Site icon Ullalavani

ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹಗೆ ಕೊಲೆ ಬೆದರಿಕೆ

ಮಡಿಕೇರಿ: ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಅವರನ್ನು ಫೇಸ್‍ಬುಕ್‍ನಲ್ಲಿ ಅವಹೇಳನಕಾರಿಯಾಗಿ ನಿಂದಿಸಿದ್ದು, ಕೊಲೆ ಬೆದರಿಕೆ ಹಾಕಲಾಗಿದೆ. ಈ ಕುರಿತು ಸಂಸದರು ಮೈಸೂರು ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ.

ಒಂದು ಸಂಘಟನೆಯ ಫೇಸ್‍ಬುಕ್ ಖಾತೆಯಿಂದ ಜೀವಬೆದರಿಕೆ ಹಾಕಲಾಗಿದೆ. ಮಡಿಕೇರಿಯಲ್ಲಿ ಮಂಗಳವಾರ ಮೃತಪಟ್ಟ ವಿಶ್ವ ಹಿಂದೂ ಪರಿಷತ್ ಸಂಘಟನಾ ಕಾರ್ಯದರ್ಶಿ ಕುಟ್ಟಪ್ಪ ಅವರ ಮೃತದೇಹದ ಫೋಟೊ ಜೊತೆಗೆ ಪ್ರತಾಪ್ ಸಿಂಹ ಅವರ ಫೋಟೊ ವಿಟ್ಟು ಅವಹೇಳನಕಾರಿಯಾಗಿ ನಿಂದನೆ ಮಾಡಲಾಗಿದೆ.

`ಕುಟ್ಟಪ್ಪ ಅವರಂತೆಯೇ ನಿನಗೂ ಸಾವು ಬರುತ್ತದೆ ಎಂದು ಬೆದರಿಕೆ ಹಾಕಲಾಗಿದೆ’ ಎಂದು ಪ್ರತಾಪ್ ಸಿಂಹ ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ. ಜೀವ ಬೆದರಿಕೆ ಕುರಿತು ವಿಜಯನಗರ ಪೊಲೀಸರಿಗೆ ಅವರು ದೂರು ನೀಡಿದ್ದಾರೆ ಹಾಗೂ ಮೈಸೂರು ಪೊಲೀಸ್ ಆಯುಕ್ತ ಬಿ.ದಯಾನಂದ ಅವರಿಗೂ ಈ ಕುರಿತು ಮಾಹಿತಿ ನೀಡಿದ್ದಾರೆ.

Exit mobile version