ಟೋಂಕ್, ಜು. 21 : ರಾಜಸ್ಥಾನದ ಟೋಂಕ್ ಜಿಲ್ಲೆಯ ತೋಡರೈಸಿಂಗ್ ಪಟ್ಟಣದಲ್ಲಿ ಜನನಿಬಿಡ ಮಾರುಕಟ್ಟೆ ಪ್ರದೇಶಕ್ಕೆ ನುಗ್ಗಿದ ಚಿರತೆಯೊಂದು ಮೂವರ ಮೇಲೆ ದಾಳಿ ನಡೆಸಿ ಆತಂಕ ಸೃಷ್ಟಿಸಿದ ಘಟನೆ ಸೋಮವಾರ ನಡೆದಿದೆ. ಬಳಿಕ ಚಿರತೆ ಮದ್ಯದಂಗಡಿಯೊಳಗೆ ಆಶ್ರಯ ಪಡೆದಿದ್ದು, ಸುಮಾರು ಐದು ಗಂಟೆಗಳ ಸುದೀರ್ಘ ಕಾರ್ಯಾಚರಣೆಯ ನಂತರ ಅರಣ್ಯ ಇಲಾಖೆ ಅದನ್ನು ಯಶಸ್ವಿಯಾಗಿ ಸೆರೆಹಿಡಿದಿದೆ. ಸೋಮವಾರ ಬೆಳಗ್ಗೆ ಸುಮಾರು 8.45ರ ವೇಳೆಗೆ ತೋಡರೈಸಿಂಗ್ ಪಟ್ಟಣದ ಸಮೀಪದ ಪೊದೆಗಳಲ್ಲಿ ಚಿರತೆ ಕಾಣಿಸಿಕೊಂಡಿತ್ತು. ಮಾಹಿತಿ ಪಡೆದ ಅರಣ್ಯ ಇಲಾಖೆಯ ಸ್ವಯಂಸೇವಕ ರಾಕೇಶ್ ಮಾಲಿ ಸ್ಥಳಕ್ಕೆ ತೆರಳಿದಾಗ, ಚಿರತೆ ಅವರ ಮೇಲೆ ಏಕಾಏಕಿ ದಾಳಿ ನಡೆಸಿ ಕಾಲಿಗೆ ಗಾಯಗೊಳಿಸಿತು.ಬಳಿಕ ಚಿರತೆ ಅಲ್ಲಿಂದ ಸುಮಾರು 400 ಮೀಟರ್ ದೂರದಲ್ಲಿರುವ ಜನನಿಬಿಡ ಮಾರುಕಟ್ಟೆ ಪ್ರದೇಶಕ್ಕೆ ನುಗ್ಗಿತು. ಅಲ್ಲಿನ ಮದ್ಯದಂಗಡಿ ಎದುರು ಕುಳಿತಿದ್ದ ಫತೇಹ್ ಲಾಲ್ ಕೋಲಿ ಅವರ ಮೇಲೂ ದಾಳಿ ನಡೆಸಿದ ಚಿರತೆ, ನಂತರ ನೇರವಾಗಿ ಅಂಗಡಿಯೊಳಗೆ ನುಗ್ಗಿತು. ಅಂಗಡಿಯೊಳಗಿದ್ದ 25 ವರ್ಷದ ಮಾರಾಟಗಾರ ಸಂಜಯ್ ಗುರ್ಜರ್ ಅವರ ಮೂಗು…
Author: UllalaVani
ಮಂಜೇಶ್ವರ, ಜು. 21 : ಮಂಜೇಶ್ವರ ಸಮೀಪದ ಉಪ್ಪಳದ ಜೋಡುಕಲ್ಲು-ಮಡಂದೂರು ದೇರಂಬಳದಲ್ಲಿ ಅಡಿಕೆ ಮರದಿಂದ ನಿರ್ಮಿಸಲಾಗಿದ್ದ ತಾತ್ಕಾಲಿಕ ಸೇತುವೆ ದಾಟುತ್ತಿದ್ದ ವೇಳೆ ಕಾಲೇಜು ವಿದ್ಯಾರ್ಥಿನಿಯೊಬ್ಬರು ನದಿಗೆ ಬಿದ್ದು ಗಾಯಗೊಂಡ ಘಟನೆ ನಡೆದಿದೆ. ಸ್ಥಳದಲ್ಲಿದ್ದ ಯುವಕನ ಸಮಯೋಚಿತ ಸಾಹಸದಿಂದ ವಿದ್ಯಾರ್ಥಿನಿಯ ಜೀವ ಉಳಿದಿದೆ. ಗಾಯಗೊಂಡ ವಿದ್ಯಾರ್ಥಿನಿಯನ್ನು ನಿಶ್ಮಿತಾ ಎಂದು ಗುರುತಿಸಲಾಗಿದೆ. ಮಾಹಿತಿಯ ಪ್ರಕಾರ, ನಿಶ್ಮಿತಾ ಅವರು ತಮ್ಮ ಸಹೋದರಿ ಸುಷ್ಮಿತಾ ಅವರೊಂದಿಗೆ ಬಸ್ನಿಂದ ಇಳಿದು ಮೀಂಜ ಕಡೆಗೆ ನಡೆದುಕೊಂಡು ಹೋಗುತ್ತಿದ್ದರು. ದಾರಿಯಲ್ಲಿದ್ದ ಅಡಿಕೆ ಮರದ ತಾತ್ಕಾಲಿಕ ಸೇತುವೆಯನ್ನು ಇಬ್ಬರೂ ಕೈಹಿಡಿದು ಜಾಗರೂಕತೆಯಿಂದ ದಾಟುತ್ತಿದ್ದ ವೇಳೆ ನಿಶ್ಮಿತಾ ಅವರು ಆಯತಪ್ಪಿ ಕೆಳಗೆ ಹರಿಯುತ್ತಿದ್ದ ನದಿಗೆ ಬಿದ್ದಿದ್ದಾರೆ. ಈ ವೇಳೆ ಸ್ಥಳದಲ್ಲಿದ್ದ ದೇರಂಬಳದ ಉದಯ ಕುಮಾರ್ ಶೆಟ್ಟಿ ಯಾವುದೇ ಕ್ಷಣವೂ ವ್ಯರ್ಥ ಮಾಡದೆ ನದಿಗೆ ಧುಮುಕಿದರು. ಅಪಾಯವನ್ನು ಲೆಕ್ಕಿಸದೆ ಹರಿಯುತ್ತಿದ್ದ ನೀರಿನ ನಡುವೆ ಸಾಹಸಮಯವಾಗಿ ಕಾರ್ಯಾಚರಣೆ ನಡೆಸಿ ನಿಶ್ಮಿತಾ ಅವರನ್ನು ಸುರಕ್ಷಿತವಾಗಿ ದಡಕ್ಕೆ ಕರೆತಂದು ಜೀವ ಉಳಿಸಿದರು.ಘಟನೆಯಲ್ಲಿ ವಿದ್ಯಾರ್ಥಿನಿಗೆ ಗಾಯಗಳಾಗಿದ್ದು, ಸ್ಥಳೀಯರ ಸಹಾಯದಿಂದ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ…
ಕಾಸರಗೋಡು, ಜು. 21 : ಉಕ್ರೇನ್ನ ದಕ್ಷಿಣ ಬಂದರು ನಗರ ಒಡೆಸಾ ಕರಾವಳಿಯಲ್ಲಿ ಸರಕು ಹಡಗಿನ ಮೇಲೆ ರಷ್ಯಾ ನಡೆಸಿದ ಭೀಕರ ಕ್ಷಿಪಣಿ ದಾಳಿಯಲ್ಲಿ ಕಾಸರಗೋಡಿನ ನಾವಿಕ ಯುವಕ ಸೇರಿದಂತೆ 10 ನಾವಿಕರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಮಂಗಳೂರು, ಜು.21: ಗಗನದೆತ್ತರಕ್ಕೆ ಹಾರುವ ಗಾಳಿಪಟದಂತೆ ರೋಟರಿಯ ಸೇವೆಯೂ ಅತ್ಯುನ್ನತ ಮಟ್ಟಕ್ಕೇರಬೇಕು. ಸಮಾಜದ ಪ್ರತಿಯೊಬ್ಬರ ಹೃದಯವನ್ನು ತಟ್ಟುವ ಸೇವಾ ಕಾರ್ಯಗಳನ್ನು ಕೈಗೊಳ್ಳುವ ಮೂಲಕ ರೋಟರಿ ತನ್ನ ಸಾಮಾಜಿಕ ಬದ್ಧತೆಯನ್ನು ಮತ್ತಷ್ಟು ಬಲಪಡಿಸಬೇಕು ಎಂದು ರೊ. ಡಾ. ಅರವಿಂದ ಭಟ್ ಹೇಳಿದರು. ನಗರದ ಈಡನ್ ಕ್ಲಬ್ನಲ್ಲಿ ಭಾನುವಾರ ನಡೆದ ರೋಟರಿ ಕ್ಲಬ್ ಮಂಗಳೂರು ಡೌನ್ ಟೌನ್ನ 