ತಲಪಾಡಿ: ಇತ್ತೀಚೆಗೆ ನಡೆದ ನೀಟ್ ಹಾಗೂ ಜೆಇಇ ಪರೀಕ್ಷೆಗಳಲ್ಲಿ ತಲಪಾಡಿ ಗ್ರಾಮದ ವಿದ್ಯಾರ್ಥಿನಿ ಹಾದಿಯ ಮರಿಯಮ್ ಸಂಶೀರ್ ಅವರು ಗಮನಾರ್ಹ ಸಾಧನೆ ಮಾಡಿದ್ದಾರೆ. ತಲಪಾಡಿ ಗ್ರಾಮದ ಮೊಹಮ್ಮದ್ ಸಂಶೀರ್ ತಲಪಾಡಿ ಹಾಗೂ ಫಾತಿಮತ್ ಸಾಬಿಹ ಎಸ್. ದಂಪತಿಯ ಪುತ್ರಿಯಾಗಿರುವ ಹಾದಿಯ ಮರಿಯಮ್ ಸಂಶೀರ್, ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ. 97 ಅಂಕಗಳನ್ನು ಗಳಿಸಿದ್ದರು. ಬಳಿಕ ನಡೆದ ನೀಟ್ ಪರೀಕ್ಷೆಯಲ್ಲಿ 7,262ನೇ ರ್ಯಾಂಕ್ ಹಾಗೂ ಜೆಇಇ ಮೇನ್ ಇಂಜಿನಿಯರಿಂಗ್ ವಿಭಾಗದಲ್ಲಿ 8,074ನೇ ರ್ಯಾಂಕ್ ಗಳಿಸಿ ಸಾಧನೆ ಮೆರೆದಿದ್ದಾರೆ. ಈ ಗಮನಾರ್ಹ ಸಾಧನೆಗಾಗಿ ಇತ್ತೀಚೆಗೆ ಮಲಪ್ಪುರಂನಲ್ಲಿ ನಡೆದ ಮೆಡಿಕಲ್ ವಿಕ್ಟರಿ ಡೇ ಕಾರ್ಯಕ್ರಮದಲ್ಲಿ ಮಲಪ್ಪುರಂ ಜಿಲ್ಲಾಧಿಕಾರಿ ದಿಲೀಪ್ ಕೈನಿಕ್ಕರ ಅವರು ಹಾದಿಯ ಮರಿಯಮ್ ಸಂಶೀರ್ ಅವರನ್ನು ಸನ್ಮಾನಿಸಿದರು. ಹಾದಿಯ ಮರಿಯಮ್ ಸಂಶೀರ್ ಅವರ ಸಾಧನೆಗೆ ಕುಟುಂಬಸ್ಥರು, ಸ್ನೇಹಿತರು ಹಾಗೂ ತಲಪಾಡಿ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ.
Author: UllalaVani
ದೆಹಲಿ, ಆ. 08: ನವದೆಹಲಿಯ ಜಂತರ್ ಮಂತರ್ನಲ್ಲಿ ‘ಕಾಕ್ರೋಚ್ ಜನತಾ ಪಾರ್ಟಿ’ ನೇತೃತ್ವದಲ್ಲಿ ನಡೆದ ಪ್ರತಿಭಟನೆ ಹಾಗೂ ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಯ ಬಳಿಕ, ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಮೊದಲ ಸಾರ್ವಜನಿಕ ಭಾಷಣದಲ್ಲಿ , ನಮಗೆ ನಿಮ್ಮ ಮೇಲೆ ನಂಬಿಕೆಯಿದೆ. ‘ವಿಕಸಿತ ಭಾರತ’ ನಿರ್ಮಾಣದ ಪಯಣದಲ್ಲಿ ದೇಶಕ್ಕೆ ನಿಮ್ಮ ಅಗತ್ಯವಿದೆ ಎಂದು ಯುವ ಪೀಳಿಗೆಗೆ ಕರೆ ನೀಡಿದ್ದಾರೆ. ಖ್ಯಾತ ಭಾರತೀಯ ತಂತ್ರಜ್ಞಾನ ಸಂಸ್ಥೆ ನವದೆಹಲಿಯ ವಾರ್ಷಿಕ ಪದವಿ ಪ್ರದಾನ ಸಮಾರಂಭವನ್ನು ಉದ್ದೇಶಿಸಿ ಪ್ರಧಾನಿಯವರು