Author: UllalaVani

Kannada News From Coastal Karnataka

ರಕ್ಷಿತ್ ಕುಮಾರ ಜೆ ಅವರು ಪ್ರತಿಷ್ಠಿತ ಗೋವ ಮ್ಯಾನೆಜ್ಮೆಂಟ್ ಎಸೋಸಿಯೇಶನ್ ನೀಡಲ್ಪಡುವ ದಿ ಬೆಸ್ಟ್ ಮ್ಯಾನೆಜ್ಮೆಂಟ್ ಸ್ಟೂಡೆಂಟ್ ಆಫ್ ಇಯರ್ 2025- ಪೋಸ್ಟ್ ಗ್ರಾಚುವೆಟ್ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ಇವರು ಸುರತ್ಕಲ್‌ನ ಪ್ರತಿಷ್ಠಿತ ಎನ್‌ಐಟಿಕೆ ಯ ಹಳೆ ವಿದ್ಯಾರ್ಥಿಯಾಗಿದ್ದು, ಪ್ರಸ್ತುತ ಗೋವಾ ಇನ್ಸಿಟ್ಯೂಟ್ ಆಫ್ ಮ್ಯಾನೆಜ್ಮೆಂಟ್ ನಲ್ಲಿ ಎಂಬಿಎ ವ್ಯಾಸಂಗ ಮಾಡುತ್ತಿದ್ದಾರೆ. ಇವರು ಮಂಗಳೂರಿನ ಜೈಕುಮಾರ್ ಕೊಲ್ಯ ಮತ್ತು ವತ್ಸಲ ದಂಪತಿಯ ಸುಪುತ್ರರಾಗಿದ್ದಾರೆ.

Read More

ಹನುಮಾನ್ ನಗರ,05 ; ಭಗವಂತನ ಮೇಲೆ ವಿಶ್ವಾಸವಿರಲಿ, ಕೆಲಸ ಕಾರ್ಯಗಳು ವ್ಯವಸ್ಥಿತವಾಗಿ ಸಾಗುತ್ತವೆ. ಹನುಮನ ಕೃಪಾಕಟಾಕ್ಷದಿಂದ ನೂತನ ಮಂದಿರದ ಕಾರ್ಯ ಶೀಘ್ರವಾಗಿ ಪೂರ್ಣಗೊಳ್ಳುತ್ತದೆ ಎಂದು ಒಡಿಯೂರು ಗುರುದೇವಾದತ್ತ ಸಂಸ್ಥಾನದ ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿ ನುಡಿದರು. ಇವರು ಶ್ರೀ ವೀರಾಂಜನೇಯ ಶಾಲೆಯ ದೈವಜ್ಞರಾದ ರಂಗ ಐತಾಳ್ ಮತ್ತು ತಂತ್ರಿವರ್ಯರಾದ ಪ್ರಸಾದ್ ನಲ್ಲುರಾಯ ಹಾಗೂ ಉಳ್ಳಾಳ್ತಿ ಧರ್ಮರಸರ ಕ್ಷೇತ್ರದ ಧರ್ಮದರ್ಶಿಗಳು ದೇವು ಮೂಲ್ಯಣ್ಣ ಇವರ ಮಾರ್ಗದರ್ಶನದಂತೆ, ಕದ್ರಿ ನವನೀತ ಶೆಟ್ಟಿಯವರ ಮುಂದಾಳತ್ವದಲ್ಲಿ ಹನುಮಾನ್ ನಗರ, ಮಾಸ್ತಿಕಟ್ಟೆ ಇಲ್ಲಿ ನಡೆದ ಶ್ರೀ ವೀರಾಂಜನೇಯ ವ್ಯಾಯಾಮ ಶಾಲೆಯ ನೂತನ ಮಂದಿರ ಜೀರ್ಣೋದ್ಧಾರ ಕಾರ್ಯದ ಪ್ರಥಮ ಹಂತವಾದ ಶಿಲಾನ್ಯಾಸ ಕಾರ್ಯಕ್ರಮ ನೆರವೇರಿಸಿ ನಂತರ ಧಾರ್ಮಿಕ ಸಭೆಯಲ್ಲಿ ಭಾಗವಹಿಸಿ ಆರ್ಶೀವಚನ ನೀಡಿದರು. ಸುಸಂಸ್ಕೃತವಾದ ವಾತಾವರಣ ನಿರ್ಮಾಣಗೊಂಡಿದ್ದು, ಧರ್ಮಸಂಸ್ಕೃತಿಯ ಅನಾವರಣಗೊಳಿಸಿದಂತಾಗಿದೆ. ಉಳ್ಳಾಲದ ರಾಣಿ ಅಬ್ಬಕ್ಕ ದೇವಿಯನ್ನು ನಾವು ಮರೆಯುವಂತಿಲ್ಲ. ಜನನಿಯಿಂದ ಕಲಿತ ಜನರು ಧನ್ಯರು ಎಂದರು. ದಾನ, ಧರ್ಮದಿಂದ ಅಭಿವೃದ್ದಿ ಕೆಲಸಗಳು ಸಾಧ್ಯ. ಹನುಮಂತನ ಅನುಗ್ರಹದಿಂದ ಮಂದಿರ ಒಂದು…

