Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
suddi

ಸ್ಪರ್ಧಾತ್ಮಕ ಆರ್ಥಿಕ ಪರಿಸ್ಥಿತಿಯಲ್ಲಿಯೂ ದ.ಕ ಸಹಕಾರಿ ನೌಕರರ ಸಹಕಾರ ಸಂಘಠೇವಣಿ ಸಂಗ್ರಹದಲ್ಲಿ ರೂ. 94.33 ಕೋಟಿಯಿಂದ ರೂ.108.80 ಕೋಟಿಗೆ ಏರಿಕೆ : ಎಸ್.ಜಗದೀಶ್ಚಂದ್ರ ಅಂಚನ್‌

UllalaVaniBy UllalaVaniSeptember 12, 2026Updated:September 12, 2026No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಮಂಗಳೂರು: ಇಂದಿನ ತೀವ್ರ ಸ್ಪರ್ಧಾತ್ಮಕ ಆರ್ಥಿಕ ಪರಿಸ್ಥಿತಿಯಲ್ಲಿಯೂ ದಕ್ಷಿಣ ಕನ್ನಡ ಸಹಕಾರಿ ನೌಕರರ ಸಹಕಾರ ಸಂಘ ಠೇವಣಿ ಸಂಗ್ರಹದಲ್ಲಿ ಗಮನಾರ್ಹ ಪ್ರಗತಿಯನ್ನು ಹೊಂದಿದ್ದು, ರೂ. 94.33 ಕೋಟಿಯಿಂದ ರೂ.108.80 ಕೋಟಿಗೆ ಏರಿಕೆಯಾಗಿದೆ. ಇದೇ ರೀತಿ ಸಂಘದ ಸಾಲ ಮತ್ತು ಮುಂಗಡಗಳ ಮೊತ್ತವು ರೂ.೮೨.೯೦ ಕೋಟಿಯಿಂದ ರೂ.೯೧.೬೭ ಕೋಟಿಗೆ ಹೆಚ್ಚಳವಾಗಿದೆ. ಈ ಮೂಲಕ ವರದಿ ವರ್ಷದಲ್ಲಿ ಸಂಘವು ರೂ.೧.೦೭ ಕೋಟಿ ಲಾಭವನ್ನು ಗಳಿಸಲು ಸಂಘದ ಆರ್ಥಿಕ ಶಿಸ್ತು, ಸದಸ್ಯರ ಸಹಕಾರ, ಗ್ರಾಹಕರು ಸಂಘದ ಮೇಲಿಟ್ಟಿರುವ ಅಚಲ ವಿಶ್ವಾಸ, ಆಡಳಿತ ಮಂಡಳಿ ಹಾಗೂ ಸಿಬ್ಬಂದಿ ವರ್ಗದ ಪ್ರಾಮಾಣಿಕ ಪರಿಶ್ರಮದಿಂದ ಸಾಧನೆ ಸಾಧ್ಯವಾಗಿದೆ ಎಂದು ದಕ್ಷಿಣ ಕನ್ನಡ ಸಹಕಾರಿ ನೌಕರರ ಸಹಕಾರ ಸಂಘದ ಅಧ್ಯಕ್ಷರಾದ ಎಸ್.ಜಗದೀಶ್ಚಂದ್ರ ಅಂಚನ್‌ ಹೇಳಿದರು.


ಅವರು ದಕ್ಷಿಣ ಕನ್ನಡ ಸಹಕಾರಿ ನೌಕರರ ಸಹಕಾರ ಸಂಘ ಇದರ ಕೊಡಿಯಾಲ್‌ ಬೈಲ್‌ ಶ್ರೀ ಭಗವತಿ ದೇವಸ್ಥಾನ ರಸ್ತೆಯಲ್ಲಿರುವ ʻಉನ್ನತಿʼ ಕೇಂದ್ರ ಕಚೇರಿಯಲ್ಲಿ ಜರಗಿದ 2025-26ನೇ ಸಾಲಿನ ಸರ್ವ ಸದಸ್ಯರ ೯೫ನೇ ವಾರ್ಷಿಕ ಮಹಾಸಭೆಯನ್ನು ಉದ್ದೇಶಿಸಿ ಮಾತನಾಡಿದರು.

ವಿಶೇಷವಾಗಿ ʻಎʼ ತರಗತಿ ಸದಸ್ಯರಿಗೆ ಹೆಚ್ಚಿನ ಅನುಕೂಲಕವಾಗುವಂತಹ ಕಡಿಮೆ ಬಡ್ಡಿ ದರದಲ್ಲಿ ಸಾಲಗಳನ್ನು ನೀಡಲಾಗುತ್ತಿದೆ. ಸಂಘವು ಸುಸಜ್ಜಿತ ಸ್ವಂತ ಆಡಳಿತ ಕಚೇರಿಯೊಂದಿಗೆ ಹವಾನಿಯಂತ್ರಿತ ಹಾಗೂ ಸುಸಜ್ಜಿತ ಎರಡು ಸಭಾಭವನಗಳನ್ನು ಹೊಂದಿರುವುದು ಮತ್ತೊಂದು ಹೆಮ್ಮೆಯ ಸಂಗತಿ. ಸಂಘದ ಎ ತರಗತಿ ಸದಸ್ಯರಿಗೆ ಶುಭ ಸಮಾರಂಭಗಳಿಗೆ ಸಭಾಭವನವನ್ನು ರಿಯಾಯಿತಿ ದರದಲ್ಲಿ ಒದಗಿಸಲಾಗುತ್ತಿದೆ. ಸದಸ್ಯರು ಸದುಪಯೋಗ ಪಡೆದುಕೊಳ್ಳಬೇಕಾಗಿದೆ. ಪ್ರಸ್ತುತ ಸಂಘವು ನಾಲ್ಕು ಶಾಖೆಗಳನ್ನು ಹೊಂದಿದ್ದು ಸದಸ್ಯರಿಗೆ ಇನ್ನಷ್ಟು ಹತ್ತಿರವಾಗಿ ಹಾಗೂ ಪರಿಣಾಮಕಾರಿಯಾಗಿ ಸೇವೆ ಒದಗಿಸುವ ಉದ್ದೇಶದಿಂದ ಮುಂದಿನ ದಿನಗಳಲ್ಲಿ ತಾಲೂಕುವಾರು ಶಾಖೆಗಳನ್ನು ತೆರೆಯುವ ಯೋಜನೆಯನ್ನು ಹೊಂದಿದೆ. ಸದಸ್ಯರ ಮಕ್ಕಳಲ್ಲಿರುವ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಸಲುವಾಗಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಸತತ ಐದು ವರ್ಷಗಳಿಂದ ಮುಂದುವರಿಸಿಕೊಂಡು ಬರುತ್ತಿದೆ.



ʻಸಹಕಾರ ರತ್ನ ಡಾ.ಎಂ.ಎನ್.‌ ಆರ್‌ ಇವರಿಗೆ ಕೃತಜ್ಞತೆಗಳುʼ
ಸಂಘಕ್ಕೆ ಸದಾ ಮಾರ್ಗದರ್ಶನ , ಸಹಕಾರ ಮತ್ತು ಬೆಂಬಲವನ್ನು ನೀಡುತ್ತಿರುವ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಗೌರವಾನ್ವಿತ ಅಧ್ಯಕ್ಷರಾದ ಡಾ.ಎಂ.ಎನ್.ರಾಜೇಂದ್ರ ಕುಮಾರ್‌ ಅವರಿಗೆ, ಬ್ಯಾಂಕಿನ ಉಪಾಧ್ಯಕ್ಷರು, ಆಡಳಿತ ಮಂಡಳಿ ಸದಸ್ಯರು ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರಿಗೆ ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಎಸ್‌ ಸಿಡಿಸಿಸಿ ಬ್ಯಾಂಕಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋಪಾಲಕೃಷಣ ಭಟ್‌ .ಕೆ. ಇವರು ಸಂಘದ ಸದಸ್ಯರ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರವನ್ನು ಪ್ರಧಾನ ಮಾಡಿದರು. ಅಗಲಿದ ಸಂಘದ ಸದಸ್ಯರಿಗೆ ನಿಮಿಷ ಕಾಲ ಮೌನ ಪಾರ್ಥನೆಯ ಮೂಲಕ ಶ್ರದ್ಧಾಂಜಲಿ ಅರ್ಪಿಸಲಾಯಿತು. ಇದೇ ಸಂದರ್ಭ ಬಸವಶ್ರೀ ಪುರಸ್ಕಾರವನ್ನು ಪಡೆದ ಸಂಘದ ಅಧ್ಯಕ್ಷರು ಎಸ್.‌ ಜಗದೀಶ್ಚಂದ್ರ ಅಂಚನ್‌ ಇವರನ್ನು ಸಮಾರಂಭದಲ್ಲಿ ಅಭಿನಂದಿಸಲಾಯಿತು.
ಈ ಸಂದರ್ಭ ನಿರ್ದೇಶಕರುಗಳಾದ ದಿವಾಕರ ಶೆಟ್ಟಿ ಕೆ., ವಿಶವೇಶ್ವರ ಐತಾಳ್‌, ಜಯಪ್ರಕಾಶ್‌ ರೈ, ಗಿರಿಧರ್‌ ಕೆ., ಕೆ.ಟಿ.ವಿಶ್ವನಾಥ್‌, ಶಿವಾನಂದ್‌ ಪಿ., ಚಂದ್ರಕಲಾ ಕೆ., ಮೋಹನ್‌ ಎನ್.‌, ವಿಶ್ವನಾಥ್‌ ಅಮೀನ್‌, ಗೀತಾಕ್ಷಿ, ಕಿರಣ್‌ ಕುಮಾರ್‌ ಶೆಟ್ಟಿ, ನಿಶಿತಾ ಜಯರಾಮ್‌, ಪ್ರೇಮರಾಜ್‌ ಭಂಡಾರಿ ಉಪಸ್ಥಿತರಿದ್ದರು.



ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸತೀಶ್‌ ಪೂಜಾರಿ ಸ್ವಾಗತಿಸಿ ನಿರೂಪಿಸಿದರು. ಉಪಾಧ್ಯಕ್ಷರಾದ ರಾಘವ ಆರ್ ಉಚ್ಚಿಲ್‌ ವಂದಿಸಿದರು.

`ತೊಕ್ಕೊಟ್ಟು, ಮೂಡಬಿದ್ರೆ, ಬಿ.ಸಿ.ರೋಡ್‌, ಸುರತ್ಕಲ್‌ನಲ್ಲಿ ನಾಲ್ಕು ಹೊಸ ಶಾಖೆಗಳು ಶೀಘ್ರ ಆರಂಭ’
ಸಹಕಾರಿ ಸಂಘದ ವಿಸ್ತರಣೆಯ ಭಾಗವಾಗಿ ತೊಕ್ಕೊಟ್ಟು, ಮೂಡಬಿದ್ರೆ, ಬಿ.ಸಿ.ರೋಡ್‌ ಹಾಗೂ ಸುರತ್ಕಲ್‌ನಲ್ಲಿ ನಾಲ್ಕು ಹೆಚ್ಚುವರಿ ಶಾಖೆಗಳನ್ನು ಶೀಘ್ರದಲ್ಲೇ ಆರಂಭಿಸಲು ಕ್ರಮ ಕೈಗೊಳ್ಳಲಾಗಿದೆ. ಈ ಮೂಲಕ ಸಂಘದ ಸೇವೆಯನ್ನು ಇನ್ನಷ್ಟು ವಿಸ್ತರಿಸಿ ಗ್ರಾಹಕರು ಹಾಗೂ ಸದಸ್ಯರಿಗೆ ಹೆಚ್ಚಿನ ಅನುಕೂಲ ಕಲ್ಪಿಸುವ ಉದ್ದೇಶ ಹೊಂದಲಾಗಿದೆ.
ಸಂಘಕ್ಕೆ ಸತತ 8ನೇ ಬಾರಿಯೂ ಸಾಧನಾ ಪ್ರಶಸ್ತಿ ಲಭಿಸಿರುವುದು ಹೆಮ್ಮೆಯ ವಿಚಾರವಾಗಿದೆ. ಸಂಘದ ಕಾರ್ಯನಿರ್ವಹಣೆ ಹಾಗೂ ಸಾಧನೆಗೆ ಇದು ದೊರೆತಿರುವ ಮಹತ್ವದ ಗೌರವವಾಗಿದೆ.
ಇದೇ ವೇಳೆ, ಸಂಘದ ಕೇಂದ್ರ ಕಚೇರಿಗೆ ಅಗತ್ಯವಿರುವ ಹೆಚ್ಚುವರಿ ಸಿಬ್ಬಂದಿಯನ್ನು ನೇಮಕ ಮಾಡುವ ಕುರಿತು ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಲಾಗಿದೆ.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಶಿಕ್ಷಕರ ದಿನಾಚರಣೆ: ನಿವೃತ್ತ ಶಿಕ್ಷಕರಿಗೆ ನವೋದಯ ಫ್ರೆಂಡ್ಸ್ ಸರ್ಕಲ್‌ನಿಂದ ಗುರುವಂದನೆ