ಶನಿವಾರ ಮಾತನಾಡಿದರು. ಪ್ರತಿಯೊಂದು ಪೀಳಿಗೆಗೂ ಅದರದ್ದೇ ಆದ ರಾಷ್ಟ್ರೀಯ ಜವಾಬ್ದಾರಿ ಇರುತ್ತದೆ. ಮುಂದಿನ 30 ರಿಂದ 35 ವರ್ಷಗಳಲ್ಲಿ ನೀವು ಕೈಗೊಳ್ಳುವ ಪ್ರತಿ ನಿರ್ಧಾರವೂ ದೇಶದ ಹಿತಾಸಕ್ತಿ ಹಾಗೂ ರಾಷ್ಟ್ರದ ಅಗತ್ಯಗಳನ್ನು ಪೂರೈಸುವಂತಿರಬೇಕು ಎಂದು ಮೋದಿ ಹೇಳಿದರು.ವೇಗವಾಗಿ ಬದಲಾಗುತ್ತಿರುವ ಇಂದಿನ ಜಗತ್ತಿನಲ್ಲಿ ತಂತ್ರಜ್ಞಾನ ಪ್ರಮುಖ ಪಾತ್ರ ವಹಿಸುತ್ತಿದೆ. ಜಾಗತಿಕ ಕಾರ್ಯತಂತ್ರ ಮತ್ತು ಜಾಗತಿಕ ಶಕ್ತಿಯ ಸಮತೋಲನ ಕ್ಷಣಕ್ಷಣಕ್ಕೂ ಬದಲಾಗುತ್ತಿದ್ದು, ಹೊಸ ಬದಲಾವಣೆಗಳಿಗೆ ತಕ್ಕಂತೆ ಕಲಿಯುತ್ತಾ ಸಾಗುವವರು…
ಉಡುಪಿ, ಆ. 08 : ಶಿರ್ವದ ಪೆಟ್ರೋಲ್ ಪಂಪ್ ಬಳಿ ಶುಕ್ರವಾರ ರಾತ್ರಿ ಮಾರುತಿ ಸ್ವಿಫ್ಟ್ ಕಾರು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ 45 ವರ್ಷದ ಸ್ಕೂಟರ್ ಸವಾರ ಸಾವನ್ನಪ್ಪಿದ್ದಾರೆ. ಮೃತರನ್ನು ಶಿರ್ವದ ಇಂದ್ರಪುರ ನಿವಾಸಿ ಮತ್ತು ಶಿರ್ವ ದೇವಿ ವೈಂಡಿಂಗ್ ಸೆಂಟರ್ ಮಾಲೀಕ ಪ್ರಕಾಶ್ ಆಚಾರ್ಯ ಎಂದು ಗುರುತಿಸಲಾಗಿದೆ. ಪ್ರಕಾಶ್ ಮುಖ್ಯ ರಸ್ತೆ ದಾಟಲು ಮತ್ತು ಕುತ್ಯಾರ್ ರಸ್ತೆಯ ಮೂಲಕ ತನ್ನ ಮನೆಯ ಕಡೆಗೆ ಹೋಗಲು ಪೆಟ್ರೋಲ್ ಪಂಪ್ ಬಳಿ ರಸ್ತೆಬದಿಯಲ್ಲಿ ಕಾಯುತ್ತಿದ್ದರು ಎಂದು ವರದಿಯಾಗಿದೆ.ಸಂಜೆ 7.30 ರ ಸುಮಾರಿಗೆ, ಬೆಳ್ಮಣ್ ಕಡೆಯಿಂದ ಬರುತ್ತಿದ್ದ ಸ್ವಿಫ್ಟ್ ಕಾರು ಅತಿ ವೇಗವಾಗಿ ಬಂದು, ಇನ್ನೊಂದು ವಾಹನವನ್ನು ಓವರ್ ಟೇಕ್ ಮಾಡುವ ವೇಳೆ , ರಸ್ತೆಯ ಎದುರು ಭಾಗಕ್ಕೆ ಚಲಿಸಿ ಪ್ರಕಾಶ್ ಅವರ ಸ್ಕೂಟರ್ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಸ್ಕೂಟರ್ ಸಂಪೂರ್ಣವಾಗಿ ಹಾನಿಯಾಗಿದ್ದು, ಪ್ರಕಾಶ್ ಗಂಭೀರವಾಗಿ ಗಾಯಗೊಂಡರು. ಅವರನ್ನು ಮೊದಲು ಶಿರ್ವ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಯಿತು ಮತ್ತು ನಂತರ ಹೆಚ್ಚಿನ…
