ನವದೆಹಲಿ: ಉತ್ತರ ಪ್ರದೇಶದ ದಾದಿಯಲ್ಲಿ ನಡೆದ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದುವರೆಗೆ ಸುಮ್ಮನಿದ್ದು ಪ್ರತಿ ಪಕ್ಷಗಳಿಂದ ತೀವ್ರ ಟೀಕೆಗೊಳಗಾಗಿದ್ದ ಪ್ರಧಾನಮಂತ್ರಿ ಮೋದಿ ಕೊನೆಗೂ ಮೌನವನ್ನು ಮುರಿದು, ಘಟನೆಯ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.
ಇಂತಹ ಘಟನೆಗಳು ಹಿಂದೆಯೂ ನಡೆದಿದ್ದವು, ಬಿಜೆಪಿ ಸುಳ್ಳು ಜಾತ್ಯಾತೀತವಾದವನ್ನು ವಿರೋಧಿಸುತ್ತದೆ. ವಿರೋಧ ಪಕ್ಷಗಳು ಇಂತಹ ಘಟನೆಗಳನ್ನು ಬಳಸಿಕೊಂಡು ಲಾಭ ಮಾಡಿಕೊಳ್ಳಲು ಯತ್ನಿಸುತ್ತಿವೆ, ಮಾತುಕತೆಯಿಂದ ಇಂತಹ ಘಟನೆಗಳಿಗೆ ಅಂತ್ಯ ಹಾಡಬಹುದು ಎಂದು ಮೋದಿ ಈ ಸಂದರ್ಭದಲ್ಲಿ ತಿಳಿಸಿದ್ದಾರೆ.