ನ್ಯೂಯಾರ್ಕ್: ಸೋಷಿಯಲ್ ಮೀಡಿಯಾ ವೀವ್ಸ್ ಗೆ ವಿಷಕಾರಿ ‘ಡೆವಿಲ್ ಕಾರ್ಬ್’ ತಿಂದು ಫುಡ್ ಇನ್ಫ್ಲುಯೆನ್ಸರ್ ದಾರುಣವಾಗಿ ಮೃತಪಟ್ಟಿರುವ ಘಟನೆ ನಡೆದಿದೆ. ಎಮ್ಮಾ ಅಮಿತ್ ಮೃತ ಫುಡ್ ಇನ್ಫ್ಲುಯೆನ್ಸರ್. ಈಕೆ ತನ್ನ ಸ್ನೇಹಿತರೊಂದಿಗೆ ಪಲವಾನ್ನ ಪೋರ್ಟೊ ಪ್ರಿನ್ಸೆಸಾ ಬಳಿಯ ಮ್ಯಾಂಗ್ರೋವ್ ಕಾಡಿನಲ್ಲಿ ಚಿಪ್ಪು ಮೀನುಗಳನ್ನು ಹಿಡಿದಿದ್ದರು. ಎಮ್ಮಾ ಅವರು ಮೀನುಗಳನ್ನು ಬೇಯಿಸಿ ತಿನ್ನುವುದನ್ನು ಟಿಕ್ಟಾಕ್ ಮತ್ತು ಫೇಸ್ಬುಕ್ಗಾಗಿ ವಿಡಿಯೋ ಮಾಡಿದ್ದರು.ಮರುದಿನ ಏಡಿಯ ವಿಷದಿಂದ ಆಕೆ ತೀವ್ರವಾಗಿ ಅಸ್ವಸ್ಥಗೊಂಡಿದ್ದರು. ಆಕೆಯು ಪ್ರಜ್ಞೆ ಕಳೆದುಕೊಂಡಿದ್ದು, ಆಕೆಯ ತುಟಿಗಳು ಕಡು ನೀಲಿ ಬಣ್ಣಕ್ಕೆ ತಿರುಗಿದ್ದವು. ಆರೋಗ್ಯ ಸ್ಥಿತಿ ಹದಗೆಟ್ಟು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಚಿಕಿತ್ಸೆ ಫಲಿಸದೇ ಆಕೆ ಕೊನೆಯುಸಿರೆಳೆದಿದ್ದಾರೆ.ಈ ಘಟನೆಯ ಬೆನ್ನಲ್ಲೇ ಲುಜ್ವಿಮಿಂಡಾ ಗ್ರಾಮದ ಮುಖ್ಯಸ್ಥೆ ಲ್ಯಾಡಿ ಗೆಮಾಂಗ್, ಪೋರ್ಟೊ ಪ್ರಿನ್ಸೆಸಾ ನಿವಾಸಿಗಳಿಗೆ ಈ ಏಡಿಗಳ ಬಗ್ಗೆ ಎಚ್ಚರಿಕೆ ನೀಡಿದ್ದಾರೆ. ಈ ಡೆವಿಲ್ ಕಾರ್ಬ್ಗಳನ್ನು ತಿನ್ನಬೇಡಿ. ಈ ಏಡಿಗಳನ್ನು ಸೇವಿಸಿ ಇಬ್ಬರು ಮೃತಪಟ್ಟಿದ್ದಾರೆ ಎಂದು ಅವರು ತಿಳಿಸಿದ್ದಾರೆ.ಡೆವಿಲ್ ಕಾರ್ಬ್ಗಳು ವಿಷಕಾರಿ ರೀಫ್ ಏಡಿಗಳಾಗಿವೆ. ಇವು ಇಂಡೋ-ಪೆಸಿಫಿಕ್ ಪ್ರದೇಶದಾದ್ಯಂತ ಹವಳದ…
Author: UllalaVani