Read More

ಮಂಗಳೂರು;ಕoಬಳ ಕ್ರೀಡೆ ಕೇವಲ ಕರಾವಳಿಯ ಜಾನಪದ ಕ್ರೀಡೆ ಮಾತ್ರವಲ್ಲ. ಇದೊಂದು ಕರಾವಳಿಯ ಘನತೆ, ಪ್ರತಿಷ್ಠೆಯ ಪ್ರತಿಬಿಂಬ. ಅಂತಹ ಕಂಬಳದ ಮೇಲೆ ಈ ಬಾರಿ ಜಿಲ್ಲಾಡಳಿತದ ವಿವಿಧ ಇಲಾಖೆಗಳು ಹದ್ದಿನ ಕಣ್ಣು ಇಟ್ಟಿವೆ. ಪ್ರತೀ ಶನಿವಾರ/ರವಿವಾರ ನಡೆಯುತ್ತಿರುವ ಕಂಬಳದ ಸ್ಥಳಕ್ಕೆ ವಿವಿಧ ಇಲಾಖೆಗಳ ಅಧಿಕಾರಿಗಳೇ ಖುದ್ದು ಹಾಜರಾಗಿ ವರದಿ ರೆಡಿ ಮಾಡುತ್ತಿದ್ದಾರೆ. “ಕಂಬಳದಲ್ಲಿ ಪ್ರಾಣಿಗಳಿಗೆ ಹಿಂಸೆ ನೀಡಲಾಗುತ್ತಿದೆ’ ಎಂಬ ಆರೋಪ ಇಟ್ಟುಕೊಂಡು ಈ ಹಿಂದೆ ಪೆಟಾ ಸಂಸ್ಥೆ ನ್ಯಾಯಾಲಯದ ಮೆಟ್ಟಿಲೇರಿತ್ತು. ಹೀಗಾಗಿ ಯಾವುದೇ ಹಿಂಸೆ ಆಗದಂತೆ ಎಚ್ಚರ ವಹಿಸುವಂತೆ ನ್ಯಾಯಾಲಯ ಸೂಚಿಸಿದ ಆಧಾರದಲ್ಲಿ ಸದ್ಯ ಕಂಬಳಗಳು ಯಶಸ್ವಿಯಾಗಿ ನಡೆಯುತ್ತಿವೆ. ಈ ಋತುವಿನಲ್ಲಿ 3 ಕಂಬಳಗಳು ನಿಯಮ ಹಾಗೂ ಸಮಯಬದ್ಧವಾಗಿ ನಡೆದಿದೆ. ಪ್ರಸಕ್ತ ನಡೆಯುತ್ತಿರುವ ಎಲ್ಲ ಕಂಬಳಗಳಿಗೆ ಪೊಲೀನ್, ಪಶುಪಾಲನ ಇಲಾಖೆ, ಕಂದಾಯ ಇಲಾಖೆಯ ಅಧಿಕಾರಿಗಳು ಆಗಮಿಸಿ ವರದಿ ಸಿದ್ಧಪಡಿಸಿ ಜಿಲ್ಲಾಡಳಿತಕ್ಕೆ ವರದಿ ನೀಡುತ್ತಿದ್ದಾರೆ. ಬೆಟ್ಟಿಂಗ್ ಸಹಿತ ಯಾವುದೇ ಕಾನೂನುಬಾಹಿರ ಚಟುವಟಿಕೆ ನಡೆಯದಂತೆ ಪೊಲೀಸ್ ಇಲಾಖೆ ನಿಗಾ ವಹಿಸುತ್ತಿದ್ದು, 3 ವರ್ಷದ ಒಳಗಿನ ಕೋಣಗಳ…

