ಕುಂಪಲ: ಮಂಗಳೂರಿನಿಂದ ಕೇರಳ ಕಡೆಗೆ ಸರಕು ಹೇರಿಕೊಂಡು ಸಾಗುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ರಾಷ್ಟ್ರೀಯ ಹೆದ್ದಾರಿ 66ರ ಕುಂಪಲ ಬೈಪಾಸ್ ಸಮೀಪ ಡಿವೈಡರಿಗೆ ಢಿಕ್ಕಿ ಹೊಡೆದು ಚಕ್ರಗಳು ಕಳಚಿ ಉರುಳಿಬಿದ್ದಿರುವ ಘಟನೆ ಮಂಗಳವಾರ ನಸುಕಿನ ಜಾವ ನಡೆದಿದೆ.
ಘಟನೆಯಲ್ಲಿ ಲಾರಿ ಡ್ರೈವರ್ ಹಾಗೂ ಕ್ಲೀನರ್ ಪವಾಡಸದೃಶವಾಗಿ ಪಾರಾಗಿದ್ದಾರೆ.