ಮಂಗಳೂರು: ಉರ್ವಾದ ಸಂತ ಅಲೋಶಿಯಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶಾಲೆಯ ಮುಖ್ಯ ಶಿಕ್ಷಕರಾದ ಅಲೋಶಿಯಸ್ ಡಿಸೋಜ, “ದೈನಂದಿನ ಜೀವನದಲ್ಲಿ ಯೋಗಾಭ್ಯಾಸವನ್ನು ಅಳವಡಿಸಿಕೊಂಡು ಆರೋಗ್ಯಯುತ ಜೀವನಶೈಲಿಯನ್ನು ರೂಢಿಸಿಕೊಳ್ಳಬೇಕು. ಯೋಗವು ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ವೃದ್ಧಿಸುವ ಅತ್ಯುತ್ತಮ ಸಾಧನವಾಗಿದೆ” ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಕಾರ್ಯಕ್ರಮದಲ್ಲಿ ಹಿರಿಯ ದೈಹಿಕ ಶಿಕ್ಷಣ ಶಿಕ್ಷಕರಾದ ಪ್ರಮೊದ್ ಅರಿಗ, ಹಿರಿಯ ಶಿಕ್ಷಕಿ ಲವೀನ ಡಿಕುನ್ನ, ಶಾಲಾ ನಾಯಕ ಹರ್ಷವರ್ಧನ್, ಉಪನಾಯಕಿ ಜೇನ್ ಹಾಗೂ ವಿದ್ಯಾರ್ಥಿ ಮಂತ್ರಿಮಂಡಳಿಯ ಸದಸ್ಯರು ಉಪಸ್ಥಿತರಿದ್ದರು. ಬಳಿಕ ವಿದ್ಯಾರ್ಥಿಗಳಿಂದ ಆಕರ್ಷಕ ಯೋಗಾಸನಗಳ ಪ್ರದರ್ಶನ ನಡೆಯಿತು. ಸಮೂಹ ಗೀತೆಯ ಮೂಲಕ ಯೋಗದ ಮಹತ್ವವನ್ನು ಮನದಟ್ಟಾಗಿಸಲಾಯಿತು. 9ನೇ ತರಗತಿಯ ವಿದ್ಯಾರ್ಥಿನಿ ಆಜ್ಞಾ ಯೋಗದ ಪ್ರಾಮುಖ್ಯತೆಯ ಕುರಿತು ಮಾತನಾಡಿದರು. ದೈಹಿಕ ಶಿಕ್ಷಣ ಶಿಕ್ಷಕರಾದ ಸುಧಾಕರ್ ಹಾಗೂ ಹರಿಣಾಕ್ಷಿ ಅವರ ನೇತೃತ್ವದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. 9ನೇ ತರಗತಿಯ ವಿದ್ಯಾರ್ಥಿ ಮಯಾಂಕ್ ಕಾರ್ಯಕ್ರಮ ನಿರೂಪಿಸಿದರು. ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು.
Author: UllalaVani
ಮಂಗಳೂರು, ಜೂ. 25 : ಮಾದಕ ವಸ್ತುಗಳ ನಿಯಂತ್ರಣ ಕಾಯ್ದೆ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ. ಬಂಧಿತನನ್ನು ಕಾಸರಗೋಡು ಜಿಲ್ಲೆಯ ತೆಕ್ಕಿಲ್ನ ಶಾಫಿ ಮಂಜಿಲ್ ನಿವಾಸಿ ಮೊಹಮ್ಮದ್ ರಫೀಕ್ ಎಂದು ಗುರುತಿಸಲಾಗಿದೆ. ಪೊಲೀಸರ ಮಾಹಿತಿ ಪ್ರಕಾರ, ಮೊಹಮ್ಮದ್ ರಫೀಕ್ ವಿರುದ್ಧ ಎನ್ಡಿಪಿಎಸ್ ಕಾಯ್ದೆಯ ಸೆಕ್ಷನ್ 8(C) ಮತ್ತು 20(b)(ii)(B) ಅಡಿಯಲ್ಲಿ ಶಿಕ್ಷಾರ್ಹ ಅಪರಾಧಗಳಿಗೆ ಸಂಬಂಧಿಸಿದಂತೆ E&N ಅಪರಾಧ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 03/2021 ದಾಖಲಾಗಿತ್ತು. ಪ್ರಕರಣದ ವಿಚಾರಣೆ ನಡೆಯುತ್ತಿದ್ದ ವೇಳೆ ಆರೋಪಿ ನ್ಯಾಯಾಲಯದ ಮುಂದೆ ಹಾಜರಾಗಲು ವಿಫಲವಾಗಿದ್ದು, ಬಳಿಕ ತಲೆಮರೆಸಿಕೊಂಡಿದ್ದ. ಈ ಹಿನ್ನೆಲೆಯಲ್ಲಿ ನ್ಯಾಯಾಲಯವು ಆರೋಪಿಯ ವಿರುದ್ಧ ಬಂಧನ ವಾರಂಟ್ ಜಾರಿಗೊಳಿಸಿತ್ತು.ನ್ಯಾಯಾಲಯದ ವಾರಂಟ್ ಆಧರಿಸಿ ಕಾರ್ಯಾಚರಣೆ ನಡೆಸಿದ ಠಾಣಾಧಿಕಾರಿ ಹಾಗೂ ಸಿಬ್ಬಂದಿ ತಂಡವು ಜೂನ್ 24ರಂದು ಆರೋಪಿಯನ್ನು ಪತ್ತೆಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾಯಿತು. ಬಂಧಿತನನ್ನು ಕಾನೂನು ಕ್ರಮಕ್ಕಾಗಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ಪ್ರಕರಣದ ಮುಂದಿನ ವಿಚಾರಣೆ ನ್ಯಾಯಾಲಯದಲ್ಲಿ ನಡೆಯಲಿದೆ.
ಇತ್ತೀಚಿನ ದಿನಗಳಲ್ಲಿ ನಾಗರಿಕತ್ವ ಮತ್ತು ಗುರುತಿನ ದಾಖಲೆಗಳ ಕುರಿತು ದೇಶಾದ್ಯಂತ ಚರ್ಚೆಗಳು ನಡೆಯುತ್ತಿವೆ. ಸಾಮಾನ್ಯವಾಗಿ ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿ, ಪಾಸ್ಪೋರ್ಟ್ ಮತ್ತು ಪ್ಯಾನ್ ಕಾರ್ಡ್ ಹೊಂದಿದ್ದರೆ ತಾವು ಭಾರತೀಯರು ಎಂಬುದು ಸಾಬೀತಾಗುತ್ತದೆ ಎಂದು ಬಹುತೇಕ ಜನರು ನಂಬಿದ್ದಾರೆ. ಆದರೆ ಕಾನೂನು ಮತ್ತು ನ್ಯಾಯಾಂಗದ ವ್ಯಾಖ್ಯಾನಗಳು ಈ ವಿಷಯದಲ್ಲಿ ವಿಭಿನ್ನ ಚಿತ್ರಣವನ್ನು ನೀಡುತ್ತವೆ. ಆಧಾರ್ ಕಾರ್ಡ್ ಕೇವಲ ಗುರುತು (Identity) ಮತ್ತು ವಿಳಾಸದ (Address) ಪುರಾವೆಯಾಗಿದೆ. ಇದನ್ನು ಭಾರತೀಯ ಪೌರತ್ವ, ಜನನ ದಿನಾಂಕ ಅಥವಾ ಜಾತಿಯನ್ನು ಸಾಬೀತುಪಡಿಸಲು ಬಳಸಲಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಹಾಗೂ ಯುಐಡಿಎಐ (UIDAI) ಸ್ಪಷ್ಟಪಡಿಸಿವೆ. ಭಾರತ ಸರ್ಕಾರದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಪ್ರಕಾರ, ಪಾಸ್ಪೋರ್ಟ್ ಎಂಬುದು ಭಾರತೀಯ ಪ್ರಜೆಯೊಬ್ಬರು ಅಂತರರಾಷ್ಟ್ರೀಯ ಮಟ್ಟದಲ್ಲಿ ಪ್ರಯಾಣಿಸಲು ಬಳಸುವ ಪ್ರಯಾಣ ದಾಖಲೆಯಷ್ಟೇ. ಇದು ಭಾರತದ ಪೌರತ್ವಕ್ಕೆ ಅಂತಿಮ ಅಥವಾ ನಿರ್ಣಾಯಕ ಪುರಾವೆಯಲ್ಲ ಎಂದು ಹೇಳಲಾಗಿದೆ. ಮತದಾನ ಗುರುತಿನ ಚೀಟಿ (Voter ID/EPIC) ಕೂಡ ಭಾರತದ ಪೌರತ್ವಕ್ಕೆ ಅಥವಾ ಜನ್ಮ ದಿನಾಂಕಕ್ಕೆ…
ಹಿರಿಯ ಪತ್ರಕರ್ತ ಹಾಗೂ ರೈತಪರ ಹೋರಾಟಗಾರ ಲಕ್ಷ್ಮಣ್ ಹೂಗಾರ್ ಅವರು ಬಿಡದಿ ಟೌನ್ಶಿಪ್ ವಿರುದ್ಧ ನಡೆಯುತ್ತಿರುವ ರೈತರ ಹೋರಾಟಕ್ಕೆ ತಮ್ಮ ಬೆಂಬಲವನ್ನು ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು, ಬಿಡದಿ ಟೌನ್ಶಿಪ್ ವಿರುದ್ಧದ ಹೋರಾಟವು ಎಲ್ಲೋ ಒಂದೆಡೆ ರಾಜಕೀಯ ಬಣ್ಣ ಪಡೆದುಕೊಳ್ಳುತ್ತಿರುವುದು ವಿಷಾದನೀಯ ಬೆಳವಣಿಗೆಯಾಗಿದೆ ಎಂದು ಹೇಳಿದ್ದಾರೆ. ರಾಜಕೀಯದ ಮದಗಜಗಳೆಂದೇ ಗುರುತಿಸಿಕೊಂಡಿರುವ ಡಿ.ಕೆ. ಶಿವಕುಮಾರ್ ಹಾಗೂ ಎಚ್.