Read More

ಸುಳ್ಯ, ಡಿ. 05 ; ಗಾಂಧಿನಗರ ಜುಮಾ ಮಸೀದಿಯ ಜಮಾತ್‌ಗೆ ಸೇರಿದ ಗುರಂಪು ನಿವಾಸಿ ಮುಸ್ತಫಾ ಅವರ ಪುತ್ರ ಮೊಹಮ್ಮದ್ ಆದಿಲ್(13) ಅನಾರೋಗ್ಯದಿಂದ ಮನೆಯಲ್ಲಿ ನಿಧನರಾಗಿದ್ದಾರೆ. ಹುಟ್ಟಿನಿಂದಲೇ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಬಾಲಕ, ಕಳೆದ 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದನು.ಪೋಷಕರು ಆತನ ಚಿಕಿತ್ಸೆ ಮತ್ತು ಆರೈಕೆಗಾಗಿ ಸಾಧ್ಯವಿರುವ ಎಲ್ಲಾ ಪ್ರಯತ್ನಗಳನ್ನು ಮಾಡಿದ್ದರು. ಮೃತ ಬಾಲಕನು ತಂದೆ, ತಾಯಿ ಮತ್ತು ಇಬ್ಬರು ಸಹೋದರರನ್ನು ಅಗಲಿದ್ದಾರೆ.

Read More

ಬಂಟ್ವಾಳ,ಡಿ. 05 ಪರವಾನಗಿ ಇಲ್ಲದೆ ಕಾನೂನು ಬಾಹಿರವಾಗಿ ಅಕ್ರಮವಾಗಿ ಲಾರಿಯಲ್ಲಿ ಕೆಂಪುಕಲ್ಲು ಸಾಗಾಟ ನಡೆಸುತ್ತಿರುವುದನ್ನು ಪತ್ತೆ ಹಚ್ಚಿ ವಿಟ್ಲ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಂಟ್ವಾಳ, ಕೊಳ್ನಾಡು ಗ್ರಾಮದ ಕೂಡ್ತಮುಗೇರು ಎಂಬಲ್ಲಿ, ವಿಟ್ಲ ಪೊಲೀಸ್ ಠಾಣೆಯ ರತ್ನಕುಮಾರ್ ಪೊಲೀಸ್ ಉಪ ನಿರೀಕ್ಷಕರು, (ತನಿಖೆ-01) ಸಿಬ್ಬಂದಿಗಳೊಂದಿಗೆ ವಾಹನ ತಪಾಸಣೆ ಮಾಡುವ ವೇಳೆ, ಬೋಳ್ಪದೆ ಕಡೆಯಿಂದ ಕೂಡ್ತಮುಗೇರು ಕಡೆಗೆ ಬರುತ್ತಿದ್ದ KA-12-A-9095 ನೋಂದಣಿಯ ಲಾರಿಯನ್ನು ನಿಲ್ಲಿಸಿ ತಪಾಸಣೆ ನಡೆಸಿದಾಗ, ಲಾರಿಯಲ್ಲಿ ಕೆಂಪು ಕಲ್ಲು ತುಂಬಿಸಿಕೊಂಡು ಸಾಗಿಸುತ್ತಿರುವುದು ಕಂಡುಬಂದಿದೆ,ತಕ್ಷಣ ಕಲ್ಲುಗಳ ಸಾಗಾಟದ ಬಗ್ಗೆ ಲಾರಿ ಚಾಲಕ ಎನ್.ಸಿ.ಶರೀಪ್ (42) ಎಂಬಾತನಲ್ಲಿ ವಿಚಾರಿಸಿದಾಗ, ಯಾವುದೇ ಪರವಾನಿಗೆ ಅಥವಾ ದಾಖಲಾತಿ ಇಲ್ಲದೆ, ಅಕ್ರಮವಾಗಿ ಕೆಂಪು ಕಲ್ಲುಗಳನ್ನು ಕಳ್ಳತನದಿಂದ ತುಂಬಿಸಿಕೊಂಡು ಸಾಗಿಸುತ್ತಿರುವುದು ಬೆಳಕಿಗೆ ಬಂದಿದೆ.ಮುಂದಿನ ಕಾನೂನು ಕ್ರಮಕ್ಕಾಗಿ ಲಾರಿ ಚಾಲಕನನ್ನು ಹಾಗೂ ಲಾರಿಯನ್ನು ಲೋಡ್ ಸಮೇತ ವಶಕ್ಕೆ ಪಡೆದು, ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ: 179/2025, ಕಲಂ: 303(2) BNS 2023 U/s-4(1),21 MMDR (MINES AND MINERALS REGULATION OF DEVELOPMENTACT…

