ಉಳ್ಳಾಲ್ ನ್ಯೂಸ್ ನೆಟ್ ವರ್ಕ್
ಕೊಲ್ಯ: ಶ್ರೀ ಕಟೀಲು ದುರ್ಗಾಪರಮೇಶ್ವರಿ ಅಮ್ಮನ ಭಕ್ತರು ಕೊಲ್ಯ ಶ್ರೀ ಸೌಭಾಗ್ಯ ಸಭಾಭವನದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಶ್ರೀ ಕಟೀಲು ದೇವರ ಮೇಲೆ ಅವಹೇಳನ ಮಾಡಿರುವ ಬಗ್ಗೆ ಧಾರ್ಮಿಕ ಜಾಗೃತಿ ಮತ್ತು ಖಂಡನಾ ಸಭೆಯಲ್ಲಿ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅನುವಂಶಿಕ ಅರ್ಚಕ ಅನಂತಪದ್ಮನಾಭ ಅಸ್ರಣ್ಣ ಬಾವುಕರಾಗಿ ಕಣ್ಣೀರಿಟ್ಟ ಘmನೆ ನಡೆಯಿತು.
ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯ್ಯಕ್ಷ ಸತೀಶ್ ಕುಂಪಲ ಅಧ್ಯಕ್ಷತೆ ವಹಿಸಿದ್ದರು.
ಉಳ್ಳಾಲ ಬಿಲ್ಲವ ವೇದಿಕೆ ಅಧ್ಯಕ್ಷ ಕೆ.ಟಿ.ಸುವರ್ಣ, ಕೊಲ್ಯ ನಾಗಬ್ರಹ್ಮಸ್ಥಾನದ ಧರ್ಮದರ್ಶಿ ಭಾಸ್ಕರ್ ಐತಾಳ್, ಕಾಪಿಕಾಡು ಉಮಾಮಹೇಶ್ವರಿ ದೇವಸ್ಥಾನದ ಅಧ್ಯಕ್ಷ ಎ.ಜೆ.ಶೇಖರ್, ಲಕ್ಷ್ಮೀ ನರಸಿಂಹ ದೇವಸ್ಥಾನದ ಮೊಕ್ತೇಸರ ಶ್ರೀಕರ ಕಿಣಿ, ಕೊಲ್ಯ ಶಾರದ ಉತ್ಸವ ಸಮಿತಿಯ ಅಧ್ಯಕ್ಷ ಸೀತಾರಾಮ ಬಂಗೇರ, ಕೊಲ್ಯ ನಾಗಬ್ರಹ್ಮ ಸ್ಥಾನದ ಅಧ್ಯಕ್ಷ ಸುಶಾಂತ್ ಭಂಡಾರಿ, ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಅಧ್ಯಕ್ಷ ಅನಿಲ್ ದಾಸ್, ಜೈವೀರ ಮಾರುತಿ ವ್ಯಾಯಾಮ ಶಾಲೆಯ ವಿಠಲ ಶ್ರೀಯಾನ್, ಆಲಿಚಾಮುಂಡೇಶ್ವರಿ ದೈವಸ್ಥಾನದ ಅಧ್ಯಕ್ಷ ಮಾಧವ ಬಗಂಬಿಲ, ಉಳಿಯ ದೇವಸ್ಥಾನದ ಆಡಳಿತ ಮೊಕ್ತೇಸರ ಯು.ಎಸ್.ಪ್ರಕಾಶ್ ಮೊಕ್ತೇಸರರು, ಕುತ್ತಾರು ಶ್ರೀರಾಜರಾಜೇಶ್ವರಿ ಸಿದ್ಧಿವಿನಾಯಕ ದೇವಸ್ಥಾನದ ಮಾಜಿ ಅಧ್ಯಕ್ಷ ಪವಿತ್ರ ಕುಮಾರ್ ಗಟ್ಟಿ, ಉಳ್ಳಾಲ ಮೊಗವೀರ ಸಮಾಜದ ಅಧ್ಯಕ್ಷ ಭರತ್ ಉಳ್ಳಾಲ್, ಉಳ್ಳಾಲ ವಲಯ ಬಮಟರ ಸಂಘದ ಮಾಜಿ ಅಧ್ಯಕ್ಷ ರವೀಂದ್ರ ಶೆಟ್ಟಿ ಉಳಿದೊಟ್ಟು, ಹರೇಕಳ, ಹರೀಶ್ ಕುತ್ತಾರ್, ಕುಂಪಲ ಬಾಲಕೃಷ್ಣ ಮಂದಿರದ ಎಸ್.ಎಸ್. ನಾೈಕ್, ದಯಾನಂದ ತೊಕ್ಕೊಟ್ಟು, ರಮೇಶ್ ಕೊಂಡಾಣ, ಗಣೇಶ್ ಕಾಪಿಕಾಡು, ಹರೀಶ್ ಅಂಬ್ಲಮೊಗರು, ಪುರುಷೋತ್ತಮ ಕಲ್ಲಾಪು, ಆನಂದ ಶೆಟ್ಟಿ, ಹಿತೇಶ್ ಉಳ್ಳಾಲಬೈಲ್, ಪ್ರೇಮನಾಥ್ ಪುತ್ರನ್, ದೇರಳಕಟ್ಟೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಅಧ್ಯಕ್ಷ ಸೀತಾರಾಮ ಶೆಟ್ಟಿ ದಡಸ್ ಉಪಸ್ಥಿತರಿದ್ದರು.
ಪ್ರವೀಣ್ ಬಸ್ತಿ ಕಾರ್ಯಕ್ರಮ ನಿರೂಪಿಸಿದರು. ಜೀವನ್ ತೊಕ್ಕೊಟ್ಟು ಸ್ವಾಗತಿಸಿದರು. ಕುಮುದಾ ಅಡಪ್ಪ ಕುಂಪಲ ಖಂಡನಾ ನಿರ್ಣಯ ಮಂಡಿಸಿದರು.