ಉಳ್ಳಾಲ್ ನ್ಯೂಸ್ ನೆಟ್ ವರ್ಕ್
ಮುಡಿಪು: ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಪಜೀರು ಚರ್ಚ್ನಲ್ಲಿ ಕಳೆದ ಕೆಲವು ತಿಂಗಳ ಹಿಂದೆ ನಡೆದಿದ್ದ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಣಾಜೆ ಪೊಲೀಸರು ಪ್ರಕರಣದ ಪ್ರಮುಖ ಆರೋಪಿಯನ್ನು ಗುರುವಾರ ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಹರೇಕಳ ಗ್ರಾಮದ ರಾಜಗುಡ್ಡೆಯ ಸಾಹುಲ್ ಹಮೀದ್ ಎಂದು ಗುರುತಿಸಲಾಗಿದೆ.
ಕಳ್ಳತನದ ದೃಶ್ಯ ಸಿಸಿ ಕ್ಯಾ,ಮರಾದಲ್ಲಿ ಪತ್ತೆಯಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಣಾಜೆ ಪೊಲೀಸರು ಕಳ್ಳತನದ ಆರೋಪಿಗಳನ್ನು ಬಂಧಿಸಿ ಕದ್ದ ವಸ್ತುಗಳನ್ನು ವಶಪಡಿಸಿಕೊಂಡಿದ್ದರು. ಆದರೆ ಪ್ರಕರಣದ ಪ್ರಮುಖ ಆರೋಪಿ ಸಾಹುಲ್ ಹಮೀದ್ ತಲೆಮರೆಸಿಕೊಂಡಿದ್ದ. ಅಲ್ಲದೆ ಈತ ದೇರಳಕಟ್ಟೆ ಮೊಬೈಲ್ ಅಂಗಡಿ ಹಾಗೂ ಫ್ಯಾನ್ಸಿ ಅಂಗಡಿಗಳಿಗೂ ನುಗ್ಗಿ ಕಳ್ಳತನ ನಡೆಸಿದ್ದ. ಈತನ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದರು. ಈತನನ್ನು ಗುರುವಾರ ಕೊಣಾಜೆ ಪೊಲೀಸ್ ಇನ್ಸ್ಪೆಕ್ಟರ್ ಅಶೋಕ್, ಪಿಎಸ್ಐ ಸುಧಾಕರ್. ಸಿಬ್ಬಂದಿಗಳಾದ ಸಂತೋಷ್ ಸಿ.ಜೆ, ಶಿವಪ್ರಸಾದ್, ಚಂದ್ರಶೇಖರ್, ರಾಜೇಶ್ ಮುಂತಾದವರ ತಂಡ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ.