ಮಂಗಳೂರು, ನ.7; ಕರ್ನಾಟಕ ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಕಾಲೇಜುಗಳಲ್ಲಿ ಅವೈಜ್ಞಾನಿಕವಾಗಿ ಹೊರಡಿಸಿರುವ ಮತ್ತು ಹೊರಡಿಸುತ್ತಿರುವ ಆದೇಶಗಳನ್ನು ಹಿಂಪಡೆಯುವAತೆ ಜಿಲ್ಲಾಧಿಕಾರಿ ಮೂಲಕ ಶಿಕ್ಷಣ ಇಲಾಖೆಗೆ ದ.ಕ.ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘ ಹಾಗೂ ಉಪನ್ಯಾಸಕರ ಸಂಘ ಮನವಿ ಮಾಡಿಕೊಂಡಿದೆ. ಕರ್ನಾಟಕ ರಾಜ್ಯ ಶಾಲಾಶಿಕ್ಷಣ (ಪದವಿಪೂರ್ವ) ಕಾಲೇಜುಗಳ ಪ್ರಾಂಶುಪಾಲರ ಸಂಘ (ರಿ.) ಮತ್ತು ಕರ್ನಾಟಕ ರಾಜ್ಯ ಶಾಲಾಶಿಕ್ಷಣ (ಪದವಿಪೂರ್ವ) ಕಾಲೇಜುಗಳ ಉಪನ್ಯಾಸಕರ ಸಂಘ ಮನವಿ ಮಾಡಿರುವ ಪತ್ರದಲ್ಲಿ ಕೆಲ ವಿಚಾರಗಳನ್ನು ಉಲ್ಲೇಖಿಸಿದ್ದಾರೆ. ಇತ್ತೀಚೆಗೆ ಶಾಲಾಶಿಕ್ಷಣ ಇಲಾಖೆ (ಪದವಿ ಪೂರ್ವ) ಕಾಲೇಜುಗಳಿಗೆ ಪೂರಕವಲ್ಲದ ಆದೇಶಗಳು ಬರುತ್ತಿರುವುದು ದೈನಂದಿನ ಚಟುವಟಿಕೆಗಳ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರು ಮತ್ತು ಉಪನ್ಯಾಸಕರುಗಳು ಆತ್ಮಸ್ಥೆöÊರ್ಯವನ್ನು ಕುಗ್ಗಿಸುತ್ತಿದೆ. ಇದರ ಪರಿಣಾಮವಾಗಿ ಪದವಿ ಪೂರ್ವ ಕಾಲೇಜುಗಳ ಭವಿಷ್ಯ ಡೋಲಾಯನ ಸ್ಥಿತಿಗೆ ತಲುಪುತ್ತಿದೆ. ಪರೀಕ್ಷಾ ಮಂಡಳಿಯನ್ನು ಪದವಿಪೂರ್ವ ಇಲಾಖೆಯಿಂದ ಪ್ರತ್ಯೇಕಿಸಿದ ನಂತರ ದೇಶದಲ್ಲಿ ಮಾದರಿಯಾಗಿದ್ದ ಪದವಿ ಪೂರ್ವ ಶಿಕ್ಷಣ ತನ್ನ ಅಸ್ತಿತ್ವ ಕಳೆದುಕೊಳ್ಳುತ್ತಿದೆ. ಇತ್ತೀಚೆಗೆ ಪದವಿಪೂರ್ವ ಶಿಕ್ಷಣಕ್ಕೆ ಸಂಬAಧವೇ…
Author: UllalaVani