ಡಿ. ಕುಮಾರಸ್ವಾಮಿ ಅವರ ನಡುವಿನ ರಾಜಕೀಯ ಕೆಸರೆರಚಾಟ ಮತ್ತು ಪ್ರತಿಷ್ಠೆಯ ಹೋರಾಟದ ನಡುವೆ, ಸುಮಾರು 400ಕ್ಕೂ ಹೆಚ್ಚು ದಿನಗಳಿಂದ ತಮ್ಮ ಹಕ್ಕು ಮತ್ತು ಹಿತಾಸಕ್ತಿಗಾಗಿ ಹೋರಾಟ ನಡೆಸುತ್ತಿರುವ ರೈತರ ನೈಜ ಸಮಸ್ಯೆಗಳು ಮರೆಯಾಗುತ್ತಿವೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ರೈತರ ಹೋರಾಟದ ಮೂಲ ಉದ್ದೇಶವನ್ನು ರಾಜಕೀಯ ಲಾಭ-ನಷ್ಟಗಳ ಲೆಕ್ಕಾಚಾರಕ್ಕೆ ಬಲಿಯಾಗಲು ಬಿಡಬಾರದು. ಜನಪ್ರತಿನಿಧಿಗಳು ಹಾಗೂ ರಾಜಕೀಯ ಮುಖಂಡರು ತಮ್ಮ ವೈಯಕ್ತಿಕ ಮತ್ತು ಪಕ್ಷೀಯ ಪ್ರತಿಷ್ಠೆಯನ್ನು ಬದಿಗಿಟ್ಟು, ಸಮಸ್ಯೆಯಿಂದ ನೇರವಾಗಿ ತೊಂದರೆ ಅನುಭವಿಸುತ್ತಿರುವ ರೈತರೊಂದಿಗೆ ಮುಕ್ತ ಹಾಗೂ ಪ್ರಾಮಾಣಿಕ ಮಾತುಕತೆ ನಡೆಸಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಅಗತ್ಯವಿದ್ದಲ್ಲಿ…
ಲೇಔಟ್ ನಿರ್ಮಾಣಕ್ಕೆ ಸಂಬಂಧಿಸಿದ ಎರಡು ಎಕರೆ ಜಮೀನಿನ ಖಾತಾ ಉತಾರ ನೀಡಲು ವ್ಯಕ್ತಿಯೊಬ್ಬರಿಂದ ₹1.5 ಲಕ್ಷ ಲಂಚ ಸ್ವೀಕರಿಸುತ್ತಿದ್ದ ವೇಳೆ ರಾಯಚೂರು ಜಿಲ್ಲೆಯ ಬಿಜನಗೇರಾ ಗ್ರಾಮದ ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಒ) ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿರುವ ಘಟನೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಗ್ರಾಮ ಪಂಚಾಯಿತಿಗಳು ಗ್ರಾಮೀಣ ಜನರ ಅಭಿವೃದ್ಧಿ ಮತ್ತು ಮೂಲಭೂತ ಆಡಳಿತ ಸೇವೆಗಳ ಕೇಂದ್ರಬಿಂದುವಾಗಿವೆ. ಆದರೆ ಜನರ ಸೇವೆಗೆ ನೇಮಕಗೊಂಡ ಕೆಲ ಅಧಿಕಾರಿಗಳು ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಂಡು ಸಾರ್ವಜನಿಕರಿಂದ ಲಂಚ ವಸೂಲಿ ಮಾಡುವ ಪ್ರವೃತ್ತಿ ಹೆಚ್ಚುತ್ತಿರುವುದು ವಿಷಾದನೀಯ ಸಂಗತಿಯಾಗಿದೆ. ಗ್ರಾಮಗಳಲ್ಲಿ ವಾಸಿಸುವ ಬಹುತೇಕ ಜನರು ರೈತರು, ಕೂಲಿ ಕಾರ್ಮಿಕರು ಹಾಗೂ ಆರ್ಥಿಕವಾಗಿ ದುರ್ಬಲ ವರ್ಗದವರಾಗಿದ್ದಾರೆ. ಇಂತಹ ಬಡ ಜನರು ತಮ್ಮ ಜಮೀನು, ಮನೆ ಅಥವಾ ದಾಖಲೆಗಳಿಗೆ ಸಂಬಂಧಿಸಿದ ಕಾನೂನುಬದ್ಧ ಸೇವೆ ಪಡೆಯಲು ಸರ್ಕಾರಿ ಕಚೇರಿಗಳಿಗೆ ಅಲೆದಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗುತ್ತಿದೆ. ಹಕ್ಕಿನ ಸೇವೆಗಾಗಿ ಲಕ್ಷಾಂತರ ರೂಪಾಯಿ ಲಂಚ ನೀಡುವಂತೆ ಒತ್ತಾಯಿಸುವುದು ಕೇವಲ ಭ್ರಷ್ಟಾಚಾರವಲ್ಲ, ಬಡವರ…
ತೊಕ್ಕೊಟ್ಟು: ಕಲಾ, ಸಾಹಿತ್ಯ ಹಾಗೂ ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ತನ್ನದೇ ಆದ ವಿಶಿಷ್ಟ ಛಾಪು ಮೂಡಿಸಿರುವ ಬಹುಮುಖ ಪ್ರತಿಭೆಯ ಕಲಾವಿದ, ದೇಹದಾರ್ಡ್ಯ ಪಟು, ಮಿಮಿಕ್ರಿ ಕಲಾವಿದ, ಗಾಯಕ, ಏಕಪಾತ್ರಾಭಿನಯ ಕಲಾವಿದ ಹಾಗೂ ರಂಗಭೂಮಿ ಮತ್ತು ಸಾಮಾಜಿಕ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಸುರೇಶ್ ಕೆ. ರಾವ್ ಅವರಿಗೆ ಪ್ರತಿಷ್ಠಿತ ಡಾ. ವಿಷ್ಣುವರ್ಧನ್ ಪ್ರಶಸ್ತಿ ಲಭಿಸಿರುವುದು ತೊಕ್ಕೊಟ್ಟು ಹಾಗೂ ಕರಾವಳಿ ಭಾಗದ ಕಲಾಭಿಮಾನಿಗಳಿಗೆ ಹೆಮ್ಮೆಯ ಸಂಗತಿಯಾಗಿದೆ. ಹಲವಾರು ವರ್ಷಗಳಿಂದ ಕಲಾಸೇವೆಯನ್ನು ಜೀವನದ ಧ್ಯೇಯವನ್ನಾಗಿಸಿಕೊಂಡಿರುವ ಸುರೇಶ್ ಕೆ. ರಾವ್ ಅವರು ತಮ್ಮ ಅಪೂರ್ವ ಪ್ರತಿಭೆ, ಕಲೆಯ ಮೇಲಿನ ಅಪಾರ ಪ್ರೀತಿ, ಶಿಸ್ತುಬದ್ಧ ಸಾಧನೆ ಹಾಗೂ ಸಮಾಜಮುಖಿ ಚಟುವಟಿಕೆಗಳ ಮೂಲಕ ಜನಮಾನಸದಲ್ಲಿ ವಿಶಿಷ್ಟ ಸ್ಥಾನವನ್ನು ಗಳಿಸಿದ್ದಾರೆ. ಮಿಮಿಕ್ರಿ ಕಲೆಯ ಮೂಲಕ ಅನೇಕ ಗಣ್ಯರ ಧ್ವನಿಗಳನ್ನು ಜೀವಂತವಾಗಿ ಮೂಡಿಸುವುದರ ಜೊತೆಗೆ, ಗಾಯನ, ಏಕಪಾತ್ರಾಭಿನಯ ಹಾಗೂ ವೇದಿಕೆ ಕಾರ್ಯಕ್ರಮಗಳಲ್ಲಿ ತಮ್ಮ ಅದ್ಭುತ ನಿರೂಪಣಾ ಶೈಲಿಯಿಂದ ಪ್ರೇಕ್ಷಕರ ಮನಗೆದ್ದಿದ್ದಾರೆ. ದೇಹದಾರ್ಡ್ಯ ಕ್ಷೇತ್ರದಲ್ಲಿಯೂ ಗಮನಾರ್ಹ ಸಾಧನೆ ಮಾಡಿ ಯುವಜನತೆಗೆ ಪ್ರೇರಣೆಯಾಗಿ ಗುರುತಿಸಿಕೊಂಡಿದ್ದಾರೆ. ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ…
