ಕಲ್ಕಟ್ಟದ ಇಲ್ಯಾಸ್ ಜುಮಾ ಮಸೀದಿ ಹಾಗೂ ರಿಫಾಯಿಯ್ಯ ಮದರಸ ವತಿಯಿಂದ ವಿಶ್ವ ಪ್ರವಾದಿ ಮುಹಮ್ಮದ್ ಮುಸ್ತಫಾ (ಸ.ಅ)ರವರ 1501ನೇ ಜನ್ಮದಿನಾಚರಣೆಯ ಪ್ರಯುಕ್ತ ಮೀಲಾದ್ ಸಂದೇಶ ರ್ಯಾಲಿ ನಡೆಯಿತು.
ಕರ್ನಾಟಕ ಮುಸ್ಲಿಂ ಜಮಾಅತ್, TIYA, SYS, SSF ಹಾಗೂ SBS ಕಲ್ಕಟ್ಟ ಘಟಕಗಳ ಸಹಯೋಗದಲ್ಲಿ ನಡೆದ ರ್ಯಾಲಿಯಲ್ಲಿ ಧಾರ್ಮಿಕ ಸಂದೇಶಗಳನ್ನು ಸಾರಲಾಯಿತು. ನೂರಾರು ಮಂದಿ ಭಾಗವಹಿಸಿ ಪ್ರವಾದಿ ಮುಹಮ್ಮದ್ ಮುಸ್ತಫಾ (ಸ.ಅ)ರವರ ಸಂದೇಶ ಹಾಗೂ ಮಾನವೀಯ ಮೌಲ್ಯಗಳನ್ನು ಜನರಿಗೆ ತಲುಪಿಸುವಲ್ಲಿ ಪಾಲ್ಗೊಂಡರು.