ರಾಯಚೂರು/ ಕೊಪ್ಪಳ, ನ.7; 9ನೇ ತರಗತಿ ವಿದ್ಯಾರ್ಥಿನಿ ಗರ್ಭಿಣಿಯಾಗಿರುವ ಆಘಾತಕಾರಿ ಘಟನೆ ರಾಯಚೂರು ಜಿಲ್ಲೆಯ ಮಸ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಶಾಲೆಗೆ ಹೋಗಿ ಉತ್ತಮ ವಿದ್ಯಾಭ್ಯಾಸ ಪಡೆದು ಜೀವನಕಟ್ಟಿಕೊಳ್ಳಬೇಕಾದ 9ನೇ ತರಗತಿ ವಿದ್ಯಾರ್ಥಿನಿ ಪ್ರೇಮದ ಬಲೆಗೆ ಬಿದ್ದು, ಜೀವನವನ್ನೇ ಹಾಳುಮಾಡಿಕೊಂಡಿದ್ದಾಳೆ. ಹೌದು, ಸಂತ್ರಸ್ತ ವಿದ್ಯಾರ್ಥಿನಿಯ ತಂದೆ ಚಿಕನ್ ಶಾಪ್ ಹೊಂದಿದ್ದು, ಇಲ್ಲಿ ಮಾಂಸ ಖರೀದಿಗೆ ಬಂದಿದ್ದ ಆರೋಪಿ ಶಿವಮೂರ್ತಿ ಫೋನ್ ಪೇ ಮೂಲಕ ಹಣ ಪಾವತಿಸಿದ್ದ. ಬಳಿಕ ಫೋನ್ ಪೇ ಮಾಡಿರುವ ಮೊಬೈಲ್ ಸಂಖ್ಯೆಯನ್ನ ಆತ ಸಂಪರ್ಕಿಸಿದ್ದು, ಸಂತ್ರಸ್ತೆಯ ಪರಿಚಯವಾಗಿದೆ. ಬಳಿಕ ಇಬ್ಬರ ನಡುವೆ ಪ್ರೀತಿ ಆರಂಭವಾಗಿದ್ದು, ದೈಹಿಕ ಸಂಪರ್ಕದವರೆಗೂ ಹೋಗಿದೆ. ಈ ನಡುವೆ ಅಕ್ಟೋಬರ್ 30ರ ರಾತ್ರಿ ಸಂತ್ರಸ್ತೆ ನಾಪತ್ತೆಯಾಗಿದ್ದು, ಮನೆಯವರೆಲ್ಲ ಸೇರಿ ಹುಡುಕಿದರೂ ಆಕೆಯ ಸುಳಿವು ಸಿಕ್ಕಿರುವುದಿಲ್ಲ. ಈ ಹಿನ್ನಲೆ ಪೋಷಕರು ಮಗಳು ನಾಪತ್ತೆಯಾಗಿದ್ದಾಳೆ ಎಂದು ದೂರು ದಾಖಲಿಸಿದ್ದರು. ಪೊಲೀಸರು ಕೇಸ್ ಬೆನ್ನುಹತ್ತಿದಾಗ ನಾಪತ್ತೆಯಾಗಿರೋ ಬಾಲಕಿ ಗರ್ಭಿಣಿ ಎಂಬ ವಿಷಯ ಬೆಳಕಿಗೆ ಬಂದಿದೆ. ಆರೋಪಿ ಶಿವಮೂರ್ತಿ(25) ಎಂಬಾತನನ್ನು…
ಮಂಗಳೂರು : ಖ್ಯಾತ ಉದ್ಯಮಿ ತಿರುವೈಲು ಗುತ್ತು ನವೀನ್ ಚಂದ್ರ ಆಳ್ವ ಪುತ್ರ ಯುವ ಉದ್ಯಮಿ ಅಭಿಷೇಕ್ ಆಳ್ವ ಶಾಂಭವಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತ ಉದ್ಯಮಿ ಅಭಿಷೇಕ್ ಎಂದು ತಿಳಿದುಬಂದಿದೆ. ನವೆಂಬರ್ 5ರ ರಾತ್ರಿ ನಾಪತ್ತೆಯಾಗಿದ್ದ ಅಭಿಷೇಕ್ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿತ್ತು, ಆತನ ಕಾರು,ಮೊಬೈಲ್ ಹಾಗೂ ವಾಚ್ ಸ್ಥಳದಲ್ಲಿ ಪತ್ತೆಯಾಗಿತ್ತು. ಇದೀಗ ಬಪ್ಪನಾಡು ಸಮೀಪದ ಶಾಂಭವಿ ನದಿ ತೀರದಲ್ಲಿ ಅಭಿಷೇಕ್ ಅವರ ಮೃತದೇಹ ಪತ್ತೆಯಾಗಿದೆ. ನದಿಯಲ್ಲಿ ತೇಲುತ್ತಿದ್ದ ಮೃತದೇಹವನ್ನು ಸ್ಥಳೀಯರು ಗುರುತಿಸಿ ಪೊಲೀಸ್ಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಪೊಲೀಸ್ ತಂಡ ಸ್ಥಳಕ್ಕೆ ಆಗಮಿಸಿ ಮೃತದೇಹವನ್ನು ವಶಕ್ಕೆ ಪಡೆದಿದ್ದಾರೆ. ಮುಲ್ಕಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧಿಸಿ ಪ್ರಕರಣ ದಾಖಲಾಗಿದ್ದು, ಆತ್ಮಹತ್ಯೆಯ ಶಂಕೆಯ ಮೇಲೆ ತನಿಖೆ ಆರಂಭವಾಗಿದೆ.
ಬಜ್ಪೆ ; ನ. 07 ; ಬಜ್ಪೆ ಸಮೀಪದ ಕಂದಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ ಸೌಹಾರ್ದ ನಗರದಲ್ಲಿ ಗುರುವಾರ 6 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳು ದಾಳಿ ಮಾಡಿದ್ದು, ಬಾಲಕ ಗಾಯಗೊಂಡಿದ್ದಾನೆ. ಗಾಯಗೊಂಡ ಬಾಲಕನನ್ನು ಸೌಹಾರ್ದ ನಗರದ ನಿವಾಸಿ ಮುಹಮ್ಮದ್ ಅಝರ್ ಅವರ ಪುತ್ರ ಅಹಿಲ್ ಎಂದು ಗುರುತಿಸಲಾಗಿದೆ.ಅಹಿಲ್ ಮದರಸದಿಂದ ಮನೆಗೆ ಹಿಂದಿರುಗುತ್ತಿದ್ದಾಗ ಈ ಘಟನೆ ನಡೆದಿದೆ. ಬೀದಿ ನಾಯಿಗಳ ಗುಂಪೊಂದು ದಿಢೀರನೇ ಬಾಲಕನನ್ನು ಸುತ್ತುವರಿದು ದಾಳಿ ಮಾಡಿದೆ. ನಾಯಿಗಳು ಬಾಲಕನ ಕೆನ್ನೆ ಮತ್ತು ಕೈಗೆ ಕಚ್ಚಿ ಗಂಭೀರ ಗಾಯಗೊಳಿಸಿದೆ.ಬಾಲಕನ ಬೊಬ್ಬೆ ಕೇಳಿದ ತಾಯಿ ತಕ್ಷಣ ಮನೆಯಿಂದ ಹೊರಗೆ ಓಡಿ ಬಂದು ಮಗನನ್ನು ರಕ್ಷಿಸಿದ್ದಾರೆ. ತಕ್ಷಣವೇ ಬಾಲಕನನ್ನು ಬಜ್ಪೆ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು ಮತ್ತು ಹೆಚ್ಚಿನ ಚಿಕಿತ್ಸೆಗಾಗಿ ಕಟೀಲಿನ ದುರ್ಗ ಸಂಜೀವಿನಿ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆಯ ಬಗ್ಗೆ ಮಾತನಾಡಿದ ಬಾಲಕನ ಚಿಕ್ಕಪ್ಪ, ಮುಹಮ್ಮದ್ ಮುಝಮ್ಮಿಲ್ ಅವರು, ಪ್ರದೇಶದಲ್ಲಿ ಪದೇ ಪದೇ ನಡೆಯುತ್ತಿರುವ ಬೀದಿ ನಾಯಿಗಳ ಹಾವಳಿಯಿಂದ ಬೇಸರ ವ್ಯಕ್ತಪಡಿಸಿದರು.…