ಮಂಗಳೂರು : ಕಳೆದ ವರ್ಷ ಮಂಜನಾಡಿಯಲ್ಲಿ ಸಂಭವಿಸಿದ ಭೀಕರ ಗುಡ್ಡ ಕುಸಿತದಲ್ಲಿ ಇಬ್ಬರು ಮಕ್ಕಳು, ಅತ್ತೆ ಹಾಗೂ ಎರಡೂ ಕಾಲುಗಳನ್ನು ಕಳೆದುಕೊಂಡು ಜೀವನದ ಕಠಿಣ ಹಾದಿಯಲ್ಲಿ ಸಾಗುತ್ತಿರುವ ಅಶ್ವಿನಿ ಅವರ ಮನೆಗೆ ಉಡುಪಿ–ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಭೇಟಿ ನೀಡಿ ಧೈರ್ಯ ತುಂಬಿದರು. ದುರಂತದ ಬಳಿಕ ಅಶ್ವಿನಿ ಅವರ ಕುಟುಂಬ ಎದುರಿಸುತ್ತಿರುವ ನೋವು, ಸಂಕಷ್ಟ ಮತ್ತು ಜೀವನ ಹೋರಾಟವನ್ನು ಆಲಿಸಿದ ಅವರು, ಸರ್ಕಾರದಿಂದ ದೊರಕಬೇಕಾದ ಎಲ್ಲಾ ನೆರವು, ಪರಿಹಾರ ಮತ್ತು ಪುನರ್ವಸತಿ ಸೌಲಭ್ಯಗಳನ್ನು ಒದಗಿಸಲು ತಮ್ಮಿಂದಾಗುವ ಎಲ್ಲಾ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು.“ನೀವು ಒಂಟಿಯಲ್ಲ. ನಿಮ್ಮ ನ್ಯಾಯದ ಹೋರಾಟದಲ್ಲಿ ನಾನು ಸದಾ ನಿಮ್ಮೊಂದಿಗಿದ್ದೇನೆ. ಬದುಕನ್ನು ಮರುಕಟ್ಟಿಕೊಳ್ಳಲು ಅಗತ್ಯವಿರುವ ಪ್ರತಿಯೊಂದು ನೆರವಿಗೂ ನಾನು ಬೆಂಬಲವಾಗಿ ನಿಲ್ಲುತ್ತೇನೆ,” ಎಂದು ಅಶ್ವಿನಿ ಅವರಿಗೆ ಸಾಂತ್ವನ ಹೇಳಿದರು. ಈ ವೇಳೆ ಅಶ್ವಿನಿ ಅವರ ಆರೋಗ್ಯ, ಚಿಕಿತ್ಸೆ ಹಾಗೂ ಜೀವನೋಪಾಯದ ಕುರಿತು ಮಾಹಿತಿ ಪಡೆದ ಕಿಶೋರ್ ಕುಮಾರ್ ಪುತ್ತೂರು, ಸಂಬಂಧಪಟ್ಟ…
ಉಳ್ಳಾಲ: ರಸ್ತೆ ಕಾಂಕ್ರಿಟೀಕರಣ, ಹೆದ್ದಾರಿ, ಚರಂಡಿ ನಿರ್ಮಾಣದಿಂದ ಮಾತ್ರ ಅಭಿವೃದ್ಧಿ ಸಾಧ್ಯವಿಲ್ಲ. ದೇಶದ ಪ್ರತಿಯೊಂದು ಗಲ್ಲಿಗಳೂ ಅಭಿವೃದ್ಧಿಗೊಂಡು, ಪಂಡಿತ್ ದೀನ್ ದಯಾಳ್ ಉಪಾಧ್ಯಾಯರ ಅಂತ್ಯೋದಯ ಪರಿಕಲ್ಪನೆಯಂತೆ ಸಮಾಜದ ಪ್ರತಿಯೊಬ್ಬ ಕಟ್ಟ ಕಡೆಯ ವ್ಯಕ್ತಿಗೂ ನ್ಯಾಯ ದೊರಕುವಂತಾಗುವುದೇ ಭಾರತೀಯ ಜನತಾ ಪಾರ್ಟಿಯ ಧ್ಯೇಯ,ಉದ್ದೇಶವಾಗಿದೆಯೆಂದು ವಿಧಾನ ಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ಪುತ್ತೂರು