ಉಳ್ಳಾಲ್ ನ್ಯೂಸ್ ನೆಟ್ ವರ್ಕ್
ತಲಪಾಡಿ : ಜಾನಪದ ಸಂಸ್ಕøತಿಗಳನ್ನು ಅರ್ಥ ಮಾಡಿಕೊಂಡು ಅದನ್ನು ಶಾಶ್ವತವಾಗಿ ನೆಲೆ ನಿಲ್ಲಿಸುವ ಪ್ರಯತ್ನ ಯುವಜನತೆಯಿಂದ ಆಗಬೇಕಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ.ಖಾದರ್ ಅಭಿಪ್ರಾಯಪಟ್ಟರು.
ಅವರು ತಲಪಾಡಿ ಪಂಜಾಳದಲ್ಲಿ ಭಾನುವಾರ ಜರಗಿದ ಹೊನಲು ಬೆಳಕಿನ ಸೂರ್ಯ ಚಂದ್ರ ಜೋಡುಕರೆ ಕಂಬಳಕ್ಕೆ ಚಾಲನೆ ನೀಡಿ ಮಾತನಾಡಿದರು.
ಈ ಸಂದರ್ಭ ಕಂಬಳದ ಸಾಂಪ್ರದಾಯಿಕ ಉದ್ಘಾಟನೆಯನ್ನು ತಲಪಾಡಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಹಿರಿಯ ಅರ್ಚಕ ವೇದಮೂರ್ತಿ ಬಾಲಕೃಷ್ಣ ಭಟ್ ನೆರವೇರಿಸಿದರು. ಕಂಬಳ ಸಮಿತಿ ಗೌರವಾಧ್ಯಕ್ಷ ಸಚ್ಚಿದಾನಂದ ಭಂಡಾರಿ, ಕಾರ್ಯಾಧ್ಯಕ್ಷ ಟಿ.ರವೀಂದ್ರನಾಥ ಶೆಟ್ಟಿ ದೊಡ್ಡಮನೆ, ಅಧ್ಯಕ್ಷ ಕೆ.ರವೀಂದ್ರ ಶೆಟ್ಟಿ ಹರೇಕಳ ಉಳಿದೊಟ್ಟು, ಗೋಪಾಲಕೃಷ್ಣ ಮೇಲಾಂಟ ಬಾವ ತಲಪಾಡಿ, ಗಿರೀಶ್ ಆಳ್ವ ಮೋರ್ಲ, ಗಣೇಶ್ ಶೆಟ್ಟಿ ರಕ್ಷಾ ತಲಪಾಡಿ, ತಲಪಾಡಿ ಗ್ರಾ.ಪಂ ಅಧ್ಯಕ್ಷ ಸುರೇಶ್ ಆಳ್ವ ಸಾಂತ್ಯಗುತ್ತು, ಉಪಾಧ್ಯಕ್ಷೆ ಜಯಲಕ್ಷ್ಮೀ, ಸದಸ್ಯೆ ಅಕ್ಷತಾ, ಗಡಿ ಪ್ರಧಾನ ನಾರಾಯಣ ಶೆಟ್ಟಿ ಕಿನ್ಯಗುತ್ತು, ಬೆಂಗಳೂರು ಖಾಸಗಿ ಶಲೆಗಳ ಆಡಳಿತ ಮಂಡಳಿಗಳ ಒಕ್ಕೂಟದ ಕಾರ್ಯದರ್ಶಿ ಸೂಡಿ ಸುರೇಶ್, ಪಂ. ಸದಸ್ಯೆ ಜಯಂತಿ ಪಕ್ಕಳ, ಶ್ರೀಲತಾ, ಪ್ರಗತಿಪರ ಕೃಷಿಕ ಜಯಸೂರ್ಯ ರೈ ಮರೋಡಿ, ಜಿ.ಪಂ ಮಾಜಿ ಸದಸ್ಯ ವಿನಯ ನಾಯ್ಕ್ ತಲಪಾಡಿ, ಸುಬ್ಬಯ್ಯ ಮಾರ್ಲ ಉಳಿಪಾಡಿಗುತ್ತು, ಪ್ರದೀಪ್ ಕಿಲ್ಲೆ ಮೇಗಿನ ಪಂಜಾಳ ಗುತ್ತು, ವೈಭವ್ ಶೆಟ್ಟಿ ನಾರ್ಲ, ಉದಯಕುಮಾರ್ ಶೆಟ್ಟಿ(ಸಾನು) ನಾರ್ಲ, ಪ್ರಶಾಂತ್ ಚೌಟ ಪಂಜಿಮುಂಡೇಲು, ವಿನಯಕುಮಾರ್ ಶೆಟ್ಟಿ ನಾರ್ಲ, ಸಿದ್ಧೀಕ್ ತಲಪಾಡಿ ಉಪಸ್ಥಿತರಿದ್ದರು.
ನ್ಯಾಯವಾದಿ ಬಿ.ರವೀಂದ್ರನಾಥ ರೈ ಸ್ವಾಗತಿಸಿದರು.ಮೋಹನ್ ದಾಸ್ ಶೆಟ್ಟಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಆಶಿಕ್ ಮಾಡೂರು ಕಾರ್ಯಕ್ರಮ ನಿರೂಪಿಸಿದರು.