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಸುರತ್ಕಲ್ ಶಾಖೆಯ 13ನೇ ವಾರ್ಷಿಕೋತ್ಸವದ ಪ್ರಯುಕ್ತ ಗ್ರಾಹಕರ ಸಭೆಯು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ರವರ ಅಧ್ಯಕ್ಷತೆಯಲ್ಲಿ ಸುರತ್ಕಲ್ ಶಾಖೆಯಲ್ಲಿ ಜರುಗಿತು. ಕಾರ್ಯಕ್ರಮವನ್ನು ಸಂಘದ ಸದಸ್ಯರುಗಳಾದ ಸತೀಶ್ಚಂದ್ರ, ಜಗದೀಶ ಕೋಟ್ಯಾನ್ , ಶ್ರೀ ಮಾಧವ ಎಮ್ ಅಂಚನ್,ಲಕ್ಷ÷್ಮಣ್ ಸಾಲ್ಯಾನ್, ಚಂದ್ರಶೇಖರ್ ನಲಿಲು ರೈ , ಸೀತಾಲಕ್ಷಿ÷್ಮ ಕುಳಾಯಿ ದೀಪ ಪ್ರಜ್ವಲನೆ ಮಾಡಿ ಉದ್ಘಾಟಿಸಿದರು. ಸಂಘದ ಸದಸ್ಯರಾದ ಮಾಧವ ಎಮ್ ಅಂಚನ್ ರವರು ಮಾತನಾಡಿ “ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ರವರ ನೇತ್ರತ್ವದಲ್ಲಿ ಉತ್ತಮ ರೀತಿಯಲ್ಲಿ ವ್ಯವಹಾರ ನಡೆಸುತ್ತಿದ್ದು, ಗ್ರಾಹಕರಿಗೆ ಉತ್ತಮ ಸೇವೆಯನ್ನು ನೀಡುತ್ತಿದೆ. ಸಂಘವು ಇನ್ನಷ್ಟು ಅಭಿವೃದ್ಧಿ ಹೊಂದಲಿ ಎಂದು ಶುಭ ಹಾರೈಸಿದರು. ಸದಸ್ಯರಾದ ಚಂದ್ರಶೇಖರ್ ನಲಿಲು ರೈ ರವರು ಮಾತನಾಡಿ “ಸುರತ್ಕಲ್ ಶಾಖೆಯು ಇತ್ತೀಚಿಗೆ ನವೀಕೃತ ಹಾಗೂ ಸುಸಜ್ಜಿತ ಹವಾನಿಯಂತ್ರಣ ಕೊಠಡಿಗೆ ಸ್ಥಳಾಂತರ ಗೊಂಡಿರುವುದಕ್ಕೆ ಸಂತೋಷ ವ್ಯಕ್ತಪಡಿಸಿ, ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು…
ಪ್ರಧಾನಿ ನರೇಂದ್ರ ಮೋದಿಜಿಯ “ಡಿಜಿಟಲ್ ಇಂಡಿಯಾ” ಯೋಜನೆ ದೇಶವನ್ನು ತಂತ್ರಜ್ಞಾನದಲ್ಲಿ ಪ್ರಗತಿಯ ಪಥದತ್ತ ಮುನ್ನಡೆಸಬೇಕಾದರೆ, ಅದೇ ಯೋಜನೆ ಇಂದು ಸೈಬರ್ ಅಪರಾಧಿಗಳ ಆಟದ ಮೈದಾನವಾಗಿ ಪರಿಣಮಿಸಿದೆ. “ಡಿಜಿಟಲ್ ಅರೆಸ್ಟ್” ಹೆಸರಿನಲ್ಲಿ ನಡೆದ ₹3 ಸಾವಿರ ಕೋಟಿ ರೂ. ವಂಚನೆ ಪ್ರಕರಣ ಸುಪ್ರೀಂ ಕೋರ್ಟ್ನಿಗೂ ಆಘಾತ ತಂದಿದ್ದರೂ, ಕಠಿಣ ಕಾನೂನು ರೂಪಿಸಬೇಕಾದ ಸಂಸದರು ಇನ್ನೂ ಕುಂಭಕರ್ಣನ ನಿದ್ರೆಯಲ್ಲಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆನ್ಲೈನ್ ವಂಚನೆ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಬಡ ಜನರು ತಮ್ಮ ಕಷ್ಟಪಟ್ಟು ಗಳಿಸಿದ ಹಣ ಕಳೆದುಕೊಳ್ಳುತ್ತಿದ್ದಾರೆ. ಜನರ ಧ್ವನಿಯಾಗಿ ನಿಲ್ಲಬೇಕಾದ ಸಂಸದರು ಮತ್ತು ಶಾಸಕರು ಮೌನಿ ಬಾಬಗಳಾಗಿ ಪರಿಣಮಿಸಿದ್ದಾರೆ. ಒಂದು ಕಾಲದಲ್ಲಿ “ಬುದ್ಧಿವಂತರ ಜಿಲ್ಲೆ” ಎಂದು ಹೆಮ್ಮೆಪಟ್ಟ ದ.ಕ ಜಿಲ್ಲೆ, ಇಂದು ಸೈಬರ್ ಮೋಸದ ಕೇಂದ್ರವಾಗಿ ಹೆಸರು ಮಾಡುತ್ತಿದೆ — ಇದು ನೋವಿನ ಸಂಗತಿ. ರಾಜಕೀಯದ ಶಕ್ತಿ ಜನರ ಸಮಸ್ಯೆ ಪರಿಹಾರದಲ್ಲಿ ಕಾಣಿಸಬೇಕಾದರೆ, ಅದು ಇಂದಿನ ನಾಯಕರಲ್ಲಿ ಕಾಣಿಸುತ್ತಿಲ್ಲ. ಬುದ್ಧಿವಂತಿಕೆ ಈಗ ಕೋಮು ರಾಜಕೀಯಕ್ಕೆ ಮಾತ್ರ ಉಪಯೋಗವಾಗುತ್ತಿದೆ. ಸಮಾಜ…
ಹಾಜರಾತಿ ಕೊರತೆಯನ್ನು ಆಧರಿಸಿ ವಿದ್ಯಾರ್ಥಿಗಳಿಗೆ ಸೆಮಿಸ್ಟರ್ ಪರೀಕ್ಷೆಗೆ ಅವಕಾಶ ನಿರಾಕರಿಸುವ ಖಾಸಗಿ ಶಿಕ್ಷಣ ಸಂಸ್ಥೆಗಳ ದರ್ಪಕ್ಕೆ ಹೈಕೋರ್ಟ್ ಕಡಿವಾಣ ಹಾಕಿದೆ. ಈ ತೀರ್ಪು ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಮೈಲಿಗಲ್ಲಾಗಿದೆ. ಕಳೆದ ಕೆಲವು ವರ್ಷಗಳಿಂದ, ಕೆಲವು ಶಿಕ್ಷಣ ಸಂಸ್ಥೆಗಳು ಕಡ್ಡಾಯ ಹಾಜರಾತಿಯ ನಿಯಮವನ್ನು ದುರ್ಬಳಕೆ ಮಾಡಿಕೊಂಡು ವಿದ್ಯಾರ್ಥಿಗಳನ್ನು