ಹೇಳಿದರು. ಉಳ್ಳಾಲ ಬೈಲು ವೈದ್ಯನಾಥ ನಗರ ಒಂದನೇ ಅಡ್ಡ ರಸ್ತೆಯಲ್ಲಿ ವಿಧಾನ ಪರಿಷತ್ ನ ಶಾಸಕ ನಿಧಿಯ ಎಂಟು ಲಕ್ಷ ಅನುದಾನದಲ್ಲಿ ನಿರ್ಮಾಣಗೊಂಡ ಮಳೆ ನೀರಿನ ಚರಂಡಿಯನ್ನು ಮಂಗಳವಾರದಂದು ಉದ್ಘಾಟಿಸಿ ಅವರು ಮಾತನಾಡಿದರು. ಕಳೆದ ಭಾರಿ ವರುಣನ ಆರ್ಭಟದಿಂದ ಉಳ್ಳಾಲ ಬೈಲ್ ಪ್ರದೇಶದ ಅನೇಕ ಮನೆಗಳು ಜಲಾವೃತಗೊಂಡು ಅಪಾರ ನಷ್ಟ ಸಂಭವಿಸಿ ಜನ ಸಾಮಾನ್ಯರು ಕಂಗಾಲಾಗಿದ್ದರು. ಈ ಪ್ರದೇಶದ ಜನರ ಸಮಸ್ಯೆಯನ್ನ ಗಂಭೀರವಾಗಿ ಪರಿಗಣಿಸಿ ಚರಂಡಿ ನಿರ್ಮಾಣಕ್ಕೆ ಅನುದಾನ ನೀಡಲಾಗಿದೆಯೆಂದರು. ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ ಮಾತನಾಡಿ ಪ್ರಧಾನಿ ನರೇಂದ್ರ ಮೋದಿಯವರ ಸಬ್ ಕೆ ಸಾಥ್, ಸಬ್ ಕಾ ವಿಕಾಸ್…
ಮಂಗಳೂರು,ಜೂ. 24 : ಎಜುಕಾರುಣ್ಯ ಎಜುಕೇಶನಲ್ ಮತ್ತು ಚಾರಿಟೇಬಲ್ ಟ್ರಸ್ಟ್ ಮಂಗಳೂರು ವತಿಯಿಂದ ಹಿರಿಯ ಪತ್ರಕರ್ತ ಗುರುವಪ್ಪ ಎನ್.ಟಿ. ಬಾಳೇಪುಣಿಯವರ ಸ್ಮರಣಾರ್ಥ ದತ್ತಿನಿಧಿ ಹಸ್ತಾಂತರ ಕಾರ್ಯಕ್ರಮ ಜೂ.26ರಂದು ಪೂರ್ವಾಹ್ನ 11 ಗಂಟೆಗೆ ಮಂಗಳೂರು ಪ್ರೆಸ್ ಕ್ಲಬ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಬುಧವಾರ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಟ್ರಸ್ಟ್ ನ ಅಧ್ಯಕ್ಷ ಮೋಹನ್ ದಾಸ್ ಮರಕಡ, ಕಳೆದ ವರ್ಷ ಮಂಗಳೂರಿನ ತ್ರಿಷಾ ಕಾಲೇಜಿನ ಧೃತಿ ಕುಂಜತ್ತಬೈಲ್ ಹಾಗೂ ಕೆನರಾ ಕಾಲೇಜಿನ ಮೇಘಾ ಸಜಿಪ ಅವರಿಗೆ ದತ್ತಿನಿಧಿ ನೀಡಲಾಗಿದೆ. ಈ ಬಾರಿ ಈ ಇಬ್ಬರಿಗೆ ಮುಂದುವರಿಸುವ ಜೊತೆಗೆ ಸಂತ ಅಲೋಷಿಯಸ್ ಕಾಲೇಜಿನ ಬಿಸಿಎ ವಿದ್ಯಾರ್ಥಿನಿ ತ್ರಿಷಾ ಪಚ್ಚನಾಡಿ, ಕೆನರಾ ಕಾಲೇಜಿನ ಶ್ರೀಜಾ ಶೆಟ್ಟಿ, ಬಿ.ಸಿ.