ಉಳ್ಳಾಲ್ ನ್ಯೂಸ್ ನೆಟ್ ವರ್ಕ್
ಚಿಕ್ಕಬಳ್ಳಾಪುರ: ದೇಶದ ಸಂಸ್ಕøತಿಯ ಬಗ್ಗೆ ಬಿಜೆಪಿ ಪಕ್ಷದ ನಾಯಕರಿಗೆ ಗೊತ್ತಿಲ್ಲ. ಬಿಜೆಪಿ ಮುಖಂಡರು ದೇಶಭಕ್ತಿಯ ಹೆಸರಿನಲ್ಲಿ ದೇಶ ಮತ್ತು ರಾಜ್ಯವನ್ನು ಒಡೆಯುತ್ತಿದ್ದಾರೆ ಎಂದು ಕರ್ನಾಟಕ ಆರೋಗ್ಯ ಸಚಿವ ಯು.ಟಿ.ಖಾದರ್ ವಾಗ್ದಾಳಿ ನಡೆಸಿದ್ದಾರೆ.
ಕೇಂದ್ರ ಗೃಹಸಚಿವ ರಿಜಿಜು ಗೋಮಾಂಸವನ್ನು ಸೇವಿಸುವುದರ ಬಗ್ಗೆ ಮಾತನಾಡಿದ ಅವರು ಬಿಜೆಪಿ ನಾಯಕರಿಗೆ ಧೈರ್ಯವಿದ್ದರೆ ಸಚಿವ ರಿಜೆಜು ವಿರುದ್ಧ ಮಾತನಾಡಲಿ ಎಂದು ಸವಾಲು ಹಾಕಿದ್ದಾರೆ. ವೋಟ್ ಬ್ಯಾಂಕ್ ರಾಜಕೀಯಕ್ಕಾಗಿ ಬಿಜೆಪಿ ಪಕ್ಷದವರು ಸಿಎಂ ಹೇಳಿಕೆಯನ್ನು ದೊಡ್ಡ ವಿವಾದವನ್ನಾಗಿ ಮಾತನಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.