ಉಳ್ಳಾಲ ನ್ಯೂಸ್ ನೆಟ್ ವರ್ಕ್
ದೇರಳಕಟ್ಟೆ: ವಿದ್ಯಾರ್ಥಿ ಜೀವನದಲ್ಲಿ ಕಾಲೇಜಿನ ಕ್ಲಾಸ್ ರೂಂ ಮತ್ತು ಪುಸ್ತಕದಲ್ಲಿ ಸಿಗುವ ಜ್ಞಾನದೊಂದಿಗೆ ಕ್ರೀಡಾಂಗಣದಲ್ಲಿ ಸಿಗುವ ಜ್ಞಾನವು ಸೇರಿದರೆ ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಪೂರಕ ಎಂದು ನಿಟ್ಟೆ ವಿಶ್ವವಿದ್ಯಾನಿಲಯದ ಕುಲಾ„ಪತಿ ಪ್ರೊ. ಡಾ| ಶಾಂತಾರಾಮ ಶೆಟ್ಟಿ ಅಬಿಪ್ರಾಯಪಟ್ಟರು.
ಅವರು ಕೆ.ಎಸ್.ಹೆಗ್ಡೆ ಮೆಡಿಕಲ್ ಅಕಾಡೆಮಿಯ ಆಡಿಟೋರಿಯಂನಲ್ಲಿ ದಕ್ಷಿಣ ಭಾರತ ಮಟ್ಟದ ದಂತ ಮತ್ತು ವೈದ್ಯಕೀಯ ವಿಜ್ಞಾನ ಕಾಲೇಜುಗಳ ಅಂತರ್ ಕಾಲೇಜು ಕ್ರೀಡಾಕೂಟ ` 6ನೇ ನಿಟ್ಟೆ ಎಕೋಲೇಟ್ಸ್ 2016′ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಿಟ್ಟೆ ವಿಶ್ವವಿದ್ಯಾನಿಲಯದ ಉಪ ಕುಲಪತಿ ಡಾ| ಎಸ್. ರಮಾನಂದ ಶೆಟ್ಟಿ ವಹಿಸಿದ್ದರು.
ಕಾರ್ಯಕ್ರಮದಲ್ಲಿ ನಿಟ್ಟೆ ವಿಶ್ವವಿದ್ಯಾನಿಲಯದ ಕುಲಸಚಿವ ಡಾ| ಎಂ.ಎಸ್. ಮೂಡಿತ್ತಾಯ, ಎ.ಬಿ.ಶೆಟ್ಟಿ ಮೆಮೋರಿಯಲ್ ದಂತ ವಿಜ್ಞಾನ ಮಹಾವಿದ್ಯಾಲಯದ ವೈಸ್ ಡೀನ್ ಡಾ| ಮಿತ್ರಾ ಎನ್. ಹೆಗ್ಡೆ, ನಿಟ್ಟೆ ಇನ್ಸ್ಟಿಟ್ಯೂಟ್ ಆಫ್ ಫಿಸಿಯೋಥೆರಪಿ ಕಾಲೇಜಿನ ಪ್ರಂಶುಪಾಲ ಡಾ| ಧನೇಶ್ ಕುಮಾರ್, ಕ್ಷೇಮದ ಕುಲಸಚಿವ ಡಾ| ಜಯಪ್ರಕಾಶ್ ಶೆಟ್ಟಿ, ದೈಹಿಕ ಶಿಕ್ಷಣ ನಿರ್ದೇಶಕರಾದ ಜಯಶೀಲ ಶೆಟ್ಟಿ , ರಾಜಾರಾಮ ಶೆಟ್ಟಿ , ಕರುಣಾಕರ ಶೆಟ್ಟಿ , ಕ್ಷೇಮ ವಿದ್ಯಾರ್ಥಿ ನಾಯಕ ಸಯ್ಯೂಜ್ ಸುಕ್ರೇತನ್, ಕ್ರೀಡಾ ಕಾರ್ಯದರ್ಶಿ ಇತಿಹಾಸ್ ಗೌಡ ಉಪಸ್ಥಿತರಿದ್ದರು.
ಮೂರು ದಿನಗಳ ಕಾಲ ನಡೆಯಲಿರುವ ಕ್ರೀಡಾಕೂಟದಲ್ಲಿ ದಕ್ಷಿಣ ಬಾರತದ 30 ಕಾಲೇಜುಗಳು ಭಾಗವಹಿಸಿದ್ದವು.
ಕೆ.ಎಸ್.ಮೆಡಿಕಲ್ ಅಕಾಡೆಮಿ ಡೀನ್ ಡಾ| ಸತೀಶ್ ಭಂಡಾರಿ ಸ್ವಾಗತಿಸಿದರು. ನಿಟ್ಟೆ ವಿಶ್ವವಿದ್ಯಾನಿಯದ ಕ್ರೀಡಾ ಸಲಹೆಗಾರರದ ಡಾ| ಮುರಳೀಕೃಷ್ಣ ವಿ. ವಂದಿಸಿದರು. ವಿದ್ಯಾರ್ಥಿ ಅಶ್ವತ್ ಚಂದ್ರಶೇಖರ್ ಕಾರ್ಯಕ್ರಮ ನಿರ್ವಹಿಸಿದರು.