ಮಂಗಳೂರು, ಮಾ. 21 : ಬಡಗ ಎಡಪದವು ಗ್ರಾಮದ ಸಾಸ್ತಾವು ದೇವಸ್ಥಾನದ ಸಮೀಪ ಫಾರ್ಚೂನರ್ ಕಾರಿನಲ್ಲಿ ಹಿಂಸಾತ್ಮಕ ರೀತಿಯಲ್ಲಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳದಿಂದ ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಬಜಪೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಪೆರ್ಮುದೆಯ ಭಟ್ರಕೆರೆ ನಿವಾಸಿಯಾಗಿರುವ, ಪೇಜಾವರ ಕೊಂಚಾರ ಮೂಲದ ನಿಸಾರ್ ಅಲಿಯಾಸ್ ನಿಸಾರುದ್ದೀನ್ ಅಲಿಯಾಸ್ ಪಾರಿವಾಳ ನಿಸಾರ್ (28) ಮತ್ತು ಉಳಾಯಿಬೆಟ್ಟು ಪೆರ್ಮಂಕಿಯ ಅಕ್ಕೋಡಿ ಹೌಸ್ ನಿವಾಸಿ ಮೊಹಮ್ಮದ್ ಜಮಾಲುದ್ದೀನ್ ಅಲಿಯಾಸ್ ಜಮಾಲ್ (24) ಎಂದು ಗುರುತಿಸಲಾಗಿದೆ.ಕಾರೊಂದರಲ್ಲಿ ಜಾನುವಾರುಗಳ ಕಾಲುಗಳನ್ನು ಕಟ್ಟಿ, ಹಿಂಸಾತ್ಮಕವಾಗಿ ತುಂಬಿಕೊಂಡು ಮಾರಾಟಕ್ಕಾಗಿ ಸಾಗಿಸಲಾಗುತ್ತಿದೆ ಎಂಬ ಮಾಹಿತಿ ಮಾರ್ಚ್ 18ರಂದು ಮುಂಜಾನೆ ಸುಮಾರು 4:45 ಗಂಟೆ ವೇಳೆಗೆ ಪೊಲೀಸರಿಗೆ ಲಭಿಸಿತ್ತು. ತಕ್ಷಣ ಕಾರ್ಯಪ್ರವೃತ್ತರಾದ ಬಜಪೆ ಪೊಲೀಸರು ಬಡಗ ಎಡಪದವು ಗ್ರಾಮದ ಸಾಸ್ತಾವು ದೇವಸ್ಥಾನದ ಬಳಿ ವಾಹನವನ್ನು ತಡೆದು ತಪಾಸಣೆ ನಡೆಸಿದಾಗ, ಕಾರಿನೊಳಗೆ ಕಾಲುಗಳನ್ನು ಕಟ್ಟಿ ಹಿಂಸಾತ್ಮಕವಾಗಿ ಸಾಗಿಸುತ್ತಿದ್ದ ನಾಲ್ಕು ಜಾನುವಾರುಗಳು ಪತ್ತೆಯಾಗಿವೆ. ಈ ವೇಳೆ ಆರೋಪಿಗಳು ಕಾರು ಮತ್ತು ಜಾನುವಾರುಗಳನ್ನು ಬಿಟ್ಟು ಸ್ಥಳದಿಂದ ಪರಾರಿಯಾಗಿದ್ದರು.ಕಾರಿನಲ್ಲಿದ್ದ ಒಂದು…
Author: UllalaVani
