Site icon Ullalavani

ವಿದ್ಯಾರ್ಥಿಗಳಿಗೆ ಬಾಲ್ಯದಲ್ಲಿಯೇ ಸಂಸ್ಕಾರ ಬೆಳೆಸುವ ಶಿಕ್ಷಣ ಸಿಗಬೇಕು

ಉಳ್ಳಾಲ್ ನ್ಯೂಸ್ ನೆಟ್ ವರ್ಕ್

ತಲಪಾಡಿ: ವಿದ್ಯಾರ್ಥಿಗಳಿಗೆ ಬಾಲ್ಯದಲ್ಲಿಯೇ ಸಂಸ್ಕಾರ, ಸಂಸ್ಕೃತಿ ಉಳಿಸಿ ಬೆಳೆಸುವ ಶಿಕ್ಷಣ ಸಿಕ್ಕಾಗ ಅವರು ಮುಂದಿನ ದಿನಗಳಲ್ಲಿ ಈ ದೇಶಕ್ಕೆ ಕೀರ್ತಿ ತರುವ ಕೆಲಸಕ್ಕೆ ಮುಂದಾಗುತ್ತಾರೆ. ಆ ನಿಟ್ಟಿನಲ್ಲಿ ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿಗಳಿಗೆ ಮೌಲ್ಯಯುತ ಪರಿಪೂರ್ಣ ಶಿಕ್ಷಣ ನೀಡಿದಾಗ ಆ ವಿದ್ಯಾರ್ಥಿಗಳು ಮುಂದಕ್ಕೆ ದೇಶ ಕಟ್ಟುವ ಕೆಲಸದಲ್ಲಿ ತೊಡಗಿಸುವುದರಲ್ಲಿ ಸಂಶಯವಿಲ್ಲ. ಅಂತಹ ಶಿಕ್ಷಣದ ಪ್ರಭಾವದಿಂದ ಪ್ರಪಂಚ ಭಾರತವನ್ನು ವಿಶ್ವಗುರುವಿನ ಸ್ಥಾನದಲ್ಲಿ ನೋಡುವಂತೆ ಮಾಡಿದ್ದು ಶಾರದಾ ಶಿಕ್ಷಣ ಸಂಸ್ಥೆಗಳ ಕಾರ್ಯವೈಖರಿ ಶ್ಲಾಘನೀಯ ಎಂದು ವಿಧಾನ ಪರಿಷತ್‍ನ ಸಭಾಪತಿ ಡಿ.ಎಚ್. ಶಂಕರಮೂರ್ತಿ ಅಭಿಪ್ರಾಯಪಟ್ಟರು.

ಅವರು ಶುಕ್ರವಾರ ಶಾರದಾ ವಿದ್ಯಾ ಸಮೂಹ ಸಂಸ್ಥೆಗಳ ಆಶ್ರಯದಲ್ಲಿ ನಡೆದ ತಲಪಾಡಿ ಕಿನ್ಯ ದೇವಿನಗರದ ಶಾರದಾ ವಿದ್ಯಾನಿಕೇತನ ಪಬ್ಲಿಕ್ ಸ್ಕೂಲ್‍ನ ದಶಮ ಸಂಭ್ರಮ ಹಾಗೂ ಹೊನಲು ಬೆಳಕಿನ ಕ್ರೀಡೋತ್ಸವ-2015ನ್ನು ಉದ್ಘಾಟಿಸಿ ಮಾತನಾಡಿದರು.

