Site icon Ullalavani

ತೊಕ್ಕೊಟ್ಟಿನಲ್ಲಿ ಪಿಲಿಗೊಬ್ಬು

ಉಳ್ಳಾಲ್ ನ್ಯೂಸ್ ನೆಟ್ ವರ್ಕ್

ಚಿತ್ರ: ಯಶು ಪಕ್ಕಳ

ತೊಕ್ಕೊಟ್ಟು: ತುಳುನಾಡಿನ ಸಂಸ್ಕøತಿಯನ್ನು ಉಳಿಸಿ ಬೆಳೆಸುವ ಕಾರ್ಯ ಯುವಸಮುದಾಯದಿಂದ ಆಗಬೇಕಿದೆ. ಈ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮಗಳನು ಆಯೋಜಿಸುವುದರಿಂದ ತುಳು ಜನರ ಆಚಾರ ವಿಚಾರಗಳನ್ನು ದೇಶದಾದ್ಯಂತ ಪರಿಚಯಿಸಲು ಸಹಕಾರಿ ಎಂದು ರಾಜ್ಯ ಸರಕಾರದ ಮುಖ್ಯ ಸಚೇತಕ ಹಾಗೂ ವಿಧಾನಪರಿಷತ್ ಸದಸ್ಯ ಐವನ್ ಡಿಸೋಜಾ ಅಭಿಪ್ರಾಯಪಟ್ಟರು.


ಅವರು ತೊಕ್ಕೊಟ್ಟು ಬಸ್ ನಿಲ್ದಾಣದ ಭವ್ಯ ವೇದಿಕೆಯಲ್ಲಿ ಬುಧವಾರ ಟೀಮ್ ಜಿಮ್ ಆಯೋಜಿಸಿದ ಪಿಲಿಗೊಬ್ಬು 2016 ಹುಲಿವೇಷಧಾರಿಗಳ ಪಂದ್ಯಾಟವನ್ನು ಉದ್ಘಾಟಿಸಿ ಮಾತನಾಡಿದರು.

ತುಳುನಾಡಿನ ಸಂಸ್ಕøತಿಯನ್ನು ವೈಶಿಷ್ಟ್ಯತೆಯನ್ನು ಹೊಂದಿದೆ. ಆದರೆ ಆಧುನಿಕ ಯುಗದಲ್ಲಿ ಅದನ್ನು ಆಚರಿಸುವ , ಆರಾಧಿಸುವ ಕಾರ್ಯ ಯುವಸಮುದಾಯದಿಂದ ಸರಿಯಾಗಿ ಆಗುತ್ತಿಲ್ಲ. ಈ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮಗಳಿಗೆ ಪ್ರೋತ್ಸಾಹ ಅಗತ್ಯ ಎಂದರು.

ಮಾಜಿ ಸಚಿವ ಕೃಷ್ಣ.ಜೆ.ಪಾಲೇಮಾರ್ ಮಾತನಾಡಿ ತುಳುನಾಡಿನ ಸಂಸ್ಕøತಿಯನ್ನು ಪರಿಚಯಿಸಿ, ಅದರಲ್ಲಿ ಸ್ಪರ್ಧೆಯನ್ನು ಆಯೋಜಿಸುವ ಮೂಲಕ ಸಂಸ್ಕøತಿಯನ್ನು ಉಳಿಸಲು ವಿಶಿಷ್ಟ ರೀತಿಯ ಪ್ರಯತ್ನ ನಡೆಸುವ ಸಂಘಟಕರ ಕಾರ್ಯ ಶ್ಲಾಘನೀಯ ಎಂದರು.

ಶ್ರೀ ದೇವಿ ಎಜ್ಯುಕೇಷನ್ ಟ್ರಸ್ಟಿನ ಸ್ಥಾಪಕಾಧ್ಯಕ್ಷ ಸದಾನಂದ ಶೆಟ್ಟಿ, ಮಂಗಳೂರು ವಿಜಯಾ ಬ್ಯಾಂಕಿನ ಡಿಜಿಎಂ ಕೆ.ಎಸ್.ಹೆಗ್ಡೆ, ಬಿಜೆಪಿ ಮುಖಂಡ ರಾಜಗೋಪಾಲ ರೈ, ದೇವಿಚರಣ್ ಶೆಟ್ಟಿ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಚಂದ್ರಹಾಸ್ ಉಳ್ಳಾಲ್, ಬಿಲ್ಲವ ವೇದಿಕೆ ಉಳ್ಳಾಲ ಪ್ರಖಂಡದ ಕೆ.ಟಿ.ಸುವರ್ಣ, ಕಂಕನಾಡಿ ಶ್ರೀ ಬ್ರಹ್ಮಬೈದರ್ಕಳ ಗರಡಿಯ ಮೊಕ್ತೇಸರ ಕೇಶವ ಅಂಗಡಿಮಾರ್, ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ರವೀಂದ್ರ ಶೆಟ್ಟಿ ಉಳಿದೊಟ್ಟು, ಮಿ| ವಲ್ಡ್ ್ ವಿಜೇತ ರೇಮಂಡ್ ಡಿಸೋಜಾ, ಉಳ್ಳಾಲ ದರ್ಗಾ ಕಾರ್ಯದರ್ಶಿ ಮಹಮ್ಮದ್ ತ್ವಾಹ, ಶ್ರೀ ಜೈ ವೀರಮಾರುತಿ ವ್ಯಾಯಾಮ ಶಾಲೆಯ ಮಾಜಿ ಅಧ್ಯಕ್ಷ ದೇವದಾಸ್ ಶ್ರೀಯಾನ್ ಮುಖ್ಯ ಅತಿಥಿಗಳಾಗಿದ್ದರು.

ದಿನೇಶ್ ರೈ ಕಳ್ಳಿಗೆ ಸ್ವಾಗತಿಸಿದರು. ಮಾತೇಷ್ ಭಂಡಾರಿ ಕಾರ್ಯಕ್ರಮ ನಿರೂಪಿಸಿದರು. ಶಿವಪ್ರಸಾದ್ ಶೆಟ್ಟಿ ವಂದಿಸಿದರು.

Exit mobile version