ಉಳ್ಳಾಲ: ತಾಯಿ ಮತ್ತು ಮಗುವಿನ ಆರೋಗ್ಯದ ದೃಷ್ಟಿಯಿಂದ ಸ್ತನ್ಯಪಾನದ ಮಹತ್ವದ ಬಗ್ಗೆ ಪ್ರತಿಯೊಬ್ಬರಲ್ಲೂ ಜಾಗೃತಿ ಮೂಡಿಸುವ ಅಗತ್ಯವಿದೆ. ಮೊದಲ ಆರು ತಿಂಗಳು ಮಗುವಿಗೆ ತಾಯಿಯ ಎದೆಹಾಲು ನೀಡುವುದರಿಂದ ಮಗುವಿನ ರೋಗನಿರೋಧಕ ಶಕ್ತಿ ಹೆಚ್ಚುವುದರ ಜೊತೆಗೆ ಆರೋಗ್ಯಕರ ಬೆಳವಣಿಗೆಗೆ ಸಹಕಾರಿಯಾಗುತ್ತದೆ ಎಂದು ರೋಟರಿ ಡೌನ್ಟೌನ್ ಕ್ಲಬ್ ಮಂಗಳೂರು ಅಧ್ಯಕ್ಷ ಉಮೇಶ್ ಗಟ್ಟಿ ಹೇಳಿದರು. ಯೆನೆಪೋಯ ವೈದ್ಯಕೀಯ ಕಾಲೇಜು ಆಸ್ಪತ್ರೆ, ಜಸ್ಟಿಸ್ ಕೆ. ಎಸ್. ಹೆಗ್ಡೆ ಆಸ್ಪತ್ರೆ, ದ.ಕ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪ್ರಾಥಮಿಕ ಆರೋಗ್ಯ ಕೇಂದ್ರ ಕೋಟೆಕಾರ್, ಉಚ್ಚಿಲ ಬೋವಿ ವಿದ್ಯಾ ಸಂಸ್ಥೆಗಳು ಉಚ್ಚಿಲ ಇವುಗಳ ಸಂಯುಕ್ತಾಶ್ರಯದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಉಚಿತ ಆರೋಗ್ಯ ಹಾಗೂ ಕಣ್ಣಿನ ತಪಾಸಣಾ ಶಿಬಿರ ಉಚ್ಚಿಲ ಬೋವಿ ವಿದ್ಯಾ ಸಂಸ್ಥೆಗಳ ವಜ್ರಮಹೋತ್ಸವ ಸ್ಮಾರಕ ಕಟ್ಟಡದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಸಮಾಜದಲ್ಲಿ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಗ್ರಾಮೀಣ ಭಾಗದ ಜನರಿಗೆ ತಜ್ಞ ವೈದ್ಯರಿಂದ…
ದಕ್ಷಿಣ ಕನ್ನಡ ಜಿಲ್ಲೆಗೆ ಕರ್ನಾಟಕ ಉಚ್ಚ ನ್ಯಾಯಾಲಯದ ಖಾಯಂ ಪೀಠ ಸ್ಥಾಪಿಸಬೇಕೆಂಬ ಬೇಡಿಕೆ ಈಗ ಕೇವಲ ವಕೀಲರ ಅಥವಾ ನಿರ್ದಿಷ್ಟ ವರ್ಗದ ಬೇಡಿಕೆಯಾಗಿ ಉಳಿದಿಲ್ಲ. ಇದು ಜಿಲ್ಲೆಯ ಪ್ರತಿಯೊಬ್ಬ ಸಾಮಾನ್ಯ ನಾಗರಿಕನ ನ್ಯಾಯದ ಹಕ್ಕಿಗೆ ಸಂಬಂಧಿಸಿದ ಸಾರ್ವಜನಿಕ ಪ್ರಶ್ನೆಯಾಗಿದೆ. ವರ್ಷಗಳಿಂದ ಈ ಬೇಡಿಕೆ ಕೇಳಿಬರುತ್ತಿದ್ದರೂ, ಸರ್ಕಾರಗಳು ಬದಲಾಗಿವೆ, ಜನಪ್ರತಿನಿಧಿಗಳು ಬದಲಾಗಿದ್ದಾರೆ, ಆದರೆ ದಕ್ಷಿಣ ಕನ್ನಡದ ಜನರ ಬೇಡಿಕೆಗೆ ಮಾತ್ರ ಇನ್ನೂ ಸ್ಪಷ್ಟ ಪರಿಹಾರ ಸಿಕ್ಕಿಲ್ಲ. ನ್ಯಾಯ ಪಡೆಯಲು ಬೆಂಗಳೂರಿನತ್ತ ಮುಖ ಮಾಡಬೇಕಾದ ಪರಿಸ್ಥಿತಿ ಸಾಮಾನ್ಯ ನಾಗರಿಕನಿಗೆ ಎಷ್ಟು ಕಷ್ಟಕರ ಎಂಬುದನ್ನು ಅಧಿಕಾರದ ಕುರ್ಚಿಯಲ್ಲಿ ಕುಳಿತವರು ಅರ್ಥಮಾಡಿಕೊಳ್ಳಬೇಕಾಗಿದೆ. ನೂರಾರು ಕಿಲೋಮೀಟರ್ ಪ್ರಯಾಣ, ಪ್ರಯಾಣದ ವೆಚ್ಚ, ವಸತಿ ವೆಚ್ಚ, ವಕೀಲರೊಂದಿಗೆ ಸಮನ್ವಯ, ಪ್ರಕರಣದ ದಿನಾಂಕಕ್ಕಾಗಿ ಪುನಃ ಪುನಃ ಪ್ರಯಾಣ—ಇವೆಲ್ಲವೂ ಸೇರಿ ನ್ಯಾಯ ಪಡೆಯುವುದೇ ಆರ್ಥಿಕವಾಗಿ ಭಾರವಾಗುತ್ತಿದೆ. ವಿಶೇಷವಾಗಿ ಹಿರಿಯ ನಾಗರಿಕರು, ಮಹಿಳೆಯರು, ಅಸ್ವಸ್ಥರು, ಬಡವರು ಮತ್ತು ದುರ್ಬಲ ವರ್ಗದ ಜನರಿಗೆ ಇದು ಇನ್ನಷ್ಟು ಕಠಿಣ. ಮಂಗಳೂರು ಕೇವಲ ಕರಾವಳಿಯ ಒಂದು ನಗರವಲ್ಲ. ಅದು ಕರ್ನಾಟಕದ…
ಉಡುಪಿ: ಮುದರಂಗಡಿಯಲ್ಲಿ ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡ ಡೇವಿಡ್ ಡಿಸೋಜಾ (55) ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆಗಸ್ಟ್ 7ರಂದು ಮಧ್ಯಾಹ್ನ 3.45ರ ಸುಮಾರಿಗೆ ಕಾಪು ತಾಲ್ಲೂಕಿನ ಮುದರಂಗಡಿಯ ಸೆಂಟ್ ಕ್ಷೇವಿಯರ್ ಚರ್ಚ್ ಕಾಂಪ್ಲೆಕ್ಸ್ನಲ್ಲಿರುವ ಪ್ರಿನ್ಸ್ ಎಂಟರ್ಪ್ರೈಸಸ್ ಕಚೇರಿಗೆ ಬಂದಿದ್ದ ಡೇವಿಡ್ ಡಿಸೋಜಾ, ಬಳಿಕ ತಮ್ಮ ಥಾರ್ ವಾಹನದ ಚಾಲಕನ ಬದಿಯ ಬಾಗಿಲ ಬಳಿ ತೆರಳುತ್ತಿದ್ದಾಗ ಬೈಕ್ನಲ್ಲಿ ಬಂದ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದರು. ತಲೆಗೆ ಗುಂಡು ತಗುಲಿ ಗಂಭೀರವಾಗಿ ಗಾಯಗೊಂಡ ಅವರನ್ನು ಉಡುಪಿಯ ಆದರ್ಶ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ವೈದ್ಯರು ಅವರು ಮೃತಪಟ್ಟಿರುವುದಾಗಿ ತಿಳಿಸಿದ್ದರು. ಈ ಸಂಬಂಧ ಶಿರ್ವ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದ್ದು, ತನಿಖೆ ಕೈಗೊಂಡ ಪೊಲೀಸರು ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ನಡೆಸಿದ್ದರು. ಕೃತ್ಯದಲ್ಲಿ ನೇರವಾಗಿ ಭಾಗಿಯಾಗಿದ್ದ ಮೂವರು ಆರೋಪಿಗಳು ಬಸ್ನಲ್ಲಿ ಭಟ್ಕಳದ ಕಡೆಗೆ ತೆರಳುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು, ಬೈಂದೂರಿನ ಒತ್ತಿನೆಣೆ ಬಳಿ ಬಸ್…
ಮಂಗಳೂರು: ಪ್ರಿನ್ಸ್ ಬಸ್ ಮಾಲಕರಾದ ಡೇವಿಡ್ ಡಿಸೋಜಾ ಅವರನ್ನು ಹಾಡುಹಗಲೇ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಅತ್ಯಂತ ಆಘಾತಕಾರಿ ಹಾಗೂ ಖಂಡನೀಯ ಎಂದು ರಾಣಿ ಅಬ್ಬಕ್ಕ ಖಾಸಗಿ ಬಸ್ ನೌಕರರ ಸಂಘ (ರಿ.), ಮಂಗಳೂರು ತೀವ್ರವಾಗಿ ಖಂಡಿಸಿದೆ. ಸಾರ್ವಜನಿಕವಾಗಿ ಗೌರವ ಹೊಂದಿದ್ದ ಬಸ್ ಉದ್ಯಮದ ಮಾಲಕರೊಬ್ಬರನ್ನು ಹಾಡುಹಗಲೇ ಗುಂಡಿಕ್ಕಿ ಹತ್ಯೆ ಮಾಡಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಇಂತಹ ಅಮಾನವೀಯ ಕೃತ್ಯಗಳು ಸಮಾಜದಲ್ಲಿ ಭಯದ ವಾತಾವರಣವನ್ನು ಸೃಷ್ಟಿಸುವುದರ ಜೊತೆಗೆ ಸಾರ್ವಜನಿಕರ ಸುರಕ್ಷತೆಯ ಬಗ್ಗೆಯೂ ಗಂಭೀರ ಪ್ರಶ್ನೆಗಳನ್ನು ಮೂಡಿಸುತ್ತವೆ ಎಂದು ಸಂಘ ತಿಳಿಸಿದೆ. ಡೇವಿಡ್ ಡಿಸೋಜಾ ಅವರ ನಿಧನಕ್ಕೆ ಸಂತಾಪ ಸೂಚಿಸಿರುವ ಸಂಘ, ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಅವರ ಕುಟುಂಬ ಸದಸ್ಯರು, ಬಂಧು-ಬಳಗ ಮತ್ತು ಆತ್ಮೀಯರಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ಕರುಣಿಸಲಿ ಎಂದು ಪ್ರಾರ್ಥಿಸಿದೆ. ಪ್ರಕರಣವನ್ನು ಸಮಗ್ರ ಹಾಗೂ ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ, ಕೃತ್ಯದಲ್ಲಿ ಭಾಗಿಯಾಗಿರುವ ಆರೋಪಿಗಳನ್ನು ಶೀಘ್ರವಾಗಿ ಬಂಧಿಸಬೇಕು. ಅಲ್ಲದೆ, ಆರೋಪಿಗಳ ವಿರುದ್ಧ ಕಾನೂನು ಪ್ರಕಾರ ಕಠಿಣ ಕ್ರಮ…