ಪರೀಕ್ಷೆಯಿಂದ ವಂಚಿಸುತ್ತಿದ್ದವು. ಈ ಕಾರಣದಿಂದ ಒಬ್ಬ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾದ ದುರಂತ ಸಂಭವಿಸಿತ್ತು. ಈ ಘಟನೆ ಸುಪ್ರೀಂ ಕೋರ್ಟ್ನ ಗಮನಕ್ಕೆ ಬಂದ ನಂತರ, ವಿಷಯವನ್ನು ಹೈಕೋರ್ಟ್ಗೆ ವರ್ಗಾಯಿಸಲಾಯಿತು. ಹೈಕೋರ್ಟ್ ತನ್ನ 122 ಪುಟಗಳ ವಿವರವಾದ ಆದೇಶದಲ್ಲಿ, ಭಾರತದ ಎಲ್ಲಾ ಮಾನ್ಯತೆ ಪಡೆದ ಕಾನೂನು ಕಾಲೇಜುಗಳು, ವಿಶ್ವವಿದ್ಯಾಲಯಗಳು ಮತ್ತು ಶಿಕ್ಷಣ ಸಂಸ್ಥೆಗಳು ಕೇವಲ ಹಾಜರಾತಿ ಕೊರತೆಯ ಆಧಾರದ ಮೇಲೆ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಕೂರಲು ನಿರಾಕರಿಸಬಾರದೆಂದು ಸ್ಪಷ್ಟವಾಗಿ ತಿಳಿಸಿದೆ. ಈ ತೀರ್ಪು ವಿದ್ಯಾರ್ಥಿಗಳ ಹಕ್ಕುಗಳನ್ನು ರಕ್ಷಿಸುವ ಜೊತೆಗೆ ಶಿಕ್ಷಣ ಸಂಸ್ಥೆಗಳಿಗೆ ಜವಾಬ್ದಾರಿಯನ್ನು ವಿಧಿಸಿದೆ. ಈ ಆದೇಶವು ಶಿಕ್ಷಣ ಕ್ಷೇತ್ರದಲ್ಲಿ ಪಾರದರ್ಶಕತೆ ಮತ್ತು ನ್ಯಾಯವನ್ನು ಒತ್ತಿಹೇಳುವ ಮಹತ್ವದ ಹೆಜ್ಜೆಯಾಗಿದೆ.…
ಉಳ್ಳಾಲ: 21 ವಿದ್ಯಾರ್ಥಿಗಳಿಂದ ಆರಂಭ ಕಂಡ 43 ವರ್ಷಗಳ ಇತಿಹಾಸವಿರುವ ತೊಕ್ಕೊಟ್ಟು ಪೆರ್ಮನ್ನೂರಿನ ಸಂತ ಸೆಬಾಸ್ತಿಯನ್ನರ ಪ್ರೌಢಶಾಲೆಯ ಹಳೇ ವಿದ್ಯಾರ್ಥಿಗಳು ಜತೆಯಾಗುತ್ತಿದ್ದಾರೆ. ಸವಿನೆನಪು ಇದು ಹಳೇ ನೆನಪುಗಳ ಮೆಲುಕು ಅನ್ನುವ ಕಾರ್ಯಕ್ರಮದಡಿ 1996 ಎಸ್ಎಸ್ಎಲ್ಸಿ ಬ್ಯಾಚ್ ಮತ್ತು 1996-2002 ಹಳೇಯ ದಿನಗಳನ್ನು ನ.7 ರಂದು ಮೆಲುಕು ಹಾಕಲಿದ್ದಾರೆ. ಕಾಲ ಬದಲಾದರೂ, ಕೆಲವು ನೆನಪುಗಳು ಕಾಲದ ಗಾಳಿ ತಾಕದಂತೆಯೇ ಅಚ್ಚಳಿಯದೆ ಉಳಿಯುತ್ತವೆ. ಆ ನೆನಪುಗಳಲ್ಲಿ ಸಂತ ಸೆಬಾಸ್ತಿಯನ್ನರ ಪ್ರೌಢಶಾಲೆ, ಪೆರ್ಮನ್ನೂರು ಒಂದಾಗಿದೆ. ಕೇವಲ 21 ವಿದ್ಯಾರ್ಥಿಗಳೊಂದಿಗೆ 