Read More

ಉಡುಪಿ, ಡಿ. 05 :  ಉಡುಪಿ ಬೋರ್ಡಿಂಗ್ ಹಾಸ್ಟೆಲ್‌ನಿಂದ ಕಾಣೆಯಾಗಿದ್ದ 13 ವರ್ಷದ ಬಾಲಕನನ್ನು ಮಂಗಳೂರು ವಿಭಾಗದ ಮುಖ್ಯ ಟಿಟಿಇ (ಹೆಡ್ ಟಿಟಿಇ) ರಾಘವೇಂದ್ರ ಶೆಟ್ಟಿ ಅವರು ಮಂಗಳೂರು ಎಕ್ಸ್‌ಪ್ರೆಸ್‌ ರೈಲಿನಲ್ಲಿ ಗುರುವಾರ ಸುರಕ್ಷಿತವಾಗಿ ರಕ್ಷಿಸಿದ್ದಾರೆ. ಕೋಚ್ S3 ನಲ್ಲಿ ಬಾಲಕ ಒಬ್ಬನೇ ಪ್ರಯಾಣಿಸುತ್ತಿದ್ದಾಗ, ಟಿಕೆಟ್ ತಪಾಸಣೆ ವೇಳೆ ರಾಘವೇಂದ್ರ ಶೆಟ್ಟಿ ಅವರಿಗೆ ಬಾಲಕನ ಪ್ರತಿಕ್ರಿಯೆಯಲ್ಲಿ ವ್ಯತ್ಯಾಸ ಕಂಡುಬಂದಿದೆ. ಆತನ ಬ್ಯಾಗ್ ಪರಿಶೀಲಿಸಿದಾಗ, ಶಾಲೆಯ ಐಡಿ ಕಾರ್ಡ್ ದೊರೆತಿದೆ. ತಕ್ಷಣವೇ ಅವರು ಶಾಲಾ ಅಧಿಕಾರಿಗಳನ್ನು ಸಂಪರ್ಕಿಸಿದರು. ಆಗ, ಬಾಲಕ ಹಾಸ್ಟೆಲ್‌ನಿಂದ ಓಡಿಹೋಗಿರುವುದು ದೃಢಪಟ್ಟಿದೆ. ಆತನ ತಾಯಿಗೆ ಮಗ ಸುರಕ್ಷಿತವಾಗಿರುವ ಬಗ್ಗೆ ಮಾಹಿತಿ ನೀಡಲಾಯಿತು. ಆತ ತಾಯಿಯೊಂದಿಗೆ ವಾಸಿಸುತ್ತಿದ್ದು, ಆಕೆ ಮನೆಗೆಲಸ ಮಾಡಿ ಮಗನನ್ನು ಓದಿಸುತ್ತಿದ್ದರು.ಉಡುಪಿ ನಿಲ್ದಾಣದಲ್ಲಿ ಬಾಲಕನನ್ನು ರೈಲ್ವೆ ಸಂರಕ್ಷಣಾ ಪಡೆ (ಆರ್‌ಪಿಎಫ್)ಗೆ ಹಸ್ತಾಂತರಿಸಲಾಯಿತು. ಪೊಲೀಸರು ಬಾಲಕ ಸುರಕ್ಷಿತವಾಗಿ ಮನೆ ಸೇರುವ ವರೆಗೆ ಆತನನ್ನು ಉಡುಪಿಯ ಮಕ್ಕಳ ಪಾಲನಾ ಕೇಂದ್ರದಲ್ಲಿ ಇರಿಸಿದರು.ರಾಘವೇಂದ್ರ ಶೆಟ್ಟಿ ಅವರ ಕ್ಷಿಪ್ರ ಮತ್ತು ಕರ್ತವ್ಯಪ್ರಜ್ಞೆಯನ್ನು ಶ್ಲಾಘಿಸಿ, ಕೊಂಕಣ ರೈಲ್ವೆಯ…

