರಣ ಸಿನಿಮಾ ನೋಡಿ ...
ಸಿನಿಮಾದ ಒಂದೊಂದು ಪಾತ್ರನೂ ವಿಭಿನ್ನ; ಆಧುನಿಕ ಜಗತ್ತಿನ ಅನಾವರಣ

ಸಿನಿಮಾ ನೋಡಿ ಸಿನಿಪ್ರಿಯರು ಫಿದಾ....

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay ...
connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಆರೋಪಿ ಚೇತನ್‌ ಫೋಟೋ ಎಡಿಟ್‌ ಮಾಡಿ ಸಂಘಟನೆ ಹೆಸರು ಕೆಡಿಸುವಂತಹ ಕೃ#ತ್ಯ ನಡೆಯುತ್ತಿದೆ;   ಶರಣ್‌ ಪಂಪ್‌ವೆಲ್‌ ಆಕ್ರೋಶ
Now Playing
ಆರೋಪಿ ಚೇತನ್‌ ಫೋಟೋ ಎಡಿಟ್‌ ಮಾಡಿ ಸಂಘಟನೆ ಹೆಸರು ಕೆಡಿಸುವಂತಹ ಕೃ#ತ್ಯ ನಡೆಯುತ್ತಿದೆ; ಶರಣ್‌ ಪಂಪ್‌ವೆಲ್‌ ಆಕ್ರೋಶ
ಆರ್‌ಎಸ್‌ಎಸ್‌, ಭಜರಂಗದಳ ಎಂದು ಹೇಳುವ ಗೃಹಸಚಿವರು ಯಾಕೆ ಈ ಘಟನೆ ಬಗ್ಗೆ ...
ಆರ್‌ಎಸ್‌ಎಸ್‌, ಭಜರಂಗದಳ ಎಂದು ಹೇಳುವ ಗೃಹಸಚಿವರು ಯಾಕೆ ಈ ಘಟನೆ ಬಗ್ಗೆ ಮಾತಾಡುವುದಿಲ್ಲ: ಇಲ್ಲಸಲ್ಲದ ಹೇಳಿಕೆ ನೀಡುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳಿ

ಆಕ್ರೋಶ ವ್ಯಕ್ತಪಡಿಸಿದ ವಿಶ್ವಹಿಂದೂಪರಿಷತ್‌ ಪ್ರಾಂತ್ಯ ಸಹಕಾರ್ಯದರ್ಶಿ ಶರಣ್‌ ಪಂಪ್‌ವೆಲ್‌


📍 Ullal | Dakshina Kannada | Coastal ...
Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version