ಮಂಗಳೂರು, ಆ. 3: ಮಂಗಳೂರಿನಲ್ಲಿ ರಿಕ್ಷಾ ಚಾಲಕರಾಗಿ ಕೆಲಸ ಮಾಡುತ್ತಿದ್ದ ಬಂದರ್ ನಿವಾಸಿ, ಪ್ರಸ್ತುತ ಮಂಜನಾಡಿಯಲ್ಲಿ ವಾಸವಾಗಿರುವ ಅಹ್ಮದ್ ಕಬೀರ್ ಅವರು ನಿನ್ನೆ ರಾತ್ರಿ ಬಳಿಕ ನಾಪತ್ತೆಯಾಗಿದ್ದು, ಅವರ ಪತ್ತೆಗೆ ಕುಟುಂಬಸ್ಥರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ಕುಟುಂಬದವರ ಮಾಹಿತಿ ಪ್ರಕಾರ, ಅಹ್ಮದ್ ಕಬೀರ್ ಅವರು ನಿನ್ನೆ ರಾತ್ರಿ ಮನೆಯಿಂದ ತೆರಳಿದ ಬಳಿಕ ಇದುವರೆಗೆ ಸಂಪರ್ಕಕ್ಕೆ ಸಿಕ್ಕಿಲ್ಲ. ಅವರ ಮೊಬೈಲ್ ಫೋನ್ ಸ್ವಿಚ್ ಆಫ್ ಆಗಿದ್ದು, ಅವರು ಚಲಾಯಿಸುತ್ತಿದ್ದ ರಿಕ್ಷಾ ಕುದ್ರೋಳಿಯಲ್ಲಿರುವ ಸಂಬಂಧಿಕರ ಮನೆಯ ಸಮೀಪ ಪತ್ತೆಯಾಗಿದೆ.
ಈ ಹಿನ್ನೆಲೆಯಲ್ಲಿ ಅಹ್ಮದ್ ಕಬೀರ್ ಅವರ ಬಗ್ಗೆ ಯಾವುದೇ ಮಾಹಿತಿ ದೊರೆತಲ್ಲಿ ಅಥವಾ ಅವರನ್ನು ಎಲ್ಲಿಯಾದರೂ ಕಂಡಲ್ಲಿ ತಕ್ಷಣ 77957 64098 ಅಥವಾ 98440 90985 ಸಂಖ್ಯೆಗೆ ಸಂಪರ್ಕಿಸಿ ಮಾಹಿತಿ ನೀಡುವಂತೆ ಕುಟುಂಬಸ್ಥರು ಮನವಿ ಮಾಡಿದ್ದಾರೆ.