ಬಂಟ್ವಾಳ, ಮಾ. 21 ;ಯಕ್ಷಗಾನ ಲೋಕದ ಅಪ್ರತಿಮ ಕಲಾತಪಸ್ವಿ, ತೆಂಕುತಿಟ್ಟು ಶೈಲಿಯ ಹಿರಿಯ ವಿದ್ವಾಂಸ ಮತ್ತು ಕಳೆದ ಐದು ದಶಕಗಳಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಮೇಳದ ಆಧಾರಸ್ತಂಭವಾಗಿದ್ದ ಸೂರಿಕುಮೇರು ಕೆ. ಗೋವಿಂದ ಭಟ್ (85) ಅವರು ವಿಧಿವಶರಾಗಿದ್ದಾರೆ. ಏಳು ದಶಕಗಳ ಕಾಲ ರಂಗಸ್ಥಳವನ್ನೇ ಉಸಿರಾಗಿಸಿಕೊಂಡಿದ್ದ ಅದ್ವಿತೀಯ ಕಲಾವಿದ ಸೂರಿಕುಮೇರು ಕೆ. ಗೋವಿಂದ ಭಟ್ . ಯಕ್ಷಗಾನದ ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು ನಿಸ್ಸೀಮರು.1940, ಮಾರ್ಚ್ 22ರಂದು ಬಂಟ್ವಾಳದ ಕೋಡಪದವಿನ ಕಡು ಬಡತನದಲ್ಲಿ ಜನಿಸಿದ ಗೋವಿಂದರ ಬಾಲ್ಯ ಕಣ್ಣೀರಿನ ಕತೆಯಾಗಿತ್ತು. ಕಳೆದ 50 ವರ್ಷಗಳಿಗೂ ಹೆಚ್ಚು ಕಾಲ ಧರ್ಮಸ್ಥಳ ಮೇಳದಲ್ಲಿ ಸೇವೆ ಸಲ್ಲಿಸಿದ್ದರು. ಇಳಿ ವಯಸ್ಸಿನಲ್ಲೂ ರಂಗಭೂಮಿಯ ಮೇಲಿನ ಮೋಹ ಬಿಟ್ಟವರಲ್ಲ. ದೃಷ್ಟಿ ಮಂಜಾಗುತ್ತಿದ್ದರೂ “ರಂಗಸ್ಥಳ ಬಿಟ್ಟು ನನಗೇನು ಗತಿ?” ಎನ್ನುವ ಅವರ ಕಲಾ ಪ್ರೇಮ ಯುವ ಕಲಾವಿದರಿಗೆ ಸದಾ ಸ್ಫೂರ್ತಿ.ನೀವು ವೇಷ ಹಾಕದಿದ್ದರೂ ಪರವಾಗಿಲ್ಲ, ನಮ್ಮ ಮೇಳದ ಚೌಕಿಯಲ್ಲಿ…
ಉಳ್ಳಾಲ; ಉಳ್ಳಾಲದ ಸೈಯದ್ ಮದನಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಹಳೆಕೋಟೆಯಲ್ಲಿ ನಡೆಸಲ್ಪಡುತ್ತಿರುವ ಸೈಯದ್ ಮದನಿ ಪ್ರೌಢಶಾಲೆಯಲ್ಲಿ ಎಸ್ ಎಸ್ ಎಲ್ ಸಿ ಪಬ್ಲಿಕ್ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಈ ದಿನದಲ್ಲಿ ಸಂತಸದಿಂದ ಪರೀಕ್ಷಾ ಪುನರಾವರ್ತನೆ ಕಾರ್ಯದಲ್ಲಿ ತೊಡಗಿದರು. ಶುಕ್ರವಾರ ಈದ್ ಹಬ್ಬವಾಗಿದ್ದು ಸೋಮವಾರದಂದು ಎಸ್ ಎಸ್ ಎಲ್ ಸಿ ಯಲ್ಲಿ ವಿಜ್ಞಾನ ಪರೀಕ್ಷೆಗೆ ವಿದ್ಯಾರ್ಥಿಗಳು ಹಾಜರಾಗಬೇಕು. ಆದರೆ ಹಬ್ಬದ ಸಂತಸದಲ್ಲಿ ತಾವು ಓದಿರುವುದನ್ನು ಮರೆತೆರೆ ಪರೀಕ್ಷೆಗೆ ತೊಂದರೆ ಆಗಬಹುದು ಎಂಬಂತ ಉದ್ದೇಶದಿಂದ ವಿದ್ಯಾರ್ಥಿಗಳು ಸ್ವಯಂ ಪ್ರೇರಿತರಾಗಿ ಈ ದಿನವೂ ಶಾಲೆಗೆ ಹಾಜರಾದರು ಮತ್ತು ಪರೀಕ್ಷಾ ಪೂರ್ವ ತಯಾರಿ ಕಾರ್ಯದಲ್ಲಿ ತೊಡಗಿದರು. ಈ ಸಂದರ್ಭದಲ್ಲಿ ಶಾಲೆಯ ಶಿಕ್ಷಕರು ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಶಾಲೆಗೆ ಹಾಜರಾಗಿರುವುದು ವಿಶೇಷವಾಗಿದೆ. ಪರೀಕ್ಷೆಗೆ ಹಾಜರಾದ ಎಲ್ಲಾ ವಿದ್ಯಾರ್ಥಿಗಳಿಗೂ ಮತ್ತು ಶಿಕ್ಷಕರಿಗೂ ಹಬ್ಬದೂಟವನ್ನು ಶಾಲಾ ಸಂಚಾಲಕರಾದ ಜನಾಬ್ ಮೊಹಮ್ಮದ್ ಇಸ್ಮಾಯಿಲ್ ಹಾಜಬ್ಬ ರವರು ವ್ಯವಸ್ಥೆ ಮಾಡಿದ್ದರು. ಕಳೆದ ವರ್ಷ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳು ಈದ್ ಹಬ್ಬವನ್ನು ಶಾಲೆಯಲ್ಲಿ…
ಕೋಟೆಕಾರ್: ಅಲ್ ಹಿದಾಯ ಜುಮಾ ಮಸ್ಜಿದ್ನಲ್ಲಿ ಈದ್ ಉಲ್ ಫಿತ್ರ್ ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು. ಬೆಳಿಗ್ಗೆ ನಡೆದ ಈದ್ ನಮಾಝ್ನಲ್ಲಿ ಅನೇಕ ಭಕ್ತರು ಭಾಗವಹಿಸಿದರು. ಮಸೀದಿ ಖತೀಬ್ ಅಬ್ದುಲ್ ಅಝೀಝ್ ಸಅದಿ ಅಲ್ ಅಫ್ಳಲಿ ಅವರು ಈದ್ ನಮಾಝ್ ಖುತುಬಾ ನಿರ್ವಹಿಸಿ, ಈದ್ ಸಂದೇಶ ನೀಡಿದರು. ತಮ್ಮ ಸಂದೇಶದಲ್ಲಿ ಸಹೋದರತ್ವ, ಶಾಂತಿ, ಸೌಹಾರ್ದತೆ ಮತ್ತು ಪರಸ್ಪರ ಪ್ರೀತಿ ಬೆಳೆಸಿಕೊಳ್ಳುವಂತೆ ಕರೆ ನೀಡಿದರು. ನಮಾಝ್ ನಂತರ ಮಸೀದಿಗೆ ಆಗಮಿಸಿದವರು ಪರಸ್ಪರ ಹಸ್ತಲಾಘವ ಮಾಡಿ ಈದ್ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು. ಈದ್ ಹಬ್ಬದ ಅಂಗವಾಗಿ ಮಸೀದಿ ವಠಾರದಲ್ಲಿ ಹಬ್ಬದ ಸಂಭ್ರಮ ಮನೆಮಾಡಿತ್ತು. ಈ ಸಂದರ್ಭದಲ್ಲಿ ಜಮಾಅತ್ ಪದಾಧಿಕಾರಿಗಳು, ಸಮಾಜದ ಮುಖಂಡರು ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಉಪಸ್ಥಿತರಿದ್ದರು.
ಮಂಗಳೂರು: ನೈಋತ್ಯ ರೈಲ್ವೆಯಲ್ಲಿ ಭಾರೀ ಬದಲಾವಣೆಯನ್ನು ಇಲಾಖೆ ತಂದಿದೆ. ತುರ್ತು ಹಳಿ ನಿರ್ವಹಣಾ ಕಾರ್ಯ ನಿಗದಿಯಾಗಿರುವುದರಿಂದ, ಮಂಗಳೂರು ಮತ್ತು ಸುಬ್ರಹ್ಮಣ್ಯ ನಡುವೆ ಕಾರ್ಯನಿರ್ವಹಿಸುವ ಪ್ರಯಾಣಿಕ ರೈಲು ಸೇವೆಗಳಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡಲಾಗಿದೆ. ಮಂಗಳೂರು ಸೆಂಟ್ರಲ್ ಮತ್ತು ಸುಬ್ರಹ್ಮಣ್ಯ ಮಾರ್ಗವಾಗಿ ಸಂಚಾರಿಸುವ ಪ್ಯಾಸೆಂಜರ್ ರೈಲುಗಳನ್ನು ಒಟ್ಟು 35 ದಿನಗಳವರೆಗೆ ಸಂಪೂರ್ಣವಾಗಿ ರದ್ದುಗೊಳಿಸಲಾಗಿದೆ. ರೈಲು ಸಂಖ್ಯೆ 56629 (ಮಂಗಳೂರು – ಸುಬ್ರಹ್ಮಣ್ಯ ರಸ್ತೆ ಪ್ಯಾಸೆಂಜರ್) ಮತ್ತು ರೈಲು ಸಂಖ್ಯೆ 56630 (ಸುಬ್ರಹ್ಮಣ್ಯ ರಸ್ತೆ – ಮಂಗಳೂರು ಪ್ಯಾಸೆಂಜರ್) ಮಾರ್ಚ್ 23 ರಿಂದ ಏಪ್ರಿಲ್ 14 ರವರೆಗೆ ಮತ್ತು ಮತ್ತೆ ಜೂನ್ 10 ರಿಂದ ಜೂನ್ 21 ರವರೆಗೆ ರದ್ದು ಮಾಡಲಾಗಿದೆ. ಪ್ರಿಲ್ ತಿಂಗಳಲ್ಲಿ ಹಲವಾರು ಎಕ್ಸ್ಪ್ರೆಸ್ ರೈಲುಗಳ ಸಮಯದಲ್ಲೂ ಬದಲಾವಣೆಗಳನ್ನು ಮಾಡಲಾಗಿದೆ. ಯಶವಂತಪುರ – ಕಾರವಾರ (16515), ಯಶವಂತಪುರ – ಮಂಗಳೂರು (16575), ಮತ್ತು ಯಶವಂತಪುರ – ಮಂಗಳೂರು (16539) ಎಕ್ಸ್ಪ್ರೆಸ್ ರೈಲುಗಳು ಸುಮಾರು 20 ನಿಮಿಷಗಳ ಕಾಲ ವಿಳಂಬವಾಗುತ್ತವೆ. ಮಂಗಳೂರು – ಸುಬ್ರಹ್ಮಣ್ಯ ಪ್ಯಾಸೆಂಜರ್…
ರಿಷಬ್ ಶೆಟ್ಟಿ ಅವರು ಹೊಂಬಾಳೆ ಫಿಲ್ಮ್ಸ್ ಅನ್ನು ಇನ್ಸ್ಟಾದಲ್ಲಿ ಅನ್ಫಾಲೋ ಮಾಡಿ, ತಮ್ಮದೇ ಬ್ಯಾನರ್ ಅಡಿಯಲ್ಲಿ “ಚಾಪ್ಟರ್ 2” ಘೋಷಿಸಿದ್ದಾರೆ. ಇದು “ಕಾಂತಾರ ಚಾಪ್ಟರ್ 2” ಅಥವಾ ಬೇರೆ ಚಿತ್ರವೇ ಎಂಬ ಚರ್ಚೆ ಹುಟ್ಟುಹಾಕಿದೆ. ಈ ಬೆಳವಣಿಗೆಯು ರಿಷಬ್ ಮತ್ತು ಹೊಂಬಾಳೆ ನಡುವಿನ ಸಂಬಂಧದ ಬಗ್ಗೆ ಹಲವು ಪ್ರಶ್ನೆಗಳನ್ನು ಸೃಷ್ಟಿಸಿದೆ. ರಿಷಬ್ ಶೆಟ್ಟಿ ಅವರು ‘ಕಾಂತಾರ: ಚಾಪ್ಟರ್ 1’ ಸಿನಿಮಾ ಮೂಲಕ ದೊಡ್ಡ ಮಟ್ಟದ ಯಶಸ್ಸು ಕಂಡಿದ್ದಾರೆ. ಈ ಸಿನಿಮಾ ನಿರ್ದೇಶನ ಮಾಡುವುದರ ಮೂಲಕ ಜನಪ್ರಿಯತೆ ಪಡೆದಿದ್ದಾರೆ. ಈಗ ಅವರು ತಮ್ಮದೇ ಬ್ಯಾನರ್ ಅಲ್ಲಿ ‘ಚಾಪ್ಟರ್ 2’ ಎಂದು ಘೋಷಣೆ ಮಾಡಿದ್ದಾರೆ. ಇದು ನಿಜಕ್ಕೂ ‘ಕಾಂತಾರ ಚಾಪ್ಟರ್ 2’ನಾ? ಅಥವಾ ಬೇರೆ ಚಿತ್ರವೇ ಎಂಬ ಪ್ರಶ್ನೆ ಮೂಡಿದೆ. ಹೀಗಿರುವಾಗಲೇ ರಿಷಬ್ ಅವರ ಒಂದು ನಿರ್ಧಾರ ಅಚ್ಚರಿ ಮೂಡಿಸಿದೆ. ಇನ್ಸ್ಟಾದಲ್ಲಿ ಹೊಂಬಾಳೆ ಫಿಲ್ಮ್ಸ್ ಅನ್ನು ರಿಷಬ್ ಅನ್ಫಾಲೋ ಮಾಡಿದ್ದಾರೆ. ರಿಷಬ್ ಶೆಟ್ಟಿ ಅವರು ಸಾಕಷ್ಟು ಜನಪ್ರಿಯತೆ ಪಡದಿದ್ದು ‘ಕಾಂತಾರ’ ಸಿನಿಮಾ ಮೂಲಕ. ಈ…
ಉಳ್ಳಾಲ; ಉಳ್ಳಾಲ ಯುನೈಟೆಡ್ ಉಳ್ಳಾಲ ಸಂಘಟನೆಯ ವತಿಯಿಂದ ಈದುಲ್ ಫಿತ್ರ್ ಹಬ್ಬವನ್ನು ಸೋಮೇಶ್ವರದ ನೆಹರು ನಗರದ ಪಶ್ಚಿಮ್ ರಿಹ್ಯಾಬ್ ಮಾನಸಿಕ ಪುನಶ್ಚೇತನ ಕೇಂದ್ರದ ಆಶ್ರಮವಾಸಿಗಳೊಂದಿಗೆ ಆತ್ಮೀಯವಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ವಿಧಾನಸಭಾ ಸ್ಪೀಕರ್ ಯು.ಟಿ.ಖಾದರ್ ಮಾತನಾಡಿ, ಮಾನವೀಯತೆಯ ದೃಷ್ಟಿಯಿಂದ ಪಶ್ಚಿಮ್ ರಿಹ್ಯಾಬ್ ಸೆಂಟರ್ ಸಮಾಜಕ್ಕೆ ಮಾದರಿಯಾದ ಸೇವೆಯನ್ನು ಸಲ್ಲಿಸುತ್ತಿದೆ. ಆಶ್ರಮವಾಸಿಗಳೊಂದಿಗೆ ಹಬ್ಬ ಆಚರಿಸುವುದು ಸಮಾಜದಲ್ಲಿ ಸಹಾನುಭೂತಿ ಮತ್ತು ಸೌಹಾರ್ದತೆಯ ಸಂದೇಶವನ್ನು ಸಾರುತ್ತದೆ. ಎಲ್ಲರ ಜೀವನದಲ್ಲಿ ಶಾಂತಿ, ಆರೋಗ್ಯ ಮತ್ತು ಒಳಿತು ನೆಲೆಸಲಿ ಎಂದು ಹಾರೈಸಿದರು. ಯುನೈಟೆಡ್ ಉಳ್ಳಾಲ ಸಂಘಟನೆಯ ಆಯೂಬ್ ಉಳ್ಳಾಲ ಅವರು ಮಾತನಾಡಿ, ಉಳ್ಳಾಲ ಪ್ರದೇಶದಲ್ಲಿ ಐಕ್ಯತೆ, ಸೌಹಾರ್ದತೆ, ಆರೋಗ್ಯ, ಶೈಕ್ಷಣಿಕ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ಎಲ್ಲಾ ಸಮುದಾಯದವರನ್ನು ಒಗ್ಗೂಡಿಸಿ ಸಾಮರಸ್ಯಕ್ಕಾಗಿ ಕೆಲಸ ಮಾಡುವ ಉದ್ದೇಶದಿಂದ ಸಂಘಟನೆಯನ್ನು ಸ್ಥಾಪಿಸಲಾಗಿದೆ. ಸ್ಪೀಕರ್ ಯು.ಟಿ.ಖಾದರ್ ಅವರು ಇಂದು ಸಂಘಟನೆಯ ಹೆಸರನ್ನು ಘೋಷಿಸಿದ್ದಾರೆ. ಮುಂದಿನ ದಿನಗಳಲ್ಲಿ ವಿವಿಧ ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಸಜ್ಜಾಗಿದೆ ಎಂದು ತಿಳಿಸಿದರು. ಪಶ್ಚಿಮ್ ರಿಹ್ಯಾಬ್ ಸೆಂಟರ್ನ ಸ್ಥಾಪಕರಾದ ರೋಹಿತ್ ಸಾಂಕ್ಟಸ್…
