ಉಳ್ಳಾಲ್ ನ್ಯೂಸ್ ನೆಟ್ ವರ್ಕ್
ಮುಡಿಪು: ಕುರ್ನಾಡು ಗ್ರಾಮ ಪಂಚಾಯಿತಿ ಕಟ್ಟಡದಲ್ಲಿ ಬಂಟ್ವಾಳ ತಾಲೂಕಿನ ಮೆಸ್ಕಾಂ ಉಪಕೇಂದ್ರ ಕಚೇರಿಯನ್ನು ಕುರ್ನಾಡು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶೈಲಜಾ ಮಿತ್ತಕೋಡಿ ಅವರು ಉದ್ಘಾಟಿಸಿದರು.
ಉದ್ಘಾಟನಾ ಕಾರ್ಯಕ್ರಮದಲ್ಲಿ ಹಿರಿಯರಾದ ಟಿ.ಜಿ.ರಾಜಾರಾಂ ಭಟ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಮೆಸ್ಕಾಂ ಇಂಜಿನಿಯರ್ ಜಿ.ನಾರಾಯಣ ಭಟ್ ಕೊಡಕ್ಕಲ್, ಉಪಾಧ್ಯಕ್ಷರಾದ ನಿತಿನ್ ಕುಮಾರ್ ಗಟ್ಟಿ, ಬಿಜೆಪಿ ಮುಖಂಡರಾದ ಶಕಿಲಾ, ಗೋಪಾಲ ಬಂಗೇರ, ವಿಶ್ವನಾಥ ಪೂಜಾರಿ, ವಿಕಾಸ್ ಎಂ, ಶಿವಶಂಕರ್ ಭಟ್, ಕುರ್ನಾಡು ಬಿಜೆಪಿ ಶಕ್ತಿ ಕೇಂದ್ರದ ನವೀನ್ ಪಾದಲ್ಪಾಡಿ, ಆನಂದ, ಗೀತ, ಪುಷ್ಪ ಮುಂತಾದವರು ಉಪಸ್ಥಿತರಿದ್ದರು.