1983ರಲ್ಲಿ ಆರಂಭವಾದ ಈ ವಿದ್ಯಾಸಂಸ್ಥೆ ಇಂದು ಸಾವಿರಾರು ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡಿ ಜೀವನ ರೂಪಿಸಿಕೊಳ್ಳುವತ್ತ ದಾರಿಯನ್ನು ಮಾಡಿಕೊಡುತ್ತಲೇ ಇದೆ. ವಂ. ಫಾ. ಹೆರಾಲ್ಡ್ ಡಿಸೋಜ, ಫಾ. ಪೀಟರ್ ಸೆರಾವೊ, ಹಾಗೂ ಅನೇಕ ಸಂಚಾಲಕರ, ಪ್ರಾಂಶುಪಾಲರ, ಶಿಕ್ಷಕರ ಅಹೋರಾತ್ರಿ ಶ್ರಮದಿಂದ ಈ ಸಂಸ್ಥೆ ಶಿಕ್ಷಣ ಕ್ಷೇತ್ರದಲ್ಲಿ ಅಸಾಧಾರಣ ಗುರುತನ್ನು ಮೂಡಿಸಿದೆ. ಸಂತ ಸೆಬಾಸ್ತಿಯನ್ನರ ವಿದ್ಯಾಸಂಸ್ಥೆಯ ಬೆಳವಣಿಗೆಯ ಹಾದಿಯಲ್ಲಿ ಅನೇಕ ಧರ್ಮಗುರುಗಳು ತಮ್ಮ ಅಮೂಲ್ಯ ಕೊಡುಗೆಯನ್ನು ನೀಡಿದ್ದಾರೆ. 25…
ರಾಜ್ಯದ ಪ್ರಸಿದ್ಧ ಹಾಗೂ ಶ್ರೀಮಂತ ದೇವಾಲಯಗಳಲ್ಲಿ ಒಂದಾದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಾಲಯದ ಹೆಸರಿನಲ್ಲಿ ಸೈಬರ್ ಕಳ್ಳರು ನಕಲಿ ವೆಬ್ಸೈಟ್ ತೆರೆದು ಭಕ್ತರನ್ನು ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. ಭಕ್ತರು ದೇವಾಲಯದ ಅತಿಥಿ ಗೃಹದಲ್ಲಿ ಕೊಠಡಿ ಕಾಯ್ದಿರಿಸಲು ಬಳಸುವ ಅಧಿಕೃತ ವೆಬ್ಸೈಟ್ಗೆ ಹೋಲಿಕೆಯ ನಕಲಿ ಸೈಟ್ ತೆರೆಯಲ್ಪಟ್ಟಿದ್ದು, ಮುಂಗಡ ಬುಕಿಂಗ್ ಹೆಸರಿನಲ್ಲಿ ಹಣ ಕಸಿಕೊಳ್ಳಲಾಗುತ್ತಿದೆ. “ಕರ್ನಾಟಕ ಟೆಂಪಲ್ ಅಕಮಡೇಶನ್” ಎಂಬ ಹೆಸರಿನಲ್ಲಿ ಸೈಬರ್ ಅಪರಾಧಿಗಳು ನಕಲಿ ವೆಬ್ಸೈಟ್ ನಿರ್ಮಿಸಿದ್ದು, ಅದರಲ್ಲಿ QR ಕೋಡ್ ಮತ್ತು ಫೋನ್ಪೇ ಪಾವತಿ ಆಯ್ಕೆಗಳು ಸೇರಿಸಲಾಗಿದೆ. ವಾಟ್ಸಾಪ್ ಮೂಲಕ ಭಕ್ತರಿಗೆ ಈ ಲಿಂಕ್ ಕಳುಹಿಸಿ, ಯುಪಿಐ ಪಾವತಿಗೆ ಪ್ರೇರೇಪಿಸಿ ನಕಲಿ ರಶೀದಿಗಳನ್ನು ನೀಡಲಾಗುತ್ತಿತ್ತು. ಆದರೆ ಭಕ್ತರು ಕೊಲ್ಲೂರಿಗೆ ಬಂದಾಗ ನೋಂದಣಿ ದಾಖಲೆ ಸಿಗದೆ ಸಂಕಷ್ಟಕ್ಕೀಡಾಗಿದ್ದರಿಂದ ವಂಚನೆ ಬಯಲಿಗೆ ಬಂದಿದೆ.