2026-27ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು. ರೋಟರಿ ಕ್ಲಬ್ ಮಂಗಳೂರು ಡೌನ್ ಟೌನ್ ಜಿಲ್ಲೆಯಲ್ಲಿ ಅತ್ಯುತ್ತಮ “ಡೈಮಂಡ್ ಪ್ಲಸ್” ಪ್ರಶಸ್ತಿಯನ್ನು ಪಡೆದಿರುವುದು ಕ್ಲಬ್ನ ಉತ್ತಮ ಸೇವಾ ಚಟುವಟಿಕೆಗಳಿಗೆ ದೊರೆತ ಮಾನ್ಯತೆಯಾಗಿದೆ ಎಂದು ಅವರು ಪ್ರಶಂಸಿಸಿದರು.ಈ ಸಂದರ್ಭದಲ್ಲಿ 2026-27ನೇ ಸಾಲಿನ ನೂತನ ಅಧ್ಯಕ್ಷರಾಗಿ ರೊ. ಎ. ಉಮೇಶ್ ಗಟ್ಟಿ, ಕಾರ್ಯದರ್ಶಿಯಾಗಿ ರೊ. ಪಿ.ವೈ. ಪವಿತ್ರ ಕುಮಾರ್ ಗುರುಕ್ಕಲ್, ಕೋಶಾಧಿಕಾರಿಯಾಗಿ ರೊ. ಸಂದೀಪ್ ಹಂದೆ, ಉಪಾಧ್ಯಕ್ಷರಾಗಿ ರೊ. ಜಯರಾಜ್ ಕೆ., ಜೊತೆ ಕಾರ್ಯದರ್ಶಿಯಾಗಿ ರೊ. ಪ್ರಶಾಂತ್ ನಾಯಕ್, ಸಾರ್ಜೆಂಟ್ ಅಟ್ ಆರ್ಮ್ಸ್…
ಮಂಗಳೂರು, ಜು.20: ಮಂಗಳ ಗ್ರಾಮೀಣ ಯುವಕ ಸಂಘ (ರಿ.), ಕೊಣಾಜೆ ಪದವು ಇದರ ಅಧ್ಯಕ್ಷ ಹಾಗೂ ಸಮಾಜಸೇವಕರಾದ ಎ.ಕೆ. ರೆಹಮಾನ್ ಕೋಡಿಜಾಲ್ ಅವರನ್ನು ಅಸೈಗೋಳಿಯಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ವಿದ್ಯಾನಿಧಿ ಟ್ರಸ್ಟ್ ವತಿಯಿಂದ ಸನ್ಮಾನಿಸಲಾಯಿತು. ಟ್ರಸ್ಟ್ ಕಚೇರಿಗೆ ನಾಲ್ಕನೇ ಬಾರಿ ಭೇಟಿ ನೀಡಿದ ಎ.ಕೆ. ರೆಹಮಾನ್ ಕೋಡಿಜಾಲ್ ಅವರು, ಟ್ರಸ್ಟ್ ಆಯೋಜಿಸುವ ವಿವಿಧ ಸಾಮಾಜಿಕ ಹಾಗೂ ಶೈಕ್ಷಣಿಕ ಕಾರ್ಯಕ್ರಮಗಳಲ್ಲಿ ನಿರಂತರವಾಗಿ ಭಾಗವಹಿಸುತ್ತಿದ್ದು, ಹಲವು ರೀತಿಯ ಸಹಕಾರವನ್ನು ನೀಡುತ್ತ ಬಂದಿದ್ದಾರೆ. ಅವರ ಸಮಾಜಮುಖಿ ಸೇವೆ ಹಾಗೂ ಶಿಕ್ಷಣದ ಮೇಲಿನ ಕಾಳಜಿಯನ್ನು ಗುರುತಿಸಿ ಟ್ರಸ್ಟ್ ವತಿಯಿಂದ ಗೌರವ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಟ್ರಸ್ಟ್ನ ಸ್ಥಾಪಕ ಅಧ್ಯಕ್ಷ ಯಾದವ ಅವರು, ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣ ಪಡೆಯುತ್ತಿರುವ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಸಾಧ್ಯವಾದಷ್ಟು ನೆರವು ನೀಡುವುದು ಟ್ರಸ್ಟ್ನ ಪ್ರಮುಖ ಧ್ಯೇಯವಾಗಿದೆ. ಇಂತಹ ಸಮಾಜಮುಖಿ ಚಿಂತನೆ ಹೊಂದಿರುವ ವ್ಯಕ್ತಿಗಳ ಸಹಕಾರದಿಂದ ಟ್ರಸ್ಟ್ ಇನ್ನಷ್ಟು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲು ಸಾಧ್ಯವಾಗುತ್ತಿದೆ ಎಂದು ಹೇಳಿದರು. ಬಳಿಕ ಎ.ಕೆ. ರೆಹಮಾನ್ ಕೋಡಿಜಾಲ್ ಅವರಿಗೆ…
ನವದೆಹಲಿ, ಜು. 20 : ಕಾಕ್ರೋಚ್ ಜನತಾ ಪಾರ್ಟಿ ನಡೆಸುತ್ತಿರುವ ಸಂಸತ್ ಚಲೋ ಪ್ರತಿಭಟನಾ ರ್ಯಾಲಿ ವೇಳೆ ಭಾರೀ ಉದ್ವಿಗ್ನತೆ ಉಂಟಾಗಿದ್ದು, ಪಕ್ಷದ ಸಂಸ್ಥಾಪಕ ಅಭಿಜಿತ್ ದೀಪ್ಕೆಯವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸಂಸತ್ ಮುತ್ತಿಗೆಗೆ ಯತ್ನಿಸಿದ ಕಾಕ್ರೋಚ್ ಜನತಾ ಪಾರ್ಟಿ ಸದಸ್ಯರ ಮೇಲೆ ಪೊಲೀಸರು ಲಾಠಿಚಾರ್ಜ್ ಮಾಡಿದ್ದಾರೆ. ಅಲ್ಲದೇ ಪ್ರತಿಭಟನಾಕಾರರನ್ನು ಚದುರಿಸಲು ಅಶ್ರುವಾಯು ಸಿಡಿಸಿದ್ದಾರೆ. ಇದರಿಂದ ದೆಹಲಿಯಲ್ಲಿ ಭಾರೀ ಉದ್ವಿಗ್ನತೆ ಉಂಟಾಗಿದೆ. ಲಾಠಿಚಾರ್ಜ್ ಬೆನ್ನಲ್ಲೇ ದೆಹಲಿಯ ಕೆಲವು ಭಾಗಗಳಲ್ಲಿ ಮೊಬೈಲ್ ಇಂಟರ್ನೆಟ್ ಸ್ಥಗಿತಗೊಂಡಿದೆ.ಸಂಸತ್ತಿನ ಮಳೆಗಾಲದ ಅಧಿವೇಶನದ ಸಮಯದಲ್ಲಿ ಭಾರೀ ಭದ್ರತೆಯ ನಡುವೆಯೂ ಪ್ರತಿಭಟನಾಕಾರರು ʻಸಂಸತ್ ಚಲೋʼ ರ್ಯಾಲಿ ನಡೆಸಿದ್ದರು. ಬ್ಯಾರಿಕೇಡ್ಗಳನ್ನು ದಾಟಿ ಸಂಸತ್ತಿನ ಕಡೆಗೆ ನುಗ್ಗಲು ಪ್ರತಿಭಟನಾಕಾರರು ಯತ್ನಿಸಿದ್ದರು. ಈ ವೇಳೆ ಪೊಲೀಸರು ಹಲವಾರು ಪ್ರತಿಭಟನಾಕಾರರನ್ನು ಬಂಧಿಸಿದ್ದಾರೆ.ಸಂಸತ್ತಿನ ಅಧಿವೇಶನ ಆರಂಭವಾಗುತ್ತಿರುವುದರಿಂದ ದೆಹಲಿ ನಗರದಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ’ಯ (BNSS) ಸೆಕ್ಷನ್ 163 (ಹಳೆಯ 144ನೇ ವಿಧಿ) ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು. ಈ ಮೆರವಣಿಗೆಗೆ ಯಾವುದೇ ಅಧಿಕೃತ ಅನುಮತಿ ನೀಡಿರಲಿಲ್ಲ ಮತ್ತು ಕಾನೂನು…