ರೋಡಿನ ಶೋಭಿತಾ, ದಡ್ಡಲಕಾಡು ಶಾಲೆಯ ಪ್ರಾಪ್ತಿ, ಕಲ್ಲಡ್ಕ ಶ್ರೀರಾಮ ಪದವಿಪೂರ್ವ ಕಾಲೇಜಿನ ಶ್ರೇಯಾ ಮತ್ತು ವಾಮದಪದವು ಸರ್ಕಾರಿ ಪದವಿಪೂರ್ವ ಕಾಲೇಜಿನ ರಶ್ಮಿತ್ ಅವರಿಗೆ ನೀಡಲಾಗುವುದು. ಒಟ್ಟು 1.50 ಲಕ್ಷ ರೂ. ಮೊತ್ತದ ದತ್ತಿನಿಧಿ ನೀಡಲಾಗುತ್ತಿದೆ ಎಂದರು.ಕಾರ್ಯಕ್ರಮದಲ್ಲಿ ಆರೋಗ್ಯ ಮತ್ತು ಕುಟುಂಬ…
ಮಂಗಳೂರು, ಜೂ. 24: ನಗರದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ವಾಹನ ದಟ್ಟಣೆಗೆ ಅನುಗುಣವಾಗಿ ಪಾರ್ಕಿಂಗ್ ವ್ಯವಸ್ಥೆ ಇಲ್ಲದಿರುವುದು ಸಮಸ್ಯೆಯಾಗಿ ಪರಿಣಮಿಸಿದೆ. ಇದರಿಂದಾಗಿ ಪಾರ್ಕಿಂಗ್ ನಿಯಮ ಉಲ್ಲಂಘನೆ ಪ್ರಕರಣಗಳು ಹೆಚ್ಚುತ್ತಿದ್ದು, ಅನಧಿಕೃತವಾಗಿ ವಿವಿಧೆಡೆ ಪಾರ್ಕಿಂಗ್ ಮಾಡಿದ ಪ್ರಕರಣಗಳಿಗೆ ವಾಹನಗಳ ಮಾಲೀಕರಿಗೆ ಕಳೆದ ಐದು ತಿಂಗಳ ಅವಧಿಯಲ್ಲಿ 12.4 ಲಕ್ಷ ರೂ. ದಂಡ ವಿಧಿಸಲಾಗಿದೆ. ಸಂಚಾರ ಪೊಲೀಸರ ಅಂಕಿ ಅಂಶಗಳ ಪ್ರಕಾರ, 2025ರಲ್ಲಿ ನಗರದಲ್ಲಿ ಒಟ್ಟು 8,885 ಪಾರ್ಕಿಂಗ್ ಉಲ್ಲಂಘನೆ ಪ್ರಕರಣಗಳು ದಾಖಲಾಗಿದ್ದು 47.2 ಲಕ್ಷ ರೂ. ದಂಡ ಸಂಗ್ರಹಿಸಲಾಗಿತ್ತು. 2026ರಲ್ಲಿ ಇದುವರೆಗೆ 2,294 ಪ್ರಕರಣಗಳು ದಾಖಲಾಗಿವೆ. ಇವುಗಳಿಂದ ಸಂಗ್ರಹವಾದ ದಂಡದ ಮೊತ್ತವೂ ಹೆಚ್ಚಾಗಿದೆ. ನಗರದಲ್ಲಿ ದಿನದಿಂದ ದಿನಕ್ಕೆ ವಾಹನಗಳ ಸಂಖ್ಯೆ ಹೆಚ್ಚಾಗುತ್ತಿದೆ. ರಸ್ತೆಗಳು ಅಗಲಗೊಂಡಿರುವ ಕೆಲವು ಕಡೆಗಳಲ್ಲಿ ರಸ್ತೆ ಬದಿಗಳಲ್ಲಿ ಪಾರ್ಕಿಂಗ್ ಅವಕಾಶ ಕೊಡಲಾಗಿದೆ. ಆದರೆ ಬಹುತೇಕ ಕಡೆಗಳಲ್ಲಿ ರಸ್ತೆಗಳು ಕಿರಿದಾಗಿದ್ದು ವಾಹನ ನಿಲ್ಲಿಸಿದರೆ ರಸ್ತೆಯಲ್ಲಿ ಸಂಚರಿಸುವ ವಾಹನಗಳಿಗೆ ಸಮಸ್ಯೆಯಾಗುತ್ತಿದೆ.ಕೆಲವು ಸಭಾಂಗಣಗಳಲ್ಲಿ ಕಾರ್ಯಕ್ರಮಗಳು ಆಯೋಜನೆಗೊಂಡಾಗ ವಾಹನಗಳನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿ, ವಾಹನ ದಟ್ಟಣೆಗೂ ಕಾರಣವಾಗುತ್ತಿದೆ.…