September 12, 2026

ಸಾಮರಸ್ಯದ ರಕ್ಷಾಬಂಧನ ಆಚರಣೆ

September 12, 2026

80 ರ ದಶಕದ ಎಐ ಫೋಟೋ ಟ್ರೆಂಡ್: ಮೂಲ ಫೋಟೋಗಳನ್ನು ಹಂಚಿಕೊಳ್ಳಬೇಡಿ- ಸೈಬರ್ ತಜ್ಞರಿಂದ ಬಳಕೆದಾರರಿಗೆ ಎಚ್ಚರಿಕೆ

September 11, 2026

Comments are closed.

Advertise
ಸಂಪರ್ಕಿಸಿ

ಕೋಟೆಕಾರು ಪಟ್ಟಣ ಪಂಚಾಯತ್‌ 80 ನೇ ಸ್ವಾತಂತ್ರೋತ್ಸವ

August 16, 2026

ಮಾಡೂರು ಶಾಲೆಯಲ್ಲಿ ವಿಭಿನ್ನವಾಗಿ ಜರಗಿದ 80 ರ ಸ್ವಾತಂತ್ರ್ಯ

August 16, 2026

ಸ್ತನ್ಯಪಾನದ ಮಹತ್ವದ ಬಗ್ಗೆ ಪ್ರತಿಯೊಬ್ಬರಲ್ಲೂ ಜಾಗೃತಿ ಮೂಡಿಸುವ ಅಗತ್ಯವಿದೆ : ರೋಟರಿ ಡೌನ್‌ಟೌನ್ ಕ್ಲಬ್ ಅಧ್ಯಕ್ಷ ಉಮೇಶ್‌ ಗಟ್ಟಿ

August 8, 2026

ಹಣ ಇಲ್ಲದಿದ್ದರೆ ಯಾರೂ ಸಾಯಬಾರದು – ಸಂವಿಧಾನದ ಪರಿಚ್ಛೇದ 21ರ ಬೆಳಕಿನಲ್ಲಿ ತುರ್ತಾಗಿ ಆರೋಗ್ಯ ಸಚಿವ ಯು.ಟಿ ಖಾದರ್ ಕೂಡಲೇ ಸ್ಪಂದಿಸುವ ಅಗತ್ಯ ಇದೆ.

August 1, 2026
suddi

ಸ್ಪರ್ಧಾತ್ಮಕ ಆರ್ಥಿಕ ಪರಿಸ್ಥಿತಿಯಲ್ಲಿಯೂ ದ.ಕ ಸಹಕಾರಿ ನೌಕರರ ಸಹಕಾರ ಸಂಘಠೇವಣಿ ಸಂಗ್ರಹದಲ್ಲಿ ರೂ. 94.33 ಕೋಟಿಯಿಂದ ರೂ.108.80 ಕೋಟಿಗೆ ಏರಿಕೆ : ಎಸ್.ಜಗದೀಶ್ಚಂದ್ರ ಅಂಚನ್‌

By UllalaVaniSeptember 12, 20260

ಮಂಗಳೂರು: ಇಂದಿನ ತೀವ್ರ ಸ್ಪರ್ಧಾತ್ಮಕ ಆರ್ಥಿಕ ಪರಿಸ್ಥಿತಿಯಲ್ಲಿಯೂ ದಕ್ಷಿಣ ಕನ್ನಡ ಸಹಕಾರಿ ನೌಕರರ ಸಹಕಾರ ಸಂಘ ಠೇವಣಿ ಸಂಗ್ರಹದಲ್ಲಿ ಗಮನಾರ್ಹ…