ಬೈಂದೂರು, ಜು. 20 : ಪ್ರಬಲ ಅಲೆಗಳ ಹೊಡೆತಕ್ಕೆ ಸಿಲುಕಿ ಮೀನುಗಾರಿಕಾ ದೋಣಿಯೊಂದು ಮಗುಚಿ ಬಿದ್ದಿದ್ದು, ಅದರಲ್ಲಿದ್ದ ಐವರು ಮೀನುಗಾರರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ಘಟನೆ ಶಿರೂರು ಸಮೀಪದ ಸಮುದ್ರ ತೀರದಲ್ಲಿ ನಡೆದಿದೆ. ರಕ್ಷಿಸಲ್ಪಟ್ಟ ಮೀನುಗಾರರನ್ನು ಪಡುವರಿ ಗ್ರಾಮದ ತರಪತಿ ಅಳ್ವೆಕೋಡಿಯ ನಿವಾಸಿಗಳಾದ ನಾಗರಾಜ ಖಾರ್ವಿ, ಯೋಗೀಶ್ ಖಾರ್ವಿ, ರಾಜು ಖಾರ್ವಿ, ಮಂಜುನಾಥ್ ಖಾರ್ವಿ ಹಾಗೂ ನಾಗರಾಜ ಖಾರ್ವಿ ಎಂದು ಗುರುತಿಸಲಾಗಿದೆ.ಮಾಹಿತಿಯ ಪ್ರಕಾರ, ಮಲ್ಪೆಯಲ್ಲಿ ಮೀನುಗಾರಿಕೆ ಮುಗಿಸಿ ಭಟ್ಕಳದತ್ತ ಹಿಂದಿರುಗುತ್ತಿದ್ದ ವೇಳೆ ಶಿರೂರು ಸಮುದ್ರ ತೀರದ ಕೋಕ್ಲೇರಕಲ್ಲು ಪ್ರದೇಶದ ಬಳಿ ಬಿರುಗಾಳಿ ಹಾಗೂ ಮಳೆಯ ಪರಿಣಾಮ ಉಂಟಾದ ಬೃಹತ್ ಅಲೆಯೊಂದು ದೋಣಿಗೆ ಅಪ್ಪಳಿಸಿತು. ಪರಿಣಾಮ ದೋಣಿ ಮಗುಚಿಬಿದ್ದಿದೆ.ದೋಣಿಯಲ್ಲಿದ್ದ ಐವರು ಮೀನುಗಾರರು ಜೀವ ರಕ್ಷಕ ಜಾಕೆಟ್ ಧರಿಸಿದ್ದ ಕಾರಣ ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಇದೇ ವೇಳೆ ಸಮೀಪದಲ್ಲೇ ಮೀನುಗಾರಿಕೆಯಲ್ಲಿ ತೊಡಗಿದ್ದ ಶೇಖರ್ ಖಾರ್ವಿ ಘಟನೆ ಗಮನಿಸಿ ತಕ್ಷಣ ಸ್ಥಳಕ್ಕೆ ಧಾವಿಸಿ, ಸಮುದ್ರದಲ್ಲಿ ಸಿಲುಕಿದ್ದ ಐವರನ್ನೂ ಸುರಕ್ಷಿತವಾಗಿ ರಕ್ಷಿಸಿದ್ದಾರೆ.ಅಪಘಾತದಲ್ಲಿ ಮೀನುಗಾರಿಕಾ ದೋಣಿ ಸಂಪೂರ್ಣ ಹಾನಿಗೊಳಗಾಗಿದೆ. ದೋಣಿಯ ಎಂಜಿನ್, ಜಿಪಿಎಸ್…