Read More

ಈರೋಡ್, ಡಿ. 05 : ಬಾಳೆಹಣ್ಣು ಗಂಟಲಲ್ಲಿ ಸಿಲುಕಿ 5 ವರ್ಷದ ಬಾಲಕ ಸಾವನ್ನಪ್ಪಿರುವ ದಾರುಣ ಘಟನೆ ತಮಿಳುನಾಡಿನ ಈರೋಡ್‌ನಲ್ಲಿ ನಡೆದಿದೆ. ಈರೋಡ್‌ನ ಅನ್ನೈ ಸತ್ಯ ನಗರದ ಎಂ. ಸಾಯಿಶರಣ್(5) ಮೃತ ಬಾಲಕ.ಬಾಲಕ ಮನೆಯಲ್ಲಿ ಬಾಳೆಹಣ್ಣು ತಿನ್ನುವಾಗ ಅದು ಗಂಟಲಲ್ಲಿ ಸಿಕ್ಕಿಹಾಕಿಕೊಂಡು, ಉಸಿರಾಟದ ತೊಂದರೆ ಕಾಣಿಸಿಕೊಂಡಿತು. ತಕ್ಷಣ ಆತನ ಪೋಷಕರಾದ ಮಾಣಿಕ್ ಮತ್ತು ಮಹಾಲಕ್ಷ್ಮಿ ನೆರೆಹೊರೆಯವರ ಸಹಾಯದಿಂದ ಆ ಮಗುವನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ಕರೆದೊಯ್ದರು.ಆಸ್ಪತ್ರೆಯಲ್ಲಿ ಮಗುವನ್ನು ಪರೀಕ್ಷಿಸಿದ ವೈದ್ಯರು, ಆತನ ಶ್ವಾಸನಾಳದಲ್ಲಿ ಬಾಳೆಹಣ್ಣಿನ ತುಂಡು ಸಿಲುಕಿಕೊಂಡಿರುವುದಾಗಿ ತಿಳಿಸಿದ್ದಾರೆ. ನಂತರ ವೈದ್ಯರು ಆ ಮಗುವನ್ನು ಚಿಕಿತ್ಸೆಗಾಗಿ ಈರೋಡ್ ಸರ್ಕಾರಿ ಆಸ್ಪತ್ರೆಗೆ ಕಳುಹಿಸಿದರು. ಆದರೆ, ಅಲ್ಲಿ ಮಗುವನ್ನು ಪರೀಕ್ಷಿಸಿದ ವೈದ್ಯರು ಮಗು ಉಸಿರಾಡಲಾಗದೆ ಮೃತಪಟ್ಟಿದೆ ಎಂದು ಘೋಷಿಸಿದ್ದಾರೆ. ನಂತರ ಬಾಳೆಹಣ್ಣಿನ ತುಂಡನ್ನು ಮಗುವಿನ ಶ್ವಾಸನಾಳದಿಂದ ತೆಗೆದುಹಾಕಲಾಯಿತು. ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.ಮಾಣಿಕ್ಕಂ-ಮಹಾಲಕ್ಷ್ಮಿ ದಂಪತಿಗೆ 5 ವರ್ಷದ ಸಾಯಿಶರಣ್ ಎಂಬ ಮಗ ಮತ್ತು 2 ವರ್ಷದ ಮಗಳಿದ್ದಾರೆ. ದಂಪತಿಗಳಿಬ್ಬರೂ ಕೂಲಿ ಕೆಲಸಕ್ಕೆ…