ಶಿಕ್ಷಕರ ದಿನಾಚರಣೆ: ನಿವೃತ್ತ ಶಿಕ್ಷಕರಿಗೆ ನವೋದಯ ಫ್ರೆಂಡ್ಸ್ ಸರ್ಕಲ್‌ನಿಂದ ಗುರುವಂದನೆ

September 12, 2026

ಸಾಮರಸ್ಯದ ರಕ್ಷಾಬಂಧನ ಆಚರಣೆ

September 12, 2026

80 ರ ದಶಕದ ಎಐ ಫೋಟೋ ಟ್ರೆಂಡ್: ಮೂಲ ಫೋಟೋಗಳನ್ನು ಹಂಚಿಕೊಳ್ಳಬೇಡಿ- ಸೈಬರ್ ತಜ್ಞರಿಂದ ಬಳಕೆದಾರರಿಗೆ ಎಚ್ಚರಿಕೆ

September 11, 2026
1 2 3 … 2,097 Next
Automatic YouTube Gallery

ಹರೇಕಳ ಕಬ್ಬಿಗೆ ನೇರ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಿ: ರಾಜ್ಯ ಕಾರ್ಯದರ್ಶಿ ಮನೋಹರ್ ಶೆಟ್ಟಿ

ಮಧ್ಯವರ್ತಿಗಳ ಹಾವಳಿಯಿಂದ ಮೂಲ ಬೆಳೆಗಾರರಿಗೆ ನಷ್ಟ..!

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for ...
trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಹರೇಕಳ ಕಬ್ಬಿಗೆ ನೇರ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಿ: ರಾಜ್ಯ ಕಾರ್ಯದರ್ಶಿ ಮನೋಹರ್ ಶೆಟ್ಟಿ
Now Playing
ಹರೇಕಳ ಕಬ್ಬಿಗೆ ನೇರ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಿ: ರಾಜ್ಯ ಕಾರ್ಯದರ್ಶಿ ಮನೋಹರ್ ಶೆಟ್ಟಿ
ಮಧ್ಯವರ್ತಿಗಳ ಹಾವಳಿಯಿಂದ ಮೂಲ ಬೆಳೆಗಾರರಿಗೆ ನಷ್ಟ..! 📍 Ullal | Dakshina ...
ಮಧ್ಯವರ್ತಿಗಳ ಹಾವಳಿಯಿಂದ ಮೂಲ ಬೆಳೆಗಾರರಿಗೆ ನಷ್ಟ..!

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for ...
trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಕಲ್ಲಾಪು;ಗುಳಿಗನಿಗೆ ಈಡುಗಾಯಿ ಒಡೆದ ಅರ್ಚಕ; ತಿಂಗಳೊಳಗೆ ಕಳ್ಳರ ಬಂಧನ!
Now Playing
ಕಲ್ಲಾಪು;ಗುಳಿಗನಿಗೆ ಈಡುಗಾಯಿ ಒಡೆದ ಅರ್ಚಕ; ತಿಂಗಳೊಳಗೆ ಕಳ್ಳರ ಬಂಧನ!
ಕಲ್ಲಾಪು ಶ್ರೀ ಮಹಾಲಕ್ಷ್ಮಿ ಗಣಪತಿ ಕ್ಷೇತ್ರದಲ್ಲಿ ನಡೆದ ಕಳ್ಳತನ ಪ್ರಕರಣ; ...
ಕಲ್ಲಾಪು ಶ್ರೀ ಮಹಾಲಕ್ಷ್ಮಿ ಗಣಪತಿ ಕ್ಷೇತ್ರದಲ್ಲಿ ನಡೆದ ಕಳ್ಳತನ ಪ್ರಕರಣ; ಕಳ್ಳರನ್ನು ಶೀಘ್ರ ಪತ್ತೆಹಚ್ಚುವಂತೆ ಕ್ಷೇತ್ರಪಾಲ ಗುಳಿಗ ದೈವದ ಮೊರೆ ಹೋಗಿದ್ದ ಹಿರಿಯ ಅರ್ಚಕ ಬಾಲಕೃಷ್ಣ ಭಟ್


ತಿಂಗಳೊಳಗೆ ಕಳ್ಳರ ಬಂಧನ!

📍 Ullal | Dakshina Kannada | Coastal Karnataka ...
News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version