ಅರ್ಹ ವಿದ್ಯಾರ್ಥಿಗಳ ಸಂಪೂರ್ಣ ಶಿಕ್ಷಣ ವೆಚ್ಚ ಭರಿಸಲಿರುವ ಡಾ. ಅಬ್ದುಲ್ ಶಕೀಲ್ ಚಾರಿಟೇಬಲ್ ಟ್ರಸ್ಟ್ ಮಂಗಳೂರು, ಜು.20: ಬ್ಯಾರಿ ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಜಾಗತಿಕ ಮಟ್ಟದ ಇಸ್ಲಾಮಿಕ್ ಶಿಕ್ಷಣ ಪಡೆಯಲು ಅಪರೂಪದ ಅವಕಾಶ ದೊರಕಿದ್ದು, ಈಜಿಪ್ಟ್ನ ಕೈರೋದಲ್ಲಿರುವ ವಿಶ್ವವಿಖ್ಯಾತ ಅಲ್-ಅಝ್ಹರ್ ವಿಶ್ವವಿದ್ಯಾಲಯದಲ್ಲಿ ಸ್ನಾತಕೋತ್ತರ (ಮಾಸ್ಟರ್ಸ್) ವ್ಯಾಸಂಗ ಮಾಡಲು ಇಚ್ಛಿಸುವ ಅರ್ಹ ವಿದ್ಯಾರ್ಥಿಗಳಿಗೆ ಡಾ. ಅಬ್ದುಲ್ ಶಕೀಲ್ ಚಾರಿಟೇಬಲ್ ಟ್ರಸ್ಟ್ (ರಿ.) ಸಂಪೂರ್ಣ ಪ್ರಾಯೋಜಕತ್ವ ಘೋಷಿಸಿದೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಟ್ರಸ್ಟ್ನ ಸ್ಥಾಪಕಾಧ್ಯಕ್ಷ ಡಾ. ಅಬ್ದುಲ್ ಶಕೀಲ್, ಅಲ್-ಅಝ್ಹರ್ ವಿಶ್ವವಿದ್ಯಾಲಯವು ಇಸ್ಲಾಮಿಕ್ ಜ್ಞಾನ, ಸಂಶೋಧನೆ ಹಾಗೂ ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ವಿಶ್ವದ ಅತ್ಯಂತ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಒಂದಾಗಿದೆ. ಈ ವಿಶ್ವವಿದ್ಯಾಲಯದಲ್ಲಿ ಶಿಕ್ಷಣ ಪಡೆಯುವುದರಿಂದ ವಿದ್ಯಾರ್ಥಿಗಳಿಗೆ ಅಂತರರಾಷ್ಟ್ರೀಯ ಮಟ್ಟದ ಶೈಕ್ಷಣಿಕ ಅನುಭವ, ಸಂಶೋಧನಾ ಅವಕಾಶಗಳು ಹಾಗೂ ಜಾಗತಿಕ ದೃಷ್ಟಿಕೋನ ಲಭಿಸಲಿದ್ದು, ಬ್ಯಾರಿ ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಕರೆ ನೀಡಿದರು. ಪ್ರವೇಶ ಪರೀಕ್ಷೆಯಲ್ಲಿ ಆಯ್ಕೆಯಾಗುವ ಅರ್ಹ ವಿದ್ಯಾರ್ಥಿಗಳ…
ಕುತ್ತಾರು : ಕುತ್ತಾರು ಶ್ರೀ ರಾಜರಾಜೇಶ್ವರಿ ಸಿದ್ಧಿವಿನಾಯಕ ದೇವಸ್ಥಾನ ಕುತ್ತಾರು ಇದರ 40 ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆಯನ್ನು ದೇವಸ್ಥಾನದ ಅಧ್ಯಕ್ಷ ಪವಿತ್ರ ಕುಮಾರ್ ಗಟ್ಟಿ ನೆರವೇರಿಸಿದರು. ಸೆ.13 ರಿಂದ ಸೆ.15 ರವರೆಗೆ ಜರಗಲಿರುವ ಉತ್ಸವದಲ್ಲಿ ಸಮಸ್ತ ಭಕ್ತಾಭಿಮಾನಿಗಳು ಭಾಗವಹಿಸಿ ಉತ್ಸವವನ್ನು ಯಶಸ್ವಿಗೊಳಿಸುವಂತೆ ಕೋರಿದರು. ಈ ಸಂದರ್ಭ ಪ್ರಧಾನ ಕಾರ್ಯದರ್ಶಿ ಪುಷ್ಪರಾಜ್ ಸನಿಲ್, ಕೋಶಾಧಿಕಾರಿ ಜಗನ್ನಾಥ್ ಸಾಲ್ಯಾನ್,ಗೌರವಾಧ್ಯಕ್ಷ ಚಂದ್ರಹಾಸ್ ಕೊಟ್ಟಾರಿ, ಪದ್ಮನಾಭ ಮರ್ಕೆದು, ರವಿ ಕುಕ್ಕುದಕಟ್ಟೆ, ಧನುಷ್ ಗಟ್ಟಿ, ಉದಯ ಬಾಕಿಮಾರ್, ವೇದ ಗಟ್ಟಿ ಮುಂತಾದವರು ಉಪಸ್ಥಿತರಿದ್ದರು.
ಸಂಪತ್ ಬಂಗೇರ ಅವರಿಗೆ ಪ್ರಶಂಸನಾ ಪತ್ರ ಹಾಗೂ ನಗದು ಬಹುಮಾನ ನೀಡಿ ಗೌರವ ಮಂಗಳೂರು, ಜು.20: ಅಪಘಾತವೆಸಗಿ ಪರಾರಿಯಾಗಿದ್ದ ವಾಹನ ಹಾಗೂ ಆರೋಪಿಯನ್ನು ಪತ್ತೆಹಚ್ಚುವಲ್ಲಿ ಅಸಾಧಾರಣ ಕಾರ್ಯದಕ್ಷತೆ ಮತ್ತು ಕರ್ತವ್ಯನಿಷ್ಠೆ ಪ್ರದರ್ಶಿಸಿದ ಮಂಗಳೂರು ನಗರ ಸಂಚಾರ ದಕ್ಷಿಣ ಪೊಲೀಸ್ ಠಾಣೆಯ ಪೊಲೀಸ್ ಸಿಬ್ಬಂದಿ ಸಂಪತ್ ಬಂಗೇರ (ಕೆ.ಎಚ್. 427) ಅವರಿಗೆ ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ, ಐಪಿಎಸ್ ಅವರು ಪ್ರಶಂಸನಾ ಪತ್ರ ಹಾಗೂ ನಗದು ಬಹುಮಾನ ನೀಡಿ ಗೌರವಿಸಿದರು. ಸಂಚಾರ ದಕ್ಷಿಣ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಮೊ.ನಂ. 79/2026 ಪ್ರಕರಣದಲ್ಲಿ, ಬಿಎನ್ಎಸ್ ಕಾಯ್ದೆಯ ಕಲಂ 281, 106(1) ಹಾಗೂ ಐಎಂವಿ ಕಾಯ್ದೆಯ ಕಲಂ 134(ಎ) ಮತ್ತು 134(ಬಿ) ಅಡಿಯಲ್ಲಿ ದಾಖಲಾಗಿದ್ದ ಹಿಟ್ ಅಂಡ್ ರನ್ ಪ್ರಕರಣವನ್ನು ಭೇದಿಸುವಲ್ಲಿ ಸಂಪತ್ ಬಂಗೇರ ಅವರು ಮಹತ್ವದ ಪಾತ್ರ ವಹಿಸಿದ್ದರು. ಅಪಘಾತದ ಬಳಿಕ ಪರಾರಿಯಾಗಿದ್ದ ವಾಹನ ಮತ್ತು ಆರೋಪಿಯ ಕುರಿತು ಖಚಿತ ಮಾಹಿತಿ ಸಂಗ್ರಹಿಸಿ, ತ್ವರಿತವಾಗಿ ಅವರನ್ನು ಪತ್ತೆಹಚ್ಚುವಲ್ಲಿ ಅವರು ತೋರಿದ…

