ಉಳ್ಳಾಲ್ ನ್ಯೂಸ್ ನೆಟ್ ವರ್ಕ್
ತೊಕ್ಕೊಟ್ಟು: ತೊಕ್ಕೊಟ್ಟು ಹೈಟೆಕ್ ಬಸ್ಸು ನಿಲ್ದಾಣದ ನೀಲಿನಕಾಶೆ ಸಿದ್ಧವಾಗಿದ್ದು, ಎರಡು ಬಾರಿ ಸಾಧಕ ಬಾಧಕಗಳ ಬಗ್ಗೆ ಚರ್ಚೆ ನಡೆಸಿ ಅಧಿಕೃತವಾಗಿ ಅನುದಾನ ಬಿಡುಗಡೆ ಮಾಡುವಂತೆ ಮಾಡಿ ಜಿಲ್ಲೆಯಲ್ಲಿ ಮಾದರಿ ಬಸ್ ನಿಲ್ದಾಣವನ್ನು ರೂಪಿಸಲು ಎಲ್ಲಾ ರೀತಿಯ ಪ್ರಯತ್ನ ಮಾಡುತ್ತೇನೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ.ಖಾದರ್ ಹೇಳಿದ್ದಾರೆ.
ಅವರು ವಿಶೇಷ ಅನುದಾನದಲ್ಲಿ ಹಮ್ಮಿಕೊಳ್ಳಲಾದ ತೊಕ್ಕೊಟ್ಟು ಬಸ್ ನಿಲ್ದಾಣದ ಕಾಂಕ್ರೀಟಿಕರಣ ಕಾಮಗಾರಿಗೆ ಶನಿವಾರ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು.
ಈ ಸಂದರ್ಭ ಉಳ್ಳಾಲ ನಗರಸಭೆ ಅಧ್ಯಕ್ಷೆ ಎಂ.ಗಿರಿಜಾ ಬಾೈ, ಉಪಾಧ್ಯಕ್ಷೆ ರಝಿಯಾ ಇಬ್ರಾಹಿಂ, ಮಾಜಿ ಅಧ್ಯಕ್ಷರುಗಳಾದ ಬಾಝಿಲ್ ಡಿಸೋಜಾ, ಯು.ಎ.ಇಸ್ಮಾಯಿಲ್, ಸ್ಥಾಯಿ ಸಮಿತಿ ಅಧ್ಯಕ್ಷ ಮಹಮ್ಮದ್ ಮುಕ್ಕಚ್ಚೇರಿ, ಮುಖ್ಯಾಧಿಕಾರಿ ರೂಪಾ.ಟಿ.ಶೆಟ್ಟಿ, ನಗರಸಭೆ ಸದಸ್ಯರಾದ ಉಸ್ಮಾನ್ ಕಲ್ಲಾಪು, ಸುಕುಮಾರ್, ಕುಂಞÂಮೋನು, ಕಾಂಗ್ರೆಸ್ ಮುಖಂಡರಾದ ರಹಿಮಾನ್ ಕೋಡಿಜಾಲ್, ಸಿರಾಜ್ ಕಿನ್ಯಾ, ಹಮೀದ್ ಕಿನ್ಯಾ, ಪದ್ಮನಾಭ ನರಿಂಗಾನ, ಜಬ್ಬಾರ್ ಬೋಳಿಯಾರ್ , ಅಹಮ್ಮದ್ ಬಾವಾ ಕೊಟ್ಟಾರ, ನರಿಂಗಾನ ಪಂ. ಸದಸ್ಯ ಮುರಳೀಧರ್ ಶೆಟ್ಟಿ, ಮೊದಲಾದವರು ಉಪಸ್ಥಿತರಿದ್ದರು.