Site icon Ullalavani

ರಸ್ತೆ ಕಾಂಕ್ರೀಟಿಕರಣಕ್ಕೆ ಸಚಿವರಿಂದ ಶಿಲಾನ್ಯಾಸ

ಉಳ್ಳಾಲ್ ನ್ಯೂಸ್ ನೆಟ್ ವರ್ಕ್

ಸೋಮೇಶ್ವರ: ಸರಸ್ವತಿ ಕಾಲನಿಯಿಂದ ಸೋಮೇಶ್ವರದವರೆಗೆ ಶಾಸಕರ ವಿಶೇಷ ಅನುದಾನದಲ್ಲಿ ಆಗಲಿರುವ ರಸ್ತೆಯ ಕಾಂಕ್ರೀಟಿಕರಣಕ್ಕೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ.ಖಾದರ್ ಶಿಲಾನ್ಯಾಸಗೈದರು.

ಬಳಿಕ ಮಾತನಾಡಿದ ಅವರು ಉಳ್ಳಾಲ ಭಾಗದ ಎಲ್ಲಾ ಒ¼ರಸ್ತೆಗಳಿಗೆ ಹೆಚ್ಚಿನ ಒಲವು ನೀಡಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಉಳ್ಳಾಲವನ್ನು ರಾಜ್ಯದಲ್ಲಿ ಅಭಿವೃದ್ಧಿ ಗ್ರಾಮವನ್ನಾಗಿ ರೂಪಿಸಲಾಗುವುದು ಎಂದರು.

ಈ ಸಂದರ್ಭ ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಈಶ್ವರ್ ಉಳ್ಳಾಲ್, ಸೋಮೇಶ್ವರ ಪಂ.ಸದಸ್ಯರಾದ ಶಾಲಿನಿ.ವಿ.ಶೆಟ್ಟಿ, ಮಾಧವ ಗಟ್ಟಿ, ನೋವಿತ.ವಿ.ಗಟ್ಟಿ, ಸದಾಶಿವ ಉಳ್ಳಾಲ, ದಿನೇಶ್ ಕುಂಪಲ ಮೊದಲಾದವರು ಉಪಸ್ಥಿತರಿದ್ದರು.

Exit mobile version