ಉಡುಪಿ, ಆ. 08 : ಜಿಲ್ಲೆಯ ಕಾಪು ತಾಲೂಕಿನ ಮುದುರಂಗಡಿ ಪೇಟೆಯಲ್ಲಿ ಹಾಡಹಗಲೇ ನಡೆದ ಡೇವಿಡ್ ಡಿಸೋಜ ಕೊಲೆ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕೊಲೆ ಪ್ರಕರಣದ ಆರೋಪಿ ರಾಜುನನ್ನು ಕಾಪು ಪಿಎಸ್ಐ ತೇಜಸ್ವಿ ಹಾಗೂ ಕಾರ್ಕಳ ಗ್ರಾಮಾಂತರ ಪಿಎಸ್ಐ ಪ್ರಸನ್ನ ನೇತೃತ್ವದ ತಂಡ ಬಂಧಿಸಿ ಕರೆತರುತ್ತಿದ್ದ ವೇಳೆ, ಬೈಂದೂರು ಸಮೀಪದ ಒತ್ತಿನೆಣೆ ಬಳಿ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದಾನೆ ಎನ್ನಲಾಗಿದೆ.ಈ ವೇಳೆ ಆರೋಪಿ ಪರಾರಿಯಾಗುವುದನ್ನು ತಡೆಯಲು ಕಾಪು ಪಿಎಸ್ಐ ತೇಜಸ್ವಿ ಅವರು ಸರ್ವೀಸ್ ಪಿಸ್ತೂಲಿನಿಂದ ರಾಜುವಿನ ಕಾಲಿಗೆ ಗುಂಡು ಹಾರಿಸಿದ್ದಾರೆ. ಬಳಿಕ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ.ಘಟನೆಯಲ್ಲಿ ಪಿಎಸ್ಐ ತೇಜಸ್ವಿ ಅವರಿಗೂ ಗಾಯವಾಗಿದ್ದು, ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆಗೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಭೇಟಿ ನೀಡಿ ತೇಜಸ್ವಿ ಅವರ ಆರೋಗ್ಯ ವಿಚಾರಿಸಿದ್ದಾರೆ.ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.
ಮಂಗಳೂರು, ಆ. 07: ನಗರ ಪಾಲಿಕೆ ವ್ಯಾಪ್ತಿಯಲ್ಲಿ ನಗರದಾದ್ಯಂತ ಹತ್ತಕ್ಕೂ ಹೆಚ್ಚು ಬಾರ್ ಮತ್ತು ಪಬ್ಗಳ ಮೇಲೆ ಬುಧವಾರ ರಾತ್ರಿ ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ ಬಾರ್ಗೆ ಆಗಮಿಸಿದವರ ಗುರುತಿನ ಚೀಟಿ ತಪಾಸಣೆ ನಡೆಸಲಾಯಿತು. ಅಪ್ರಾಪ್ತ ವಯಸ್ಕರಿಗೆ ಮದ್ಯ ಪೂರೈಸದಂತೆ ಪರವಾನಗಿದಾರರಿಗೆ ಸೂಚಿಸಲಾಯಿತು. ಮದ್ಯ ಪೂರೈಸಿದಲ್ಲಿ ಕಠಿಣ ಕ್ರಮ ಕೈಗೊಳ್ಳುವುದಾಗಿ, ಅಬಕಾರಿ ಅಧಿಕಾರಿಗಳು ಎಚ್ಚರಿಸಿದರುರಾತ್ರಿ 8 ಗಂಟೆಯಿಂದ 10.30 ರವರೆಗೆ ನಡೆದ ವಿಶೇಷ ಕಾರ್ಯಾಚರಣೆಯಲ್ಲಿ ಅಧಿಕಾರಿಗಳು ಏಕಕಾಲದಲ್ಲಿ ಅನೇಕ ಸ್ಥಳಗಳಲ್ಲಿ ದಾಳಿ ನಡೆಸಲಾಯಿತು. ಅಬಕಾರಿ ಉಪ ಆಯುಕ್ತ ಬಿಂದುಶ್ರೀ ಅವರ ಮಾರ್ಗದರ್ಶನದಲ್ಲಿ ಈ ಕಾರ್ಯಾಚರಣೆಯನ್ನು ನಡೆಸಲಾಯಿತು.ದಾಳಿಯ ಸಮಯದಲ್ಲಿ, ಅಧಿಕಾರಿಗಳು ಗ್ರಾಹಕರ ವಯಸ್ಸಿನ ಪುರಾವೆಗಳನ್ನು ಕಟ್ಟುನಿಟ್ಟಾಗಿ ಪರಿಶೀಲಿಸಿದರು. “ನಾವು 10 ಕ್ಕೂ ಹೆಚ್ಚು ಅಂಗಡಿಗಳನ್ನು ಪರಿಶೀಲಿಸಿದ್ದೇವೆ ಮತ್ತು ಗ್ರಾಹಕರ ಗುರುತಿನ ದಾಖಲೆಗಳನ್ನು ಪರಿಶೀಲಿಸಿದ್ದೇವೆ. ಯಾವುದೇ ಅಕ್ರಮಗಳು ಪತ್ತೆಯಾಗಿಲ್ಲ. ಆದರೆ , 21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮದ್ಯವನ್ನು ನೀಡಬಾರದು ಎಂದು ಮಾಲೀಕರು ಮತ್ತು ಉದ್ಯೋಗಿಗಳಿಗೆ ಕಟ್ಟುನಿಟ್ಟಿನ ಎಚ್ಚರಿಕೆಗಳನ್ನು ನೀಡಲಾಗಿದೆ ಎಂದು…
ಉಡುಪಿ, ಆಗಸ್ಟ್ 07: ಜಿಲ್ಲೆಯ ಕುಂದಾಪುರದ ಬೆಳ್ಳಾಲದಲ್ಲಿ ಅಮಾನವೀಯ ಘಟನೆಯೊಂದು ನಡೆದಿದ್ದು, ಯುವಕನೋರ್ವನನ್ನು ಮನೆಗೆ ಕರೆಸಿದ ಯುವತಿಯ ಕುಟುಂಬಸ್ಥರು ಆತನನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿದ್ದಾರೆ. ಸನತ್ ಎನ್ನುವ ಯುವಕನ ಮೇಲೆ ಪೈಶಾಚಿಕ ಕೃತ್ಯ ನಡೆಸಲಾಗಿದ್ದು, ಯುವತಿ ಮತ್ತು ಈತ ಒಂದೇ ಸಂಸ್ಥೆಯಲ್ಲಿ ಕೆಲಸಕ್ಕಿದ್ದರು. ಬಳಿಕ ಇಬ್ಬರ ನಡುವೆ ಪ್ರೀತಿ ಹುಟ್ಟಿಕೊಂಡಿತ್ತು. ಇದೇ ಸಮಯದಲ್ಲಿ ಸನತ್ ನಿಂದ 50 ಸಾವಿರ ಹಣವನ್ನು ಯವತಿ ಸಾಲ ತೆಗೆದುಕೊಂಡಿದ್ದಳು ಎಂಬುದು ತಿಳಿದುಬಂದಿದೆ. ದೂರು-ಪ್ರತಿದೂರುಗಳು ದಾಖಲು ಸನತ್ನಿಂದ ಸಾಲ ಪಡೆದ ಬಳಿಕ ಯುವತಿ ಕೆಲಸ ತೊರೆದಿದ್ದಲ್ಲದೆ, ಈತನ ಕರೆ ಸ್ವೀಕರಸದೆ ಸತಾಯಿಸುತ್ತಿದ್ದಳು. ಸಾಲ ನೀಡಿದ್ದ 50 ಸಾವಿರ ಹಣ ವಾಪಸ್ಸು ಕೇಳಿದಾಗ ಮನೆಗೆ ಬರುವಂತೆ ಆಕೆ ತಿಳಿಸಿದ್ದಳು. ಯುವತಿ ಕರೆದಳೆಂದು ಮನೆ ಬಳಿ ಹೋಗಿದ್ದ ಸನತ್ ಮೇಲೆ ಹಲ್ಲೆ ನಡೆಸಲಾಗಿದ್ದು, ಸಾಲದ್ದಕ್ಕೆ ಆತನ ಮೇಲೆಯೇ ಅಟ್ರಾಸಿಟಿ ಕಾಯ್ದೆ, ಲೈಂಗಿಕ ದೌರ್ಜನ್ಯದಡಿ ದೂರು ದಾಖಲಿದ್ದಳು ಎಂದು ದೂರಲಾಗಿದೆ. ಘಟನೆ ಬಗ್ಗೆ ಯುವಕ ಸನತ್ ಕೂಡ ಬೈಂದೂರು ಠಾಣೆಯಲ್ಲಿ ದೂರು…