Read More

ಮಂಗಳೂರು, ಡಿ. 05 : ಕಿನ್ನಿಗೋಳಿಯಲ್ಲಿ ವೃದ್ದ ದಂಪತಿಯನ್ನು ಗುರಿಯಾಗಿಸಿ ನಡೆದ ‘ಡಿಜಿಟಲ್ ಅರೆಸ್ಟ್’ ಪ್ರಕರಣ ಬೆಳಕಿಗೆ ಬಂದಿದ್ದು, ಬ್ಯಾಂಕ್ ಮ್ಯಾನೇಜರ್ ಅವರ ಸಮಯಪ್ರಜ್ಞೆಯಿಂದಾಗಿ 84 ಲಕ್ಷ ರೂ. ಬೃಹತ್ ವಂಚನೆ ತಪ್ಪಿದೆ. ಡಿಸೆಂಬರ್ 1 ರ ಸಂಜೆ, ವಂಚಕರ ತಂಡವೊಂದು ಕಿನ್ನಿಗೋಳಿಯ ದಾಮಸ್ ಕಟ್ಟೆಯ ವೃದ್ಧ ದಂಪತಿಗೆ ಕರೆ ಮಾಡಿ ಡಿಜಿಟಲ್ ಅರೆಸ್ಟ್ ಮಾಡಿದೆ. ಈ ವೇಳೆ ವೃದ್ಧ ದಂಪತಿಯನ್ನು ತಂಡವು ಹಣ ನೀಡುವಂತೆ ಬೆದರಿಸಿದೆ. ಜೊತೆಗೆ ತಮ್ಮ ಮಾತನ್ನು ಕೇಳದಿದ್ದರೆ ಕೆಟ್ಟ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಬೆದರಿಕೆ ಹಾಕಿದೆ.ಯಾವುದೇ ಕಾರಣಕ್ಕೂ ಮನೆಯಿಂದ ಹೊರಗೆ ಬರಬೇಡಿ. ಒಂದು ವೇಳೆ ನೀವು ಮನೆಯಿಂದ ಹೊರಗೆ ಕಾಲಿಟ್ಟರೆ ನಮ್ಮ ಸಿಬ್ಬಂದಿ ಗುಂಡು ಹಾರಿಸುತ್ತಾರೆ ಎಂದು ವಂಚಕರು ದಂಪತಿಗೆ ಎಚ್ಚರಿಕೆ ನೀಡಿದ್ದರು. ಇದರಿಂದ ಗಾಬರಿಗೊಂಡ ದಂಪತಿಗಳು ಕಿನ್ನಿಗೋಳಿಯ ತಮ್ಮ ಬ್ಯಾಂಕ್ ಮ್ಯಾನೇಜರ್‌ಗೆ ಕರೆ ಮಾಡಿ, ತಮ್ಮ ಎಫ್ ಡಿ ಯಲ್ಲಿದ್ದ 84 ಲಕ್ಷ ರೂ.ವನ್ನು ತಕ್ಷಣವೇ ಉಳಿತಾಯ ಖಾತೆಗೆ ವರ್ಗಾಯಿಸುವಂತೆ ಮನವಿ ಮಾಡಿದ್ದಾರೆ.ಡಿಸೆಂಬರ್ 3 ರಂದು…

Read More

ಮಂಗಳೂರು:ಡಿಸೆಂಬರ್ 3, 2025 ರಂದು ‘ಶ್ರೀ ಮಹಾಗುರುವಿನ ಮಹಾ ಸಮಾಧಿ ಶತಾಬ್ದಿ ಸರ್ವಮತ ಸಮ್ಮೇಳನ’ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ, ಮಂಗಳೂರು ವಿಶ್ವವಿದ್ಯಾನಿಲಯದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (SC/ST) ಸ್ನಾತಕೋತ್ತರ ಮತ್ತು ಸಂಶೋಧನಾ ವಿದ್ಯಾರ್ಥಿಗಳ ನಿಯೋಗವು ಮನವಿ ಸಲ್ಲಿಸಿತು. ಪ್ರಮುಖ ಬೇಡಿಕೆಗಳಾದ ಶೈಕ್ಷಣಿಕ ಶುಲ್ಕ ಮತ್ತು ಶಿಷ್ಯವೇತನ (Fellowship) ವಿಳಂಬ ಮತ್ತು SCSP-TSP ನಿಧಿ ಬಿಡುಗಡೆ ಕುರಿತು ಮನವಿ ನೀಡಲಾಯಿತು. ನಿಯೋಗವು ಇದೇ ಸಂದರ್ಭದಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಮತ್ತು ಲೋಕೋಪಯೋಗಿ ಸಚಿವ ಶ್ರೀ ಸತೀಶ್ ಜಾರಕಿಹೊಳಿ ಅವರನ್ನೂ ಪ್ರತ್ಯೇಕವಾಗಿ ಭೇಟಿ ಮಾಡಿ ಮನವಿ ಪ್ರತಿಗಳನ್ನು ಹಸ್ತಾಂತರಿಸಿತು. ಎಲ್ಲಾ ಗಣ್ಯರು ಸಮಸ್ಯೆಗಳನ್ನು ಪರಿಶೀಲಿಸಿ, ತಕ್ಷಣದ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ. ಈ ಸಂದರ್ಭದಲ್ಲಿ APSA–MU ಅಂಬೇಡ್ಕರ್ ಫುಲೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಅವಿನಾಶ ಕಾಂಬಳೆ, ವಿದ್ಯಾರ್ಥಿ ನಾಯಕ ಅಭಿಷೇಕ ವಾಲ್ಮೀಕಿ, ಅಮರೇಶ್, ರಘುದಾಸ, ಗಣೇಶ, ದಿವಾಕರ ಸೇರಿದಂತೆ ಹಲವು ಸದಸ್ಯರು ಉಪಸ್ಥಿತರಿದ್ದರು.

Read More

ತೊಕ್ಕೊಟ್ಟು: ಬಿಸಿಲಿನ ಧಗೆಗೆ ನಮ್ಮ ಕಣ್ಣು ಹುಡುಕುವುದೇ ಐಸ್ ಕ್ರೀಮ್ ಪಾರ್ಲರ್. ಅದರಲ್ಲೂ ರಸಸ್ವಾದ ಸ್ವಾದೀಷ್ಟದ, ಬಾಯಲ್ಲಿ ಇಟ್ಟ ತಕ್ಷಣ ಕರಗುವ ರುಚಿಯಾದ ಐಸ್ ಕ್ರೀಮ್ ಅಂದರೆ ನೆನಪಾಗೋದು ಭಾರತದ ದೊಡ್ಡ ಫ್ಯಾಶನಿಕ್ ಬ್ರಾಂಡ್ ಅಮೂಲ್ ಐಸ್‌ಕ್ರೀಮ್ ಪಾರ್ಲರ್. ಸೀಸನ್ ಯಾವುದೇ ಇರಲಿ ಐಸ್ ಕ್ರೀಮ್ ಪ್ರಿಯರು ಹುಡುಕಾಟ ನಡೆಸಿ ಅಮೂಲ್ ಐಸ್‌ಕ್ರೀಮ್ ಸವಿಯುತ್ತಾರೆ. ಅದಕ್ಕೆ ಕಾರಣ ಅಮೂಲ್ ಅವರ ನಗುಮೊಗದ ಸೇವೆಗಳು. ಇದೀಗ ಅಮೂಲ್ ಪ್ರೇಮಿಗಳಿಗಾಗಿ ಅಮೂಲ್ ತನ್ನ 6ನೇ ವರ್ಷದ ಸಂಭ್ರಮಾಚರಣೆಯ ಪ್ರಯುಕ್ತ ಬಿಗ್ ಆಫರ್ ಇಟ್ಟಿದೆ. ತೊಕ್ಕೊಟ್ಟುವಿನಲ್ಲಿ ಕಾರ್ಯಾಚರಿಸುತ್ತಿರುವ ಅಮೂಲ್ ಐಸ್‌ಕ್ರೀಮ್ ಪಾರ್ಲರ್‌ಗೆ ಬಂದು ರೂಪಾಯಿ 500ರ ರುಚಿ-ಶುಚಿಯಾದ ಕೂಲ್ ಕೂಲ್ ಐಸ್‌ಕ್ರೀಮ್ ಸವಿದರೆ, ನಿಮಗೆ ಫ್ರೀ ಕೂಪನ್ ನೀಡಲಾಗುವುದು. ಸಿಕ್ಕ ಕೂಪನ್‌ನಲ್ಲಿ ನಿಮ್ಮ ಹೆಸರಿನೊಂದಿಗೆ ಮೊಬೈಲ್ ನಂಬರ್ ನಮೊದಿಸಿ, ಪಾರ್ಲರ್‌ನಲ್ಲಿರುವ ಬಾಕ್ಸ್ಗೆ ಹಾಕಬೇಕಾಗುತ್ತದೆ. ಡಿ.22ರಂದು ಲಕ್ಕಿ ಡ್ರಾ ನಡೆಯಲಿದ್ದು, ಡ್ರಾ ದಲ್ಲಿ ಗೆದ್ದ ಮೊದಲ ಮೂರು ಅದೃಷ್ಟಶಾಲಿ ಗ್ರಾಹಕರಿಗೆ ರೇಫ್ರಿಜೇಟರ್, ವಾಟರ್ ಪ್ಯೂರಿಫಯರ್, ಮಿಕ್ಸಿ ಬಹುಮಾನವಾಗಿ…

Read More