ಕೊಣಾಜೆ: ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ಸೇರಿದಂತೆ ಸರ್ಕಾರದ ಅನೇಕ ಮಹತ್ವಪೂರ್ಣವಾದ ಯೋಜನೆಗಳ ಸಮರ್ಪಕ ಸದ್ಭಳಕೆಯನ್ನು ಮಾಡುವ ಮೂಲಕ ಎಷ್ಟೋ ಜನರು ಸ್ವಾವಲಂಬಿ ಬದುಕನ್ನು ಕಂಡುಕೊಂಡಿದ್ದಾರೆ ಎಂದು ಕರ್ನಾಟಕ ಸರ್ಕಾರದ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಮಮತಾ ಡಿ.ಎಸ್ ಗಟ್ಟಿ ಹೇಳಿದರು. ಅವರು ಗುರುವಾರ ದ.ಕ.ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಉಳ್ಳಾಲ, ಬಾಳೆಪುಣಿ ಗ್ರಾಮ ಪಂಚಾಯತ್ ಇದರ ವತಿಯಿಂದ ಸ್ವಚ್ಛೋತ್ಸವ, ನರೇಗಾ ಗ್ರಾಮೋತ್ಸವ, ಸಮಗ್ರ ಶಿಶು ಅಭಿವೃದ್ಧಿ ಯೋಜನೆ -50 ವರ್ಷ ಸಂಭ್ರಮ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ಸ್ವಚ್ಛ ಗ್ರಾಮವಾಗಿ ಬಾಳೆಪುಣಿ ಗ್ರಾಮ ಪಂಚಾಯತ್ ಮಾದರಿಯಾಗಿದೆ. ಅನೇಕ ಯೋಜನೆಗಳನ್ನು ಸಮರ್ಪಕವಾಗಿ ಬಳಸಿಕೊಳ್ಳುವ ಮೂಲಕ ಗಾಂಧಿ ಗ್ರಾಮ ಪುರಸ್ಕಾರ ಪಡೆದುಕೊಂಡಿದೆ. ಗ್ರಾಮ ಅಭಿವೃದ್ಧಿಯಾದರೆ ದೇಶದ ಅಭಿವೃದ್ಧಿಯೂ ಸಾಧ್ಯ ಎಂದರು.ಉಳ್ಳಾಲ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಗುರುದತ್ ಅವರು ಮಾತನಾಡಿ, ಕಾರ್ಯಯೋಜನೆಗಳನ್ನು ಎಸಿ ರೂಮುನೊಳಗೆ ಕೂತು ನಿರ್ಧರಿಸಿದರೆ ಯಶಸ್ಸು ಆಗಲು ಸಾಧ್ಯವಿಲ್ಲ. ಅಧಿಕಾರಿಗಳೊಂದಿಗೆ ಜನರು ಸಂಪೂರ್ಣವಾಗಿ ಯೋಜನೆಯಲ್ಲಿ ಭಾಗವಹಿಸಿ ತೊಡಗಿಸಿಕೊಂಡರೆ ಮಾತ್ರ ಇದು ಯಶಸ್ವಿಯಾಗಲು ಸಾಧ್ಯ.…
ಬಾಳೆಪುಣಿ : ಇರಾ ಗ್ರಾಮದ ಬಾಳೆಪುಣಿಯಲ್ಲಿ ನವೀಕೃತಗೊಂಡ ಬದ್ರಿಯಾ ಜುಮಾ ಮಸೀದಿ ಉದ್ಘಾಟನೆ ಕಾರ್ಯ ಕ್ರಮದ ಪ್ರಯುಕ್ತ ಸ್ವಲಾತ್ ವಾರ್ಷಿಕದ ಸಮಾರಂಭವನ್ನು ಶುಕ್ರವಾರ ಮಸೀದಿ ವಠಾರದಲ್ಲಿ ಆಯೋಜಿಸಲಾಯಿತು. ಸ್ವಲಾತ್ ವಾರ್ಷಿಕೊತ್ಸವದ ಸಮಾರಂಭವನ್ನು ಸ್ಥಳೀಯ ಮುದರ್ರಿಸ್ ಅಲೀ ಪೈಝಿ ಉದ್ಘಾಟಿಸಿದರು , ಮೂಳೂರ್ ನಾಯಿಬ್ ಖಾಝಿ ಅಬ್ದುರ್ಹ್ಮಾನ್ ಮದನಿ ರವರು ವೇದಿಕೆಯಲ್ಲಿರುವ ಗಣ್ಯರನ್ನು ಸ್ವಾಗತಿಸಿದರು. ನವೀಕ್ರತ ಮಸೀದಿಯನ್ನು ಕುಂಬೋಲ್ ತಂಞಳ್ ರವರು ಉದ್ಘಾಟಿಸಿದರು , ಶಹೀರ್ ಸಖಾಫಿ ಇರಾ ಮೂಲೆ ಮುಖ್ಯ ಪ್ರಬಾಷಣ ಗೈದರು ವೇದಿಕೆಯಲ್ಲಿ ಜಮಾಅತ್ ಕಮೀಟಿ ಅಧ್ಯಕ್ಷರಾದ ಮೊಯ್ದೀನ್ ಕುಂಞಿ ಪಾತಕಟ್ಚೆ ಹಾಗೂ ಕಮೀಟಿಯ ಸದಸ್ಯರು ಊರಿನ ಗಣ್ಯರು ಉಪಸ್ಥಿತರಿದ್ದರು
ಮಂಗಳೂರು;ಕನ್ನಡ ಮತ್ತು ಹಿಂದಿ ಭಾಷೆಯಲ್ಲಿ ನಿರ್ಮಾಣಗೊಂಡಿರುವ ವೈಲ್ಡ್ ಟೈಗರ್ ಸಫಾರಿ ಚಿತ್ರದ ಮೊದಲ ಹಾಡನ್ನು ಬಿಡುಗಡೆ ಮಾಡಲಾಯಿತು. ಈ ಬಿಡುಗಡೆ ಕಾರ್ಯಕ್ರಮದಲ್ಲಿ ಬಾಲಿವುಡ್ ಹಿರಿಯ ನಟ, ನೃತ್ಯ ನಿರ್ದೇಶಕರಾದ ಜಾವೆದ್ ಜಾಫ್ರಿ, ಟೆರೇನ್ಸ್ ಹಾಗೂ ಅನೇಕರು ಭಾಗಿಯಾಗಿದ್ದರು. ಇನ್ನು ಚಿತ್ರದ ನಿರ್ದೇಶಕ ಚಂದ್ರಮೌಳಿ ಅವರು ಮಂಗಳೂರಿನ ಹೋಟೇಲ್ವೊಂದರಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ,ಚಿತ್ರದ ಟೀಸರ್ಗೆ ಕನ್ನಡ ಮತ್ತು ಹಿಂದಿ ಪ್ರೇಕ್ಷಕರಿಂದ ಭಾರೀ ಪ್ರತಿಕ್ರಿಯೆ ವ್ಯಕ್ತವಾದ ಹಿನ್ನೆಲೆ ಚಿತ್ರದ ಬಗ್ಗೆ ನಿರೀಕ್ಷೆಗಳು ಇನ್ನಷ್ಟು ಹೆಚ್ಚಾಗಿವೆ. ವೈಲ್ಡ್ ಟೈಗರ್ ಸಫಾರಿ ಸಾಮಾನ್ಯ ಪ್ರೇಕ್ಷಕರ ಹೃದಯವನ್ನು ಸ್ಪರ್ಶಿಸುವ ಚಿತ್ರವಾಗಲಿದೆ ಎಂಬ ನಮ್ಮ ನಂಬಿಕೆಯನ್ನು ಬಲಪಡಿಸಿದೆ ಅಂತ ಹೇಳಿದ್ದಾರೆ. ವಿ.ಕೆ. ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ಸಿನಿಮಾ ನಿರ್ಮಾಣ ಮಾಡಿರುವ ವಿನೋದ್ ಕುಮಾರ್ ಅವರು ಮಾತನಾಡಿ, ಸಿನಿಮಾ ತುಂಬಾ ಭಿನ್ನವಾಗಿ ಮೂಡಿಬಂದಿದೆ. ಇದು ನನ್ನ ಎರಡನೇ ಸಿನಿಮಾ. ಮೊದಲ ಸಿನಿಮಾ ಕರಾವಳಿ ಬಿಡುಗಡೆ ಹಂತದಲ್ಲಿದೆ ಎಂದ್ರು. ಇನ್ನು ಜಾವೆದ್ ಜಾಫ್ರಿ ಹಾಗೂ ಟೆರೆನ್ಸ್ ಮಾತಾಡಿ, ಈ ಸಿನಿಮಾದಲ್ಲಿ ನನ್ನ ಶಿಷ್ಯರಾದ…