ಯಾವುದೇ ದೇಶದ ಪ್ರಗತಿಯನ್ನು ಕೇವಲ ಆರ್ಥಿಕ ಅಭಿವೃದ್ಧಿಯನ್ನು ಮಾನದಂಡವಾಗಿ ಪರಿಗಣಿಸುವಂತಿಲ್ಲ. ಎಲ್ಲ ವಿಧದಲ್ಲೂ ಸಮಗ್ರ ಅಭಿವೃದ್ಧಿ ಸಾಧಿಸಿರಬೇಕು. ಆ ದಿಸೆಯಲ್ಲಿ ಭಾರತ ಪ್ರಪಂಚಕ್ಕೆ ಮಾದರಿಯಾಗಿದೆ. ನಮ್ಮ ಆಚಾರ ವಿಚಾರ ಸಂಸ್ಕಾರ ಸಂಸ್ಕ ೃತಿಗಳು ಇತರ ದೇಶಕ್ಕಿಂತ ಭಿನ್ನವಾಗಿದ್ದು ಅದಕ್ಕೆ ಯೋಗ ಶಿಕ್ಷಣ ಅಡಿಪಾಯವಾಗಿದೆ ಎಂಬುದು ಉಲ್ಲೇಖನೀಯ. ಹಾಗಾಗಿ ವಿದ್ಯಾರ್ಥಿಗಳಿಗೆ ಯೋಗ ಶಿಕ್ಷಣ ಎಲ್ಲ ವಿಧದಲ್ಲೂ ಬಹಳಷ್ಟು ಉಪಯುಕ್ತವಾಗಿದ್ದು ಸದುಪಯೋಗಪಡಿಸಿಕೊಳ್ಳಬೇಕು ಎಂದು ನುಡಿದರು.

ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ.ಖಾದರ್ ಮಾತನಾಡಿ ಮಂಗಳೂರು ಕ್ಷೇತ್ರದಲ್ಲಿ ಶಾರದಾ ಶಿಕ್ಷಣ ಸಂಸ್ಥೆಗಳು ಸಂಸ್ಕಾರಭರಿತ ಶಿಕ್ಷಣ ಕೊಡುತ್ತಿರುವುದು ಸಮಾಜಕ್ಕೆ ಕೊಡುಗೆಯಾಗಲಿದ್ದು ಕ್ಷೇತ್ರದ ಶಾಸಕನಾಗಿ ನನಗೆ ಹೆಮ್ಮೆ ತಂದಿದೆ. ಅಂತಹ ಕಾರ್ಯಕ್ರಮಗಳು ಇತರ ಶಾಲೆಗಳಲ್ಲೂ ನಡೆಯಬೇಕು ಎಂದರು.

ಸಂಸದ ನಳಿನ್ ಕುಮಾರ್ ಕಟೀಲು, ಎಡಪದವು ಮಿಜಾರು ಶಾಸ್ತಾವು ಶ್ರೀ ಭೂತನಾಥೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ವಿಜಯನಾಥ ವಿಠಲ ಶೆಟ್ಟಿ, ಯುನೈಟೆಡ್ ಟ್ರೇಡಿಂಗ್ ಆ್ಯಂಡ್ ವರ್ಕ್ ಶಾಪ್ ಲಿಮಿಟೆಡ್‍ನ ಆಡಳಿತ ನಿರ್ದೇಶಕ ಆರೂರು ಪ್ರಭಾಕರ ರಾವ್, ಉಪಾಧ್ಯಕ್ಷ ಕೆ.ಎಸ್. ಕಲ್ಲೂರಾಯ, ಕಾರ್ಯದರ್ಶಿ ಎಂ.ಎಸ್. ಶಾಸ್ತಿ ್ರ, ಟ್ರಸ್ಟಿ ಪ್ರದೀಪ್ ಕುಮಾರ್ ಕಲ್ಕೂರ ಹಾಗೂ ಟ್ರಸ್ಟಿ ಸೀತಾರಾಮ್, ಡಾ. ಲೀಲಾ ಉಪಾಧ್ಯಾಯ ಹಾಗೂ ಪ್ರಾಂಶುಪಾಲೆ ಸುಷ್ಮಾ ದಿನಕರ್ ಉಪಸ್ಥಿತರಿದ್ದರು.

ಶಾರದಾ ಶಿಕ್ಷಣ ಸಮೂಹ ಸಂಸ್ಥೆಗಳ ಅಧ್ಯಕ್ಷ ಪೆÇ್ರ.ಎಂ.ಬಿ. ಪುರಾಣಿಕ್ ಸ್ವಾಗತಿಸಿದರು.

Exit mobile version