ಉಳ್ಳಾಲ್ ನ್ಯೂಸ್ ನೆಟ್ ವರ್ಕ್
ತೊಕ್ಕೊಟ್ಟು: ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವೇಳೆ ಕ್ರೇನ್ ಮೂಲಕ ಕಡಿದ ಮರವೊಂದು ವಿದ್ಯುತ್ ಕಂಬಕ್ಕೆ ಉರುಳಿದ ಪರಿಣಾಮ ಹೈಟೆನ್ಶನ್ ತಂತಿ ರಸ್ತೆಯಲ್ಲೇ ಬಿದ್ದು, ಸ್ಥಳೀಯರ ಸಮಯ ಪ್ರಜ್ಞೆಯಿಂದ ಸಂಭಾವ್ಯ ಅನಾಹುತ ತಪ್ಪಿದ ಘಟನೆ ತೊಕ್ಕೊಟ್ಟು ಸಮೀಪ ಬುಧವಾರ ಸಂಜೆ ವೇಳೆ ನಡೆದಿದೆ.
ತೊಕ್ಕೊಟ್ಟು ಫ್ಲೈಓವರ್ ಕಾಮಗಾರಿ ಮತ್ತು ಅಗಲೀಕರಣ ಕಾಮಗಾರಿ ತ್ವರಿತ ಗತಿಯಿಂದ ಸಾಗುತ್ತಿದ್ದು, ತೆರವು ಕಾರ್ಯಾಚರಣೆಗಳು ಭರದಿಂದ ನಡೆಯುತ್ತಿದೆ.
ಅರ್ಧ ಗಂಟೆ ತಡೆ:
ಘಟನೆಯಿಂದ ಅರ್ಧ ಗಂಟೆಯ ಕಾಲ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅಡ್ಡಿಯುಂಟಾಯಿತು. ಪೊಲೀಸರು , ಸಾರ್ವಜನಿಕರು, ಹೆದ್ದಾರಿ ಕಾರ್ಮಿಕರು, ಮೆಸ್ಕಾಂ ಸಿಬ್ಬಂದಿ ಸೇರಿ ತೆರವುಗೊಳಿಸಿ ಸುಗಮ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು.