ಉಳ್ಳಾಲ್ ನ್ಯೂಸ್ ನೆಟ್ ವರ್ಕ್
ಮುಡಿಪು: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಇದರ “ಸಂಸ್ಥಾಪನಾ ದಿನಾಚಾರಣೆಯನ್ನು ಸೈಕಲ್ ಜಾಥಾದ ಮುಖಾಂತರ ಶನಿವಾರ ಹರೇಕಳ ಶ್ರೀ ರಾಮಕೃಷ್ಣ ಪ್ರೌಢಶಾಲೆಯಲ್ಲಿ ಬಹಳ ವಿಜೃಂಭಣೆಯಿಂದ ಆಚರಿಸಲಾಯಿತು.
ಪ್ರಾಸ್ತಾವಿಕವಾಗಿ ದಿನದ ಮಹತ್ವದ ಬಗ್ಗೆ ಸ್ಕೌಟ್ ಮಾಸ್ಟರ್ ತ್ಯಾಗಂ ಹರೇಕಳ ಅವರು ಮಾಹಿತಿ ನೀಡಿದರು ಹಾಗೂ ಶಿಕ್ಷಕರುಗಳಾದ ಉಷಾಲತ, ರವಿಶಂಕರ್, ಕೃಷ್ಣಶಾಸ್ತ್ರಿ, ವಸಂತ್, ಮೋಹಿನಿ, ಕುಮುದ, ಶಿವಕುಮಾರ್, ನೂತನ, ಮೋಹನ್ ಹಾಗೂ ದುರ್ಗಾಪ್ರಸಾದ್ ಉಪಸ್ಥಿತರಿದ್ದರು.
ಸಂಘಟನಾ ಕಾರ್ಯದರ್ಶಿಗಳಾದ ದಳದ ಲೀಡರ್ಳಾದ ನಿತೀಶ್ ಕುಮಾರ್ ಹಾಗೂ ಲಕ್ಷ್ಮೀತ ರವರು ಉಪಸ್ಥಿತರಿದ್ದರು.