ಉಳ್ಳಾಲ್ ನ್ಯೂಸ್ ನೆಟ್ ವರ್ಕ್
ಉಳ್ಳಾಲ : ಎಸ್ಸೆಸ್ಸೆಫ್ ಉಳ್ಳಾಲ ಡಿವಿಷನ್ ವತಿಯಿಂದ ರಾಜ್ಯವ್ಯಾಪ್ತಿ ನಡೆಯುತ್ತಿರುವ ಭಯೋತ್ಪಾದನೆ ವಿರುದ್ಧ ಜಿಹಾದ್ ಜನಾಂದೋಲನದ ಪ್ರಯುಕ್ತ ಬೈಕ್ ರ್ಯಾಲಿಯು ಕೇಂದ್ರ ಮುಶಾವರ ಸದಸ್ಯರಾದ ಶೈಖುನಾ ಅಬ್ಬಾಸ್ ಉಸ್ತಾದ್ ಮಂಜನಾಡಿರವರ ನೇತೃತ್ವದಲ್ಲಿ ಅಲ್-ಮದೀನಾ ಮಂಜನಾಡಿಯಿಂದ ದೇರಳಕಟ್ಟೆ ಜಂಕ್ಷನ್ ತನಕ ನಡೆಯಿತು.
ಕಾರ್ಯಕ್ರಮದಲ್ಲಿ ಅಶ್ರಫ್ ಸಖಾಫಿ ಕಿನ್ಯ, ಜಿಲ್ಲಾ ಕೋಶಾಧಿಕಾರಿ ಅಲ್ತಾಫ್ ಕುಂಪಲ, ಡಿವಿಷನ್ ಕೋಶಾಧಿಕಾರಿ ಫಾರೂಕ್ ಸಖಾಫಿ ಮದನಿನಗರ, ಮುನೀರ್ ಸಖಾಫಿ ಉಳ್ಳಾಲ, ಇಬ್ರಾಹಿಂ ಅಹ್ಸನಿ ಮಂಜನಾಡಿ, ಸೈಯದ್ ಖುಬೈಬ್ ತಂಙಳ್ ಉಳ್ಳಾಲ ಉಪಸ್ಥಿತರಿದ್ದರು.
ಡಿವಿಷನ್ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ಟರ್ ಮೊಂಟೆಪದವು ಸ್ವಾಗತಿಸಿ, ವಂದಿಸಿದರು.