Site icon Ullalavani

ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ

ಉಳ್ಳಾಲ್ ನ್ಯೂಸ್ ನೆಟ್ ವರ್ಕ್

ಕುತ್ತಾರು: ಯುವಜನತೆ ಶಕ್ತಿಯನ್ನು ಧನಾತ್ಮಕ ಚಿಂತನೆಗಳಿಗೆ ಉಪಯೋಗಿಸುವ ಮೂಲಕ ತಮ್ಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬೇಕು ಎಂದು ಕುತ್ತಾರು ಬಾಲಸಂರಕ್ಷಣಾ ಕೇಂದ್ರದ ಸಂಚಾಲಕ ಡಾ.ಪಿ.ಅನಂತಕೃಷ್ಣ ಭಟ್ ಅಭಿಪ್ರಾಯಪಟ್ಟರು.

ಅವರು ಕುತ್ತಾರು ಬಾಲಸಂರಕ್ಷಣಾ ಕೇಂದ್ರದಲ್ಲಿ ಪಜೀರು ಬೀಜಗುರಿಯ ಗೋವನಿತಾಶ್ರಯ ಟ್ರಸ್ಟಿನ 16 ನೇ ವರ್ಷಾಚರಣೆ ಜ್ಯೋತಿಷ್ಯಜ್ಞರ-ವೈದಿಕರ ಸಮಾವೇಶ ಹಾಗೂ ಚತುರ್ಥ ಗೋಶಾಲಾ ಶಿಲಾನ್ಯಾಸ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಮಾತನಾಡಿದರು.
ಹಿಂದು ಸಂಸ್ಕøತಿ ಉಳಿವಿಗಾಗಿ ಯುವಜನತೆ ಧನಾತ್ಮಕ ಚಿಂತನೆಗಳನ್ನು ಮೈಗೂಡಿಸಿಕೊಂಡು ಮುಂದೆ ಸಾಗಬೇಕಿದೆ. ಈ ಮೂಲಕ ಹಿಂದು ಸಮಾಜದ ಆಚಾರ ವಿಚಾರ ಹಾಗೂ ಸೊತ್ತುಗಳನ್ನು ಭದ್ರವಾಗಿಸಿಕೊಳ್ಳಬಹುದು ಎಂದರು.

ವಿಶ್ವ ಹಿಂದು ಪರಿಷತ್ ಪ್ರಾಯೋಜಿತ ಸಂಸ್ಥೆ ಮಂಗಳೂರು ಗೋವನಿತಾಶ್ರಯ ಟ್ರಸ್ಟ್‍ನ ಪಜೀರು ಬೀಜಗುರಿ ಗೋಶಾಲಾ ವಠಾರದಲ್ಲಿ ಮಾ.5,6 ರಂದು 16 ನೇ ನಡೆಯಲಿರುವ ವರ್ಷಾಚರಣೆಯ ಮಾಹಿತಿ ನೀಡಿದರು.

. ನಿವೃತ್ತ ಸೇನಾನಿ ಅಪ್ಪು ಶೆಟ್ಟಿ, ನಿವೃತ್ತ ಸೇನಾನಿ ಪ್ರವೀಣ್ ಶೆಟ್ಟಿ ಪಿಲಾರ್, ವಿಶ್ವ ಹಿಂದುಪರಿಷತ್ ಉಳ್ಳಾಲ ಪ್ರಖಂಡದ ಅಧ್ಯಕ್ಷ ಹರಿದಾಸ್ ಮಾಡೂರು ಮುಖ್ಯ ಅತಿಥಿಗಳಾಗಿದ್ದರು.

ವಿ.ಹಿಂ.ಪ ಪ್ರಖಂಡ ಕಾರ್ಯದರ್ಶಿ ನಾರಾಯಣ ಕುಂಪಲ ಸ್ವಾಗತಿಸಿದರು. ವಿ.ಹಿಂ.ಪ ಜಿಲ್ಲಾ ಕಾರ್ಯದರ್ಶಿ ಗೋಪಾಲ್ ಕುತ್ತಾರ್ ವಂದಿಸಿದರು.

Exit mobile version