ಉಳ್ಳಾಲ್ ನ್ಯೂಸ್ ನೆಟ್ ವರ್ಕ್
ಕೈರಂಗಳ: ಕೈರಂಗಳದ ಪುಣ್ಯಕೋಟಿನಗರದ ಶಾರದಾ ಗಣಪತಿ ವಿದ್ಯಾಕೇಂದ್ರದಲ್ಲಿ ಶಾರದೋತ್ಸವದ ಅಂಗವಾಗಿ ಶ್ರೇಷ್ಠಭಾರತ (ವಿಜ್ಞಾನ, ಸಂಸ್ಕøತಿ, ಜೀವವೈವಿಧ್ಯ, ವೃಕ್ಷ ಸಂಪತ್ತು) ವಸ್ತು ಪ್ರದರ್ಶನವನ್ನು ಹಮ್ಮಿಕೊಳ್ಳಲಾಯಿತು.
ಬಂಟ್ವಾಳ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಶೇಷಶಯನ ಕಾರಿಂಜ, ಕಾರ್ಯಕ್ರಮವನ್ನು ಉದ್ಘಾಟಿಸಿ ವಸ್ತು ಪ್ರದರ್ಶನ ವೀಕ್ಷಣೆಗೆ ಚಾಲನೆ ನೀಡಿದರು. ಸಂಸ್ಥೆಯ ಮಾರ್ಗದರ್ಶಕ ಪಿ.ಶಂಕರ ಭಟ್, ಸಂಸ್ಥೆಯ ಸಂಚಾಲಕ ಟಿ. ಜಿ. ರಾಜಾರಾಮ ಭಟ್, ಆಡಳಿತ ಮಂಡಳಿಯ ಹಿರಿಯ ಸದಸ್ಯರಾದ ಬಾಲಕೃಷ್ಣ ರೈ ಮುಂಡಾಜೆ, ಸತ್ಯನಾರಾಯಣ ಎಸ್. ಎಡಂಬಳೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.




