Site icon Ullalavani

ಆಸ್ಪತ್ರೆ ಬೆಡ್‍ನಿಂದ ಎದ್ದು ಬಂದು ಮತಹಾಕಿದ ನಗರಸಭೆ ಅಧ್ಯಕ್ಷೆ

ಉಳ್ಳಾಲ್ ನ್ಯೂಸ್ ನೆಟ್ ವರ್ಕ್

ಉಳ್ಳಾಲ: ವಿಧಾನ ಪರಿಷತ್ ಸದಸ್ಯರ ಆಯ್ಕೆಗಾಗಿ ಭಾನುವಾರ ನಡೆದ ಚುನಾವಣೆಯಲ್ಲಿ ಸ್ಥಳೀಯ ಜನಪ್ರತಿನಿ„ಗಳು ಬಹುಳ ಉತ್ಸುಕತೆಯಿಂದಲೇ ಬೆಳಗ್ಗೆಯೇ ಮತಹಾಕುವ ಮೂಲಕ ಜವಾಬ್ದಾರಿ ಮೆರೆದಿದ್ದಾರೆ. ಅದಾಗ್ಯೂ ಮಂಗಳೂರು ವಿಧಾನ ಸಭಾ ಕ್ಷೇತ್ರದಲ್ಲಿ 99.5ಶೇ. ಮತ ಚಲಾವಣೆ ಆಗಿದ್ದು ಪುದು ಗ್ರಾಮ ಪಂಚಾಯಿತಿಯ ಸದಸ್ಯೆ ಲಿಡಿಯಾ ವಿದೇಶದಲ್ಲಿದ್ದ ಕಾರಣ ಒಂದು ಮತ ಚಲಾವಣೆ ಆಗಿಲ್ಲ.

ಕ್ಷೇತ್ರಕ್ಕೆ ಸಂಬಂಧಪಟ್ಟಂತೆ ಉಳ್ಳಾಲ ನಗರ ಸಭೆ, ಸೋಮೇಶ್ವರ, ತಲಪಾಡಿ, ಕಿನ್ಯ, ಮಂಜನಾಡಿ, ಬೆಳ್ಮ, ಮುನ್ನೂರು, ಅಂಬ್ಲಮೊಗರು, ಕೊಣಾಜೆ, ಹರೇಕಳ, ಪಾವೂರು, ಬೋಳಿಯಾರು, ನರಿಂಗಾನ, ಬಾಳೆಪುಣಿ, ಇರಾ, ಸಜಿಪ ಪಡು, ಕುರ್ನಾಡು, ಪಜೀರು, ಸಜಿಪ ನಡು, ಪುದು, ಮೇರೆಮಜಲು ಹಾಗೂ ತುಂಬೆ ಪಂಚಾಯಿತಿ ಮಂಗಳೂರು ವಿಧಾನ ಸಭಾ ಕ್ಷೇತ್ರಕ್ಕೆ ಒಳಪಟ್ಟಿದ್ದು ಪುದು ಗ್ರಾಮ ಪಂಚಾಯಿತಿಯ ಸದಸ್ಯೆಯೊಬ್ಬರ ಗೈರು ಮಾತ್ರ ಕಂಡಿದೆ.


ಉಳ್ಳಾಲ ನಗರ ಸಭೆಯ ಸದಸ್ಯರಾದ ಉಸ್ಮಾನ್ ಕಲ್ಲಾಪು ಹಾಗೂ ಬಾಜಿಲ್ ಡಿಸೋಜ ಅವರ ಮೇಲೆ ಕ್ರಿಮಿನಲ್ ಕೇಸ್ ದಾಖಲಾದ ಹಿನ್ನೆಲೆಯಲ್ಲಿ ಹೈಕೋರ್ಟ್ ಅವರಿಗೆ ಮತಹಾಕುವ ಅವಕಾಶ ಕೊಡಲಿಲ್ಲ.

ಸಚಿವ ಯು.ಟಿ.ಖಾದರ್ ಅವರಿಗೆ ಮಂಗಳೂರಿನಲ್ಲಿ ಮತಚಲಾಯಿಸುವ ಸಾಧ್ಯತೆ ಇತ್ತಾದರೂ ಕಡೆಗಳಿಗೆಯಲ್ಲಿ ಅಲ್ಲಿ ಹೆಸರು ನಮೂದಿಸದಿಲ್ಲ ಎಂಬ ಕಾರಣದಿಂದ ಉಳ್ಳಾಲ ನಗರಸಭೆಯಲ್ಲಿ ಮತ ಚಲಾಯಿಸಿದರು.

ಆಸ್ಪತ್ರೆಯಿಂದ ಬಂದು ಮತಹಾಕಿದರು
ಉಳ್ಳಾಲ ನಗರಸಭೆಯ ಅಧ್ಯಕ್ಷೆ ಗಿರಿಜಾ ಎಂ. ಬಾೈ ಅವರು ಅನಾರೋಗ್ಯಕ್ಕೆ ತುತ್ತಾಗಿ ಆಸ್ಪತ್ರೆಯಲ್ಲಿ ಬೆಡ್ ನಲ್ಲಿ ಮಲಗಿದ್ದರೂ ಮತಹಾಕುವ ಸಲುವಾಗಿ ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಆಧ್ಯಕ್ಷ ಈಶ್ವರ್ ಉಳ್ಳಾಲ ಹಾಗೂ ಸಂಗಡಿಗರ ನೆರವಿನಿಂದ ಸ್ವಲ್ಪ ಕಾಲ ವಿಶ್ರಾಂತಿ ತೆಗೆದುಕೊಂಡು ಪುರಸಭೆಗೆ ಬಂದು ಮತಚಲಾಯಿಸುವ ಮೂಲಕ ಪಕ್ಷನಿಷ್ಠೆ ಮೆರೆದರು.

Exit mobile version