ಸ್ಪೀಕರ್ ಯು.ಟಿ. ಖಾದರ್ ಅವರು ಪವಿತ್ರ ಈದುಲ್ ಫಿತ್ರ್ ಹಬ್ಬದ ಅಂಗವಾಗಿ ರಾಜ್ಯದ ಸಮಸ್ತ ಜನತೆಗೆ ಹಾರ್ದಿಕ ಶುಭಾಶಯಗಳನ್ನು ಕೋರಿದ್ದಾರೆ. ರಮಝಾನ್ ತಿಂಗಳ ಉಪವಾಸ, ಪ್ರಾರ್ಥನೆ ಮತ್ತು ದಾನಧರ್ಮದ ನಂತರ ಬರುವ ಈದುಲ್ ಫಿತ್ರ್ ಹಬ್ಬವು ಸಹೋದರತ್ವ, ಶಾಂತಿ ಮತ್ತು ಮಾನವೀಯತೆಯ ಸಂದೇಶವನ್ನು ಸಾರುತ್ತದೆ. ಈ ಪವಿತ್ರ ಹಬ್ಬವು ಸಮಾಜದಲ್ಲಿ ಪರಸ್ಪರ ಪ್ರೀತಿ-ವಿಶ್ವಾಸ ಹೆಚ್ಚಿಸಿ ಸೌಹಾರ್ದತೆಯನ್ನು ಬಲಪಡಿಸಲಿ ಎಂದು ಅವರು ಆಶಿಸಿದರು. ಎಲ್ಲಾ ಸಮುದಾಯದವರು ಐಕ್ಯತೆಯಿಂದ ಬದುಕಿ, ನಾಡಿನಲ್ಲಿ ಶಾಂತಿ, ಸಮೃದ್ಧಿ ನೆಲೆಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸ್ಪೀಕರ್ ಯು.ಟಿ. ಖಾದರ್ ತಮ್ಮ ಶುಭಾಶಯ ಸಂದೇಶದಲ್ಲಿ ತಿಳಿಸಿದ್ದಾರೆ.
ಕರಾವಳಿ ಭಾಗದೆಲ್ಲೆಡೆ ಮುಸ್ಲಿಂ ಬಾಂಧವರು ಪವಿತ್ರ ‘ಈದುಲ್ ಫಿತ್ರ್’ ಹಬ್ಬವನ್ನು ಸಂಭ್ರಮ ಹಾಗೂ ಭಕ್ತಿಭಾವದಿಂದ ಆಚರಿಸಿದರು. ಒಂದು ತಿಂಗಳ ರಮಝಾನ್ ಉಪವಾಸದ ನಂತರ ಬಂದ ಈ ಹಬ್ಬದ ಪ್ರಯುಕ್ತ ಮಸೀದಿಗಳಲ್ಲಿ ಬೆಳಗ್ಗಿನ ಜಾವವೇ ವಿಶೇಷ ನಮಾಝ್ ನೆರವೇರಿಸಲಾಯಿತು. ಮಂಗಳೂರು, ಉಳ್ಳಾಲ, ಬಂಟ್ವಾಳ, ಪುತ್ತೂರು ಸೇರಿದಂತೆ ಕರಾವಳಿಯ ವಿವಿಧ ಭಾಗಗಳ ಮಸೀದಿಗಳಲ್ಲಿ ಸಾವಿರಾರು ಭಕ್ತರು ಈದ್ ನಮಾಝ್ ಸಲ್ಲಿಸಿ, ದೇಶದ ಶಾಂತಿ, ಸೌಹಾರ್ದತೆ ಮತ್ತು ಸಮೃದ್ಧಿಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಧಾರ್ಮಿಕ ಗುರುಗಳು ಕುತುಬಾ ಬಾಷಣದಲ್ಲಿ ಮಾನವೀಯತೆ, ಸಹೋದರತ್ವ ಮತ್ತು ಪರಸ್ಪರ ಪ್ರೀತಿ-ವಿಶ್ವಾಸದ ಮಹತ್ವವನ್ನು ಸಾರಿದರು. ನಮಾಝ್ ಬಳಿಕ ಪರಸ್ಪರ ಅಪ್ಪಿಕೊಂಡು “ಈದ್ ಮುಬಾರಕ್” ಎಂದು ಶುಭಾಶಯ ವಿನಿಮಯ ಮಾಡಿಕೊಳ್ಳುವ ದೃಶ್ಯ ಎಲ್ಲೆಡೆ ಕಂಡುಬಂತು. ಮನೆಗಳಲ್ಲಿ ವಿಶೇಷ ಸಿಹಿ ತಿಂಡಿಗಳು, ಶೀರ್ ಖುರ್ಮಾ, ಬಿರಿಯಾನಿ ಸೇರಿದಂತೆ ವಿವಿಧ ಆಹಾರಗಳನ್ನು ತಯಾರಿಸಿ ಆತ್ಮೀಯರು ಹಾಗೂ ಬಂಧುಬಳಗದೊಂದಿಗೆ ಹಬ್ಬವನ್ನು ಆಚರಿಸಲಾಯಿತು. ಹಬ್ಬದ ಪ್ರಯುಕ್ತ ಬಡವರಿಗೆ ಜಕಾತ್ ಹಾಗೂ ಫಿತ್ರಾ ನೀಡುವ ಮೂಲಕ ಸಹಾಯ ಮಾಡುವ ಪರಂಪರೆ…
ನವದೆಹಲಿ, ಮಾ.20: ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಒಂದು ಮುದ್ದಾದ ವಿಡಿಯೋ ಇದೀಗ ನೆಟ್ಟಿಗರ ಮನಸೂರೆಗೊಂಡಿದೆ. ಪುಟಾಣಿ ಮಕ್ಕಳು ಏನು ಮಾಡಿದರೂ ನೋಡಲು ಚೆಂದವೇ ಸರಿ, ಆದರೆ ಅವರ ತೊದಲು ಮಾತುಗಳು ಮತ್ತು ಮುಗ್ಧತನ ಎಲ್ಲರನ್ನೂ ಹೆಚ್ಚು ಆಕರ್ಷಿಸುತ್ತದೆ. ವೈರಲ್ ಆಗಿರುವ ಈ ವಿಡಿಯೋದಲ್ಲಿ, ಒಂದು ಪುಟ್ಟ ಮಗು ಅಮ್ಮ ಬೈದ ಕಾರಣ ಬೇಸರಗೊಂಡು ದೇವರ ಮುಂದೆ ಹೋಗಿ ಅಳುತ್ತಾ ದೂರು ಹೇಳುತ್ತಿರುವುದು ಕಾಣಿಸುತ್ತದೆ. ಅಮ್ಮನತ್ತ ಕೈ ತೋರಿಸಿ ತನ್ನ ನೋವನ್ನು ದೇವರಿಗೆ ಹೇಳಿಕೊಳ್ಳುವ ಈ ದೃಶ್ಯ ತುಂಬಾ ಮನಮೋಹಕವಾಗಿದೆ. ಸಾಮಾನ್ಯವಾಗಿ ಮಕ್ಕಳು ಅಮ್ಮ ಬೈದರೆ ಅಪ್ಪನ ಬಳಿ ದೂರು ಹೇಳುತ್ತಾರೆ. ಆದರೆ ಈ ಪುಟಾಣಿ ಮಾತ್ರ ವಿಭಿನ್ನವಾಗಿ ದೇವರನ್ನೇ ತನ್ನ ನ್ಯಾಯಾಧೀಶನನ್ನಾಗಿ ಮಾಡಿಕೊಂಡಿರುವುದು ನೆಟ್ಟಿಗರ ಮುಖದಲ್ಲಿ ನಗು ಮೂಡಿಸಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದ್ದು, ಸಾವಿರಾರು ವೀಕ್ಷಣೆಗಳನ್ನು ಪಡೆದುಕೊಂಡಿದೆ.“ಈ ದೂರು ಕೇಳಿ ದೇವ್ರೇ ನಕ್ಕಿರಬಹುದು” ಎಂದು ಒಬ್ಬರು ಕಾಮೆಂಟ್ ಮಾಡಿದರೆ, “ಮುಗ್ಧತೆ ಅಂದ್ರೆ ಇದೇ” ಎಂದು ಇನ್ನೊಬ್ಬರು…