ಘಟನೆ ಕುರಿತು ದೇವಾಲಯದ ಆಡಳಿತಾಧಿಕಾರಿಗಳು ತಕ್ಷಣ ಕ್ರಮ ಕೈಗೊಂಡಿದ್ದು, ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೇವಾಲಯದ ಪಕ್ಕದಲ್ಲಿರುವ ಲಲಿತಾಂಬಿಕಾ ಅತಿಥಿ ಗೃಹದಲ್ಲಿ ಕೊಠಡಿ ಕಾಯ್ದಿರಿಸುವ ಹೆಸರಿನಲ್ಲಿ ಈ…
ಬೆಂಗಳೂರು, ನ. 06 ಕನ್ನಡ ಚಿತ್ರರಂಗದ ಖ್ಯಾತ ಖಳನಟ ಹರೀಶ್ ರಾಯ್ ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದು ರ ಇಂದು ನಿಧನ ಹೊಂದಿದ್ದಾರೆ. ‘ಓಂ’, ‘ನಲ್ಲ’, ‘ಕೆಜಿಎಫ್’, ‘ಕೆಜಿಎಫ್ 2’ ಸೇರಿದಂತೆ ಅನೇಕ ಸೂಪರ್ ಹಿಟ್ ಚಿತ್ರಗಳಲ್ಲಿ ತಮ್ಮ ಶಕ್ತಿಶಾಲಿ ಅಭಿನಯದಿಂದ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರರಾಗಿದ್ದ ಅವರು, ಕಳೆದ ಕೆಲವು ವರ್ಷಗಳಿಂದ ಥೈರಾಯ್ಡ್ ಕ್ಯಾನ್ಸರ್ನೊಂದಿಗೆ ಹೋರಾಟ ನಡೆಸುತ್ತಿದ್ದರು. ಹರೀಶ್ ರಾಯ್ ಅವರ ಆರೋಗ್ಯ ಕಳೆದ ತಿಂಗಳುಗಳಿಂದ ಹದಗೆಡುತ್ತಲೇ ಇತ್ತು. ಹೊಟ್ಟೆ ಉಬ್ಬರಗೊಂಡು ದೇಹ ಕೃಷಗೊಂಡಿದ್ದ ಅವರು ಗುರುತೇ ಸಿಗದಷ್ಟು ಬದಲಾವಣೆಗೆ ಒಳಗಾಗಿದ್ದರು. ತಮ್ಮ ಚಿಕಿತ್ಸೆಗೆ ಸಹಾಯಕ್ಕಾಗಿ ಅವರು ಸಾರ್ವಜನಿಕವಾಗಿ ಮನವಿ ಮಾಡಿದ್ದರು. ಈ ವೇಳೆ ನಟ ಯಶ್, ನಿರ್ಮಾಪಕ ಉಮಾಪತಿ ಶ್ರೀನಿವಾಸ್, ದರ್ಶನ್ ಅಭಿಮಾನಿ ಬಳಗ ಸೇರಿದಂತೆ ಹಲವರು ಆರ್ಥಿಕ ಸಹಾಯ ಹಸ್ತ ಚಾಚಿದ್ದರು.ತಮ್ಮ ಜೀವನದ ಕೊನೆಯ ದಿನಗಳವರೆಗೂ ಹೋರಾಟ ತೊರೆಯದ ಹರೀಶ್ ರಾಯ್ ಅವರನ್ನು ಹಲವಾರು ಸಿನಿತಾರೆಯರು ಭೇಟಿ ಮಾಡಿ ಧೈರ್ಯ ತುಂಬಿದ್ದರು. ಹಲವು ಯೂಟ್ಯೂಬರ್ಗಳೂ ಸಹ ಅವರ ಬಳಿಗೆ ತೆರಳಿ…