ಪೊಲೀಸ್ ಠಾಣೆಗೆ ದೂರು ನೀಡಲು ಹೋದಾಗ ಅಧಿಕಾರಿಗಳು ನಾಗರೀಕರನ್ನು ಸರಿಯಾಗಿ ನಡೆಸಿಕೊಳ್ಳದಿದ್ದರೆ ಹಾಗೂ ಎಫ್ಐಆರ್ ದಾಖಲಿಸಲು ನಿರಾಕರಿಸಿದರೆ, ಅದು ಮಾನವ ಹಕ್ಕುಗಳ ಉಲ್ಲಂಘನೆ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. Civil Appeal No. 6358/2025 ಪ್ರಕರಣದಲ್ಲಿ ತಮಿಳುನಾಡಿನ ಪೊಲೀಸ್ ಇನ್ಸ್ಪೆಕ್ಟರ್ ಒಬ್ಬರು ದೂರು ನೀಡಲು ಬಂದಿದ್ದ ವ್ಯಕ್ತಿಯ ತಾಯಿಯೊಂದಿಗೆ ಅಸಭ್ಯವಾಗಿ ವರ್ತಿಸಿ, ಎಫ್ಐಆರ್ ದಾಖಲಿಸಲು ನಿರಾಕರಿಸಿದ್ದರು. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ರಾಜ್ಯ ಮಾನವ ಹಕ್ಕುಗಳ ಆಯೋಗವು ಅಧಿಕಾರಿಯಿಂದ ₹2 ಲಕ್ಷ ದಂಡ ವಸೂಲಿ ಮಾಡಿ ದೂರುದಾರರಿಗೆ ನೀಡುವಂತೆ ಆದೇಶಿಸಿತ್ತು. ಇದನ್ನು ಪ್ರಶ್ನಿಸಿ ಇನ್ಸ್ಪೆಕ್ಟರ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.ಅಪರಾಧದ ವರದಿ ನೀಡಲು ಠಾಣೆಗೆ ಬರುವ ಪ್ರತಿಯೊಬ್ಬ ಪ್ರಜೆಯೂ ಮಾನವ ಘನತೆಯಿಂದ ನಡೆಸಿಕೊಳ್ಳಲ್ಪಡಲು ಅರ್ಹರು. ಅವರನ್ನು ಅಪರಾಧಿಗಳಂತೆ ಕಾಣುವುದು ಸಂವಿಧಾನದ 21ನೇ ವಿಧಿಯ ಉಲ್ಲಂಘನೆಯಾಗುತ್ತದೆ. ಹಿರಿಯ ಅಧಿಕಾರಿಯಾಗಿ ತಕ್ಷಣವೇ ಕ್ರಮ ಕೈಗೊಳ್ಳದೆ, ದೂರುದಾರರೊಂದಿಗೆ ಆಕ್ಷೇಪಾರ್ಹ ನುಡಿ ಬಳಸುವುದು ನಾಗರಿಕರ ಹಕ್ಕುಗಳ ದಮನವಾಗಿದೆ. ಸಂವಿಧಾನವು ಖಾತರಿಪಡಿಸಿದ ಜೀವನ, ಸ್ವಾತಂತ್ರ್ಯ…
ಉಳ್ಳಾಲ: ಸನಾತನ ಹಿಂದೂ ಸೇವಾ ಪ್ರತಿಷ್ಠಾನದ ಉದ್ಘಾಟನಾ ಸಮಾರಂಭ ಹಾಗೂ ಸನಾತನ ಧರ್ಮಸಭೆ ಉದ್ಘಾಟನಾ ಸಮಾರಂಭ ಹಾಗೂ ಸನಾತನ ಧರ್ಮಸಭೆ ಫೆ.15 ರಂದು ಸಂಜೆ 6 ಕ್ಕೆ ಶ್ರೀ ಕ್ಷೇತ್ರ ಕುತ್ತಾರು ಶ್ರೀ ರಾಜರಾಜೇಶ್ವರಿ ಸಿದ್ಧಿವಿನಾಯಕ ದೇವಸ್ಥಾನದ ದಿ| ಲೋಕಯ್ಯ ಗಟ್ಟಿ ವೇದಿಕೆಯಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರಗಲಿದೆ. ಸಮಾನ ಮನಸ್ಕರ ಬಳಗವಾಗಿ ರೂಪುಗೊಂಡಿರುವ ಈ ನೂತನ ಸಂಘಟನೆ ಧರ್ಮ ಜಾಗೃತಿ ಮೂಡಿಸುವುದು, ಸುತ್ತಮುತ್ತಲಿನ ಪ್ರದೇಶದಲ್ಲಿ ಧಾರ್ಮಿಕ ಶ್ರದ್ಧೆ ಪಸರಿಸುವುದು, ಆರ್ಥಿಕ ಮತ್ತು ದೈಹಿಕವಾಗಿ ಅಶಕ್ತರಾಗಿರುವವರಿಗೆ ನೆರವು ನೀಡುವುದು ಉದ್ದೇಶವಾಗಿದೆ ಎಂದು ಸನಾತನ ಹಿಂದೂ ಸೇವಾ ಪ್ರತಿಷ್ಠಾನ ಇದರ ಅಧ್ಯಕ್ಷ ಸುರೇಶ್ ಚೌಟ ಹೇಳಿದರು. ತೊಕ್ಕೊಟ್ಟು ಸೇವಾಸೌಧದಲ್ಲಿನ ಉಳ್ಳಾಲ ಪ್ರೆಸ್ ಕ್ಲಬ್ ನಲ್ಲಿ ಇಂದು ಆಯೋಜಿಸಿದ ಸುದ್ಧಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ಯುವಜನಾಂಗದಲ್ಲಿ ಹಿಂದೂ ಧರ್ಮದ ನಿಜಾರ್ಥದ ಪ್ರಜ್ಞೆ ಮೂಡಿಸುವುದು ಸೇರಿದಂತೆ ವಿವಿಧ ಸಾಮಾಜಿಕ ಕಳಕಳಿಯ ಉದ್ದೇಶಗಳನ್ನು ಹೊಂದಿದೆ. ದೂರದ ಪ್ರದೇಶಗಳಿಂದ ಉದ್ಯಮಿಗಳನ್ನೂ, ದಾನಿಗಳನ್ನೂ ಗುರುತಿಸಿ ಅವರ ಮೂಲಕ ಆರ್ಥಿಕ ಸಹಾಯವನ್ನು ಸಂಗ್ರಹಿಸಿ…
ಬೆಳ್ತಂಗಡಿ,ಫೆ. 10 : ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ವಿದ್ಯಾರ್ಥಿನಿ ಅಪಹರಣ ಯತ್ನ ಕೇಸ್ಗೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ ನಂತರ ದೂರಿನಲ್ಲಿ ಉಲ್ಲೇಖಿಸಲಾದ ಯಾವುದೇ ವಾಹನ ಪತ್ತೆಯಾಗಿಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ. ವೈದ್ಯಕೀಯ ಪರೀಕ್ಷೆಯಲ್ಲಿ ಪ್ರಥಮವಾಗಿ ಇದು ಸ್ವಯಂ ಉಂಟು ಮಾಡಿಕೊಂಡ ಗಾಯ ಎಂದು ತಿಳಿಸಲಾಗಿತ್ತು. ನಂತರ ಬಾಲಕಿಯ ಹೇಳಿಕೆಯನ್ನು ಮತ್ತೊಮ್ಮೆ ದಾಖಲಿಸಲಾಗಿದ್ದು, ಈ ಘಟನೆ ಕುರಿತು ತಾನು ಸುಳ್ಳು ಹೇಳಿಕೆ ನೀಡಿರುವುದಾಗಿ ಆಕೆ ಒಪ್ಪಿಕೊಂಡಿದ್ದಾಳೆ.ಬಾಲಕಿಯು ಅಪ್ರಾಪ್ತೆಯಾಗಿರುವುದರಿಂದ ಆಕೆಯ ಹಿತದೃಷ್ಠಿಯಿಂದ ಘಟನೆಯನ್ನು ಸೂಕ್ಷ್ಮವಾಗಿ ಪರಿಗಣಿಸಿ ಶಿಶು ಅಭಿವೃದ್ಧಿ ಯೋಜನಾ ಅಧಿಕಾರಿ (CDPO) ಅವರಿಂದ ಬಾಲಕಿಗೆ ಕೌನ್ಸೆಲಿಂಗ್ ನೀಡಲಾಗುವುದು ಹಾಗೂ ಮುಂದಿನ ಕಾನೂನು ಕ್ರಮವನ್ನು ನಿರ್ಧರಿಸಲಾಗುವುದು. ಎಂದು ತಿಳಿಸಿದ್ದಾರೆ.ಅಪ್ರಾಪ್ತೆಗೆ ಚಲಾಯಿಸಲು ವಾಹನ ನೀಡಿರುವ ಕುರಿತು ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.ಬೆಳ್ತಂಗಡಿ ನಗರದ ಸುದೇಮುಗೇರು ಎಂಬಲ್ಲಿ ಫೆ.9ರಂದು ಬೆಳಗ್ಗೆ 8:30ರ ಸುಮಾರಿಗೆ 16 ವರ್ಷದ ಕಾಲೇಜು ವಿದ್ಯಾರ್ಥಿನಿ ಸ್ಕೂಟರ್ ನಲ್ಲಿ ತೆರಳುತ್ತಿದ್ದಾಗ ಕಾರಿನಲ್ಲಿ ಬಂದ…
ಉಡುಪಿ,ಫೆ. 10: ಮಂಗಳೂರಿನಿಂದ ಶಿರ್ವಕ್ಕೆ ತೆರಳುತ್ತಿದ್ದ ಕಾರೊಂದು ಸೋಮವಾರ ಮಧ್ಯರಾತ್ರಿ ಇಲ್ಲಿನ ನ್ಯಾರ್ಮ್ ಶ್ರೀ ಜಾರಂದಾಯ ದೈವಸ್ಥಾನದ ಬಳಿ ರಸ್ತೆ ಮಧ್ಯದಲ್ಲಿ ಇದ್ದಕ್ಕಿದ್ದಂತೆ ಬೆಂಕಿಗೆ ಆಹುತಿಯಾದ ಘಟನೆ ಬೆಳಕಿಗೆ ಬಂದಿದೆ. ಚಾಲಕನ ಸಮಯಪ್ರಜ್ಞೆಯಿಂದ ಕಾರಿನಲ್ಲಿದ್ದ ಐವರು ಪ್ರಯಾಣಿಕರು ಅಪಾಯದಿಂದ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ.ಸೋಮವಾರ ತಡರಾತ್ರಿ, ಕಾರು ಮಂಗಳೂರಿನಿಂದ ಶಿರ್ವ ಕಡೆಗೆ ಹೋಗುತ್ತಿದ್ದಾಗ ನ್ಯಾರ್ಮ್ ಪ್ರದೇಶವನ್ನು ತಲುಪಿದಾಗ, ಎಂಜಿನ್ ವಿಭಾಗದಿಂದ ಹೊಗೆ ಹೊರಹೊಮ್ಮಲು ಪ್ರಾರಂಭಿಸಿತು. ಇದರಿಂದ ಎಚ್ಚೆತ್ತ ಚಾಲಕ ತಕ್ಷಣವೇ ವಾಹನವನ್ನು ರಸ್ತೆಯ ಬದಿಗೆ ನಿಲ್ಲಿಸಿ ತನ್ನೊಂದಿಗೆ ಪ್ರಯಾಣಿಸುತ್ತಿದ್ದ ನಾಲ್ವರು ಕುಟುಂಬ ಸದಸ್ಯರನ್ನು ತಕ್ಷಣ ಕೆಳಗಿಳಿಯುವಂತೆ ಸೂಚಿಸಿದ್ದಾನೆ.ಎಲ್ಲರೂ ಇಳಿದ ಕೆಲವೇ ಕ್ಷಣಗಳಲ್ಲಿ, ಬೆಂಕಿಯ ಜ್ವಾಲೆಗಳು ಇಡೀ ಕಾರನ್ನು ಆವರಿಸಿಕೊಂಡು ಸ್ವಲ್ಪ ಸಮಯದೊಳಗೆ ಕಾರು ಸಂಪೂರ್ಣವಾಗಿ ಸುಟ್ಟುಹೋಗಿದೆ. ಬೆಂಕಿಯನ್ನು ಗಮನಿಸಿದ ಸ್ಥಳೀಯ ನಿವಾಸಿಗಳು ಸ್ಥಳಕ್ಕೆ ಧಾವಿಸಿ ಬಂದು ಹತ್ತಿರದ ಮನೆಗಳಿಂದ ಪೈಪ್ಗಳ ಮೂಲಕ ನೀರನ್ನು ಸಿಂಪಡಿಸುವ ಮೂಲಕ ಬೆಂಕಿಯನ್ನು ನಂದಿಸಲು ಪ್ರಯತ್ನಿಸಿದರು. ಆದರೆ, ಬೆಂಕಿ ವೇಗವಾಗಿ ಹರಡಿದ ಪರಿಣಾಮವಾಗಿ ಕಾರು ಸುಟ್ಟು ಭಸ್ಮವಾಗಿದೆ.
ಉಳ್ಳಾಲ: ಅಂಬ್ಲಮೊಗರು ಗ್ರಾಮ ಪಂಚಾಯಿತಿಯ ೨೦೨೫-೨೬ನೇ ಸಾಲಿನ ದ್ವಿತೀಯ ಹಂತದ ಹಾಗೂ ಜನಪ್ರತಿನಿಧಿಗಳ ಆಡಳಿತದ ಕೊನೆಯ ಗ್ರಾಮಸಭೆ ಸೋಮವಾರ ಗ್ರಾ.ಪಂ. ವಠಾರದಲ್ಲಿ ನಡೆಯಿತು. ಸಭೆಯಲ್ಲಿ ಮಾತನಾಡಿದ ಇಬ್ರಾಹಿಂ ಮದಕ, ನಾಲ್ಕು ವರ್ಷಗಳಿಂದ ಕಂಡಿಲದಿಂದ ಲಕ್ಷ್ಮಿ ನರಸಿಂಹ ದೇವಸ್ಥಾನಕ್ಕೆ ಹೋಗಲು ರಸ್ತೆಯೇ ಇಲ್ಲ. ತಹಸೀಲ್ದಾರ್ ಈ ಬಗ್ಗೆ ಮೌನವಾಗಿದ್ದಾರೆ. ಸರ್ಕಾರಿ ಜಾಗದಲ್ಲಿ ಅಹೋರಾತ್ರಿ ಕೆಲಸ ನಡೆಯುತ್ತಿದ್ದು ಕಂದಾಯ ಇಲಾಖೆ ಮೌನವೇಕೆ? ಈಗಲೂ ಕೆಲಸ ನಡೆಯುತ್ತಿದ್ದು ತಕ್ಷಣ ನಿಲ್ಲಿಸಬೇಕು. ಮೈದಾನದ ಮೀಸಲು ಜಾಗ, ದೇವಸ್ಥಾನ ಸಂಪರ್ಕ ರಸ್ತೆ ಎಲ್ಲಿದೆ ಎಂದು ಪ್ರಶ್ನಿಸಿದರು. ಜಾಗದ ಬಗ್ಗೆ ಪೂರ್ಣ ವಿವರ ಕಲೆ ಹಾಕಲಾಗಿದ್ದು ಸರ್ವೇ ಇಲಾಖೆ ಸ್ಪಷ್ಟ ವರದಿ ಕೊಡಬೇಕಿದೆ. ಖಾಸಗಿ ಜಾಗಕ್ಕೆ ಅಧಿಕಾರಿಗಳು ಹೋಗುವಂತಿಲ್ಲ, ಪಾವೂರಿನಲ್ಲಿ ಈಗಾಗಲೇ ಖಾಸಗಿ ಜಾಗದವರು ಕೇಸ್ ಹಾಕಿದ್ದಾರೆ. ಸರ್ಕಾರಿ ಜಾಗದಲ್ಲಿ ಕೆಲಸ ನಡೆಯುತ್ತಿದ್ದರೆ ನಿಲ್ಲಿಸುವುದಾಗಿ ಅಂಬ್ಲಮೊಗರು ಗ್ರಾಮ ಆಡಳಿತಗಾರೆ ನಯನ ತಿಳಿಸಿದರು.ಯು.ಟಿ. ಫರೀದ್ ಹೆಸರಲ್ಲಿ ನಾಲ್ಕೂವರೆ ಎಕರೆ ಜಮೀನು ಮೈದಾನಕ್ಕೆ ಮೀಸಲಿಡಲಾಗಿದೆ. ಆದರೆ ಈಗಿರುವ ಜಾಗ ರಸ್ತೆಬದಿ ಇರುವುದರಿಂದ ಪಂಚಾಯಿತಿಗೆ…
ಲಕ್ನೋ: ಅಯೋಧ್ಯೆಯ ರಾಮ ಮಂದಿರದ ಮೇಲೆ ದಾಳಿ ನಡೆಸಲು ಸಂಚು ರೂಪಿಸಿದ ಆರೋಪದ ಮೇಲೆ ಬಂಧನವಾಗಿದ್ದ ಆರೋಪಿಯನ್ನು ಫರಿದಾಬಾದ್ ಜೈಲಿನಲ್ಲೇ ಸಹ ಕೈದಿಯೊಬ್ಬ ಕೊಲೆ ಮಾಡಿದ್ದಾನೆ. ಅಬ್ದುಲ್ ರೆಹಮಾನ್(20) ಕೊಲೆಯಾದ ಆರೋಪಿಯಾಗಿದ್ದು, ಜೈಲಿನಲ್ಲಿದ್ದ ಕಾಶ್ಮೀರಿ ಯುವಕ ಅರುಣ್ ಚೌಧರಿ ಹರಿತವಾದ ವಸ್ತುವಿನಿಂದ ಹಲ್ಲೆ ನಡೆಸಿ ಹತ್ಯೆ ಮಾಡಿದ್ದಾನೆ.ಅಬ್ದುಲ್ ರೆಹಮಾನ್ ಮತ್ತು ಅರುಣ್ ಚೌಧರಿ ಮಧ್ಯೆ ಭಾನುವಾರ ಜಗಳ ನಡೆದಿದೆ. ಜಗಳ ವಿಕೋಪಕ್ಕೆ ತಿರುಗಿ ರಾತ್ರಿ 8 ಗಂಟೆಯ ವೇಳೆಗೆ ಅರುಣ್ ಚೌಧರಿ ಹರಿತವಾದ ವಸ್ತುವಿನಿಂದ ತಲೆಗೆ ಹೊಡೆದಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ ರೆಹಮಾನ್ನನ್ನು ಜಿಲ್ಲಾಸ್ಪತ್ರೆಗೆ ತರಲಾಗಿತ್ತು. ಪರೀಕ್ಷೆ ನಡೆಸಿದ ವೈದ್ಯರು ರೆಹಮಾನ್ ಮೃತಪಟ್ಟಿದ್ದಾನೆ ಎಂದು ಹೇಳಿದ್ದಾರೆ. ಈ ಪ್ರಕರಣ ಸಂಬಂಧ ತನಿಖೆಗೆ ಆದೇಶಿಸಲಾಗಿದೆ.ರೆಹಮಾನ್ ಉತ್ತರ ಪ್ರದೇಶದ ಫೈಜಾಬಾದ್ ಜಿಲ್ಲೆಯ ಮಿಲ್ಕಿಪುರ ನಿವಾಸಿಯಾಗಿದ್ದು ಮಾರ್ಚ್ 2, 2025 ರಂದು ಫರಿದಾಬಾದ್ನ ಪಾಲಿ ಗ್ರಾಮದ ಬಳಿ, ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಮತ್ತು ಹರಿಯಾಣ ವಿಶೇಷ ಕಾರ್ಯಪಡೆ ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಿತ್ತು.ಆತನ ಬಳಿಯಿದ್ದ…

